Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:44 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ನೀನು ನಿನ್ನ ಜನರನ್ನು ಶತ್ರುಗಳೊಡನೆ ಯುದ್ಧಮಾಡುವುದಕ್ಕೋಸ್ಕರ ಎಲ್ಲಿಗಾದರು ಕಳುಹಿಸಿದಾಗ ಅವರು ಅಲ್ಲಿಂದ ನೀನು ಆರಿಸಿಕೊಂಡ ಪಟ್ಟಣದ ಕಡೆಗೂ, ನಾನು ನಿನ್ನ ಹೆಸರಿಗಾಗಿ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು ಯೆಹೋವನಾದ ನಿನ್ನನ್ನು ಪ್ರಾರ್ಥಿಸುವುದಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 “ನೀವು ನಿಮ್ಮ ಜನರನ್ನು ಶತ್ರುಗಳೊಡನೆ ಯುದ್ಧಮಾಡುವುದಕ್ಕೆ ಎಲ್ಲಿಗಾದರೂ ಕಳುಹಿಸಿದಾಗ ಅವರು ಅಲ್ಲಿಂದ ನೀವು ಆರಿಸಿಕೊಂಡ ಪಟ್ಟಣದ ಕಡೆಗೂ, ನಾನು ನಿಮ್ಮ ಹೆಸರಿಗಾಗಿ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು, ಸರ್ವೇಶ್ವರನಾದ ನಿಮ್ಮನ್ನು ಪ್ರಾರ್ಥಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ನೀನು ನಿನ್ನ ಜನರನ್ನು ಶತ್ರುಗಳೊಡನೆ ಯುದ್ಧಮಾಡುವದಕ್ಕೋಸ್ಕರ ಎಲ್ಲಿಗಾದರೂ ಕಳುಹಿಸಿದಾಗ ಅವರು ಅಲ್ಲಿಂದ ನೀನು ಆರಿಸಿಕೊಂಡ ಪಟ್ಟಣದ ಕಡೆಗೂ ನಾನು ನಿನ್ನ ಹೆಸರಿಗಾಗಿ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು ಯೆಹೋವನಾದ ನಿನ್ನನ್ನು ಪ್ರಾರ್ಥಿಸುವದಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 “ಕೆಲವು ಸಂದರ್ಭಗಳಲ್ಲಿ ತಮ್ಮ ಶತ್ರುಗಳ ವಿರುದ್ಧ ಹೋರಾಡುವಂತೆ ನಿನ್ನ ಜನರಿಗೆ ನೀನು ಆಜ್ಞಾಪಿಸುವೆ. ಆಗ ನಿನ್ನ ಜನರು, ನಿನ್ನಿಂದ ಆರಿಸಲ್ಪಟ್ಟ ಈ ನಗರದ ಕಡೆಗೆ ಮತ್ತು ನಾನು ನಿನ್ನ ಗೌರವಕ್ಕಾಗಿ ನಿರ್ಮಿಸಿದ ಈ ದೇವಾಲಯದ ಕಡೆಗೆ ಮುಖ ಮಾಡಿ ನಿನ್ನಲ್ಲಿ ಪ್ರಾರ್ಥಿಸುತ್ತಾರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 “ನೀವು ನಿಮ್ಮ ಜನರನ್ನು ತಮ್ಮ ಶತ್ರುಗಳ ಸಂಗಡ ಯುದ್ಧಮಾಡುವದಕ್ಕೆ ಎಲ್ಲಿಗಾದರೂ ಕಳುಹಿಸಿದಾಗ, ಅವರು ಅಲ್ಲಿಂದ ನೀವು ಆಯ್ದುಕೊಂಡ ಪಟ್ಟಣದ ಕಡೆಗೂ, ನಾನು ನಿಮ್ಮ ಹೆಸರಿಗಾಗಿ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು, ಅವರು ಯೆಹೋವ ದೇವರಾದ ನಿಮಗೆ ಪ್ರಾರ್ಥನೆ ಮಾಡಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:44
26 ತಿಳಿವುಗಳ ಹೋಲಿಕೆ  

ಈ ಕಾರಣದಿಂದ ಅರಸನಾದ ಹಿಜ್ಕೀಯನು ಹಾಗು ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯು ಪರಲೋಕದ ದೇವರಿಗೆ ಮೊರೆಯಿಟ್ಟು ಪ್ರಾರ್ಥಿಸಿದರು.


ರಥಬಲದ ಅಧಿಪತಿಗಳು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಾಯೇಲರ ಅರಸನೆಂದು ನೆನೆದು, ಅವನಿಗೆ ವಿರುದ್ಧವಾಗಿ ಯುದ್ಧ ಮಾಡುವುದಕ್ಕೆ ಸುತ್ತಿಕೊಂಡರು. ಆಗ ಯೆಹೋಷಾಫಾಟನು ಯೆಹೋವನನ್ನು ಸಹಾಯಕ್ಕಾಗಿ ಕೂಗಿದನು. ಆಗ ದೇವರಾದ ಯೆಹೋವನು ಅವನ ನೆರವಿಗೆ ಬಂದು, ಶತ್ರುಗಳನ್ನು ಅವನ ಕಡೆಯಿಂದ ಹೊರಟು ಹೋಗುವಂತೆ ಮಾಡಿದನು.


“ನೀನು ನಿನ್ನ ಜನರನ್ನು ಶತ್ರುಗಳೊಡನೆ ಯುದ್ಧ ಮಾಡುವುದಕ್ಕಾಗಿ ಎಲ್ಲಿಗಾದರೂ ಕಳುಹಿಸಿದಾಗ, ಅವರು ಅಲ್ಲಿಂದ ನೀನು ಆರಿಸಿಕೊಂಡ ಪಟ್ಟಣದ ಕಡೆಗೂ, ನಾನು ನಿನ್ನ ಹೆಸರಿನಲ್ಲಿ ಕಟ್ಟಿಸಿರುವ ಈ ಆಲಯದ ಕಡೆಗೂ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸಿದರೆ,


ಆತನು, ‘ನಾನು ನನ್ನ ಜನರಾದ ಇಸ್ರಾಯೇಲರನ್ನು ಐಗುಪ್ತದಿಂದ ಬರಮಾಡಿದಂದಿನಿಂದ ನನ್ನ ಪ್ರಜೆಗಳಾದ ಇಸ್ರಾಯೇಲರನ್ನು ಆಳುವುದಕ್ಕೋಸ್ಕರ ದಾವೀದನನ್ನು ಆರಿಸಿಕೊಂಡೆನೇ ಹೊರತು ನನ್ನ ನಾಮದ ನಿವಾಸಕ್ಕೋಸ್ಕರ ಆಲಯ ಸ್ಥಾನವನ್ನಾಗಿ ಇಸ್ರಾಯೇಲ್ ಕುಲಗಳ ಯಾವ ಪಟ್ಟಣವನ್ನೂ ಆರಿಸಿಕೊಳ್ಳಲಿಲ್ಲ’ ಎಂದು ಹೇಳಿದ್ದನು.


ದಾವೀದನು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಿದಾಗ ಆತನು ಅವನಿಗೆ, “ನೀನು ನೇರವಾಗಿ ಹೋಗಿ ಅವರನ್ನು ಮುತ್ತಿಗೆ ಹಾಕಬೇಡ. ಅವರಿಗೆ ತಿಳಿಯದಂತೆ ಸುತ್ತಿಕೊಂಡು ಹೋಗಿ ಹಿಂಬಾಲಿಸಿ, ಬಾಕಾ ಮರಗಳಿರುವ ಕಡೆಯಿಂದ ಅವರ ಮೇಲೆ ಬೀಳು.


ಅದನ್ನು ತಿಳಿದು ದಾವೀದನು ಯೆಹೋವನನ್ನು, “ನಾನು ಫಿಲಿಷ್ಟಿಯರಿಗೆ ವಿರೋಧವಾಗಿ ಹೋಗಬಹುದೋ? ಅವರನ್ನು ನನ್ನ ಕೈಗೆ ಒಪ್ಪಿಸಿಕೊಡುವಿಯೋ?” ಎಂದು ಕೇಳಿದನು. ಅದಕ್ಕೆ ಯೆಹೋವನು, “ಹೋಗು ನಾನು ಹೇಗೂ ಅವರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು” ಎಂದು ಉತ್ತರಕೊಟ್ಟನು.


ಆಗ ದಾವೀದನು ಯೆಹೋವನನ್ನು, “ನಾನು ಆ ಗುಂಪನ್ನು ಹಿಂದಟ್ಟಬಹುದೋ, ಅದು ನನಗೆ ಸಿಕ್ಕುವುದೋ?” ಎಂದು ಕೇಳಲು ಆತನು, “ಹಿಂದಟ್ಟು, ಅದು ನಿನಗೆ ಸಿಕ್ಕುವುದು, ನೀನು ಎಲ್ಲರನ್ನೂ ಬಿಡಿಸಿಕೊಂಡು ಬರುವಿ” ಎಂದು ಉತ್ತರಕೊಟ್ಟನು.


ಆತನು ನಿನಗೆ, ‘ಹೊರಟು ಹೋಗಿ ದುಷ್ಟರಾದ ಅಮಾಲೇಕ್ಯರೊಡನೆ ಯುದ್ಧಮಾಡಿ ಅವರೆಲ್ಲರನ್ನೂ ಸಂಪೂರ್ಣವಾಗಿ ನಾಶಮಾಡು’ ಎಂದು ಹೇಳಿದನು.


ಈಗ ನೀನು ಹೋಗಿ ಅವರನ್ನು ಸೋಲಿಸಿ ಅವರಿಗಿರುವುದನ್ನೆಲ್ಲಾ ಸಂಪೂರ್ಣವಾಗಿ ಹಾಳುಮಾಡು. ಗಂಡಸರನ್ನೂ, ಹೆಂಗಸರನ್ನೂ, ಮಕ್ಕಳನ್ನೂ, ಶಿಶುಗಳನ್ನೂ, ಎತ್ತು, ಕುರಿ, ಕತ್ತೆ, ಒಂಟೆ, ಇವುಗಳನ್ನೂ ಕನಿಕರವಿಲ್ಲದೆ ಕೊಂದುಹಾಕು ಎಂದು ಹೇಳುತ್ತಾನೆ’” ಅಂದನು.


ಆಗ ಯೆಹೋವನು ಅವನನ್ನು ಚೆನ್ನಾಗಿ ನೋಡಿ, “ನಾನು ನಿನ್ನನ್ನು ಕಳುಹಿಸುತ್ತೇನೆ, ಹೋಗು; ನಿನ್ನ ಈ ಬಲದಿಂದ ಇಸ್ರಾಯೇಲ್ಯರನ್ನು ಮಿದ್ಯಾನ್ಯರಿಂದ ಬಿಡಿಸು” ಎಂದು ಹೇಳಿದನು.


ಆಕೆ ನಫ್ತಾಲಿ ದೇಶದ ಕೆದೆಷ್ ಊರಿನಲ್ಲಿದ್ದ ಅಬೀನೋವಮನ ಮಗನಾದ ಬಾರಾಕನನ್ನು ಬರಲು ಹೇಳಿ ಅವನಿಗೆ, “ನಿಶ್ಚಯವಾಗಿ ಇಸ್ರಾಯೇಲರ ದೇವರಾದ ಯೆಹೋವನು ನಿನಗೆ, ‘ಎದ್ದು ನಫ್ತಾಲಿ, ಜೆಬುಲೂನ್ ಕುಲಗಳಿಂದ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು.


ಪರಲೋಕದಲ್ಲಿರುವ ನೀನು ವಿಜ್ಞಾಪನೆಯನ್ನು ಮತ್ತು ಪ್ರಾರ್ಥನೆಯನ್ನೂ ಕೇಳಿ, ಅವರ ನ್ಯಾಯವನ್ನು ಸ್ಥಾಪಿಸು.


ಶಾಸನಕ್ಕೆ ರುಜುವಾದದ್ದು ದಾನಿಯೇಲನಿಗೆ ತಿಳಿದಾಗ ಅವನು ತನ್ನ ಮನೆಗೆ ಹೋಗಿ ಯೆರೂಸಲೇಮಿನ ಕಡೆಗೆ ಕದವಿಲ್ಲದೆ ಕಿಟಕಿಗಳುಳ್ಳ ತನ್ನ ಮಹಡಿಯ ಕೋಣೆಯಲ್ಲಿ ವಾಡಿಕೆಯ ಪ್ರಕಾರ ದಿನಕ್ಕೆ ಮೂರಾವರ್ತಿ ಮೊಣಕಾಲೂರಿ ತನ್ನ ದೇವರಿಗೆ ಪ್ರಾರ್ಥನೆಮಾಡಿ ಸ್ತೋತ್ರ ಸಲ್ಲಿಸುತ್ತಿದ್ದನು


ಯೆಹೂದ್ಯರೂ ಯೆರೂಸಲೇಮಿನವರೂ ಯೆಹೋವನ ಆಲಯದ ಹೊಸ ಪ್ರಾಕಾರದಲ್ಲಿ ಸಭೆಯಾಗಿ ನೆರೆದು ಬಂದಾಗ, ಯೆಹೋಷಾಫಾಟನು ಅದರ ಮುಂದೆ ನಿಂತು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು