Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 7:50 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಕತ್ತರಿಗಳು, ಬೋಗುಣಿಗಳು, ಧೂಪಾರತಿಗಳು ಅಗ್ಗಿಷ್ಟಿಕೆಗಳು, ದೇವಾಲಯದ ಮಹಾಪರಿಶುದ್ಧ ಸ್ಥಳವೆನಿಸಿಕೊಳ್ಳುವ ಗರ್ಭಗೃಹದ ಬಾಗಿಲುಗಳಿಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

50 ಚೊಕ್ಕಬಂಗಾರದ ಬಟ್ಟಲುಗಳು, ಕತ್ತರಿಗಳು, ಬೋಗುಣಿಗಳು, ಧೂಪಾರತಿಗಳು, ಅಗ್ಗಿಷ್ಟಿಕೆಗಳು, ದೇವಾಲಯದ ಮಹಾಪರಿಶುದ್ಧ ಸ್ಥಳವೆನಿಸಿಕೊಳ್ಳುವ ಗರ್ಭಗುಡಿಯ ಕದಗಳಿಗೂ ಪರಿಶುದ್ಧಸ್ಥಳದ ಕದಗಳಿಗೂ ಇರುವ ಬಂಗಾರದ ತಿರುಗಣಿಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

50 ಚೊಕ್ಕ ಬಂಗಾರದ ಬಟ್ಟಲುಗಳು, ಕತ್ತರಿಗಳು, ಬೋಗುಣಿಗಳು, ಧೂಪಾರತಿಗಳು, ಅಗ್ಗಿಷ್ಟಿಗೆಗಳು, ದೇವಾಲಯದ ಮಹಾಪರಿಶುದ್ಧ ಸ್ಥಳವೆನಿಸಿಕೊಳ್ಳುವ ಗರ್ಭಗೃಹದ ಕದಗಳಿಗೂ ಪರಿಶುದ್ಧಸ್ಥಳದ ಕದಗಳಿಗೂ ಇರುವ ಬಂಗಾರದ ತಿರುಗಣಿಗಳು ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ಶುದ್ಧ ಬಂಗಾರದಿಂದ ಕತ್ತರಿಗಳು, ಬೋಗುಣಿಗಳು, ಅಗ್ನಿಪಾತ್ರೆಗಳು, ಅಗ್ಗಿಷ್ಟಿಗೆ ಇವುಗಳನ್ನು ಮಾಡಿಸಿದನು. ಇದಲ್ಲದೆ ಮಹಾಪರಿಶುದ್ಧ ಸ್ಥಳವಾದ ಗರ್ಭಗುಡಿಯ ಬಾಗಿಲುಗಳಿಗೂ, ಮಂದಿರದ ಮನೆಯ ಬಾಗಿಲುಗಳಿಗೂ ಬಂಗಾರದ ಕೀಲುಗಳನ್ನು ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 7:50
11 ತಿಳಿವುಗಳ ಹೋಲಿಕೆ  

ಧೂಪದ್ರವ್ಯ ತುಂಬಿದ್ದ ಒಂದೊಂದು ಚಿನ್ನದ ಧೂಪಾರತಿಯ ತೂಕವು ದೇವಸ್ಥಾನದ ನಾಣ್ಯ ತೂಕದ ಪ್ರಕಾರ ಹತ್ತು ಶೆಕೆಲ್ ಮೇರೆಗೆ ಇರುವುದರಿಂದ ಆ ಹನ್ನೆರಡು ಧೂಪಾರತಿಗಳ ಚಿನ್ನವು ಒಟ್ಟಾಗಿ 120 ಶೆಕೆಲ್.


ಅವನು ತನಗೋಸ್ಕರ ಹೋರಿಯನ್ನು ವಧಿಸಿದ ಮೇಲೆ ಯೆಹೋವನ ಸನ್ನಿಧಿಯಲ್ಲಿರುವ ಯಜ್ಞವೇದಿಯಿಂದ ಕೆಂಡಗಳನ್ನು ಧೂಪಾರತಿಯಲ್ಲಿ ತುಂಬಿಸಿ, ಪರಿಮಳಧೂಪದ್ರವ್ಯದ ಚೂರ್ಣದಲ್ಲಿ ಎರಡು ಹಿಡಿ ತೆಗೆದುಕೊಂಡು ಅವುಗಳನ್ನು ತೆರೆಯೊಳಗೆ ತರಬೇಕು.


ಅದರಲ್ಲಿರುವ ಬೂದಿಯನ್ನು ತೆಗೆಯುವುದಕ್ಕಾಗಿ ತಟ್ಟೆಗಳನ್ನೂ, ಸಲಿಕೆಗಳನ್ನೂ, ಬೋಗುಣಿಗಳನ್ನೂ, ಮುಳ್ಳುಚಮಚಗಳನ್ನೂ, ಹಾಗೂ ಅಗ್ಗಿಷ್ಟಿಕೆಗಳನ್ನೂ ಮಾಡಿಸಬೇಕು. ಆ ಉಪಕರಣಗಳೆಲ್ಲಾ ತಾಮ್ರದವುಗಳಾಗಿರಬೇಕು.


ಮೇಜಿನ ಮೇಲಿಡಬೇಕಾದ ಹರಿವಾಣಗಳನ್ನು, ಧೂಪಾರತಿಗಳನ್ನು, ಹೂಜಿಗಳನ್ನು, ಪಾನದ್ರವ್ಯವನ್ನು ಅರ್ಪಿಸುವುದಕ್ಕೆ ಬೇಕಾದ ಬಟ್ಟಲುಗಳನ್ನು ಚೊಕ್ಕ ಬಂಗಾರದಿಂದಲೇ ಮಾಡಿಸಬೇಕು.


ಯೆಹೋವನ ಆಲಯದೊಳಗೆ ತಂದ ಹಣದಿಂದ ಬೆಳ್ಳಿಯ ಬಟ್ಟಲುಗಳನ್ನು, ಕತ್ತರಿಗಳನ್ನು, ಬೋಗುಣಿಗಳನ್ನು, ತುತ್ತೂರಿಗಳನ್ನೂ, ಬೆಳ್ಳಿ ಬಂಗಾರದ ಪಾತ್ರೆ ಇವುಗಳನ್ನು ಮಾಡುವುದಕ್ಕಾಗಿ ಉಪಯೋಗಿಸುತ್ತಿರಲಿಲ್ಲ.


ಕಾವಲುದಂಡಿನ ಅಧಿಪತಿಯು ಬೆಳ್ಳಿಬಂಗಾರದ ಅಗ್ಗಿಷ್ಟಿಕೆ, ಬಟ್ಟಲು ಮೊದಲಾದವುಗಳನ್ನು ತೆಗೆದುಕೊಂಡನು.


ಕಾವಲು ದಂಡಿನ ಅಧಿಪತಿಯು ಬೆಳ್ಳಿಬಂಗಾರದ ಪಂಚಪಾತ್ರೆ, ಅಗ್ಗಿಷ್ಟಿಕೆ, ಬಟ್ಟಲು, ಬೋಗುಣಿ, ದೀಪಸ್ತಂಭ, ಧೂಪಾರತಿ, ತಾಂಬಾಣ ಮೊದಲಾದವುಗಳನ್ನು ತೆಗೆದುಕೊಂಡನು.


ಅದರ ಕೋಣೆಗಳ ಉದ್ದವು ಇಪ್ಪತ್ತು ಮೊಳಗಳೂ, ಅಗಲವು ಇಪ್ಪತ್ತು ಮೊಳಗಳೂ ಇದ್ದವು. ಆಗ ಅವನು ನನಗೆ, “ಇದು ಮಹಾಪರಿಶುದ್ಧ ಸ್ಥಳ” ಎಂದು ಹೇಳಿದನು.


ದೀಪದ ಕುಡಿತೆಗೆಯುವ ಕತ್ತರಿಗಳೂ, ಕತ್ತರಿಸಿದ ಕುಡಿಗಳನ್ನು ಹಾಕುವ ಬಟ್ಟಲುಗಳನ್ನೂ ಚೊಕ್ಕ ಬಂಗಾರದಿಂದಲೇ ಮಾಡಿಸಬೇಕು.


ಆ ದಿನದಲ್ಲಿ, “ಯೆಹೋವನಿಗೆ ಮೀಸಲು” ಎಂಬ ಲಿಪಿಯು ಕುದುರೆಗಳ ಘಂಟೆಗಳ ಮೇಲೂ ಕೆತ್ತಿರುವುದು; ಯೆಹೋವನ ಆಲಯದ ಪಾತ್ರೆಗಳೆಲ್ಲವೂ ಯಜ್ಞವೇದಿಯ ಪಕ್ಕದ ಬೋಗುಣಿಗಳಂತೆ ಪರಿಶುದ್ಧವಾಗಿರುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು