Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:51 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ಅವರು ನಿನಗೆ ವಿರುದ್ಧವಾಗಿ ಮಾಡಿದ ಎಲ್ಲಾ ಅಪರಾಧ ದ್ರೋಹಗಳನ್ನು ಕ್ಷಮಿಸಿ ಅವರನ್ನು ಸೆರೆಯೊಯ್ದವರ ಮನಸ್ಸಿನಲ್ಲಿ ಅವರ ಮೇಲೆ ದಯೆಹುಟ್ಟಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

51 ಅವರು ನಿಮಗೆ ವಿರುದ್ಧ ಮಾಡಿದ ಎಲ್ಲಾ ಅಪರಾಧದ್ರೋಹಗಳನ್ನು ಕ್ಷಮಿಸಿರಿ; ಅವರನ್ನು ಸೆರೆಗೊಯ್ದವರ ಮನಸ್ಸಿನಲ್ಲಿ ಅವರ ಮೇಲೆ ದಯೆಹುಟ್ಟಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

51 ನಿನ್ನ ಸ್ವಕೀಯ ಜನರಾಗಿದ್ದಾರೆಂಬದನ್ನು ನೆನಸಿ ಅವರು ನಿನಗೆ ವಿರುದ್ಧವಾಗಿ ಮಾಡಿದ ಎಲ್ಲಾ ಅಪರಾಧ ದ್ರೋಹಗಳನ್ನು ಕ್ಷವಿುಸಿ ಅವರನ್ನು ಸೆರೆಯೊಯ್ದವರ ಮನಸ್ಸಿನಲ್ಲಿ ಅವರ ಮೇಲೆ ದಯೆ ಹುಟ್ಟಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

51 ಅವರು ನಿನ್ನ ಜನರೆಂಬುದನ್ನು ಜ್ಞಾಪಿಸಿಕೊ. ನೀನು ಅವರನ್ನು ಈಜಿಪ್ಟಿನಿಂದ ಬರಮಾಡಿದೆಯೆಂಬುದನ್ನು ಜ್ಞಾಪಿಸಿಕೊ. ಸುಡುವ ಕುಲುಮೆಯಿಂದ ಹೊರಕ್ಕೆ ಎಳೆದು ತಂದಂತೆ ನೀನು ಅವರನ್ನು ರಕ್ಷಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

51 ಏಕೆಂದರೆ ಅವರು ಈಜಿಪ್ಟಿನಿಂದಲೂ, ಕಬ್ಬಿಣದ ಒಲೆಯ ಮಧ್ಯದಿಂದಲೂ, ನೀವು ಬರಮಾಡಿದ ನಿಮ್ಮ ಜನರಾಗಿಯೂ, ನಿಮ್ಮ ಬಾಧ್ಯತೆಯೂ ಆಗಿದ್ದಾರೆ. ಹೀಗೆ ಅವರು ನಿಮಗೆ ಮೊರೆಯಿಡುವ ಎಲ್ಲಾದರಲ್ಲಿ ನೀವು ಅವರ ವ್ಯಾಜ್ಯವನ್ನು ಆಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:51
15 ತಿಳಿವುಗಳ ಹೋಲಿಕೆ  

ಕಬ್ಬಿಣ ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತ ದೇಶದಿಂದ ನಿಮ್ಮ ಪೂರ್ವಿಕರನ್ನು ಬರಮಾಡಿದಾಗ ನೀವು ನನ್ನ ಮಾತನ್ನು ಕೇಳಿ, ನಾನು ನಿಮಗೆ ಆಜ್ಞಾಪಿಸಿರುವ ಈ ವಿಧಿಗಳನ್ನೆಲ್ಲಾ ಕೈಕೊಂಡರೆ ನೀವು ನನ್ನ ಪ್ರಜೆಯಾಗಿರುವಿರಿ, ನಾನು ನಿಮ್ಮ ದೇವರಾಗಿರುವೆನು.


“ಅವರು ನಿನ್ನ ಸೇವಕರೂ, ನೀನು ನಿನ್ನ ಮಹಾಶಕ್ತಿ, ಭುಜಪರಾಕ್ರಮಗಳಿಂದ ವಿಮೋಚಿಸಿದ ನಿನ್ನ ಪ್ರಜೆಗಳೂ ಆಗಿರುತ್ತಾರಲ್ಲಾ.


ನಿಮ್ಮನ್ನಾದರೋ ಯೆಹೋವನು ತನಗೆ ಸ್ವಂತ ಜನರನ್ನಾಗಿ ಮಾಡಿಕೊಳ್ಳಬೇಕೆಂದು ಸಂಕಲ್ಪಿಸಿ, ಕಬ್ಬಿಣವನ್ನು ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತದೇಶದಿಂದ ತಪ್ಪಿಸಿದನು; ಆ ಸಂಕಲ್ಪವು ಈಗ ನೆರವೇರಿತು.


ಯಾಕೋಬ್ಯರ ಸ್ವಾಸ್ತ್ಯವಾದಾತನು ಅವುಗಳ ಹಾಗಲ್ಲ; ಆತನು ಸಮಸ್ತವನ್ನೂ ನಿರ್ಮಿಸಿದವನು; ಇಸ್ರಾಯೇಲು ಆತನ ಸ್ವಾಸ್ತ್ಯವಾದ ವಂಶ; ಸೇನಾಧೀಶ್ವರನಾದ ಯೆಹೋವನೆಂಬುದೇ ಆತನ ಹೆಸರು.


ಯೆಹೋವನೇ, ಅತಿರೋಷಗೊಳ್ಳದಿರು, ನಮ್ಮ ಅಧರ್ಮವನ್ನು ಕಡೆಯವರೆಗೂ ಜ್ಞಾಪಕದಲ್ಲಿಡಬೇಡ; ಎಲೈ, ಕರ್ತನೇ, ಕಟಾಕ್ಷಿಸು, ನಾವೆಲ್ಲರೂ ನಿನ್ನ ಜನರಾಗಿದ್ದೇವೆ.


ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಅವರ ಪ್ರಾರ್ಥನೆಯನ್ನು, ವಿಜ್ಞಾಪನೆಯನ್ನು ಆಲಿಸಿ, ಅವರಿಗೆ ನ್ಯಾಯವನ್ನು ಪಾಲಿಸಿ ನಿನಗೆ ವಿರುದ್ಧವಾಗಿ ಪಾಪಮಾಡಿದ ನಿನ್ನ ಪ್ರಜೆಗಳಿಗೆ ಕ್ಷಮೆಯನ್ನು ಅನುಗ್ರಹಿಸು.


ಕರ್ತನೇ, ಯೆಹೋವನೇ, ನೀನು ನಮ್ಮ ಪೂರ್ವಿಕರನ್ನು ಐಗುಪ್ತದೇಶದಿಂದ ಬಿಡಿಸುವಾಗ ಅವರಿಗೆ ನಾನು ನಿಮ್ಮನ್ನು ಎಲ್ಲಾ ಜನಾಂಗಗಳೊಳಗಿಂದ ಪ್ರತ್ಯೇಕಿಸಿ, ಸ್ವಕೀಯಜನರನ್ನಾಗಿ ಮಾಡಿಕೊಂಡಿದ್ದೇನೆಂದು ಮೋಶೆಯ ಮುಖಾಂತರವಾಗಿ ಹೇಳಿದಿಯಲ್ಲವೇ” ಎಂದು ದೇವರನ್ನು ಪ್ರಾರ್ಥಿಸಿದನು.


ಇಸ್ರಾಯೇಲರು ಮಾತ್ರ ಯೆಹೋವನ ಸ್ವಂತ ಜನರಾದರು. ಯಾಕೋಬನ ವಂಶಸ್ಥರು ಆತನಿಗೆ ಸ್ವಕೀಯ ಪ್ರಜೆಯಾದರು.


ಯೆಹೋವನೇ, ನಿನ್ನ ಜನರನ್ನು ರಕ್ಷಿಸು; ನಿನ್ನ ಸ್ವಕೀಯ ಪ್ರಜೆಯನ್ನು ಆಶೀರ್ವದಿಸು. ನೀನು ಅವರ ಕುರುಬನಾಗಿರು; ಅವರನ್ನು ಯಾವಾಗಲೂ ಪರಿಪಾಲಿಸುತ್ತಾ ಆಧಾರವಾಗಿರು.


ನೋಡು, ನಿನ್ನನ್ನು ಶೋಧಿಸಿದ್ದೇನೆ, ಆದರೆ ಬೆಳ್ಳಿಯಷ್ಟು ಶೋಧಿಸಲಿಲ್ಲ, ಸಂಕಟವೆಂಬ ಪುಟಕ್ಕೆ ಹಾಕಿ ನಿನ್ನನ್ನು ಪರೀಕ್ಷಿಸಿದ್ದೇನೆ.


ಆಗ ನೆಬೂಕದ್ನೆಚ್ಚರನು ಧಗಧಗನೆ ಉರಿಯುವ ಬೆಂಕಿಯ ಬಾಯಿಯ ಬಳಿಗೆ ಹೋಗಿ, “ಪರಾತ್ಪರದೇವರ ಸೇವಕರಾದ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರೇ ಬನ್ನಿ, ಹೊರಗೆ ಬನ್ನಿ ಎಂದು ಕೂಗಲು, ಶದ್ರಕ್ ಮೇಶಕ್ ಅಬೇದ್ನೆಗೋ ಎಂಬುವವರು ಬೆಂಕಿಯೊಳಗಿಂದ ಹೊರಟು ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು