Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 5:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದುದರಿಂದ ನೀನು ನನಗೋಸ್ಕರ ಲೆಬನೋನಿನ ದೇವದಾರು ವೃಕ್ಷಗಳನ್ನು ಕೊಯ್ಯಬೇಕೆಂದು ನಿನ್ನ ಆಳುಗಳಿಗೆ ಆಜ್ಞಾಪಿಸು, ಅವರ ಜೊತೆಯಲ್ಲಿ ನನ್ನ ಆಳುಗಳನ್ನೂ ಕಳುಹಿಸುವೆನು. ಮತ್ತು ನಿನ್ನ ಆಳುಗಳಿಗೆ ನೀನು ಹೇಳುವಷ್ಟು ಸಂಬಳವನ್ನು ಕೊಡುತ್ತೇನೆ. ಚೀದೋನ್ಯರಂತೆ ಮರಕೊಯ್ಯುವುದರಲ್ಲಿ ಜಾಣರು ನಮ್ಮಲ್ಲಿರುವುದಿಲ್ಲವೆಂದು ನಿನಗೆ ಗೊತ್ತಿದೆಯಲ್ಲಾ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನೀನು ನನಗೋಸ್ಕರ ಲೆಬನೋನಿನ ದೇವದಾರು ವೃಕ್ಷಗಳನ್ನು ಕೊಯ್ಯಬೇಕೆಂದು ನಿನ್ನ ಆಳುಗಳಿಗೆ ಆಜ್ಞಾಪಿಸು; ಅವರ ಜೊತೆಯಲ್ಲಿ ನನ್ನ ಆಳುಗಳನ್ನೂ ಕಳುಹಿಸುವೆನು. ಮತ್ತು ನಿನ್ನ ಆಳುಗಳಿಗೆ ನೀನು ಹೇಳುವಷ್ಟು ಸಂಬಳವನ್ನು ಕೊಡುತ್ತೇನೆ. ಸಿದೋನ್ಯರಂತೆ ಮರಕೊಯ್ಯುವುದರಲ್ಲಿ ಜಾಣರು ನಮ್ಮಲ್ಲಿರುವುದಿಲ್ಲವೆಂದು ನಿನಗೆ ಗೊತ್ತಿದೆಯಲ್ಲವೆ?” ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದದರಿಂದ ನೀನು ನನಗೋಸ್ಕರ ಲೆಬನೋನಿನ ದೇವದಾರು ವೃಕ್ಷಗಳನ್ನು ಕೊಯ್ಯಬೇಕೆಂದು ನಿನ್ನ ಆಳುಗಳಿಗೆ ಆಜ್ಞಾಪಿಸು; ಅವರ ಜೊತೆಯಲ್ಲಿ ನನ್ನ ಆಳುಗಳನ್ನೂ ಕಳುಹಿಸುವೆನು. ಮತ್ತು ನಿನ್ನ ಆಳುಗಳಿಗೆ ನೀನು ಹೇಳುವಷ್ಟು ಸಂಬಳವನ್ನು ಕೊಡುತ್ತೇನೆ. ಚೀದೋನ್ಯರಂತೆ ಮರ ಕೊಯ್ಯುವದರಲ್ಲಿ ಜಾಣರು ನಮ್ಮಲ್ಲಿರುವದಿಲ್ಲವೆಂದು ನಿನಗೆ ಗೊತ್ತುಂಟಲ್ಲಾ ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದ್ದರಿಂದ ನಿನ್ನ ಸಹಾಯವು ನನಗೆ ಬೇಕಾಗಿದೆ. ನಿನ್ನ ಜನರನ್ನು ಲೆಬನೋನಿಗೆ ಕಳುಹಿಸು. ಅಲ್ಲಿ ಅವರು ನನಗಾಗಿ ದೇವದಾರುಮರಗಳನ್ನು ಕಡಿದು ಬೀಳಿಸಲಿ. ನನ್ನ ಸೇವಕರೂ ನಿನ್ನವರೊಂದಿಗೆ ಕೆಲಸಮಾಡುತ್ತಾರೆ. ನಿನ್ನ ಸೇವಕರಿಗೆ ಗೊತ್ತುಪಡಿಸಿದ ವೇತನವನ್ನು ನಾನು ಕೊಡುತ್ತೇನೆ. ಆದರೆ ನಿನ್ನ ಸಹಾಯ ನನಗೆ ಬೇಕು. ನಮ್ಮ ಬಡಗಿಗಳು ಚೀದೋನ್ಯರ ಬಡಗಿಗಳಂತೆ ಕುಶಲಕರ್ಮಿಗಳಲ್ಲ” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ಆದ್ದರಿಂದ ನೀನು ನನಗೋಸ್ಕರ ಲೆಬನೋನಿನಲ್ಲಿ ದೇವದಾರು ಮರಗಳನ್ನು ಕಡಿಯಲು ಆಜ್ಞಾಪಿಸು. ನನ್ನ ಸೇವಕರೂ, ನಿನ್ನ ಸೇವಕರೂ ಕೂಡ ಇರಲಿ. ನೀನು ಹೇಳಿದ ಪ್ರಕಾರ, ನಿನ್ನ ಸೇವಕರ ಕೂಲಿಯನ್ನು ಕೊಡುತ್ತೇನೆ. ಏಕೆಂದರೆ ನಮ್ಮಲ್ಲಿ ಸೀದೋನ್ಯರ ಹಾಗೆ ಮರವನ್ನು ಕಡಿಯಲು ತಿಳಿದವರಿಲ್ಲ ಎಂದು ನೀನು ಬಲ್ಲೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 5:6
20 ತಿಳಿವುಗಳ ಹೋಲಿಕೆ  

ಲೆಬನೋನಿನಿಂದ ದೇವದಾರು ಮರಗಳನ್ನೂ, ತುರಾಯಿ ಮರಗಳನ್ನೂ, ಸುಗಂಧದ ಮರಗಳನ್ನೂ ನನ್ನ ಬಳಿಗೆ ಕಳುಹಿಸಬೇಕು. ಲೆಬನೋನಿನ ಮರಗಳನ್ನು ಕಡಿಯುವುದರಲ್ಲಿ ನಿನ್ನ ಆಳುಗಳು ಸಮರ್ಥರೆಂದು ನನಗೆ ಗೊತ್ತಿದೆ. ನಿನ್ನ ಆಳುಗಳ ಜೊತೆಯಲ್ಲಿ ನನ್ನ ಆಳುಗಳೂ ಇರುವರು.


ಕಡೆಯದಾಗಿ, ಸಹೋದರರೇ, ಯಾವುದು ಸತ್ಯವೂ, ಮಾನ್ಯವೂ, ನ್ಯಾಯವೂ, ಶುದ್ಧವೂ, ಪ್ರೀತಿಕರವೂ, ಮನೋಹರವೂ ಆಗಿದೆಯೋ, ಯಾವುದು ಸದ್ಗುಣವಾಗಿದೆಯೋ, ಯಾವುದು ಕೀರ್ತಿಗೆ ಯೋಗ್ಯವೋ, ಅವೆಲ್ಲವುಗಳ ಬಗ್ಗೆ ಚಿಂತಿಸುವವರಾಗಿರಿ.


ಆದರೆ ಕ್ರಿಸ್ತನ ವರದ ಅಳತೆಯ ಪ್ರಕಾರವೇ ಪ್ರತಿಯೊಬ್ಬರಿಗೆ ಕೃಪಾವರವು ಕೊಡಲ್ಪಟ್ಟಿದೆ.


ಯಾರಿಗೂ ಅಪಕಾರಕ್ಕೆ ಅಪಕಾರವನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವುದು ಗೌರವವಾದದ್ದೋ ಯುಕ್ತವಾದದ್ದೋ ಅದನ್ನೇ ಯೋಚಿಸಿ ಒಳ್ಳೆಯದನ್ನು ಮಾಡಿರಿ.


ಯೆಹೋವನ ಗರ್ಜನೆಗೆ ದೇವದಾರು ವೃಕ್ಷಗಳು ದಡಲ್ ಎಂದು ಮುರಿದು ಬೀಳುತ್ತವೆ; ಯೆಹೋವನು ಲೆಬನೋನ್ ಪರ್ವತದಲ್ಲಿನ ಮಹಾದೇವದಾರುಗಳನ್ನೂ ಮುರಿದುಬಿಡುತ್ತಾನೆ.


ಆದರೆ ಪರ್ಷಿಯ ರಾಜನಾದ ಕೋರೆಷನಿಂದ ಪಡೆದುಕೊಂಡ ಅಪ್ಪಣೆಯ ಮೇರೆಗೆ ಅವರು ಕಲ್ಲುಕುಟಿಗರಿಗೆ ಮತ್ತು ಬಡಗಿಗಳಿಗೆ ಹಣವನ್ನೂ, ಲೆಬನೋನಿನಿಂದ ಸಮುದ್ರಮಾರ್ಗವಾಗಿ ಯೊಪ್ಪಕ್ಕೆ ದೇವದಾರು ಮರಗಳನ್ನು ತರುತ್ತಿದ್ದ ಚೀದೋನ್ಯರಿಗೆ ಮತ್ತು ತೂರ್ಯರಿಗೆ ಅನ್ನಪಾನಗಳನ್ನೂ ಮತ್ತು ಎಣ್ಣೆಯನ್ನೂ ಕೊಟ್ಟಿದ್ದರು.


ಮರ ಕಡಿಯುವ ನಿನ್ನ ಆಳುಗಳಿಗಾಗಿ ಇಪ್ಪತ್ತು ಸಾವಿರ ಕೋರ್ (ಎರಡು ಸಾವಿರ ಟನ್) ಗೋದಿಯನ್ನೂ, ಇಪ್ಪತ್ತು ಸಾವಿರ ಕೋರ್ (ಎರಡು ಸಾವಿರ ಟನ್) ಜವೆಗೋದಿಯನ್ನೂ, ಇಪ್ಪತ್ತು ಸಾವಿರ ಬತ್ (ನಾಲ್ಕು ಲಕ್ಷ ಲೀಟರ್) ದ್ರಾಕ್ಷಾರಸವನ್ನೂ, ಇಪ್ಪತ್ತು ಸಾವಿರ ಬತ್ (ನಾಲ್ಕು ಲಕ್ಷ ಲೀಟರ್) ಎಣ್ಣೆಯನ್ನೂ ಕೊಡುವೆನು” ಎಂದನು.


ಆ ಗರ್ಭಗೃಹವು ಇಪ್ಪತ್ತು ಮೊಳ ಉದ್ದವೂ, ಇಪ್ಪತ್ತು ಮೊಳ ಅಗಲವೂ, ಇಪ್ಪತ್ತು ಮೊಳ ಎತ್ತರವೂ ಆಗಿತ್ತು. ಅದನ್ನು ಚೊಕ್ಕ ಬಂಗಾರದ ತಗಡಿನಿಂದಲೂ, ಧೂಪವೇದಿಯನ್ನು ದೇವದಾರು ಮರದಿಂದಲೂ ಹೊದಿಸಿದನು.


ಇದಲ್ಲದೆ ಅವನು ದೇವಾಲಯದೊಳಗೆ ಹಿಂದಿನ ಇಪ್ಪತ್ತು ಮೊಳ ಸ್ಥಳವನ್ನು ಬಿಟ್ಟು ನೆಲದಿಂದ ತೊಲೆಗಳವರೆಗೆ ದೇವದಾರಿನ ಹಲಗೆಗಳಿಂದ ಒಂದು ಗೋಡೆಯನ್ನು ಮಾಡಿಸಿದನು. ಅದರ ಹಿಂದಿನ ಭಾಗವನ್ನು ಗರ್ಭಗೃಹ ಅಥವಾ ಮಹಾಪರಿಶುದ್ಧ ಸ್ಥಳ ಎಂದು ಪ್ರತ್ಯೇಕಿಸಿದನು.


ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್; ಆ ಮೇಲೆ ಹೇತ್ ಹುಟ್ಟಿದನು.


ಹೀರಾಮನು ಸೊಲೊಮೋನನ ಮಾತುಗಳನ್ನು ಕೇಳಿದಾಗ ಬಹಳವಾಗಿ ಸಂತೋಷಪಟ್ಟು, “ಈ ಮಹಾ ಜನಾಂಗವನ್ನು ಆಳುವುದಕ್ಕಾಗಿ ದಾವೀದನಿಗೆ ಒಬ್ಬ ಬುದ್ಧಿವಂತನಾದ ಮಗನನ್ನು ಅನುಗ್ರಹಿಸಿದ ಯೆಹೋವನಿಗೆ ಈಗ ಸ್ತೋತ್ರವಾಗಲಿ” ಎಂದು ನುಡಿದನು.


ಹೀರಾಮನು ಸಮುದ್ರ ಪ್ರಯಾಣದಲ್ಲಿ ನಿಪುಣರಾದ ತನ್ನ ನಾವಿಕರನ್ನು ಸೊಲೊಮೋನನ ಸೇವಕರೊಡನೆ ಆ ಹಡಗುಗಳಲ್ಲಿ ಕಳುಹಿಸಿದನು.


ಲೆಕ್ಕವಿಲ್ಲದ್ದಷ್ಟು ತಾಮ್ರವನ್ನೂ, ಎಣಿಸಲಾರದಷ್ಟು ದೇವದಾರುಮರಗಳನ್ನೂ ಸಿದ್ಧಪಡಿಸಿದನು. ಚೀದೋನ್ಯರು ಮತ್ತು ತೂರ್ಯರೂ ಅವನಿಗೆ ದೇವದಾರುಮರಗಳನ್ನು ತಂದುಕೊಟ್ಟರು.


ಅನಂತರ ನಾನು ನಿಮಗೆ, “ಸರಿಯಾಗಿ ತೋರಿದರೆ ನನಗೆ ಸಂಬಳವನ್ನು ಕೊಡಿರಿ ಇಲ್ಲವಾದರೆ ಬಿಡಿರಿ” ಅನ್ನಲು ಅವರು ಮೂವತ್ತು ತೊಲೆ ಬೆಳ್ಳಿಯನ್ನು ತೂಗಿ ನನ್ನ ಸಂಬಳಕ್ಕಾಗಿ ಕೊಟ್ಟರು.


ಅವನು ಕುದುರೆಯ ದಂಡನ್ನು ಕೂಡಿಸಿಕೊಳ್ಳಬಾರದು. ಕುದುರೆಗಳನ್ನು ಕೊಂಡುಕೊಳ್ಳುವುದಕ್ಕಾಗಿ ತನ್ನ ಪ್ರಜೆಗಳನ್ನು ಐಗುಪ್ತದೇಶಕ್ಕೆ ಹೋಗಗೊಡಿಸಬಾರದು. ನೀವು ಇನ್ನು ಆ ದೇಶಕ್ಕೆ ಹೋಗಲೇಬಾರದು ಎಂದು ಯೆಹೋವನು ಆಜ್ಞಾಪಿಸಿದ್ದಾನಲ್ಲಾ.


ತನ್ನ ಎಲ್ಲಾ ಉಗ್ರಾಣ ಪಟ್ಟಣಗಳು, ಯುದ್ಧ ರಥಗಳನ್ನಿರಿಸುವ ಪಟ್ಟಣಗಳು, ರಾಹುತರ ಪಟ್ಟಣಗಳು ಇವುಗಳನ್ನೂ ಕಟ್ಟಿಸಿದನು. ಇದಲ್ಲದೆ ಯೆರೂಸಲೇಮಿನಲ್ಲಿಯೂ ಲೆಬನೋನಿನಲ್ಲಿಯೂ ತನ್ನ ರಾಜ್ಯದ ಎಲ್ಲಾ ಪ್ರಾಂತ್ಯಗಳಲ್ಲಿಯೂ ತನ್ನ ಮನಸ್ಸಿಗೆ ಬಂದವುಗಳನ್ನೆಲ್ಲಾ ಕಟ್ಟಿಸಿದನು.


ಸೊಲೊಮೋನನು ರಥಗಳನ್ನೂ ಮತ್ತು ರಾಹುತರನ್ನೂ ಸಂಗ್ರಹಿಸಿದನು. ಅವನ ರಥಗಳು ಸಾವಿರದ ನಾನೂರು. ರಾಹುತರು ಹನ್ನೆರಡು ಸಾವಿರ. ಇವುಗಳಲ್ಲಿ ಕೆಲವನ್ನು ಯೆರೂಸಲೇಮಿನಲ್ಲಿ ತನ್ನ ಬಳಿಯಲ್ಲಿಯೂ, ಉಳಿದವುಗಳನ್ನು ರಥಗಳಿಗೋಸ್ಕರ ನೇಮಿಸಿದ ಪಟ್ಟಣಗಳಲ್ಲಿಯೂ ಇರಿಸಿದನು.


ಅರಸನಾದ ಸೊಲೊಮೋನನು ರಥಗಳನ್ನೂ ರಾಹುತರನ್ನೂ ಸಂಗ್ರಹಿಸಿದನು. ಸಾವಿರದ ನಾನೂರು ರಥಗಳೂ ಮತ್ತು ಹನ್ನೆರಡು ಸಾವಿರ ರಾಹುತರೂ ಅವನಿಗೆ ಇದ್ದರು. ಇವರನ್ನು ರಥದ ಪಟ್ಟಣಗಳಲ್ಲಿಯೂ ಕೆಲವರನ್ನು ಯೆರೂಸಲೇಮಿನಲ್ಲಿ ಅರಸನೊಂದಿಗೂ ಇರಿಸಿದನು. ಉಳಿದವುಗಳನ್ನು ರಥಗಳಿಗಾಗಿ ನೇಮಿಸಿದ ಪಟ್ಟಣದಲ್ಲಿ ಇರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು