1 ಅರಸುಗಳು 8:39 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
39 ಮನುಷ್ಯರ ಹೃದಯಗಳನ್ನು ಬಲ್ಲಂಥ ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಲಾಲಿಸಿ, ಅವರಿಗೆ ಪಾಪಪರಿಹಾರವನ್ನು ಅನುಗ್ರಹಿಸು. ನೀನೊಬ್ಬನೇ ಎಲ್ಲಾ ಮನುಷ್ಯರ ಹೃದಯಗಳನ್ನು ಬಲ್ಲವನಾಗಿರುವುದರಿಂದ ಪ್ರತಿಯೊಬ್ಬನಿಗೂ ಅವನವನು ಹಿಡಿಯುವ ಮಾರ್ಗಕ್ಕೆ ತಕ್ಕ ಹಾಗೆ ಫಲವನ್ನು ಕೊಡು.
39 ಮನುಷ್ಯರ ಅಂತರಂಗಗಳನ್ನು ಬಲ್ಲಂಥ ನೀವು, ನಿಮ್ಮ ನಿವಾಸವಾಗಿರುವ ಪರಲೋಕದಿಂದ ಆಲಿಸಿರಿ; ಅವರಿಗೆ ಪಾಪಪರಿಹಾರವನ್ನು ಅನುಗ್ರಹಿಸಿರಿ; ನೀವೊಬ್ಬರೇ ಎಲ್ಲಾ ಮಾನವರ ಹೃದಯಗಳನ್ನು ಬಲ್ಲವನಾಗಿರುವುದರಿಂದ ಪ್ರತಿಯೊಬ್ಬನಿಗೂ ಅವನವನು ಹಿಡಿಯುವ ಮಾರ್ಗಕ್ಕೆ ತಕ್ಕ ಹಾಗೆ ಫಲವನ್ನು ಕೊಡಿ.
39 ಮನುಷ್ಯರ ಹೃದಯಗಳನ್ನು ಬಲ್ಲಂಥ ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಲಾಲಿಸಿ ಅವರಿಗೆ ಪಾಪಪರಿಹಾರವನ್ನು ಅನುಗ್ರಹಿಸು; ನೀನೊಬ್ಬನೇ ಎಲ್ಲಾ ಮನುಷ್ಯರ ಹೃದಯಗಳನ್ನು ಬಲ್ಲವನಾಗಿರುವದರಿಂದ ಪ್ರತಿಯೊಬ್ಬನಿಗೂ ಅವನವನು ಹಿಡಿಯುವ ಮಾರ್ಗಕ್ಕೆ ತಕ್ಕ ಹಾಗೆ ಫಲವನ್ನು ಕೊಡು.
39 ದಯವಿಟ್ಟು ಅವನ ಪ್ರಾರ್ಥನೆಯನ್ನು ನಿನ್ನ ನಿವಾಸವಾದ ಪರಲೋಕದಿಂದ ಆಲಿಸಿ, ಜನರನ್ನು ಕ್ಷಮಿಸಿ, ಅವರಿಗೆ ಸಹಾಯ ಮಾಡು. ಜನರು ನಿಜವಾಗಿ ಆಲೋಚಿಸುವ ಸಂಗತಿಗಳು ನಿನಗೆ ಮಾತ್ರ ತಿಳಿದಿವೆ. ಆದ್ದರಿಂದ ಪ್ರತಿಯೊಬ್ಬ ವ್ಯಕ್ತಿಗೂ ತೀರ್ಪುನೀಡು ಮತ್ತು ಅವನಿಗೆ ನ್ಯಾಯವಾದದ್ದನ್ನು ಮಾಡು.
39 ನೀವು ವಾಸಮಾಡುವ ಪರಲೋಕದಿಂದ ಕೇಳಿ, ಮನ್ನಿಸಿ, ನಡೆಸಿರಿ. ಮನುಷ್ಯನ ಹೃದಯವನ್ನು ತಿಳಿದಿರುವ ನೀವು ಪ್ರತಿ ಮನುಷ್ಯನಿಗೂ ಅವನವನ ಮಾರ್ಗದ ಪ್ರಕಾರ ಪ್ರತಿಫಲಕೊಡಿರಿ. ಏಕೆಂದರೆ ನೀವೊಬ್ಬರೇ ಸಮಸ್ತ ಜನರ ಹೃದಯಗಳನ್ನು ತಿಳಿದವರಾಗಿದ್ದೀರಿ.
ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ, ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು. ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ, ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವುದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಕಡೆಗಣಿಸಿದರೆ ಆತನು ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.
“ಕರ್ತನೇ, ಎಲ್ಲರ ಹೃದಯವನ್ನು ಬಲ್ಲಾತನೇ, ಯೂದನು ಅಪೊಸ್ತಲತನವೆಂಬ ಈ ಸೇವಾಸ್ಥಾನದಿಂದ ಭ್ರಷ್ಟನಾಗಿ ತಾನು ಹೋಗ ತಕ್ಕ ಸ್ಥಳಕ್ಕೆ ಹೋಗಿರುವುದರಿಂದ ಆ ಸ್ಥಾನವನ್ನು ಹೊಂದುವುದಕ್ಕೆ ಈ ಇಬ್ಬರಲ್ಲಿ ನೀನು ಆರಿಸಿ ಕೊಂಡವನನ್ನು ತೋರಿಸಿಕೊಡು” ಎಂದು ಪ್ರಾರ್ಥಿಸಿದರು.
ಆದರೆ ಯೆಹೋವನು ಸಮುವೇಲನಿಗೆ, “ನೀನು ಅವನ ಸೌಂದರ್ಯವನ್ನೂ, ಎತ್ತರವನ್ನೂ ನೋಡಬೇಡ; ನಾನು ಅವನನ್ನು ನಿರಾಕರಿಸಿದ್ದೇನೆ. ಯೆಹೋವನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ನೋಡದೆ ಹೃದಯದ ಮತ್ತು ಅಂತರಂಗದ ಸೌಂದರ್ಯ ನೋಡುವವನಾಗಿದ್ದಾನೆ” ಅಂದನು.
ಅವಳ ಮಕ್ಕಳನ್ನು ಕೊಲ್ಲುವೆನು. ಆಗ ನಾನು ಮನುಷ್ಯರ ಅಂತರಿಂದ್ರಿಯಗಳನ್ನೂ, ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ಗೊತ್ತಾಗುವುದು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕ್ರಿಯೆಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.
ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ ನೀನು ನನ್ನ ಮೇಲೆ ಮಮತೆ ಇಟ್ಟಿದ್ದಿಯೋ?” ಎಂದು ಕೇಳಿದನು, ಮೂರನೆಯ ಸಾರಿ ಆತನು, “ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿನಗೆ ಎಲ್ಲವೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟೀದ್ದೇನೆಂದು ನಿನಗೆ ತಿಳಿದಿದೆ” ಎಂದನು. ಆಗ ಅವನಿಗೆ ಯೇಸು “ನನ್ನ ಕುರಿಗಳನ್ನು ಮೇಯಿಸು” ಎಂದನು.
ನೀನು ಆಲೋಚನೆಯಲ್ಲಿ ಶ್ರೇಷ್ಠನು, ಕಾರ್ಯದಲ್ಲಿ ಸಮರ್ಥನು; ನೀನು ಪ್ರತಿಯೊಬ್ಬನಿಗೂ ಅವನವನ ಕರ್ಮಕ್ಕೂ ನಡತೆಗೂ ತಕ್ಕ ಪ್ರತಿಫಲವನ್ನು ಕೊಡಬೇಕೆಂದು ನರಜನ್ಮದವರ ಮಾರ್ಗಗಳನ್ನೆಲ್ಲಾ ಕಣ್ಣಾರೆ ನೋಡುತ್ತೀ.
ಮನುಷ್ಯರ ಹೃದಯಗಳನ್ನು ಬಲ್ಲಂಥ ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಅಲಿಸಿ ಅವರಿಗೆ ಪಾಪ ಕ್ಷಮೆಯನ್ನು ಅನುಗ್ರಹಿಸು. ನೀನೊಬ್ಬನೇ ಮನುಷ್ಯರ ಹೃದಯಗಳನ್ನು ಬಲ್ಲವನಾಗಿರುವುದರಿಂದ ಪ್ರತಿಯೊಬ್ಬನಿಗೂ ಅವನವನ ನಡತೆಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡು.
ಪರಲೋಕದಲ್ಲಿರುವ ನೀನು ಆಲಿಸಿ, ನಿನ್ನ ಸೇವಕರೂ ಪ್ರಜೆಗಳೂ ಆದ ಇಸ್ರಾಯೇಲರ ಪಾಪಗಳನ್ನು ಕ್ಷಮಿಸಿ ಅವರು ನಡೆಯಬೇಕಾದ ಮಾರ್ಗವನ್ನು ತೋರಿಸಿ, ನಿನ್ನ ಪ್ರಜೆಗೆ ಸ್ವತ್ತಾಗಿ ಕೊಟ್ಟ ದೇಶಕ್ಕೆ ಮಳೆಯನ್ನು ಅನುಗ್ರಹಿಸು.
ಪರಲೋಕದಲ್ಲಿರುವ ನೀನು ಅದನ್ನು ಕೇಳಿ ನಿನ್ನ ಸೇವಕರ ವ್ಯಾಜ್ಯವನ್ನು ತೀರಿಸು. ದುಷ್ಟನಿಗೆ ಅವನ ದುಷ್ಟತ್ವವನ್ನು ಅವನ ತಲೆಯ ಮೇಲೆಯೇ ಬರಮಾಡಿ, ಅವನು ಅಪರಾಧಿಯೆಂದು ತೋರಿಸು. ನೀತಿವಂತನಿಗೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದೂ ತೋರಿಸಿಕೊಡು.
ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುಮಾಡುವೆನು; ಅಧರ್ಮವು ನಿಮ್ಮನ್ನು ನಾಶಮಾಡದಂತೆ ತಿರುಗಿಕೊಂಡು ನಿಮ್ಮ ಅಪರಾಧಗಳನ್ನೆಲ್ಲಾ ಬಿಟ್ಟುಬಿಡಿರಿ.
“ದೇವಾಧಿದೇವನಾದ ಯೆಹೋವನು ಇದಕ್ಕೆ ಸಾಕ್ಷಿ; ಆ ದೇವಾಧಿದೇವನಾದ ಯೆಹೋವನಿಗೆ ಇದು ಗೊತ್ತಿದೆ. ಇಸ್ರಾಯೇಲರಿಗೂ ಗೊತ್ತಾಗುವುದು. ನಾವು ದ್ರೋಹಿಗಳು, ಯೆಹೋವನ ವಿರುದ್ಧವಾಗಿ ಪಾಪಮಾಡಿದವರು ಆಗಿದ್ದರೆ ಯೆಹೋವನು ನಮ್ಮನ್ನು ಈ ಹೊತ್ತೇ ನಮ್ಮ ಜೀವವನ್ನು ತೆಗೆದುಬಿಡಲಿ.