Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅನಂತರ ಅರಸನಾದ ಸೊಲೊಮೋನನು ದಾವೀದ ನಗರವಾದ ಚೀಯೋನಿನಿಂದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರುವುದಕ್ಕಾಗಿ ಇಸ್ರಾಯೇಲರ ಹಿರಿಯರೂ ಕುಲಾಧಿಪತಿಗಳು ಇವರೇ ಮೊದಲಾದ ಇಸ್ರಾಯೇಲ್ ಪ್ರಧಾನಪುರುಷರನ್ನು ಯೆರೂಸಲೇಮಿಗೆ ತನ್ನ ಹತ್ತಿರಕ್ಕೆ ಕರೆಯಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ದಾವೀದನಗರವಾದ ಸಿಯೋನಿನಿಂದ ದೇವಾಲಯಕ್ಕೆ ತರುವುದಕ್ಕಾಗಿ, ಇಸ್ರಯೇಲರ ಹಿರಿಯರು, ಕುಲಗಳ ನಾಯಕರು, ಇವರೇ ಮೊದಲಾದ ಎಲ್ಲ ಇಸ್ರಯೇಲ್ ಪ್ರಮುಖ ವ್ಯಕ್ತಿಗಳು ಜೆರುಸಲೇಮಿಗೆ, ತನ್ನ ಆಸ್ಥಾನಕ್ಕೆ, ಬರಬೇಕೆಂದು ಅರಸ ಸೊಲೊಮೋನನು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅನಂತರ ಅರಸನಾದ ಸೊಲೊಮೋನನು ದಾವೀದನಗರವಾದ ಚೀಯೋನಿನಿಂದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಮೇಲೆ ತರುವದಕ್ಕಾಗಿ ಇಸ್ರಾಯೇಲ್ಯರ ಹಿರಿಯರು ಕುಲಾಧಿಪತಿಗಳು ಇವರೇ ಮೊದಲಾದ ಎಲ್ಲಾ ಇಸ್ರಾಯೇಲ್ ಪ್ರಧಾನ ಪುರುಷರನ್ನು ಯೆರೂಸಲೇವಿುಗೆ ತನ್ನ ಹತ್ತಿರಕ್ಕೆ ಕರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ರಾಜನಾದ ಸೊಲೊಮೋನನು ಇಸ್ರೇಲಿನ ಹಿರಿಯರೆಲ್ಲರಿಗೆ, ಕುಲಗಳ ಮುಖ್ಯಸ್ಥರಿಗೆ ಮತ್ತು ಇಸ್ರೇಲಿನ ಕುಟುಂಬ ಪ್ರಧಾನರಿಗೆ ಜೆರುಸಲೇಮಿನಲ್ಲಿದ್ದ ತನ್ನ ಬಳಿಗೆ ಬರಬೇಕೆಂದು ತಿಳಿಸಿದನು. ಒಡಂಬಡಿಕೆಯ ಪೆಟ್ಟಿಗೆಯನ್ನು ದಾವೀದ ನಗರದಿಂದ ಆಲಯಕ್ಕೆ ತರುವಾಗ ಅವರು ಸಹ ತನ್ನೊಂದಿಗಿರಬೇಕೆಂಬುದು ಸೊಲೊಮೋನನ ಅಪೇಕ್ಷೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಗ ಚೀಯೋನೆಂಬ ದಾವೀದನ ಪಟ್ಟಣದಿಂದ ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ತರುವ ನಿಮಿತ್ತ, ಅರಸನಾದ ಸೊಲೊಮೋನನು ಇಸ್ರಾಯೇಲರಲ್ಲಿ ಶ್ರೇಷ್ಠರಾಗಿರುವ ಪಿತೃಗಳಾದ ಇಸ್ರಾಯೇಲಿನ ಹಿರಿಯರನ್ನೂ, ಗೋತ್ರಗಳ ಮುಖ್ಯಸ್ಥರನ್ನೂ ಯೆರೂಸಲೇಮಿನಲ್ಲಿ ತನ್ನ ಬಳಿಗೆ ಕೂಡಿಬರುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:1
25 ತಿಳಿವುಗಳ ಹೋಲಿಕೆ  

ದಾವೀದನೂ ಇಸ್ರಾಯೇಲ್ಯರ ಹಿರಿಯರೂ ಮತ್ತು ಸಹಸ್ರಾಧಿಪತಿಗಳೂ ಓಬೇದೆದೋಮನ ಮನೆಯಲ್ಲಿದ್ದ ಯೆಹೋವನ ಒಡಂಬಡಿಕೆ ಮಂಜೂಷವನ್ನು ಉತ್ಸಾಹದಿಂದ ತರುತ್ತಿರುವಾಗ,


“ಇಗೋ, ಚೀಯೋನಿನಲ್ಲಿ ಮೂಲೆಗಲ್ಲನ್ನು ಇಡುತ್ತೇನೆ. ಅದು ಆರಿಸಿಕೊಳ್ಳಲ್ಪಟ್ಟದ್ದೂ ಮತ್ತು ಅತ್ಯಮೂಲ್ಯವಾದದ್ದೂ. ಆತನ ಮೇಲೆ ನಂಬಿಕೆಯಿಡುವವನು ಅವಮಾನಪಡುವುದೇ ಇಲ್ಲ” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ.


ನನ್ನ ನೀತಿಯನ್ನು ಹತ್ತಿರಕ್ಕೆ ಬರ ಮಾಡುವೆನು. ಅದು ಇನ್ನು ದೂರವಾಗಿರದು, ನನ್ನ ರಕ್ಷಣೆಯು ತಡವಾಗದು, ಚೀಯೋನಿನಲ್ಲಿ ರಕ್ಷಣಾ ಕಾರ್ಯವನ್ನು ನಡೆಸಿ ಇಸ್ರಾಯೇಲಿಗೆ ನನ್ನ ಮಹಿಮೆಯನ್ನು ದಯಪಾಲಿಸುವೆನು.”


ಆದುದರಿಂದ ಕರ್ತನಾದ ಯೆಹೋವನು ಹೀಗೆ ಹೇಳುತ್ತಾನೆ, “ಇಗೋ, ಪರೀಕ್ಷೆಗೆ ಒಳಗಾಗಿ, ಮಾನ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ, ಸ್ಥಿರವಾದ ಆಸ್ತಿವಾರವನ್ನಾಗಿ ಇಡುತ್ತೇನೆ; ಭರವಸವಿಡುವವನು ಆತುರಪಡನು.


ಅವರು ಚೀಯೋನಿನಲ್ಲಿ ಯೆಹೋವನ ನಾಮವನ್ನು ವರ್ಣಿಸುವಂತೆಯೂ, ಯೆರೂಸಲೇಮಿನಲ್ಲಿ ತನ್ನ ಕೀರ್ತನೆಯನ್ನು ಹಾಡುವಂತೆಯೂ ಮಾಡಿದ್ದಾನೆ.


ಚೀಯೋನಿನಲ್ಲಿ ವಾಸಿಸುವ ಯೆಹೋವನನ್ನು ಕೀರ್ತಿಸಿರಿ; ಆತನ ಮಹತ್ಕಾರ್ಯಗಳನ್ನು ಜನಾಂಗಗಳಲ್ಲಿ ಪ್ರಕಟಿಸಿರಿ.


ಸೆರೆವಾಸದಿಂದ ಹಿಂದಿರುಗಿ ಬಂದು ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಾಯೇಲರು ಏಳನೆಯ ತಿಂಗಳಿನಲ್ಲಿ ಏಕಮನಸ್ಸಿನಿಂದ ಯೆರೂಸಲೇಮಿಗೆ ಕೂಡಿಬಂದರು.


ತರುವಾಯ ಹಿಜ್ಕೀಯನು, ಇಸ್ರಾಯೇಲ್ ದೇವರಾದ ಯೆಹೋವನ ಪಸ್ಕಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿನಲ್ಲಿರುವ ಯೆಹೋವನ ಆಲಯಕ್ಕೆ ಬರಬೇಕೆಂದು, ಎಲ್ಲಾ ಇಸ್ರಾಯೇಲರಿಗೂ, ಯೆಹೂದ್ಯರಿಗೂ, ಎಫ್ರಾಯೀಮ್ಯರಿಗೂ, ಮನಸ್ಸೆಯವರಿಗೂ ದೂತರ ಮುಖಾಂತರವಾಗಿ ಮತ್ತು ಪತ್ರಗಳ ಮೂಲಕವಾಗಿ ತಿಳಿಯಪಡಿಸಿದನು.


ದಾವೀದನು ಇಸ್ರಾಯೇಲರ ಎಲ್ಲಾ ಗೋತ್ರಗಳ ಅಧಿಪತಿಗಳನ್ನು, ಅರಸನ ಸೇವೆಮಾಡುತ್ತಿರುವ ವರ್ಗನಾಯಕರು, ಸಹಸ್ರಾಧಿಪತಿಗಳು, ಶತಾಧಿಪತಿಗಳು ಅರಸನ ದನಕುರಿ ಮೊದಲಾದ ಸಂಪತ್ತಿನ ಮೇಲ್ವಿಚಾರಕರು, ರಾಜಪುತ್ರ ಪಾಲಕರು, ಕಂಚುಕಿಗಳು, ಯುದ್ಧವೀರರು ಹಾಗೂ ಎಲ್ಲಾ ಪ್ರಧಾನರನ್ನು ಯೆರೂಸಲೇಮಿಗೆ ಕರೆಯಿಸಿದನು.


ಯೆಹೋವನ ಒಡಂಬಡಿಕೆ ಮಂಜೂಷವು ದಾವೀದನ ನಗರಕ್ಕೆ ಬರುತ್ತಿರುವಾಗ ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಇಣಿಕಿನೋಡಿ ದಾವೀದನು ಜಿಗಿಯುತ್ತಾ, ಕುಣಿಯುತ್ತಾ, ನೃತ್ಯಮಾಡುತ್ತಾ ಇರುವುದನ್ನು ಕಂಡು ಮನಸ್ಸಿನಲ್ಲಿ ಅವನನ್ನು ತಿರಸ್ಕರಿಸಿದಳು.


ಅನಂತರ ದಾವೀದನು ಯೆಹೋವನ ಮಂಜೂಷವನ್ನು ತಾನು ಸಿದ್ಧಮಾಡಿದ ಸ್ಥಳಕ್ಕೆ ತರುವುದಕ್ಕೋಸ್ಕರ ಎಲ್ಲಾ ಇಸ್ರಾಯೇಲರನ್ನು ಯೆರೂಸಲೇಮಿಗೆ ಕರೆಯಿಸಿದನು.


ದಾವೀದನು ಆ ಕೋಟೆಯನ್ನು ತನ್ನ ವಾಸಸ್ಥಾನವನ್ನಾಗಿ ಮಾಡಿಕೊಂಡಿದ್ದರಿಂದ ಅದಕ್ಕೆ ದಾವೀದನಗರ ಎಂದು ಹೆಸರಾಯಿತು.


ಸೊಲೊಮೋನನು ನಿದ್ರೆಯಿಂದ ಎಚ್ಚತ್ತಾಗ ಅದು ಕನಸೆಂದು ತಿಳಿದುಕೊಂಡನು. ಅವನು ಯೆರೂಸಲೇಮಿಗೆ ಬಂದ ನಂತರ ಯೆಹೋವನ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು ಸರ್ವಾಂಗಹೋಮಗಳನ್ನು ಸಮಾಧಾನ ಯಜ್ಞಗಳನ್ನು ಸಮರ್ಪಿಸಿ, ತನ್ನ ಎಲ್ಲಾ ಸೇವಕರಿಗಾಗಿ ಔತಣಮಾಡಿಸಿದನು.


ಅವರು ನಾಕೋನನ ಕಣಕ್ಕೆ ಬಂದಾಗ ಎತ್ತುಗಳು ಎಡವಿದ್ದರಿಂದ ಉಜ್ಜನು ಕೈಚಾಚಿ ದೇವರ ಮಂಜೂಷವನ್ನು ಹಿಡಿದನು.


ತರುವಾಯ ಯೆಹೋಶುವನು ಇಸ್ರಾಯೇಲ್ಯರ ಎಲ್ಲಾ ಕುಲದವರನ್ನು ಶೆಕೆಮಿನಲ್ಲಿ ಸಭೆ ಸೇರಿಸಿದನು. ಹಿರಿಯರು, ಪ್ರಧಾನರು, ನ್ಯಾಯಾಧಿಪತಿಗಳು, ಅಧಿಕಾರಿಗಳು ಬಂದು ದೇವರ ಸನ್ನಿಧಿಯಲ್ಲಿ ಕಾಣಿಸಿಕೊಂಡರು.


ಆತನು ಇಸ್ರಾಯೇಲ್ಯರ ಹಿರಿಯ ಪ್ರಭುಗಳು, ನ್ಯಾಯಾಧಿಪತಿಗಳು, ಅಧಿಕಾರಿಗಳು ಅಲ್ಲದೆ ಎಲ್ಲಾ ಇಸ್ರಾಯೇಲರ ಜನರನ್ನು ತನ್ನ ಬಳಿಗೆ ಕರಿಸಿ ಅವರಿಗೆ, “ನಾನು ದಿನತುಂಬಿದ ಮುದುಕನಾಗಿದ್ದೇನೆ.


ಈ ಕೆಲಸಕ್ಕಾಗಿ ಕುಲದಲ್ಲಿ ಆಯಾ ಕುಲದ ಒಂದೊಂದು ಮುಖ್ಯಸ್ಥನಾಗಿರುವ ಒಬ್ಬೊಬ್ಬ ಸಹಾಯಕನಿರಬೇಕು ಹಾಗೂ ತನ್ನ ಕುಲಕ್ಕಾಗಿ ಹೋರಾಡುವ ಜನರನ್ನು ಮುಖ್ಯಸ್ಥನು ಮುನ್ನಡೆಸಬೇಕು.


ಅನಂತರ ದಾವೀದನು ತನ್ನ ಪೂರ್ವಿಕರ ಬಳಿಗೆ ಸೇರಿದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು