Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 3:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನನ್ನ ದೇವರಾದ ಯೆಹೋವನೇ, ನನ್ನ ತಂದೆಗೆ ಬದಲಾಗಿ ನಿನ್ನಿಂದ ಅರಸನಾಗಿ ನೇಮಿಸಲ್ಪಟ್ಟ ನಿನ್ನ ಸೇವಕನಾದ ನಾನು ಇನ್ನೂ ಚಿಕ್ಕವನು. ವ್ಯವಹಾರ ಜ್ಞಾನವಿಲ್ಲದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನನ್ನ ದೇವರಾದ ಸರ್ವೇಶ್ವರಾ, ನನ್ನ ತಂದೆಗೆ ಬದಲಾಗಿ ನಿಮ್ಮಿಂದ ಅರಸನಾಗಿ ನೇಮಕಗೊಂಡಿರುವ ನಿಮ್ಮ ದಾಸನಾದ ನಾನು ಇನ್ನೂ ಚಿಕ್ಕವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನನ್ನ ದೇವರಾದ ಯೆಹೋವನೇ, ನನ್ನ ತಂದೆಗೆ ಬದಲಾಗಿ ನಿನ್ನಿಂದ ಅರಸನಾಗಿ ನೇವಿುಸಲ್ಪಟ್ಟ ನಿನ್ನ ಸೇವಕನಾದ ನಾನು ಇನ್ನೂ ಚಿಕ್ಕವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನನ್ನ ದೇವರಾದ ಯೆಹೋವನೇ, ನನ್ನ ತಂದೆಯ ಸ್ಥಾನದಲ್ಲಿ ನನ್ನನ್ನು ನೀನು ರಾಜನನ್ನಾಗಿ ಮಾಡಿದೆ. ಆದರೆ ನಾನೊಬ್ಬ ಚಿಕ್ಕ ಮಗುವಿನಂತಿದ್ದೇನೆ. ನಾನು ಮಾಡಬೇಕಾದ ಕಾರ್ಯಗಳನ್ನು ಮಾಡಲು ಇರಬೇಕಾದ ಬುದ್ದಿವಂತಿಕೆಯು ನನ್ನಲ್ಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಈಗ ನನ್ನ ದೇವರಾದ ಯೆಹೋವ ದೇವರೇ, ನೀವು ನನ್ನ ತಂದೆ ದಾವೀದನಿಗೆ ಬದಲಾಗಿ ನಿಮ್ಮ ಸೇವಕನನ್ನು ಅರಸನನ್ನಾಗಿ ಮಾಡಿದ್ದೀರಿ. ಆದರೆ ನಾನು ಚಿಕ್ಕ ಬಾಲಕನಾಗಿದ್ದು, ನನ್ನ ಕರ್ತವ್ಯವನ್ನು ಹೇಗೆ ನಿರ್ವಹಿಸಬೇಕೆಂದು ತಿಳಿದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 3:7
21 ತಿಳಿವುಗಳ ಹೋಲಿಕೆ  

ತರುವಾಯ ಅರಸನಾದ ದಾವೀದನು, “ದೇವರು ನನ್ನ ಮಗನಾದ ಸೊಲೊಮೋನನನ್ನೇ ದೇವಾಲಯ ಕಟ್ಟಲು ಆರಿಸಿಕೊಂಡಿದ್ದಾನೆ. ಆದರೆ ಅವನು ಇನ್ನೂ ಎಳೇ ಪ್ರಾಯದವನು. ಮಾಡತಕ್ಕ ಕೆಲಸವೋ ವಿಶೇಷವಾದದ್ದು. ಕಟ್ಟತಕ್ಕ ಮಂದಿರವು ದೇವರಾದ ಯೆಹೋವನಿಗಾಗಿಯೇ ಹೊರತು ಮನುಷ್ಯನಿಗಾಗಿಯಲ್ಲ.


ಯೆಹೋವನು ಅವರ ಮುಂದಾಗಿ ಹೋಗಲಿ ಅಥವಾ ಅವರನ್ನು ಮುನ್ನಡೆಸಲು, ಮುಂದಾಗಿ ಬರಲಿ ಅವರನ್ನು ಹಿಂದಕ್ಕೆ ಕರೆದುಕೊಂಡು ಬರಲು, ಒಬ್ಬ ನಾಯಕನನ್ನು ನೇಮಿಸು ನಿನ್ನವರಾದ ಈ ಜನ ಸಮೂಹವು ಕುರುಬನಿಲ್ಲದ ಕುರಿಗಳಂತೆ ಆಗಬಾರದು” ಎಂದು ಬೇಡಿದನು.


ಅದಕ್ಕೆ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ನಾನು ಮಾತು ಬಲ್ಲವನಲ್ಲ, ಬಾಲಕನು” ಎಂದು ಅರಿಕೆ ಮಾಡಿದೆನು.


ನಾನೇ ಆ ಬಾಗಿಲು. ನನ್ನ ಮುಖಾಂತರವಾಗಿ ಯಾವನಾದರೂ ಒಳಗೆ ಪ್ರವೇಶಿಸಿದರೆ ಅವನು ಸುರಕ್ಷಿತನಾಗಿದ್ದು ಒಳಗೆ ಹೋಗುವನು, ಹೊರಗೆ ಬರುವನು ಮತ್ತು ಮೇವನ್ನು ಕಂಡುಕೊಳ್ಳುವನು.


ಅವನು ನರಜಾತಿಯವರೊಳಗಿಂದ ನೂಕಲ್ಪಟ್ಟನು, ಅವನ ಬುದ್ಧಿಯು ಮೃಗದ ಬುದ್ಧಿಯಂತಾಯಿತು, ಕಾಡು ಕತ್ತೆಗಳೊಂದಿಗೆ ವಾಸಿಸಿದನು. ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಮೇಲೆ ತನಗೆ ಬೇಕಾದವರನ್ನು ನೇಮಿಸುತ್ತಾನೆ ಎಂಬುದು ಅವನಿಗೆ ತಿಳಿದುಬರುವ ತನಕ ದನಗಳಂತೆ ಹುಲ್ಲು ಮೇಯುವುದೇ ಅವನ ಗತಿಯಾಯಿತು, ಆಕಾಶದ ಇಬ್ಬನಿಯು ಅವನ ಮೈಯನ್ನು ತೋಯಿಸುತ್ತಿತ್ತು.


ಅರಸನೇ, ಪರಾತ್ಪರನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯಮಹತ್ವ, ಮಾನಸನ್ಮಾನಗಳನ್ನು ದಯಪಾಲಿಸಿದನು.


ರಾಜ್ಯವು ನಿನ್ನಿಂದ ತೊಲಗಿದೆ, ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡು ಮೃಗಗಳೊಂದಿಗೆ ವಾಸಿಸುವಿ, ಎತ್ತುಗಳಂತೆ ಹುಲ್ಲು ಮೇಯುವುದೇ ನಿನಗೆ ಗತಿಯಾಗುವುದು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬುದು ನಿನ್ನ ತಿಳಿವಳಿಕೆಗೆ ಬರುವುದರೊಳಗೆ ಏಳು ವರ್ಷ ನಿನಗೆ ಹೀಗೆ ಕಳೆಯುವುದು” ಎಂದು ಆಕಾಶವಾಣಿಯಾಯಿತು.


ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡು ಮೃಗಗಳೊಂದಿಗೆ ವಾಸಿಸುವಿ, ಎತ್ತುಗಳಂತೆ ಹುಲ್ಲು ಮೇಯುವುದೇ ನಿನಗೆ ಗತಿಯಾಗುವುದು, ಆಕಾಶದ ಇಬ್ಬನಿಯು ನಿನ್ನನ್ನು ತೋಯಿಸುವುದು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬುದು ನಿನಗೆ ತಿಳಿದು ಬರುವುದರೊಳಗೆ ಏಳು ವರ್ಷ ಹೀಗೆ ಕಳೆಯುವುದು.


ಕಾಲ ಸಮಯಗಳನ್ನು ಮಾರ್ಪಡಿಸುತ್ತಾನೆ, ರಾಜರನ್ನು ಕಡೆಗಣಿಸುತ್ತಾನೆ, ನೆಲೆಸುವಂತೆ ಮಾಡುತ್ತಾನೆ; ಜ್ಞಾನಿಗಳ ಜ್ಞಾನವು, ವಿವೇಕಿಗಳ ವಿವೇಕವು ಆತನ ವರವೇ.


ದೇಶದ ಅರಸನು ಯುವಕನಾಗಿದ್ದರೆ, ಪ್ರಭುಗಳು ಹೊತ್ತಾರೆ ಔತಣಕ್ಕೆ ಕುಳಿತುಕೊಂಡರೆ ನಿನಗೆ ದೌರ್ಭಾಗ್ಯವೇ!


ನೀನು ಹೋಗುವಾಗಲೂ, ಬರುವಾಗಲೂ, ಈಗಿನಿಂದ ಸದಾಕಾಲವೂ ಯೆಹೋವನು ನಿನ್ನನ್ನು ಕಾಪಾಡುವನು.


ಹಿಂದಿನ ದಿನಗಳಲ್ಲಿ ಅಂದರೆ, ಸೌಲನ ಆಡಳಿತದಲ್ಲಿ, ಇಸ್ರಾಯೇಲರ ದಳಾಧಿಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವನು ನೀನೇ. ನಿನ್ನನ್ನು ಕುರಿತು ಯೆಹೋವನು, ‘ನೀನು ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನೂ ಪಾಲಕನೂ ಆಗಿರುವಿಯೆಂದು ಹೇಳಿದ್ದಾನೆ’” ಅಂದರು.


ಆದರೆ ಇಸ್ರಾಯೇಲರೂ, ಯೆಹೂದ್ಯರೂ ತಮ್ಮ ಸಂಗಡ ಹೋಗುತ್ತಾ ಬರುತ್ತಾ ಇದ್ದ ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದರು.


ಅವನು ಅವರಿಗೆ, “ನಾನು ಈಗ ನೂರಿಪ್ಪತ್ತು ವರ್ಷದವನಾಗಿದ್ದೇನೆ; ವಿಶೇಷವಾದ ಕಾರ್ಯಗಳನ್ನು ನಿರ್ವಹಿಸುವುದು ಇನ್ನು ನನ್ನಿಂದಾಗದು. ಯೆಹೋವನು ನನಗೆ, ‘ನೀನು ಈ ಯೊರ್ದನ್ ನದಿಯನ್ನು ದಾಟಬಾರದು’ ಎಂದು ಆಜ್ಞಾಪಿಸಿದ್ದಾನೆ.


ದಾವೀದನು ತನ್ನ ಮನಸ್ಸಿನಲ್ಲಿ ತನ್ನ ಮಗನಾದ ಸೊಲೊಮೋನನು ಎಳೆ ಪ್ರಾಯದವನಾಗಿದ್ದಾನೆ. ಯೆಹೋವನಿಗೋಸ್ಕರ ಕಟ್ಟಿಸತಕ್ಕ ಆಲಯದ ಕೀರ್ತಿಯು ಎಲ್ಲಾ ದೇಶಗಳಲ್ಲಿ ಘನತೆಯನ್ನು ಹೊಂದಬೇಕಾದರೆ ಅದು ಅಧಿಕ ಶೋಭಾಯಮಾನವಾಗಿರಬೇಕು. ಆದುದರಿಂದ ಅದಕ್ಕೆ ಬೇಕಾಗುವುದನ್ನೆಲ್ಲಾ ಸಿದ್ಧಪಡಿಸುವೆನು ಅಂದುಕೊಂಡು ಸಾಯುವುದಕ್ಕೆ ಮೊದಲೇ ಎಲ್ಲಾ ಸಿದ್ಧತೆಗಳನ್ನು ಮಾಡಿದನು.


ನಿನಗೆ ಒಬ್ಬ ಮಗನು ಹುಟ್ಟುವನು, ಅವನು ಸಮಾಧಾನ ಪುರುಷನಾಗಿರುವನು. ನಾನು ಅವನ ಸುತ್ತಣ ಎಲ್ಲಾ ವಿರೋಧಿಗಳನ್ನು ಅಡಗಿಸಿ, ಅವನಿಗೆ ಸಮಾಧಾನವನ್ನು ಅನುಗ್ರಹಿಸುವೆನು. ಅವನಿಗೆ ಸೊಲೊಮೋನನೆಂಬ ಹೆಸರಿರುವುದು. ಅವನ ಕಾಲದಲ್ಲಿ ಇಸ್ರಾಯೇಲರಿಗೆ ಸಮಾಧಾನವನ್ನೂ ಮತ್ತು ಸೌಭಾಗ್ಯವನ್ನೂ ದಯಪಾಲಿಸುವೆನು.


ಆಗ ಯೆಹೋವನು ನನಗೆ, “ಬಾಲಕನು ಎನ್ನಬೇಡ; ನಾನು ಯಾರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಅವರೆಲ್ಲರ ಬಳಿಗೆ ನೀನು ಖಂಡಿತವಾಗಿ ಹೋಗುವಿ; ನಾನು ಆಜ್ಞಾಪಿಸುವುದನ್ನೆಲ್ಲಾ ಖಂಡಿತವಾಗಿ ನುಡಿಯುವಿ.


ಭಂಗಕ್ಕೆ ಮೊದಲು ಗರ್ವದ ಹೃದಯ, ಮಾನಕ್ಕೆ ಮುಂಚೆ ದೀನತೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು