Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 9:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆನಂತರ ಅವನು ತನಗೆ ಬೇಕಾದಷ್ಟು ದೇವದಾರುಮರಗಳನ್ನೂ, ತುರಾಯಿಮರಗಳನ್ನೂ ಮತ್ತು ಬಂಗಾರವನ್ನೂ ಕೊಟ್ಟಂಥ ತೂರಿನ ಅರಸನಾದ ಹೀರಾಮನಿಗೆ ಗಲಿಲಾಯ ಪ್ರಾಂತ್ಯದಲ್ಲಿ ಇಪ್ಪತ್ತು ಪಟ್ಟಣಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ತನಗೆ ಬೇಕಾದಷ್ಟು ದೇವದಾರು ಮರಗಳನ್ನು, ತುರಾಯಿ ಮರಗಳನ್ನು ಹಾಗು ಬಂಗಾರವನ್ನು ಕೊಟ್ಟಿದ್ದ ಟೈರಿನ ಅರಸ ಹೀರಾಮನಿಗೆ, ಗಲಿಲೇಯ ಪ್ರಾಂತ್ಯದಲ್ಲಿನ ಇಪ್ಪತ್ತು ಪಟ್ಟಣಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ತನಗೆ ಬೇಕಾದಷ್ಟು ದೇವದಾರು ಮರಗಳನ್ನೂ ತುರಾಯಿ ಮರಗಳನ್ನೂ ಬಂಗಾರವನ್ನೂ ಕೊಟ್ಟಂಥ ತೂರಿನ ಅರಸನಾದ ಹೀರಾಮನಿಗೆ ಗಲಿಲಾಯ ಪ್ರಾಂತದಲ್ಲಿನ ಇಪ್ಪತ್ತು ಪಟ್ಟಣಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ರಾಜನಾದ ಸೊಲೊಮೋನನು ಇಪ್ಪತ್ತು ವರ್ಷಗಳ ತರುವಾಯ ಗಲಿಲಾಯದ ಇಪ್ಪತ್ತು ಪಟ್ಟಣಗಳನ್ನು ತೂರಿನ ರಾಜನಾದ ಹೀರಾಮನಿಗೆ ಬಿಟ್ಟುಕೊಟ್ಟನು. ಆಲಯವನ್ನು ಮತ್ತು ಅರಮನೆಯನ್ನು ನಿರ್ಮಿಸಲು ಹೀರಾಮನು ಸಹಾಯ ಮಾಡಿದ್ದರಿಂದ ಸೊಲೊಮೋನನು ಹೀರಾಮನಿಗೆ ಈ ಪಟ್ಟಣಗಳನ್ನು ಕೊಟ್ಟನು. ಸೊಲೊಮೋನನು ಅಪೇಕ್ಷಿಸಿದ ದೇವದಾರು ಮರಗಳನ್ನು, ತುರಾಯಿ ಮರಗಳನ್ನು ಮತ್ತು ಬಂಗಾರವನ್ನು ಹೀರಾಮನು ಕೊಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಸೊಲೊಮೋನನ ಇಷ್ಟದ ಪ್ರಕಾರ ಟೈರಿನ ಅರಸನಾದ ಹೀರಾಮನು ದೇವದಾರು ಮರಗಳನ್ನೂ, ತುರಾಯಿ ಮರಗಳನ್ನೂ, ಚಿನ್ನವನ್ನೂ ಕೊಟ್ಟಿದ್ದರಿಂದ ಸೊಲೊಮೋನನು ಟೈರಿನ ಅರಸನಾದ ಹೀರಾಮನಿಗೆ ಗಲಿಲಾಯ ದೇಶದಲ್ಲಿನ ಇಪ್ಪತ್ತು ಪಟ್ಟಣಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 9:11
9 ತಿಳಿವುಗಳ ಹೋಲಿಕೆ  

ಸೊಲೊಮೋನನು ಹೂರಾಮನಿಂದ ತನಗೆ ದೊರಕಿದ ಪಟ್ಟಣವನ್ನು ಪುನಃ ಕಟ್ಟಿಸಿ ಅವುಗಳಲ್ಲಿ ಇಸ್ರಾಯೇಲರು ವಾಸಿಸುವಂತೆ ಮಾಡಿದನು.


ನಾವಾದರೋ ನಿನಗೆ ಬೇಕಾದ ಎಲ್ಲಾ ಮರಗಳನ್ನು ಲೆಬನೋನಿನಲ್ಲಿ ಕಡಿದು ತೆಪ್ಪಗಳಾಗಿ ಕಟ್ಟಿ, ಸಮುದ್ರ ಮಾರ್ಗವಾಗಿ ಯೊಪ್ಪಕ್ಕೆ ತೆಗೆದುಕೊಂಡು ಬರುತ್ತೇವೆ. ಅಲ್ಲಿಂದ ನೀನು ಅವುಗಳನ್ನು ಯೆರೂಸಲೇಮಿಗೆ ತರಿಸಿಕೊಳ್ಳಬಹುದು” ಎಂಬುದಾಗಿ ಉತ್ತರ ಕೊಟ್ಟನು.


ಇಸ್ರಾಯೇಲ್ಯರು ನಫ್ತಾಲಿ ಕುಲದವರ ಪರ್ವತಪ್ರದೇಶವಾದ ಗಲಿಲಾಯ ಪ್ರಾಂತ್ಯದಲ್ಲಿನ ಕೆದೆಷ್, ಎಫ್ರಾಯೀಮ್ ಪರ್ವತ ಪ್ರದೇಶದಲ್ಲಿನ ಶೆಕೆಮ್ ಹಾಗೂ ಯೆಹೂದ್ಯರ ಬೆಟ್ಟದ ಸೀಮೆಯಲ್ಲಿ ಹೆಬ್ರೋನ್ ಅನ್ನಿಸಿಕೊಳ್ಳುವ ಕಿರ್ಯತರ್ಬ ಎಂಬ ಪಟ್ಟಣಗಳನ್ನು ನೇಮಿಸಿದರು.


ಅರಸನಾದ ಸೊಲೊಮೋನನು ಇಪ್ಪತ್ತು ವರ್ಷಗಳಲ್ಲಿ ಯೆಹೋವನ ಆಲಯವನ್ನೂ ಮತ್ತು ತನ್ನ ಅರಮನೆಯನ್ನೂ ಕಟ್ಟಿಸಿ ಮುಗಿಸಿದನು.


ಹೀರಾಮನು ತೂರಿನಿಂದ ಬಂದು ಆ ಪಟ್ಟಣಗಳನ್ನು ನೋಡಲು ಅವು ಅವನಿಗೆ ಮೆಚ್ಚಿಗೆಯಾಗಲಿಲ್ಲ.


ಹೀರಾಮನು ಸೊಲೊಮೋನನಿಗೆ ನೂರಿಪ್ಪತ್ತು ತಲಾಂತು ಬಂಗಾರವನ್ನು ಕೊಟ್ಟನು.


ಯೆಹೋವನು ಇಂತೆನ್ನುತ್ತಾನೆ: “ತೂರ್ ಪಟ್ಟಣವು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅದು ಒಡಹುಟ್ಟಿದವರ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳದೇ, ಜನರನ್ನು ಗುಂಪುಗುಂಪಾಗಿ ಎದೋಮಿಗೆ ವಶಮಾಡಿಬಿಟ್ಟಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು