Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 3:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಇಸ್ರಾಯೇಲರೆಲ್ಲರೂ ಈ ತೀರ್ಪನ್ನು ಕೇಳಿ ನ್ಯಾಯ ನಿರ್ಣಯಿಸುವುದಕ್ಕೆ ಈತನಲ್ಲಿ ದೈವಜ್ಞಾನವಿದೆ ಎಂದು ತಿಳಿದು ಅವನಿಗೆ ಬಹಳವಾಗಿ ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಇಸ್ರಯೇಲರೆಲ್ಲರೂ ಅರಸನ ಈ ತೀರ್ಪನ್ನು ಕೇಳಿದರು. ನ್ಯಾಯನಿರ್ಣಯಿಸುವುದಕ್ಕೆ ಈತನಲ್ಲಿ ದೇವದತ್ತ ಜ್ಞಾನವಿದೆ ಎಂದು ತಿಳಿದು ಅವನ ಬಗ್ಗೆ ಅಪಾರ ಗೌರವ ಉಳ್ಳವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಇಸ್ರಾಯೇಲ್ಯರೆಲ್ಲರೂ ಅರಸನ ಈ ತೀರ್ಪನ್ನು ಕೇಳಿ ನ್ಯಾಯನಿರ್ಣಯಿಸುವದಕ್ಕೆ ಈತನಲ್ಲಿ ದೇವಜ್ಞಾನವಿದೆ ಎಂದು ತಿಳಿದು ಅವನಿಗೆ ಬಹಳವಾಗಿ ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಸೊಲೊಮೋನನ ತೀರ್ಪಿನ ವಿಚಾರವು ಇಸ್ರೇಲಿನ ಜನರಿಗೆ ತಿಳಿಯಿತು. ಅವನು ವಿವೇಕಿಯಾದುದರಿಂದ ಅವರು ಅವನನ್ನು ಗೌರವಿಸಿದರು ಮತ್ತು ಸನ್ಮಾನಿಸಿದರು. ಅವನು ದೇವರ ಜ್ಞಾನದಿಂದ ಸಮಂಜಸವಾದ ತೀರ್ಪು ನೀಡುತ್ತಾನೆಂದು ಅವರು ಕಂಡುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅರಸನು ತೀರಿಸಿದ ನ್ಯಾಯವನ್ನು ಕುರಿತು ಸಮಸ್ತ ಇಸ್ರಾಯೇಲರು ಕೇಳಿ, ಅರಸನಿಗೆ ಭಯಪಟ್ಟರು. ಏಕೆಂದರೆ ನ್ಯಾಯತೀರಿಸಲು ಅವನಲ್ಲಿ ದೇವರ ಜ್ಞಾನವಿದೆ ಎಂದು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 3:28
25 ತಿಳಿವುಗಳ ಹೋಲಿಕೆ  

ಈ ಕ್ರಿಸ್ತನಲ್ಲಿಯೇ ಜ್ಞಾನ ಮತ್ತು ವಿವೇಕದ ಸರ್ವಸಂಪತ್ತು ಅಡಗಿದೆ.


ಅರಸನು ದಾನಿಯೇಲನಿಗೆ ಪ್ರತ್ಯುತ್ತರವಾಗಿ, “ನೀನು ಈ ರಹಸ್ಯವನ್ನು ಬಯಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವನೂ, ರಾಜರ ಒಡೆಯನೂ, ರಹಸ್ಯಗಳನ್ನು ವ್ಯಕ್ತಗೊಳಿಸುವವನೂ ಆಗಿದ್ದಾನೆ ಎಂಬುದು ನಿಶ್ಚಯ” ಎಂದು ಹೇಳಿದನು.


ಆದರೆ ದೇವರಿಂದ ಕರಿಸಿಕೊಂಡವರಾದ ಯೆಹೂದ್ಯರಿಗಾಗಲಿ, ಗ್ರೀಕರಿಗಾಗಲಿ ಕ್ರಿಸ್ತನೇ ದೇವರ ಶಕ್ತಿಯೂ ಮತ್ತು ದೇವರ ಜ್ಞಾನವೂ ಆಗಿರುವಾತನೆಂದು ನಾವು ಸಾರುತ್ತೇವೆ.


ಕಾಲ ಸಮಯಗಳನ್ನು ಮಾರ್ಪಡಿಸುತ್ತಾನೆ, ರಾಜರನ್ನು ಕಡೆಗಣಿಸುತ್ತಾನೆ, ನೆಲೆಸುವಂತೆ ಮಾಡುತ್ತಾನೆ; ಜ್ಞಾನಿಗಳ ಜ್ಞಾನವು, ವಿವೇಕಿಗಳ ವಿವೇಕವು ಆತನ ವರವೇ.


ಹತ್ತು ಮಂದಿ ಅಧಿಕಾರಿಗಳಿಂದ ಪಟ್ಟಣಕ್ಕೆ ಉಂಟಾಗುವ ಬಲಕ್ಕಿಂತಲೂ ಜ್ಞಾನಿಗೆ ಜ್ಞಾನದಿಂದ ಉಂಟಾಗುವ ಬಲವು ಹೆಚ್ಚು.


ಮಗನೇ, ಯೆಹೋವನಿಗೂ ಮತ್ತು ರಾಜನಿಗೂ ಭಯಪಡು, ತಿರುಗಿಬೀಳುವವರ ಗೊಡವೆಗೆ ಹೋಗಬೇಡ.


“ಎಜ್ರನೇ, ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನೋಪದೇಶಗ್ರಂಥಕ್ಕೆ ಅನುಸಾರವಾಗಿ ನ್ಯಾಯಾಧೀಶರನ್ನೂ ಮತ್ತು ಪಂಚಾಯತರನ್ನೂ ನೇಮಿಸು. ಅವರು ಹೊಳೆಯಾಚೆಯ ಇಸ್ರಾಯೇಲರಲ್ಲಿ ನಿನ್ನ ದೇವರ ಧರ್ಮವನ್ನು ಅರಿತಿರುವವರೆಲ್ಲರ ವ್ಯಾಜ್ಯಗಳನ್ನು ತೀರಿಸಲಿ. ಅರಿಯದವರಿಗೆ ನೀವು ಅದನ್ನು ಕಲಿಸಬೇಕು.


ದೇವರು ಈ ರೀತಿ ಮಾಡಿದ್ದರಿಂದಲೇ ಈಗ ನೀವು ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ದೇವರ ಕಡೆಯಿಂದ ನಮಗೆ ಜ್ಞಾನವೂ, ನೀತಿಯೂ, ಶುದ್ಧಿಯೂ, ಮತ್ತು ವಿಮೋಚನೆಯು ಆಗಿದ್ದಾನೆ.


“ಪರಿಶುದ್ಧ ದೇವರುಗಳ ಆತ್ಮವು ನೆಲೆಸಿರುವ ಒಬ್ಬನು ನಿನ್ನ ರಾಜ್ಯದಲ್ಲಿ ಇದ್ದಾನೆ; ದೇವರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ, ವಿವೇಕವೂ, ಬುದ್ಧಿ ಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು. ನಿನ್ನ ತಂದೆಯಾದ ನೆಬೂಕದ್ನೆಚ್ಚರ ರಾಜನು ಅವನನ್ನು ಜೋಯಿಸರು, ಮಂತ್ರವಾದಿಗಳು, ಪಂಡಿತರು, ಶಾಕುನಿಕರು ಇವರಿಗೆ ಅಧ್ಯಕ್ಷನನ್ನಾಗಿ ನೇಮಿಸಿದನು.


ಅವನು ನಿನ್ನ ಜನರಿಗೆ ನೀತಿಯಿಂದಲೂ, ಕುಗ್ಗಿಹೋದ ನಿನ್ನವರಿಗೆ ನ್ಯಾಯವಾಗಿಯೂ ತೀರ್ಪುಕೊಡಲಿ.


ಎಲ್ಲಾ ಅಧಿಪತಿಗಳೂ ದಂಡಿನವರೂ ಅರಸನಾದ ದಾವೀದನ ಎಲ್ಲಾ ಮಕ್ಕಳೂ ಅವನಿಗೆ ಅಧೀನರಾದರು.


ಆಗ ಯೆಹೋವನು ಗುಡುಗು ಮಳೆಗಳನ್ನು ಕಳುಹಿಸಿದನು. ಎಲ್ಲಾ ಜನರು ಯೆಹೋವನಿಗೂ ಸಮುವೇಲನಿಗೂ ಬಹಳವಾಗಿ ಭಯಪಟ್ಟು


ಆ ದಿನದಲ್ಲಿ ಯೆಹೋವನು ಯೆಹೋಶುವನನ್ನು ಎಲ್ಲಾ ಇಸ್ರಾಯೇಲ್ಯರ ಮುಂದೆ ಘನಪಡಿಸಿದನು. ಅವರು ಮೋಶೆಗೆ ಹೇಗೆ ನಡೆದುಕೊಂಡರೋ ಹಾಗೆಯೇ ಯೆಹೋಶುವನು ಭಯ ಮತ್ತು ಗೌರವದಿಂದ ನಡೆದುಕೊಂಡರು.


ಯೆಹೋವನು ಐಗುಪ್ತ್ಯರಲ್ಲಿ ಮಾಡಿದ ಈ ಪರಾಕ್ರಮ ಕಾರ್ಯವನ್ನು ಇಸ್ರಾಯೇಲರು ನೋಡಿ ಯೆಹೋವನಿಗೆ ಭಯಪಟ್ಟು ಆತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯನ್ನಿಟ್ಟರು.


ಅವನು ಬಡವರ ನ್ಯಾಯವನ್ನು ಸ್ಥಾಪಿಸಲಿ; ದೀನರ ಮಕ್ಕಳನ್ನು ಉದ್ಧರಿಸಲಿ; ಪ್ರಜಾಹಿಂಸಕರನ್ನು ಖಂಡಿಸಿಬಿಡಲಿ.


ಅವರ ಹೃದಯಗಳು ಉತ್ತೇಜನಗೊಂಡು, ಪ್ರೀತಿಯಿಂದ ಒಂದಾಗಿದ್ದು, ದೇವರ ಮರ್ಮವನ್ನು ಅಂದರೆ ಕ್ರಿಸ್ತನನ್ನು ತಿಳಿದುಕೊಳ್ಳುವ ಮೂಲಕ ಬರುವ ನಿಶ್ಚಯವಾದ ಭಾಗ್ಯವನ್ನು ಪಡೆಯಬೇಕೆಂಬುದೇ ನನ್ನ ಅಪೇಕ್ಷೆ. ಅದಕ್ಕಾಗಿಯೇ ನಾನು ಎಷ್ಟು ಪ್ರಯಾಸಪಡುತ್ತಿದ್ದೇನೆಂಬುದು ನಿಮಗೆ ತಿಳಿದಿರಬೇಕೆಂದು ಬಯಸುತ್ತೇನೆ.


ಕೂಡಲೇ ಅರಸನು, “ಬದುಕಿರುವ ಕೂಸನ್ನು ಕೊಲ್ಲಬೇಡಿರಿ. ಆ ಸ್ತ್ರೀಗೆ ಕೊಡಿರಿ. ಅವಳೇ ಅದರ ತಾಯಿ” ಎಂದು ಆಜ್ಞಾಪಿಸಿದನು.


ಸೊಲೊಮೋನ ರಾಜನು ಎಲ್ಲಾ ಇಸ್ರಾಯೇಲಿನ ಮೇಲೆ ಅರಸನಾಗಿದ್ದನು.


ರಾಜನ ತುಟಿಗಳಲ್ಲಿ ದೈವೋಕ್ತಿ, ನ್ಯಾಯತೀರಿಸುವುದರಲ್ಲಿ ಅವನ ಬಾಯಿ ತಪ್ಪಿಹೋಗದು.


ಆತನೇ ನ್ಯಾಯಾಸನದಲ್ಲಿ ಕುಳಿತವನಿಗೆ ನ್ಯಾಯವಿವೇಚನೆಯಾಗಿಯೂ, ಊರಬಾಗಿಲಲ್ಲಿ ಶತ್ರುಗಳನ್ನು ನಾಶಮಾಡುವವರಿಗೆ ಶೌರ್ಯವಾಗಿಯೂ ಪರಿಣಮಿಸುವನು.


ಹೀಗಿರಲು ದೇವರು ಆ ನಾಲ್ಕು ಮಂದಿ ಯುವಕರಿಗೆ ಸಕಲ ಶಾಸ್ತ್ರಗಳಲ್ಲಿಯೂ, ವಿದ್ಯೆಗಳಲ್ಲಿಯೂ, ಜ್ಞಾನವಿವೇಕಗಳನ್ನು ದಯಪಾಲಿಸಿದನು. ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ, ದಿವ್ಯದರ್ಶನಗಳನ್ನೂ ಗ್ರಹಿಸುವುದರಲ್ಲಿ ಪ್ರವೀಣನಾದನು.


ನಿನ್ನನ್ನು ಮೆಚ್ಚಿ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ಇಸ್ರಾಯೇಲರನ್ನು ಸದಾ ಪ್ರೀತಿಸುವವನಾದುದರಿಂದ ಅವರ ನೀತಿನ್ಯಾಯಗಳನ್ನು ಸ್ಥಾಪಿಸುವುದಕ್ಕೋಸ್ಕರ ನಿನ್ನನ್ನೇ ಅರಸನನ್ನಾಗಿ ನೇಮಿಸಿದ್ದಾನೆ” ಎಂದು ಹೇಳಿದಳು.


ನನ್ನ ಸಹಾಯದಿಂದ ರಾಜರು ಆಳುವರು, ಅಧಿಪತಿಗಳು ಸಹ ನ್ಯಾಯತೀರಿಸುವರು.


ವಿಷಯವನ್ನು ರಹಸ್ಯವಾಗಿಡುವುದು ದೇವರ ಮಹಿಮೆ, ವಿಷಯವನ್ನು ವಿಮರ್ಶೆಮಾಡುವುದು ರಾಜರ ಹಿರಿಮೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು