Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 3:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಸೊಲೊಮೋನನು ನಿದ್ರೆಯಿಂದ ಎಚ್ಚತ್ತಾಗ ಅದು ಕನಸೆಂದು ತಿಳಿದುಕೊಂಡನು. ಅವನು ಯೆರೂಸಲೇಮಿಗೆ ಬಂದ ನಂತರ ಯೆಹೋವನ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು ಸರ್ವಾಂಗಹೋಮಗಳನ್ನು ಸಮಾಧಾನ ಯಜ್ಞಗಳನ್ನು ಸಮರ್ಪಿಸಿ, ತನ್ನ ಎಲ್ಲಾ ಸೇವಕರಿಗಾಗಿ ಔತಣಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸೊಲೊಮೋನನು ನಿದ್ರೆಯಿಂದ ಎಚ್ಚೆತ್ತಾಗ, ಅದು ಕನಸೆಂದು ತಿಳಿದುಕೊಂಡನು. ಅವನು ಜೆರುಸಲೇಮಿಗೆ ಬಂದನಂತರ ಸರ್ವೇಶ್ವರನ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು ದಹನಬಲಿಗಳನ್ನೂ ಶಾಂತಿಸಮಾಧಾನದ ಬಲಿಗಳನ್ನೂ ಸಮರ್ಪಿಸಿ, ತನ್ನ ಎಲ್ಲಾ ಪರಿವಾರದವರಿಗೆ ಔತಣವನ್ನು ಏರ್ಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಸೊಲೊಮೋನನು ನಿದ್ರೆಯಿಂದ ಎಚ್ಚತ್ತಾಗ ಅದು ಕನಸೆಂದು ತಿಳಿದುಕೊಂಡನು. ಅವನು ಯೆರೂಸಲೇವಿುಗೆ ಬಂದ ನಂತರ ಯೆಹೋವನ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು ಸರ್ವಾಂಗಹೋಮಗಳನ್ನೂ ಸಮಾಧಾನ ಯಜ್ಞಗಳನ್ನೂ ಸಮರ್ಪಿಸಿ ತನ್ನ ಎಲ್ಲಾ ಸೇವಕರಿಗೋಸ್ಕರ ಔತಣಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಸೊಲೊಮೋನನು ಎಚ್ಚರಗೊಂಡನು. ದೇವರು ಕನಸಿನಲ್ಲಿ ತನ್ನೊಡನೆ ಮಾತನಾಡಿದನೆಂಬುದು ಅವನಿಗೆ ತಿಳಿಯಿತು. ನಂತರ ಸೊಲೊಮೋನನು ಜೆರುಸಲೇಮಿಗೆ ಹೋಗಿ, ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯ ಎದುರಿನಲ್ಲಿ ನಿಂತುಕೊಂಡನು. ಸೊಲೊಮೋನನು ಯೆಹೋವನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಅರ್ಪಿಸಿದನು. ಅನಂತರ ಅವನು ತನ್ನ ಆಳ್ವಿಕೆಗೆ ಸಹಾಯ ಮಾಡಿದ ಎಲ್ಲ ನಾಯಕರಿಗೆ ಮತ್ತು ಅಧಿಕಾರಿಗಳಿಗೆ ಒಂದು ಔತಣವನ್ನೇರ್ಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ತರುವಾಯ ಸೊಲೊಮೋನನು ನಿದ್ರೆಯಿಂದ ಎಚ್ಚೆತ್ತಾಗ, ಅದು ಸ್ವಪ್ನವೆಂದು ತಿಳಿದುಕೊಂಡನು. ಅವನು ಯೆರೂಸಲೇಮಿಗೆ ಬಂದು, ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು, ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿ, ತನ್ನ ಸೇವಕರಿಗೆ ಔತಣವನ್ನು ಏರ್ಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 3:15
20 ತಿಳಿವುಗಳ ಹೋಲಿಕೆ  

ಆ ಬತ್ತಿ ಹೋಗಿದ್ದ ಈ ತೆನೆಗಳು ಆ ಏಳು ಪುಷ್ಟಿಯುಳ್ಳ ತೆನೆಗಳನ್ನು ನುಂಗಿಬಿಟ್ಟವು. ಆಗ ಫರೋಹನು ಎಚ್ಚೆತ್ತು, ಅದನ್ನು ಕನಸೆಂದು ತಿಳಿದುಕೊಂಡನು.


ಈ ರೀತಿಯಾಗಿ ಸೊಲೊಮೋನನು ಹಮಾತ್ ಪಟ್ಟಣದ ದಾರಿಯಿಂದ ಐಗುಪ್ತದ ಹಳ್ಳದ ವರೆಗಿರುವ ಪ್ರಾಂತ್ಯಗಳಿಂದ ಮಹಾ ಸಮೂಹವಾಗಿ ಕೂಡಿಬಂದಿದ್ದ ಎಲ್ಲಾ ಇಸ್ರಾಯೇಲರೂ ಎರಡು ವಾರ ಅಂದರೆ ಹದಿನಾಲ್ಕು ದಿನಗಳ ವರೆಗೆ ತಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಹಬ್ಬಮಾಡಿದರು.


ಆದರೆ ಹೆರೋದ್ಯಳಿಗೆ ಅನುಕೂಲವಾದ ದಿನ ಬಂದಿತು; ಹೇಗೆಂದರೆ ಹೆರೋದನು ತನ್ನ ಜನ್ಮದಿನದಂದು ಪ್ರಭುಗಳಿಗೂ, ಸಹಸ್ರಾಧಿಪತಿಗಳಿಗೂ, ಗಲಿಲಾಯ ಸೀಮೆಯ ಮುಖ್ಯಸ್ಥರಿಗೂ ಔತಣವನ್ನು ಏರ್ಪಡಿಸಿದಾಗ,


ರಾಜನಾದ ಬೇಲ್ಶಚ್ಚರನು ತನ್ನ ರಾಜ್ಯದ ಮುಖಂಡರಲ್ಲಿ ಸಾವಿರ ಮಂದಿಗೆ ಔತಣವನ್ನು ಏರ್ಪಡಿಸಿ ಆ ಸಾವಿರ ಜನರ ಕಣ್ಣೆದುರಿಗೆ ತಾನೂ ದ್ರಾಕ್ಷಾರಸವನ್ನು ಕುಡಿದನು.


ಅವನು ತನ್ನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ತನ್ನ ಎಲ್ಲಾ ಸರದಾರರಿಗೋಸ್ಕರವೂ ಮತ್ತು ಪರಿವಾರದವರಿಗಾಗಿ ಒಂದು ಔತಣ ಏರ್ಪಡಿಸಿದ್ದನು. ಪಾರಸಿಯ ಮತ್ತು ಮೇದ್ಯ ಸೇನಾಧಿಪತಿಗಳೂ, ಪ್ರಧಾನರೂ ಮತ್ತು ಸಂಸ್ಥಾನದ ಅಧಿಕಾರಿಗಳೂ, ರಾಜನ ಸನ್ನಿಧಿಗೆ ಸೇರಿ ಬಂದಿದ್ದರು.


ಇದಾದ ಮೇಲೆ ನಾನು ಎಚ್ಚೆತ್ತು ನಿಜಸ್ಥಿತಿಯನ್ನು ನೋಡಿದೆನು; ಆಗ ನನ್ನ ಕನಸು ನನಗೆ ಮನೋಹರವಾಗಿ ಕಾಣಿಸಿತು.


ಅರಸನಾದ ಸೊಲೊಮೋನನು ಯಜ್ಞಕ್ಕಾಗಿ ಇಪ್ಪತ್ತೆರಡು ಸಾವಿರ ಹೋರಿಗಳನ್ನು, ಲಕ್ಷದ ಇಪ್ಪತ್ತು ಸಾವಿರ ಕುರಿಗಳನ್ನು ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿಸಿದನು. ಈ ಪ್ರಕಾರ ಅರಸನು ಮತ್ತು ಎಲ್ಲಾ ಇಸ್ರಾಯೇಲರು ಯೆಹೋವನ ದೇವಾಲಯವನ್ನು ಪ್ರತಿಷ್ಠೆ ಮಾಡಿದರು.


ಸೊಲೊಮೋನನು ಯೆಹೋವನಿಗೋಸ್ಕರ ಮಾಡಿದ ಸಮಾಧಾನಯಜ್ಞಕ್ಕಾಗಿ ವಧಿಸಿದ ಹೋರಿಗಳು ಇಪ್ಪತ್ತೆರಡು ಸಾವಿರ ಮತ್ತು ಕುರಿಗಳು ಲಕ್ಷದ ಇಪ್ಪತ್ತು ಸಾವಿರ, ಈ ಪ್ರಕಾರ ಅರಸನೂ ಎಲ್ಲಾ ಇಸ್ರಾಯೇಲರೂ ಯೆಹೋವನ ಆಲಯವನ್ನು ಪ್ರತಿಷ್ಠೆ ಮಾಡಿದರು.


ಮೂರನೆಯ ದಿನದಲ್ಲಿ ಫರೋಹನ ಜನ್ಮ ದಿನವಾದುದರಿಂದ ಅವನು ತನ್ನ ಸೇವಕರೆಲ್ಲರಿಗೆ ಔತಣವನ್ನು ಮಾಡಿಸಿ ಮುಖ್ಯಪಾನದಾಯಕನನ್ನೂ ಮತ್ತು ಮುಖ್ಯ ಅಡಿಗೆಭಟ್ಟನನ್ನು ಬಿಡಿಸಿ ಸೇವಕರ ಮಧ್ಯದಲ್ಲಿ ನಿಲ್ಲಿಸಿದನು.


ಯಾಕೋಬನು ಆ ಬೆಟ್ಟದ ಮೇಲೆ ಯಜ್ಞವನ್ನು ಮಾಡಿ ತನ್ನ ಬಂಧುಗಳನ್ನು ತನ್ನೊಡನೆ ಊಟಮಾಡಲು ಕರೆಯಿಸಿದನು. ಅವರು ಊಟ ಮಾಡಿ ಬೆಟ್ಟದಲ್ಲಿಯೇ ರಾತ್ರಿ ಇಳಿದುಕೊಂಡರು.


ಯಾಕೋಬನು ನಿದ್ದೆಯಿಂದ ಎಚ್ಚೆತ್ತು, “ನಿಜವಾಗಿ ಯೆಹೋವನು ಈ ಸ್ಥಳದಲ್ಲಿ ನೆಲೆಸಿದ್ದಾನೆ. ಇದು ನನಗೆ ತಿಳಿಯದೆ ಹೋಯಿತು” ಎಂದನು.


ಯೆಹೋವನು ಅವರಿಗೆ, “ನನ್ನ ಮಾತನ್ನು ಕೇಳಿರಿ. ನಿಮ್ಮಲ್ಲಿ ಪ್ರವಾದಿಯಿದ್ದರೆ ನಾನು ಅವನಿಗೆ ಜ್ಞಾನದೃಷ್ಟಿಯಲ್ಲಿ ಪ್ರಕಟಿಸುವೆನು, ಮತ್ತು ಕನಸಿನಲ್ಲಿ ಅವನ ಸಂಗಡ ಮಾತನಾಡುವೆನು.


ಅದೇ ಕಾಲದಲ್ಲಿ ಇಬ್ಬರು ವೇಶ್ಯೆಯರು ಅರಸನ ಸನ್ನಿಧಿಗೆ ಬಂದರು.


ಹಾಗೂ ಅವರಲ್ಲಿ ಪ್ರತಿಯೊಬ್ಬ ಪುರುಷ ಹಾಗು ಸ್ತ್ರೀಗೂ ಒಂದು ರೊಟ್ಟಿಯನ್ನೂ, ಒಂದು ತುಂಡು ಬೇಯಿಸಿದ ಮಾಂಸವನ್ನೂ ಮತ್ತು ದ್ರಾಕ್ಷಿಹಣ್ಣಿನ ಒಂದು ಗೊಂಚಲನ್ನೂ ಕೊಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು