Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 5:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನನಗಾದರೋ ನನ್ನ ದೇವರಾದ ಯೆಹೋವನು ಎಲ್ಲಾ ಕಡೆಗಳಲ್ಲಿಯೂ ಸಮಾಧಾನವನ್ನು ಅನುಗ್ರಹಿಸಿದ್ದಾನೆ. ನನ್ನನ್ನು ವಿರೋಧಿಸುವವನು ಒಬ್ಬನೂ ಇಲ್ಲ, ಆತನ ದಯೆಯಿಂದ ಆಪತ್ತು ನನ್ನಿಂದ ದೂರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನನಗಾದರೋ ನನ್ನ ದೇವರಾದ ಸರ್ವೇಶ್ವರ ಎಲ್ಲ ಕಡೆಗಳಲ್ಲೂ ಸಮಾಧಾನವನ್ನು ಅನುಗ್ರಹಿಸಿದ್ದಾರೆ; ನನ್ನನ್ನು ವಿರೋಧಿಸುವವನು ಒಬ್ಬನೂ ಇಲ್ಲ; ಆಪತ್ತು ವಿಪತ್ತು ದೂರವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನನಗಾದರೋ ನನ್ನ ದೇವರಾದ ಯೆಹೋವನು ಎಲ್ಲಾ ಕಡೆಗಳಲ್ಲಿಯೂ ಸಮಾಧಾನವನ್ನು ಅನುಗ್ರಹಿಸಿದ್ದಾನೆ; ನನ್ನನ್ನು ವಿರೋಧಿಸುವವನು ಒಬ್ಬನೂ ಇಲ್ಲ; ಆಪತ್ತು ನನಗೆ ದೂರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದರೆ ಈಗ ನನ್ನ ದೇವರಾದ ಯೆಹೋವನು ನನ್ನ ದೇಶದಲ್ಲೆಲ್ಲಾ ಶಾಂತಿ ನೆಲೆಸುವಂತೆ ಮಾಡಿದ್ದಾನೆ. ಈಗ ನನಗೆ ಶತ್ರುಗಳೇ ಇಲ್ಲ. ನನ್ನ ಜನರಿಗೆ ಯಾವ ಅಪಾಯವೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದರೆ ಈಗ ನನ್ನ ದೇವರಾದ ಯೆಹೋವ ದೇವರು, ಶತ್ರುವಿನಿಂದ ತಗಲುವ ಕೇಡು ಒಂದಾದರೂ ಇಲ್ಲದ ಹಾಗೆ, ಸಮಸ್ತ ದಿಕ್ಕುಗಳಲ್ಲಿ ನನಗೆ ಸಮಾಧಾನವನ್ನು ಕೊಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 5:4
11 ತಿಳಿವುಗಳ ಹೋಲಿಕೆ  

ನಿನಗೆ ಒಬ್ಬ ಮಗನು ಹುಟ್ಟುವನು, ಅವನು ಸಮಾಧಾನ ಪುರುಷನಾಗಿರುವನು. ನಾನು ಅವನ ಸುತ್ತಣ ಎಲ್ಲಾ ವಿರೋಧಿಗಳನ್ನು ಅಡಗಿಸಿ, ಅವನಿಗೆ ಸಮಾಧಾನವನ್ನು ಅನುಗ್ರಹಿಸುವೆನು. ಅವನಿಗೆ ಸೊಲೊಮೋನನೆಂಬ ಹೆಸರಿರುವುದು. ಅವನ ಕಾಲದಲ್ಲಿ ಇಸ್ರಾಯೇಲರಿಗೆ ಸಮಾಧಾನವನ್ನೂ ಮತ್ತು ಸೌಭಾಗ್ಯವನ್ನೂ ದಯಪಾಲಿಸುವೆನು.


ಅವನು ಯೂಫ್ರೆಟಿಸ್ ನದಿಯ ಈಚೆಯಲ್ಲಿ ತಿಪ್ಸಹು ಮೊದಲುಗೊಂಡು ಗಾಜದವರೆಗಿರುವ ಈಚೆಯ ಎಲ್ಲಾ ಅರಸರಿಗೂ ದೊರೆಯಾಗಿದ್ದನು. ಅವನು ಸುತ್ತಣ ರಾಜರೊಡನೆ ಸಮಾಧಾನದಿಂದಿದ್ದನು.


ಹೀಗಿರಲಾಗಿ ಯೂದಾಯ, ಗಲಿಲಾಯ, ಸಮಾರ್ಯ ಸೀಮೆಗಳಲ್ಲಿದ್ದ ಸಭೆಯು ಸಮಾಧಾನ ಹೊಂದಿತು; ಮತ್ತು ಭಕ್ತಿಯಲ್ಲಿ ಬೆಳೆದು ಕರ್ತನ ಭಯದಲ್ಲಿ ನಡೆದು, ಪವಿತ್ರಾತ್ಮನಿಂದ ಪ್ರೋತ್ಸಾಹವನ್ನು ಹೊಂದಿ ಬೆಳೆಯುತ್ತಾ ಬಂದಿತು.


ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು. ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.


ಅವನ ದಿನಗಳಲ್ಲಿ ನೀತಿಯು ವೃದ್ಧಿಯಾಗಲಿ; ಚಂದ್ರನಿರುವವರೆಗೂ ಪರಿಪೂರ್ಣ ಸೌಭಾಗ್ಯವಿರಲಿ.


ಯೆಹೋವನು, “ನೀನು ಹೋಗಿ ನನ್ನ ಸೇವಕನಾದ ದಾವೀದನಿಗೆ ‘ನೀನು ನನಗೋಸ್ಕರ ಮನೆಯನ್ನು ಕಟ್ಟಬೇಕೋ?


ಮತ್ತು ಅಷ್ಡೋದ್ ಸಂಸ್ಥಾನ ಮತ್ತು ಅದರ ಗ್ರಾಮ ಪಟ್ಟಣಗಳು; ಗಾಜಾ ಸಂಸ್ಥಾನ ಹಾಗೂ ಐಗುಪ್ತ ನದಿಯ ಹತ್ತಿರದಲ್ಲಿ ಮತ್ತು ಮಹಾಸಾಗರದ ತೀರದಲ್ಲಿ ಇರುವ ಅದರ ಎಲ್ಲಾ ಗ್ರಾಮ, ಪಟ್ಟಣಗಳು.


ಸೊಲೊಮೋನನ ಮತ್ತು ಹೀರಾಮನ ಶಿಲ್ಪಿಗಳೂ ಹಾಗು ಗೆಬಾಲ್ಯರೂ ಅವುಗಳನ್ನು ಕೆತ್ತುತ್ತಿದ್ದರು. ದೇವಾಲಯ ಕಟ್ಟುವುದಕ್ಕಾಗಿ ಬೇಕಾಗುವ ಕಲ್ಲು ಮತ್ತು ಮರಗಳನ್ನು ಸಿದ್ಧಪಡಿಸಿದರೂ ಇವರೇ.


ಸೊಲೊಮೋನನ ಜೀವಮಾನದಲ್ಲೆಲ್ಲಾ ಇಸ್ರಾಯೇಲರಿಗೆ ಮಹಾಬಾಧಕನಾದ ಹದದನಲ್ಲದೆ ಅವನೂ ವೈರಿಯಾಗಿದ್ದನು. ಅವನು ಅರಾಮ್ ದೇಶದಲ್ಲಿ ಆಳುವವನಾಗಿ ಇಸ್ರಾಯೇಲರನ್ನು ಬಹಳವಾಗಿ ದ್ವೇಷಿಸಿದನು.


ಗಾಜ ಪ್ರಾಂತ್ಯದವರೆಗೆ ವಾಸವಾಗಿದ್ದ ಫಿಲಿಷ್ಟಿಯರನ್ನು ಸೋಲಿಸಿ, ಕಾವಲುಗಾರರ ಗೋಪುರ ಮೊದಲುಗೊಂಡು ಕೋಟೆಕೊತ್ತಲುಗಳುಳ್ಳ ಚಿಕ್ಕಗ್ರಾಮ ಮೊದಲುಗೊಂಡು ಮಹಾನಗರಗಳವರೆಗೂ ಎಲ್ಲಾ ಊರುಗಳನ್ನು ನಾಶಮಾಡಿದನು.


ಅವರು ಯೆರೂಸಲೇಮಿನಲ್ಲಿ ಬಲಿಷ್ಠರಾಗಿ ರಾಜ್ಯ ಆಳುತ್ತಾ, ಹೊಳೆಯಾಚೆಯ ಎಲ್ಲಾ ಪ್ರದೇಶಗಳಲ್ಲಿ ಅಧಿಕಾರನಡಿಸುತ್ತಾ, ಕಪ್ಪ, ತೆರಿಗೆ ಸುಂಕಗಳನ್ನು ತೆಗೆದುಕೊಳ್ಳುತ್ತಾ ಇದ್ದರೆಂದು ಕಂಡುಬಂದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು