Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 5:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರಕ್ಕೆ ತೆಗೆದುಕೊಂಡು ಹೋಗುವರು. ನಾನು ಅವುಗಳನ್ನು ತೆಪ್ಪವನ್ನಾಗಿ ಕಟ್ಟಿಸಿ, ಸಮುದ್ರ ಮಾರ್ಗವಾಗಿ ನೀನು ನೇಮಿಸುವ ಸ್ಥಳಕ್ಕೆ ಕಳುಹಿಸಿ, ಅಲ್ಲಿ ಬಿಚ್ಚಿಸಿಕೊಡುವೆನು. ನೀನು ಅವುಗಳನ್ನು ತೆಗೆದುಕೊಂಡು ಅವುಗಳಿಗೆ ಬದಲಾಗಿ ನನ್ನ ಮನೆಯವರಿಗೆ ಆಹಾರ ಪದಾರ್ಥಗಳನ್ನು ಕೊಡಬೇಕೆಂಬುದೇ ನನ್ನ ಅಪೇಕ್ಷೆಯಾಗಿದೆ” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರಕ್ಕೆ ತೆಗೆದುಕೊಂಡು ಹೋಗುವರು. ನಾನು ಅವುಗಳನ್ನು ತೆಪ್ಪವನ್ನಾಗಿ ಕಟ್ಟಿಸಿ ಸಮುದ್ರಮಾರ್ಗವಾಗಿ ನೀನು ನೇಮಿಸುವ ಸ್ಥಳಕ್ಕೆ ಕಳುಹಿಸಿ ಅಲ್ಲೆ ಬಿಚ್ಚಿಸುವೆನು; ನೀನು ಅವುಗಳನ್ನು ತೆಗೆದುಕೊಂಡು, ಅವುಗಳಿಗೆ ಬದಲಾಗಿ ನನ್ನ ಮನೆಯವರಿಗೆ ಆಹಾರಪದಾರ್ಥಗಳನ್ನು ಕೊಡಬೇಕೆಂಬುದೇ ನನ್ನ ಅಪೇಕ್ಷೆ,” ಎಂದು ಹೇಳಿಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರಕ್ಕೆ ತೆಗೆದುಕೊಂಡು ಹೋಗುವರು. ನಾನು ಅವುಗಳನ್ನು ತೆಪ್ಪವನ್ನಾಗಿ ಕಟ್ಟಿಸಿ ಸಮುದ್ರಮಾರ್ಗವಾಗಿ ನೀನು ನೇವಿುಸುವ ಸ್ಥಳಕ್ಕೆ ಕಳುಹಿಸಿ ಅಲ್ಲಿ ಬಿಚ್ಚಿಸುವೆನು; ನೀನು ಅವುಗಳನ್ನು ತೆಗೆದುಕೊಂಡು ಅವುಗಳಿಗೆ ಬದಲಾಗಿ ನನ್ನ ಮನೆಯವರಿಗೆ ಆಹಾರಪದಾರ್ಥಗಳನ್ನು ಕೊಡಬೇಕೆಂಬದೇ ನನ್ನ ಅಪೇಕ್ಷೆಯಾಗಿದೆ ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರತೀರಕ್ಕೆ ತರುತ್ತಾರೆ. ನಂತರ ನಾನು ಅವುಗಳನ್ನು ಒಟ್ಟಾಗಿ ಕಟ್ಟಿ, ನೀನು ತಿಳಿಸಿದ ಸ್ಥಳಕ್ಕೆ ತೇಲಿಬಿಡುತ್ತೇನೆ. ಗೊತ್ತುಪಡಿಸಿದ ಸ್ಥಳದಲ್ಲಿ ದಿಮ್ಮಿಗಳನ್ನು ಬೇರ್ಪಡಿಸುತ್ತೇನೆ; ನೀನು ಅವುಗಳನ್ನು ತೆಗೆದುಕೊಳ್ಳಬಹುದು. ಅವುಗಳಿಗೆ ಬದಲಾಗಿ ನೀನು ನನ್ನ ಮನೆಯವರಿಗೆ ಆಹಾರಸಾಮಾಗ್ರಿಗಳನ್ನು ಕೊಡಬೇಕೆಂಬುದೇ ನನ್ನ ಅಪೇಕ್ಷೆಯಾಗಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರಕ್ಕೆ ತಂದಮೇಲೆ, ನನಗೆ ನೇಮಿಸಿದ ಸ್ಥಳಕ್ಕೆ ತೆಪ್ಪವನ್ನು ಕಟ್ಟಿ, ಸಮುದ್ರದಿಂದ ಕಳುಹಿಸಿ, ಅಲ್ಲಿ ಒಪ್ಪಿಸುವ ಹಾಗೆ ಮಾಡುವೆನು. ನೀನು ಅವುಗಳನ್ನು ತೆಗೆದುಕೊಂಡು ನನ್ನ ಮನೆಯವರಿಗೊಸ್ಕರ ಆಹಾರವನ್ನು ಕೊಟ್ಟು, ನನ್ನ ಇಚ್ಛೆಯನ್ನು ತೀರಿಸುವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 5:9
14 ತಿಳಿವುಗಳ ಹೋಲಿಕೆ  

“ಯೆಹೂದ್ಯರೂ, ಇಸ್ರಾಯೇಲ್ ದೇಶದವರೂ ನಿನ್ನ ಕಡೆಯ ವರ್ತಕರಾಗಿ ಮಿನ್ನೀಥಿನ ಗೋದಿಯಿಂದಲೂ, ಖಂಡಸಕ್ಕರೆ, ಜೇನು, ಎಣ್ಣೆ ಮತ್ತು ಸುಗಂಧತೈಲದಿಂದಲೂ ನಿನ್ನೊಂದಿಗೆ ವ್ಯಾಪಾರ ನಡೆಸಿದರು.


ಆದರೆ ಪರ್ಷಿಯ ರಾಜನಾದ ಕೋರೆಷನಿಂದ ಪಡೆದುಕೊಂಡ ಅಪ್ಪಣೆಯ ಮೇರೆಗೆ ಅವರು ಕಲ್ಲುಕುಟಿಗರಿಗೆ ಮತ್ತು ಬಡಗಿಗಳಿಗೆ ಹಣವನ್ನೂ, ಲೆಬನೋನಿನಿಂದ ಸಮುದ್ರಮಾರ್ಗವಾಗಿ ಯೊಪ್ಪಕ್ಕೆ ದೇವದಾರು ಮರಗಳನ್ನು ತರುತ್ತಿದ್ದ ಚೀದೋನ್ಯರಿಗೆ ಮತ್ತು ತೂರ್ಯರಿಗೆ ಅನ್ನಪಾನಗಳನ್ನೂ ಮತ್ತು ಎಣ್ಣೆಯನ್ನೂ ಕೊಟ್ಟಿದ್ದರು.


ಆ ಕಾಲದಲ್ಲಿ ತೂರ್ ಮತ್ತು ಸೀದೋನ್ ಪಟ್ಟಣಗಳ ನಿವಾಸಿಗಳು ತಮ್ಮ ಮೇಲೆ ಹೆರೋದನು ಬಹಳವಾಗಿ ಕೋಪಿಸಿಕೊಂಡಿರುವುದನ್ನು ನೋಡಿ ಒಮ್ಮನಸ್ಸಿನಿಂದ ಅವನ ಸನ್ನಿಧಿಗೆ ಬಂದು ಅರಸನ ಅಂತಃಪುರದ ಮೇಲಣ ಅಧಿಕಾರಿಯಾದ ಬ್ಲಾಸ್ತನನ್ನು ಒಲಿಸಿಕೊಂಡು ಸಮಾಧಾನವಾಗಿರಬೇಕೆಂದು ಅರಸನನ್ನು ಬೇಡಿಕೊಂಡರು. ಏಕೆಂದರೆ ಅರಸನ ಸೀಮೆಯಿಂದಲೇ ಅವರ ಸೀಮೆಗೆ ದವಸಧಾನ್ಯ ಬರುತ್ತಿತ್ತು.


ನಾವಾದರೋ ನಿನಗೆ ಬೇಕಾದ ಎಲ್ಲಾ ಮರಗಳನ್ನು ಲೆಬನೋನಿನಲ್ಲಿ ಕಡಿದು ತೆಪ್ಪಗಳಾಗಿ ಕಟ್ಟಿ, ಸಮುದ್ರ ಮಾರ್ಗವಾಗಿ ಯೊಪ್ಪಕ್ಕೆ ತೆಗೆದುಕೊಂಡು ಬರುತ್ತೇವೆ. ಅಲ್ಲಿಂದ ನೀನು ಅವುಗಳನ್ನು ಯೆರೂಸಲೇಮಿಗೆ ತರಿಸಿಕೊಳ್ಳಬಹುದು” ಎಂಬುದಾಗಿ ಉತ್ತರ ಕೊಟ್ಟನು.


ಅರಸನು ಯೆರೂಸಲೇಮಿನಲ್ಲಿ ಬೆಳ್ಳಿ ಬಂಗಾರವು ಹೇರಳವಾಗಿದ್ದು ಅವು ಕಲ್ಲಿನಂತೆಯೂ, ಹಾಗು ದೇವದಾರು ಮರಗಳು ತಗ್ಗಿನಲ್ಲಿರುವ ಅತ್ತಿಮರಗಳಂತೆ ಹೇರಳವಾಗಿರುವಂತೆ ಮಾಡಿದನು.


ಕರ್ತನೇ, ನಾನೂ ಈ ನದಿಯನ್ನು ದಾಟಿ ಆಚೆಯಿರುವ ಒಳ್ಳೆಯ ದೇಶವನ್ನು ಅಂದರೆ ಆ ಅಂದವಾದ ಬೆಟ್ಟದ ಸೀಮೆಯನ್ನೂ, ಲೆಬನೋನ್ ಪರ್ವತವನ್ನೂ ನೋಡುವುದಕ್ಕೆ ಅಪ್ಪಣೆಯಾಗಲಿ” ಎಂದು ಬಿನ್ನವಿಸಿದೆನು.


ಇದಲ್ಲದೆ ಅವನು ಸೊಲೊಮೋನನಿಗೆ, “ನೀನು ಹೇಳಿಕಳುಹಿಸಿದ್ದನ್ನು ಕೇಳಿದೆನು. ದೇವದಾರು ವೃಕ್ಷಗಳನ್ನೂ, ತುರಾಯಿ ಮರಗಳನ್ನೂ ಕುರಿತು ನಿನ್ನ ಅಪೇಕ್ಷೆಯನ್ನು ನೆರವೇರಿಸುವೆನು.


ಹೀಗೆ ಹೀರಾಮನು ಸೊಲೊಮೋನನಿಗೆ ಬೇಕಾದಷ್ಟು ದೇವದಾರು ಮರಗಳನ್ನೂ ಮತ್ತು ತುರಾಯಿ ಮರಗಳನ್ನೂ ಕೊಡುತ್ತಿದ್ದನು.


ಹೀರಾಮನು ಸಮುದ್ರ ಪ್ರಯಾಣದಲ್ಲಿ ನಿಪುಣರಾದ ತನ್ನ ನಾವಿಕರನ್ನು ಸೊಲೊಮೋನನ ಸೇವಕರೊಡನೆ ಆ ಹಡಗುಗಳಲ್ಲಿ ಕಳುಹಿಸಿದನು.


ನೋಡು, ನಿನಗೆ ಜ್ಞಾನವನ್ನು ಮತ್ತು ವಿವೇಕವನ್ನು ಅನುಗ್ರಹಿಸಿದ್ದೇನೆ. ನಿನ್ನಂಥ ಜ್ಞಾನಿಯು ಹಿಂದೆಯೂ ಇರಲಿಲ್ಲ, ಮುಂದೆಯೂ ಇರುವುದಿಲ್ಲ.


ಇಸ್ರಾಯೇಲರು ಮತ್ತು ಯೆಹೂದ್ಯರು ಸಮುದ್ರ ತೀರದ ಮರಳಿನಷ್ಟು ಅಸಂಖ್ಯರಾಗಿ ಅಭಿವೃದ್ಧಿಯಾದರು. ಅವರು ಅನ್ನಪಾನಗಳನ್ನು ಮಾಡುತ್ತಾ ತೃಪ್ತರಾಗಿ ಸಂತೋಷದಿಂದಿದ್ದರು.


ಈ ಪ್ರಕಾರ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ ಜ್ಞಾನದಲ್ಲಿಯೂ ಭೂಲೋಕದ ಎಲ್ಲಾ ಅರಸರಿಗಿಂತ ಮಿಗಿಲಾಗಿದ್ದನು.


ಆದರೆ ಮನುಷ್ಯರಲ್ಲಿ ಆತ್ಮವೊಂದುಂಟು, ಸರ್ವಶಕ್ತನಾದ ದೇವರ ಶ್ವಾಸದಿಂದ ಅವರಿಗೆ ವಿವೇಕ ದೊರೆಯುತ್ತದೆ.


ನಾನು ನನ್ನ ಮನಸ್ಸಿನಲ್ಲಿ ಯೋಚಿಸುತ್ತಾ, “ನೋಡು, ನನಗಿಂತ ಮೊದಲು ಯೆರೂಸಲೇಮನ್ನು ಆಳಿದವರೆಲ್ಲರಿಗಿಂತಲೂ ಹೆಚ್ಚು ಜ್ಞಾನವನ್ನು ಸಂಪಾದಿಸಿಕೊಂಡಿದ್ದೇನೆ. ನನ್ನ ಹೃದಯವು ಜ್ಞಾನವನ್ನೂ, ತಿಳಿವಳಿಕೆಯನ್ನೂ ವಿಶೇಷವಾಗಿ ಹೊಂದಿದೆ” ಎಂದುಕೊಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು