23 ಕೆಲಸಗಾರರು ರೆಕ್ಕೆಗಳಿರುವ ಎರಡು ಕೆರೂಬಿಗಳ ಪ್ರತಿಮೆಗಳನ್ನು ಆಲೀವ್ ಮರದಿಂದ ಮಾಡಿ ಅವುಗಳನ್ನು ಮಹಾಪವಿತ್ರ ಸ್ಥಳದಲ್ಲಿಟ್ಟರು. ಒಂದೊಂದು ಪ್ರತಿಮೆಯು ಹದಿನೈದು ಅಡಿ ಎತ್ತರವಾಗಿತ್ತು.
ಆದರೆ ಈ ಸಂಗತಿಗಳನ್ನು ಮುಂತಿಳಿಸುವುದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದಾರೆಂಬುದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಲ್ಪಡುತ್ತಿವೆ ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂದು ಬಯಸುತ್ತಿದ್ದಾರೆ.
ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ, ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವುದಕ್ಕೆ, ಏದೆನ್ ವನದ ಪೂರ್ವ ದಿಕ್ಕಿನಲ್ಲಿ ಕೆರೂಬಿಯರನ್ನೂ, ಎಲ್ಲಾ ಕಡೆಯಲ್ಲಿ ಧಗಧಗಿಸುತ್ತಾ ಉರಿಯುವ ಜ್ವಾಲೆಯ ಕತ್ತಿಯನ್ನು ಇರಿಸಿದನು.
ಎಣ್ಣೇ ಮರದ ಆ ಎರಡು ಬಾಗಿಲುಗಳಲ್ಲಿಯೂ ಕೆರೂಬಿ, ಖರ್ಜೂರವೃಕ್ಷ ಮತ್ತು ಹೂವು ಇವುಗಳ ಚಿತ್ರಗಳನ್ನು ಕೆತ್ತಿಸಿ ಬಾಗಿಲುಗಳಿಗೆ ಬಂಗಾರದ ತಗಡುಗಳನ್ನು ಹೊದಿಸಿ, ಚಿತ್ರಗಳಿದ್ದಲ್ಲಿ ಆ ತಗಡನ್ನು ಇಡಿಸಿದನು.