Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 5:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇದಲ್ಲದೆ ಅವನು ಸೊಲೊಮೋನನಿಗೆ, “ನೀನು ಹೇಳಿಕಳುಹಿಸಿದ್ದನ್ನು ಕೇಳಿದೆನು. ದೇವದಾರು ವೃಕ್ಷಗಳನ್ನೂ, ತುರಾಯಿ ಮರಗಳನ್ನೂ ಕುರಿತು ನಿನ್ನ ಅಪೇಕ್ಷೆಯನ್ನು ನೆರವೇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇದೂ ಅಲ್ಲದೆ, ಅವನು ಸೊಲೊಮೋನನಿಗೆ, “ನೀನು ಹೇಳಿ ಕಳುಹಿಸಿದ್ದನ್ನು, ಕೇಳಿದೆನು; ದೇವದಾರು ವೃಕ್ಷಗಳನ್ನೂ ತುರಾಯಿಮರಗಳನ್ನೂ ಕುರಿತು ನಿನ್ನ ಅಪೇಕ್ಷೆಯನ್ನು ನೆರವೇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇದಲ್ಲದೆ ಅವನು ಸೊಲೊಮೋನನಿಗೆ - ನೀನು ಹೇಳಿಕಳುಹಿಸಿದ್ದನ್ನು ಕೇಳಿದೆನು; ದೇವದಾರು ವೃಕ್ಷಗಳನ್ನೂ ತುರಾಯಿಮರಗಳನ್ನೂ ಕುರಿತು ನಿನ್ನ ಅಪೇಕ್ಷೆಯನ್ನು ನೆರವೇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಂತರ ಹೀರಾಮನು ಸೊಲೊಮೋನನಿಗೆ ಈ ಸಂದೇಶವನ್ನು ಕಳುಹಿಸಿದನು: “ನಿನ್ನ ಕೋರಿಕೆಯು ನನಗೆ ತಿಳಿಯಿತು. ನಾನು ನಿನಗೆ ಬೇಕಾದ ಎಲ್ಲ ದೇವದಾರು ಮರಗಳನ್ನು ಮತ್ತು ತುರಾಯಿ ಮರಗಳನ್ನು ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಹೀರಾಮನು ಸೊಲೊಮೋನನಿಗೆ ಸಂದೇಶವನ್ನು ಕಳುಹಿಸಿ, “ನೀನು ಹೇಳಿ ಕಳುಹಿಸಿದ್ದನ್ನು ನಾನು ಕೇಳಿದ್ದೇನೆ. ದೇವದಾರು ಮರಗಳ ವಿಷಯವೂ, ತುರಾಯಿ ಮರಗಳ ವಿಷಯವೂ ನೀನು ಇಚ್ಛಿಸಿದ್ದನ್ನೆಲ್ಲಾ ನಾನು ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 5:8
7 ತಿಳಿವುಗಳ ಹೋಲಿಕೆ  

ದೊಡ್ಡ ಕೋಣೆಯನ್ನು ತುರಾಯಿ ಮರದ ಹಲಗೆಗಳಿಂದ ಮುಚ್ಚಿ, ಅದನ್ನು ಶುದ್ಧ ಬಂಗಾರದಿಂದ ಹೊದಿಸಿ, ಆದರ ಹಲಗೆಗಳ ಮೇಲೆ ಖರ್ಜೂರದ ಮರಗಳನ್ನೂ ಬಳ್ಳಿಗಳನ್ನೂ ಸರಪಣಿಗಳನ್ನು ಕೆತ್ತಿಸಿದನು.


ಅದಕ್ಕೆ ತುರಾಯಿಮರದ ಎರಡು ಬಾಗಿಲುಗಳನ್ನು ಇಡಿಸಿದನು. ಪ್ರತಿಯೊಂದು ಬಾಗಿಲು ಎರಡು ಭಾಗವುಳ್ಳದ್ದಾಗಿ ಮಡಿಚಬಹುದಾಗಿತ್ತು.


ಅನಂತರ ಅವನು ಅದರ ಗೋಡೆಗಳ ಒಳಮೈಯನ್ನು ನೆಲದಿಂದ ಮಾಳಿಗೆಯವರೆಗೆ ದೇವದಾರಿನ ಹಲಗೆಗಳಿಂದ ಹೊದಿಸಿದನು. ನೆಲಕ್ಕೆ ತುರಾಯಿ ಮರದ ಹಲಗೆಗಳನ್ನು ಹಾಕಿದನು.


ದಾವೀದನೂ ಎಲ್ಲಾ ಇಸ್ರಾಯೇಲರೂ ಶಂಕುಮರದಿಂದ (ಸೈಪ್ರಸ್ ಮರ) ಮಾಡಿದ ಕಿನ್ನರಿ, ಸ್ವರಮಂಡಲ, ದಮ್ಮಡಿ, ಝಲ್ಲರಿ, ತಾಳ ಇವುಗಳನ್ನು ಬಾರಿಸಿಕೊಂಡು ಪೂರ್ಣಾಸಕ್ತಿಯಿಂದ ಗೀತೆಗಳನ್ನು ಹಾಡುತ್ತಾ, ಯೆಹೋವನ ಮುಂದೆ ನರ್ತನ ಮಾಡುತ್ತಾ ಹೋದರು.


ಹೀರಾಮನು ಸೊಲೊಮೋನನ ಮಾತುಗಳನ್ನು ಕೇಳಿದಾಗ ಬಹಳವಾಗಿ ಸಂತೋಷಪಟ್ಟು, “ಈ ಮಹಾ ಜನಾಂಗವನ್ನು ಆಳುವುದಕ್ಕಾಗಿ ದಾವೀದನಿಗೆ ಒಬ್ಬ ಬುದ್ಧಿವಂತನಾದ ಮಗನನ್ನು ಅನುಗ್ರಹಿಸಿದ ಯೆಹೋವನಿಗೆ ಈಗ ಸ್ತೋತ್ರವಾಗಲಿ” ಎಂದು ನುಡಿದನು.


ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರಕ್ಕೆ ತೆಗೆದುಕೊಂಡು ಹೋಗುವರು. ನಾನು ಅವುಗಳನ್ನು ತೆಪ್ಪವನ್ನಾಗಿ ಕಟ್ಟಿಸಿ, ಸಮುದ್ರ ಮಾರ್ಗವಾಗಿ ನೀನು ನೇಮಿಸುವ ಸ್ಥಳಕ್ಕೆ ಕಳುಹಿಸಿ, ಅಲ್ಲಿ ಬಿಚ್ಚಿಸಿಕೊಡುವೆನು. ನೀನು ಅವುಗಳನ್ನು ತೆಗೆದುಕೊಂಡು ಅವುಗಳಿಗೆ ಬದಲಾಗಿ ನನ್ನ ಮನೆಯವರಿಗೆ ಆಹಾರ ಪದಾರ್ಥಗಳನ್ನು ಕೊಡಬೇಕೆಂಬುದೇ ನನ್ನ ಅಪೇಕ್ಷೆಯಾಗಿದೆ” ಎಂದು ಹೇಳಿ ಕಳುಹಿಸಿದನು.


ನಾವಾದರೋ ನಿನಗೆ ಬೇಕಾದ ಎಲ್ಲಾ ಮರಗಳನ್ನು ಲೆಬನೋನಿನಲ್ಲಿ ಕಡಿದು ತೆಪ್ಪಗಳಾಗಿ ಕಟ್ಟಿ, ಸಮುದ್ರ ಮಾರ್ಗವಾಗಿ ಯೊಪ್ಪಕ್ಕೆ ತೆಗೆದುಕೊಂಡು ಬರುತ್ತೇವೆ. ಅಲ್ಲಿಂದ ನೀನು ಅವುಗಳನ್ನು ಯೆರೂಸಲೇಮಿಗೆ ತರಿಸಿಕೊಳ್ಳಬಹುದು” ಎಂಬುದಾಗಿ ಉತ್ತರ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು