Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 3:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗ ದೇವರು ಅವನಿಗೆ, “ನೀನು ನಿನಗೋಸ್ಕರ ದೀರ್ಘಾಯುಷ್ಯವನ್ನಾಗಲೀ, ಐಶ್ವರ್ಯವನ್ನಾಗಲಿ ವೈರಿಗಳ ಪ್ರಾಣವನ್ನಾಗಲಿ ಕೇಳಿಕೊಳ್ಳದೆ ನ್ಯಾಯನಿರ್ಣಯಿಸುವುದಕ್ಕಾಗಿ ವಿವೇಕವನ್ನು ಬೇಡಿಕೊಂಡದ್ದರಿಂದ ನಿನ್ನ ಬಿನ್ನಹವನ್ನು ನೆರವೇರಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅವರು ಆತನಿಗೆ, “ನೀನು ದೀರ್ಘಾಯುಷ್ಯವನ್ನಾಗಲಿ, ಸಿರಿಸಂಪತ್ತನ್ನಾಗಲಿ, ಶತ್ರುವಿನಾಶವನ್ನಾಗಲಿ ಕೇಳಿಕೊಳ್ಳಲಿಲ್ಲ. ನ್ಯಾಯನಿರ್ಣಯಿಸುವುದಕ್ಕೆ ಬೇಕಾದ ವಿವೇಕವನ್ನು ಬೇಡಿಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆತನು ಅವನಿಗೆ - ನೀನು ನಿನಗೋಸ್ಕರ ದೀರ್ಘಾಯುಷ್ಯವನ್ನಾಗಲಿ, ಐಶ್ವರ್ಯವನ್ನಾಗಲಿ, ವೈರಿಗಳ ಪ್ರಾಣವನ್ನಾಗಲಿ ಕೇಳಿಕೊಳ್ಳದೆ ನ್ಯಾಯ ನಿರ್ಣಯಿಸುವದಕ್ಕೋಸ್ಕರ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದ್ದರಿಂದ ದೇವರು ಅವನಿಗೆ, “ನೀನು ನಿನಗಾಗಿ ಹೆಚ್ಚು ಆಯಸ್ಸನ್ನೂ ಕೇಳಲಿಲ್ಲ, ಶ್ರೀಮಂತಿಕೆಯನ್ನೂ ಕೇಳಲಿಲ್ಲ, ನಿನ್ನ ಶತ್ರುಗಳಿಗೆ ಮರಣವನ್ನು ದಯಪಾಲಿಸೆಂದೂ ಕೇಳಲಿಲ್ಲ, ನೀನು ನ್ಯಾಯವಾದ ತೀರ್ಪು ನೀಡಲು ವಿವೇಕವನ್ನು ಕೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದ್ದರಿಂದ ದೇವರು ಅವನಿಗೆ, “ನೀನು ನಿನಗಾಗಿ ದೀರ್ಘಾಯುಷ್ಯ ಅಥವಾ ಸಂಪತ್ತನ್ನು ಕೇಳಲಿಲ್ಲ, ಅಥವಾ ನಿನ್ನ ಶತ್ರುಗಳ ಮರಣವನ್ನು ಕೇಳಿಲ್ಲ, ಆದರೆ ನ್ಯಾಯವನ್ನು ನಿರ್ವಹಿಸುವುದಕ್ಕಾಗಿ ನಿನಗೋಸ್ಕರ ವಿವೇಕವನ್ನು ಕೇಳಿದ್ದರಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 3:11
10 ತಿಳಿವುಗಳ ಹೋಲಿಕೆ  

ಹಾಗೆ ಪವಿತ್ರಾತ್ಮನು ಸಹ ನಮ್ಮ ಬಲಹೀನತೆಯನ್ನು ನೋಡಿ ನಮಗೆ ಸಹಾಯಮಾಡುತ್ತಾನೆ. ಹೇಗೆಂದರೆ ನಾವು ಯಾವಾಗ ಏನು ಬೇಡಿಕೊಳ್ಳಬೇಕೋ ಎನ್ನುವುದು ನಮಗೆ ತಿಳಿದಿಲ್ಲದ್ದರಿಂದ ಪವಿತ್ರಾತ್ಮನು ತಾನೇ ಮಾತಿಲ್ಲದ ನರಳಾಟದಿಂದ ನಮಗೋಸ್ಕರ ದೇವರನ್ನು ಬೇಡಿಕೊಳ್ಳುತ್ತಾನೆ.


ಆದುದರಿಂದ ಅವರನ್ನು ಆಳುವುದಕ್ಕೂ, ನ್ಯಾಯ ಅನ್ಯಾಯಗಳನ್ನು ಕಂಡುಹಿಡಿಯುವುದಕ್ಕೂ ನನಗೆ ವಿವೇಕವನ್ನು ದಯಪಾಲಿಸು. ಈ ಮಹಾ ಜನಾಂಗವನ್ನು ಆಳಬಲ್ಲ ಸಮರ್ಥರು ಯಾರಿದ್ದಾರೆ?” ಎಂದು ಬೇಡಿಕೊಂಡನು.


ನರೆಗೂದಲೇ ಸುಂದರ ಕಿರೀಟವು, ಅದು ಧರ್ಮಮಾರ್ಗದಲ್ಲಿ ದೊರಕುವುದು.


“ನಮಗೆ ಒಳ್ಳೆಯದನ್ನು ಮಾಡುವವರು ಯಾರಿದ್ದಾರೆ?” ಎಂದು ಅನೇಕರು ಹೇಳಿಕೊಳ್ಳುತ್ತಾರೆ. ಯೆಹೋವನೇ, ನೀನು ಪ್ರಸನ್ನಮುಖದಿಂದ ನಮ್ಮನ್ನು ನೋಡಬೇಕು.


ಸೊಲೊಮೋನನ ಈ ಬಿನ್ನಹವನ್ನು ಕರ್ತನಾದ ದೇವರು ಮೆಚ್ಚಿದನು.


ಇಸ್ರಾಯೇಲರೆಲ್ಲರೂ ಈ ತೀರ್ಪನ್ನು ಕೇಳಿ ನ್ಯಾಯ ನಿರ್ಣಯಿಸುವುದಕ್ಕೆ ಈತನಲ್ಲಿ ದೈವಜ್ಞಾನವಿದೆ ಎಂದು ತಿಳಿದು ಅವನಿಗೆ ಬಹಳವಾಗಿ ಭಯಪಟ್ಟರು.


ಆಗ ದೇವರು ಸೊಲೊಮೋನನಿಗೆ, “ಇದು ನಿನ್ನ ಆಕಾಂಕ್ಷೆಯಾಗಿ ಇದ್ದುದರಿಂದಲೂ ಘನವನ್ನೂ, ಧನವನ್ನೂ, ಐಶ್ವರ್ಯವನ್ನೂ, ನಿನ್ನ ವೈರಿಗಳ ಪ್ರಾಣವನ್ನಾಗಲಿ, ದೀರ್ಘಾಯುಷ್ಯವನ್ನಾಗಲಿ ಕೇಳದೆ, ನಾನು ಯಾರನ್ನು ಮುನ್ನಡೆಸಲು ನಿನ್ನನ್ನು ಅರಸನನ್ನಾಗಿ ಮಾಡಿದೆನೋ ಆ ನನ್ನ ಜನರಿಗೆ ನ್ಯಾಯ ತೀರಿಸುವ ಹಾಗೆ ಜ್ಞಾನ, ವಿವೇಕಗಳನ್ನು ನೀನು ಕೇಳಿಕೊಂಡದ್ದರಿಂದಲೂ ಜ್ಞಾನವೂ, ವಿವೇಕವೂ ನಿನಗೆ ಕೊಡಲ್ಪಟ್ಟಿವೆ.


ಮಹಾಪದವಿಯನ್ನು ನಿರೀಕ್ಷಿಸಿಕೊಳ್ಳುತ್ತೀಯೋ? ನಿರೀಕ್ಷಿಸ ಬೇಡ; ಆಹಾ, ನಾನು ನರಜನ್ಮದವರೆಲ್ಲರಿಗೂ ಕೇಡನ್ನು ಉಂಟುಮಾಡುವೆನು; ಆದರೆ ನೀನು ಎಲ್ಲಿಗೆ ಹೋದರೂ ಪ್ರಾಣವೊಂದನ್ನೇ ಉಳಿಸಿಕೊಳ್ಳುವುದಕ್ಕೆ ನಿನಗೆ ಅವಕಾಶ ಕೊಡುವೆನು. ಇದು ಯೆಹೋವನಾದ ನನ್ನ ನುಡಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು