Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 4:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ದೇವರು ಸೊಲೊಮೋನನಿಗೆ ವಿಶೇಷವಾದ ಜ್ಞಾನ, ವಿವೇಕಗಳನ್ನೂ, ಸಮುದ್ರ ತೀರದ ಮರಳಿನಷ್ಟು ಅಪರಿಮಿತವಾದ ಮನೋವಿಶಾಲತೆಯನ್ನೂ ಅನುಗ್ರಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ದೇವರು ಸೊಲೊಮೋನನಿಗೆ ಸಮುದ್ರತೀರದ ಮರಳಿನಷ್ಟು ಅಪರಿಮಿತವಾದ ಜ್ಞಾನವಿವೇಕಗಳನ್ನೂ ಮನೋವಿಶಾಲತೆಯನ್ನೂ ಅನುಗ್ರಹಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ದೇವರು ಸೊಲೊಮೋನನಿಗೆ ಸಮುದ್ರತೀರದ ಉಸುಬಿನಷ್ಟು ಅಪರಿವಿುತವಾದ ಜ್ಞಾನವಿವೇಕಗಳನ್ನೂ ಮನೋವಿಶಾಲತೆಯನ್ನೂ ಅನುಗ್ರಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ದೇವರು ಸೊಲೊಮೋನನಿಗೆ ಜ್ಞಾನವಿವೇಕಗಳನ್ನು ಅನುಗ್ರಹಿಸಿದನು. ಸೊಲೊಮೋನನು ಅನೇಕಾನೇಕ ಸಂಗತಿಗಳನ್ನು ಅರ್ಥಮಾಡಿಕೊಳ್ಳುತ್ತಿದ್ದನು. ಯಾರೂ ಊಹಿಸಿಕೊಳ್ಳಲಾರದಷ್ಟು ಜ್ಞಾನವನ್ನು ಅವನು ಹೊಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ದೇವರು ಸೊಲೊಮೋನನಿಗೆ ಅತ್ಯಧಿಕವಾಗಿ ಜ್ಞಾನವನ್ನೂ, ಗ್ರಹಿಕೆಯನ್ನೂ, ಸಮುದ್ರ ತೀರದಲ್ಲಿಯ ಮರಳಿನ ಹಾಗೆಯೇ ವಿವೇಕವನ್ನೂ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 4:29
19 ತಿಳಿವುಗಳ ಹೋಲಿಕೆ  

ನೋಡು, ನಿನಗೆ ಜ್ಞಾನವನ್ನು ಮತ್ತು ವಿವೇಕವನ್ನು ಅನುಗ್ರಹಿಸಿದ್ದೇನೆ. ನಿನ್ನಂಥ ಜ್ಞಾನಿಯು ಹಿಂದೆಯೂ ಇರಲಿಲ್ಲ, ಮುಂದೆಯೂ ಇರುವುದಿಲ್ಲ.


ಆದರೆ ಮೇಲಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದ್ದು, ಕರುಣೆ ಮತ್ತು ಒಳ್ಳೆ ಫಲಗಳಿಂದ ತುಂಬಿರುವಂಥದ್ದು, ಪಕ್ಷಪಾತವಿಲ್ಲದ್ದು, ಪ್ರಾಮಾಣಿಕವಾದ್ದದು ಆಗಿದೆ.


ನಿಮ್ಮಲ್ಲಿ ಯಾರಿಗಾದರು ಜ್ಞಾನದ ಕೊರತೆಯಿರುವುದಾದರೆ ಅವರು ದೇವರನ್ನು ಬೇಡಿಕೊಳ್ಳಲಿ, ಅದು ಅವರಿಗೆ ದೊರಕುವುದು. ಯಾಕೆಂದರೆ ದೇವರು ಹಂಗಿಸದೆ ಎಲ್ಲರಿಗೂ ಉದಾರವಾಗಿ ಕೊಡುವಾತನಾಗಿದ್ದಾನೆ.


ಇಸ್ರಾಯೇಲರು ಮತ್ತು ಯೆಹೂದ್ಯರು ಸಮುದ್ರ ತೀರದ ಮರಳಿನಷ್ಟು ಅಸಂಖ್ಯರಾಗಿ ಅಭಿವೃದ್ಧಿಯಾದರು. ಅವರು ಅನ್ನಪಾನಗಳನ್ನು ಮಾಡುತ್ತಾ ತೃಪ್ತರಾಗಿ ಸಂತೋಷದಿಂದಿದ್ದರು.


ಎಲ್ಲಾ ಒಳ್ಳೆಯ ವರಗಳು ಮತ್ತು ಪರಿಪೂರ್ಣವಾದ ವರಗಳು ಮೇಲಿನಿಂದ ಬಂದವುಗಳೇ, ಅವು ಸಕಲ ವಿಧವಾದ ಬೆಳಕಿಗೆ ಮೂಲಕರ್ತನಾದ ದೇವರಿಂದ ಇಳಿದು ಬರುತ್ತವೆ; ಆತನು ನೆರಳಿನಂತೆ ಬದಲಾಗುವವನಲ್ಲ, ಚಂಚಲಚಿತ್ತನೂ ಅಲ್ಲ.


ದೇವರು ತಾನು ಮೆಚ್ಚಿದವನಿಗೆ ಜ್ಞಾನವನ್ನೂ, ತಿಳಿವಳಿಕೆಯನ್ನೂ, ಸಂತೋಷವನ್ನೂ ದಯಪಾಲಿಸುತ್ತಾನೆ. ಆದರೆ ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವುದಕ್ಕಾಗಿ ಕೂಡಿಸಿ ಒದಗಿಸುವಂತೆ ಪಾಪಿಗಾದರೋ ಪ್ರಯಾಸವನ್ನೇ ಕೊಡುತ್ತಾನೆ. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.


ಯೆಹೋವನೇ ಜ್ಞಾನವನ್ನು ಕೊಡುವಾತನು, ಆತನ ಬಾಯಿಂದಲೇ ತಿಳಿವಳಿಕೆಯೂ, ವಿವೇಕವೂ ಹೊರಟು ಬರುತ್ತವೆ.


ನನಗೆ ತಿಳಿವಳಿಕೆಯನ್ನು ದಯಪಾಲಿಸು, ಆಗ ನಿನ್ನ ಧರ್ಮಶಾಸ್ತ್ರವನ್ನು ಪೂರ್ಣಮನಸ್ಸಿನಿಂದ ಕೈಕೊಂಡು ನಡೆಯುವೆನು.


ನೀನು ಅವರನ್ನು ನೋಡಿ ಸಂತೋಷ ಸಂಭ್ರಮ ಪಡುವೆ, ನಿನ್ನ ಹೃದಯವು ಹರ್ಷಿಸಿ ಉಲ್ಲಾಸಿಸುವುದು; ಏಕೆಂದರೆ ಸಮುದ್ರ ವ್ಯಾಪಾರದ ಸಮೃದ್ಧಿಯು ನಿನಗೆ ಅತಿಯಾದ ಲಾಭತರುವುದು. ಕಡೆಗೆ ತಿರುಗುವುದು, ಜನಾಂಗಗಳ ಐಶ್ವರ್ಯವು ನಿನಗೆ ದೊರೆಯುವುದು.


ಇಸ್ರಾಯೇಲರೆಲ್ಲರೂ ಈ ತೀರ್ಪನ್ನು ಕೇಳಿ ನ್ಯಾಯ ನಿರ್ಣಯಿಸುವುದಕ್ಕೆ ಈತನಲ್ಲಿ ದೈವಜ್ಞಾನವಿದೆ ಎಂದು ತಿಳಿದು ಅವನಿಗೆ ಬಹಳವಾಗಿ ಭಯಪಟ್ಟರು.


ಯೋಸೇಫನು ದವಸಧಾನ್ಯವನ್ನು ಸಮುದ್ರ ತೀರದ ಮರಳಿನಂತೆ ರಾಶಿರಾಶಿಯಾಗಿ ಶೇಖರಿಸಿ ಲೆಕ್ಕ ಮಾಡುವುದನ್ನು ಬಿಟ್ಟುಬಿಟ್ಟನು. ಅದನ್ನು ಲೆಕ್ಕ ಮಾಡುವುದಕ್ಕೆ ಆಗದೇ ಹೋಯಿತು.


ನಾನು ನನ್ನ ದಾಸನಾದ ದಾವೀದನ ಸಂತಾನವನ್ನು ಅಸಂಖ್ಯಾತವಾದ ನಕ್ಷತ್ರಗಣದಷ್ಟು ಹೆಚ್ಚಿಸುವೆನು; ನನ್ನ ಸೇವೆಮಾಡುವ ಲೇವಿಯರ ಸಂಖ್ಯೆಯನ್ನು ಅಳೆಯಲಾಗದ ಸಮುದ್ರತೀರದ ಉಸುಬಿನಷ್ಟು ವೃದ್ಧಿಪಡಿಸುವೆನು.”


ನಾನು ನನ್ನ ಮನಸ್ಸಿನಲ್ಲಿ ಯೋಚಿಸುತ್ತಾ, “ನೋಡು, ನನಗಿಂತ ಮೊದಲು ಯೆರೂಸಲೇಮನ್ನು ಆಳಿದವರೆಲ್ಲರಿಗಿಂತಲೂ ಹೆಚ್ಚು ಜ್ಞಾನವನ್ನು ಸಂಪಾದಿಸಿಕೊಂಡಿದ್ದೇನೆ. ನನ್ನ ಹೃದಯವು ಜ್ಞಾನವನ್ನೂ, ತಿಳಿವಳಿಕೆಯನ್ನೂ ವಿಶೇಷವಾಗಿ ಹೊಂದಿದೆ” ಎಂದುಕೊಂಡೆನು.


ಮಿದ್ಯಾನ್ಯರೂ, ಅಮಾಲೇಕ್ಯರೂ, ಮೂಡಣ ದೇಶದವರೂ ಮಿಡತೆಗಳಂತೆ ಗುಂಪಾಗಿ ತಗ್ಗಿನಲ್ಲಿ ಇಳಿದುಕೊಂಡಿದ್ದರು. ಅವರ ಒಂಟೆಗಳು ಸಮುದ್ರತೀರದ ಮರಳಿನಂತೆ ಅಸಂಖ್ಯವಾಗಿದ್ದವು.


ಹಿಂಸೆ, ಬಾಧೆಯನ್ನು ಗುರಿಯಾಗಿಟ್ಟುಕೊಂಡೆ ಮುನ್ನುಗ್ಗಿ ಬರುವರು. ಜನರನ್ನು ಮರಳಿನಂತೆ ಲೆಕ್ಕವಿಲ್ಲದಷ್ಟು ಸೆರೆಹಿಡಿದು ಗುಂಪು ಕೂಡಿಸುವರು.


ನೀನು ನನ್ನ ಅಂತರಾತ್ಮವನ್ನು ವಿಮೋಚಿಸು, ಆಗ ಆಸಕ್ತಿಯಿಂದ ನಿನ್ನ ಆಜ್ಞಾಮಾರ್ಗವನ್ನು ಅನುಸರಿಸುವೆನು. ಹೇ.


ಕಾಲ ಸಮಯಗಳನ್ನು ಮಾರ್ಪಡಿಸುತ್ತಾನೆ, ರಾಜರನ್ನು ಕಡೆಗಣಿಸುತ್ತಾನೆ, ನೆಲೆಸುವಂತೆ ಮಾಡುತ್ತಾನೆ; ಜ್ಞಾನಿಗಳ ಜ್ಞಾನವು, ವಿವೇಕಿಗಳ ವಿವೇಕವು ಆತನ ವರವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು