Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 7:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ತರುವಾಯ ಅವನು ಆ ಎರಡು ಕಂಬಗಳನ್ನೂ ದೇವಾಲಯದ ಮಂಟಪದ ಬಳಿಯಲ್ಲಿ ನಿಲ್ಲಿಸಿ, ಬಲಗಡೆಯ ಕಂಬಕ್ಕೆ ಯಾಕೀನ್ ಎಂದೂ, ಎಡಗಡೆಯ ಕಂಬಕ್ಕೆ ಬೋವಜ್ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ತರುವಾಯ ಅವನು ಆ ಎರಡು ಕಂಬಗಳನ್ನೂ ದೇವಾಲಯದ ಮಂಟಪದ ಬಳಿಯಲ್ಲಿ ನಿಲ್ಲಿಸಿ, ಬಲಗಡೆಯ ಕಂಬಕ್ಕೆ ಯಾಕೀನ್ ಎಂದೂ ಎಡಗಡೆಯ ಕಂಬಕ್ಕೆ ಬೋವಜ್ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ತರುವಾಯ ಅವನು ಆ ಎರಡು ಕಂಬಗಳನ್ನೂ ದೇವಾಲಯದ ಮಂಟಪದ ಬಳಿಯಲ್ಲಿ ನಿಲ್ಲಿಸಿ ಬಲಗಡೆಯ ಕಂಬಕ್ಕೆ ಯಾಕೀನ್ ಎಂದೂ ಎಡಗಡೆಯ ಕಂಬಕ್ಕೆ ಬೋವಜ್ ಎಂದೂ ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಹೀರಾಮನು ಈ ಹಿತ್ತಾಳೆಯ ಕಂಬಗಳನ್ನು ದೇವಾಲಯದ ಮಂಟಪದಲ್ಲಿ ಇಟ್ಟನು. ಒಂದು ಸ್ತಂಭವನ್ನು ಪ್ರವೇಶದ್ವಾರದ ದಕ್ಷಿಣದಿಕ್ಕಿನ ಕಡೆಯಲ್ಲೂ ಮತ್ತೊಂದನ್ನು ಉತ್ತರದಿಕ್ಕಿನ ಕಡೆಯಲ್ಲೂ ಇಟ್ಟನು. ದಕ್ಷಿಣದ ಸ್ತಂಭಕ್ಕೆ ಯಾಕೀನ್ ಎಂದು ಹೆಸರಿಟ್ಟನು. ಉತ್ತರದ ಸ್ತಂಭಕ್ಕೆ ಬೋವಜ್ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆ ಸ್ತಂಭಗಳನ್ನು ಮಂದಿರದ ಮಂಟಪದ ಮುಂದೆ ನಿಲ್ಲಿಸಿದನು. ಅವನು ಬಲಗಡೆಯಲ್ಲಿ ನಿಲ್ಲಿಸಿದ ಸ್ತಂಭಕ್ಕೆ ಯಾಕೀನ್ ಎಂದೂ, ಎಡಗಡೆಯ ಸ್ತಂಭಕ್ಕೆ ಬೋವಾಜ್ ಎಂದೂ ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 7:21
14 ತಿಳಿವುಗಳ ಹೋಲಿಕೆ  

ಸ್ತಂಭಗಳನ್ನು ದೇವಾಲಯದ ಮುಂಭಾಗದಲ್ಲಿ, ಒಂದನ್ನು ಬಲಗಡೆಗೂ, ಇನ್ನೊಂದನ್ನು ಎಡಗಡೆಗೂ ನಿಲ್ಲಿಸಿದನು. ಬಲಗಡೆಯ ಕಂಬಕ್ಕೆ “ಯಾಕೀನ್” ಎಂದೂ ಎಡಗಡೆಯಿದ್ದ ಕಂಬಕ್ಕೆ “ಬೋವಜ್” ಎಂದೂ ಹೆಸರಿಟ್ಟನು.


ದೇವಾಲಯದ ಪರಿಶುದ್ಧ ಸ್ಥಳದ ಮುಂದುಗಡೆಯಲ್ಲಿ ಒಂದು ಮಂಟಪವಿತ್ತು. ಅದರ ಉದ್ದ ದೇವಾಲಯದ ಅಗಲಕ್ಕೆ ಸರಿಯಾಗಿ ಇಪ್ಪತ್ತು ಮೊಳ, ಅಗಲ ಹತ್ತು ಮೊಳ.


ಯಾವನು ಜಯಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ನಿಲ್ಲಿಸುವೆನು. ಅವನು ಎಂದಿಗೂ ಅಲ್ಲಿಂದ ಕದಲುವುದೇ ಇಲ್ಲ. ಇದಲ್ಲದೆ ನನ್ನ ದೇವರ ಹೆಸರನ್ನು, ನನ್ನ ದೇವರ ಬಳಿಯಿಂದ ಪರಲೋಕದೊಳಗಿಂದ ಇಳಿದುಬರುವ ಹೊಸ ಯೆರೂಸಲೇಮ್ ಪಟ್ಟಣವೆಂಬ ನನ್ನ ದೇವರ ಪಟ್ಟಣದ ಹೆಸರನ್ನೂ, ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುವೆನು.


ಸಭೆಯ ಸ್ತಂಭಗಳೆಂದು ಕರೆಸಿಕೊಂಡಿರುವ ಯಾಕೋಬ, ಕೇಫ, ಯೋಹಾನರು ದೇವರು ನನಗೆ ದಯಪಾಲಿಸಿರುವ ವರವನ್ನು ತಿಳಿದುಕೊಂಡು, ಅನ್ಯೋನ್ಯತೆಯನ್ನು ತೋರಿಸುವುದಕ್ಕಾಗಿ ನನಗೂ ಬಾರ್ನಬನಿಗೂ ಸಹಕಾರ ನೀಡಿ ಬಲಗೈ ಕೊಟ್ಟು, ನೀವು ಅನ್ಯಜನಗಳ ಬಳಿಗೆ ಹೋಗಿರಿ, ನಾವು ಸುನ್ನತಿಯವರ ಬಳಿಗೆ ಹೋಗುತ್ತೇವೆ ಅಂದರು.


ನಾನು ಇದನ್ನು ಸಹ ನಿನಗೆ ಹೇಳುತ್ತೇನೆ, “ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ಶಕ್ತಿಗಳು ಅದನ್ನು ಸೋಲಿಸಲಾರವು.


ಯೆಹೋವನಲ್ಲಿ ಮಾತ್ರ ರಕ್ಷಣೆಯೂ, ಶಕ್ತಿಯೂ ಉಂಟು. ಆತನ ಮೇಲೆ ಉರಿಗೊಂಡವರೆಲ್ಲರೂ ನಾಚಿಕೆಪಟ್ಟು ಆತನನ್ನು ಆಶ್ರಯಿಸುವರು.


ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು. ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.


ಒಳಗಿನ ಪ್ರಾಕಾರವೆನ್ನಿಸಿಕೊಳ್ಳುವ ಯೆಹೋವನ ಆಲಯದ ಪ್ರಾಕಾರಕ್ಕೂ ಅರಮನೆಯ ಪ್ರಾಕಾರಕ್ಕೂ ಹೇಗೋ ಹಾಗೆಯೇ ಎಲ್ಲಾ ಮಂದಿರಗಳ ಸುತ್ತಲಿರುವ ದೊಡ್ಡ ಪ್ರಾಕಾರಕ್ಕೆ ಮೂರು ಸಾಲು ಕಲ್ಲಿನ ಕಂಬಗಳೂ, ಒಂದು ಸಾಲು ದೇವದಾರಿನ ಮರದ ಕಂಬಗಳೂ ಇದ್ದವು.


ನಿನ್ನ ಆಯುಷ್ಕಾಲವು ಮುಗಿದು, ನೀನು ಪೂರ್ವಿಕರ ಬಳಿಗೆ ಸೇರಿದ ಮೇಲೆ, ನಿನ್ನಿಂದ ಹುಟ್ಟುವ ಮಕ್ಕಳಲ್ಲಿ ಒಬ್ಬನನ್ನು ಎಬ್ಬಿಸಿ, ಅವನ ರಾಜ್ಯವನ್ನು ಸ್ಥಿರಪಡಿಸುವೆನು.


ಸಲ್ಮೋನನು ಬೋವಜನನ್ನು ಪಡೆದನು; ಬೋವಜನು ಓಬೇದನನ್ನು ಪಡೆದನು;


ಅವನು ಕಂಬಗಳ ಮೇಲೆ ಕಮಲಾಕಾರವನ್ನು ಮಾಡಿ ಅವುಗಳ ಕೆಲಸವನ್ನು ತೀರಿಸಿದನು.


ಅತ್ತೆಯು “ನೀನು ಈ ಹೊತ್ತು ಯಾರ ಹೊಲದಲ್ಲಿ ಹಕ್ಕಲಾಯ್ದಿ? ಎಲ್ಲಿ ಕೆಲಸಮಾಡಿದಿ? ನಿನ್ನನ್ನು ಕಟಾಕ್ಷಿಸಿದವನಿಗೆ ಶುಭವಾಗಲಿ” ಎನ್ನಲು ರೂತಳು ನಾನು ಹಕ್ಕಲಾಯ್ದ ಹೊಲದ ಯಜಮಾನನ ಹೆಸರು, ಬೋವಜನೆಂದು ತಿಳಿಸಿದಳು.


ಸ್ತಂಭಗಳ ತುದಿಯಲ್ಲಿರುವ ಕುಂಭಗಳ ಜಾಲರಿಗಳ ಮೇಲೆ ಎರಡೆರಡನ್ನು ಸಾಲಾಗಿ ಸಿಕ್ಕಿಸುವುದಕ್ಕೋಸ್ಕರ ತಾಮ್ರದ ನಾನೂರು ದಾಳಿಂಬೆ ಹಣ್ಣುಗಳು, ಪೀಠಗಳು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು