Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 9:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀನು ನಿನ್ನ ತಂದೆಯಾದ ದಾವೀದನಂತೆ ಪೂರ್ಣಮನಸ್ಸಿನಿಂದಲೂ, ಯಥಾರ್ಥಚಿತ್ತದಿಂದಲೂ ನನಗೆ ನಡೆದುಕೊಂಡು ನನ್ನ ಆಜ್ಞಾವಿಧಿನ್ಯಾಯಗಳನ್ನು ಕೈಕೊಳ್ಳುತ್ತಾ ಬರುವುದಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನೀನು ನಿನ್ನ ತಂದೆ ದಾವೀದನಂತೆ ಪೂರ್ಣಮನಸ್ಸಿನಿಂದಲೂ ಯಥಾರ್ಥಚಿತ್ತದಿಂದಲೂ ನಡೆದುಕೊಂಡು, ನನ್ನ ಆಜ್ಞಾವಿಧಿನ್ಯಾಯಗಳನ್ನು ಕೈಗೊಳ್ಳುತ್ತಾ ಬಂದರೆ, ಇಸ್ರಯೇಲರಲ್ಲಿ ನಿನ್ನ ಸಿಂಹಾಸನವನ್ನು ಸದಾ ಸ್ಥಿರಪಡಿಸುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನೀನು ನಿನ್ನ ತಂದೆಯಾದ ದಾವೀದನಂತೆ ಪೂರ್ಣಮನಸ್ಸಿನಿಂದಲೂ ಯಥಾರ್ಥಚಿತ್ತದಿಂದಲೂ ನನಗೆ ನಡೆದುಕೊಂಡು ನನ್ನ ಆಜ್ಞಾವಿಧಿನ್ಯಾಯಗಳನ್ನು ಕೈಕೊಳ್ಳುತ್ತಾ ಬರುವದಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಿನ್ನ ತಂದೆಯಾದ ದಾವೀದನು ಸೇವೆಮಾಡಿದಂತೆ ನೀನೂ ನನ್ನ ಸೇವೆಮಾಡಬೇಕು, ಅವನು ನ್ಯಾಯವಂತನಾಗಿದ್ದನು ಮತ್ತು ಯಥಾರ್ಥವಂತನಾಗಿದ್ದನು; ನೀನು ನನ್ನ ನಿಯಮಗಳಿಗೆ ವಿಧೇಯನಾಗಿರಬೇಕು ಮತ್ತು ನಾನು ನಿನಗೆ ಆಜ್ಞಾಪಿಸಿದವುಗಳನ್ನೆಲ್ಲ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ನೀನು ನಿನ್ನ ತಂದೆಯಾದ ದಾವೀದನಂತೆ ಸಂಪೂರ್ಣ ಹೃದಯದಿಂದಲೂ, ಯಥಾರ್ಥತೆಯಿಂದಲೂ ನಾನು ನಿನಗೆ ಆಜ್ಞಾಪಿಸಿದ ನನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ನಿಷ್ಠೆಯಿಂದ ಕೈಗೊಂಡು ನಡೆದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 9:4
31 ತಿಳಿವುಗಳ ಹೋಲಿಕೆ  

ಯೆರೂಸಲೇಮನ್ನೂ ಅವನ ಸಂತಾನವನ್ನೂ ಉಳಿಸಿದನು.


ನೀನು ನಿನ್ನ ತಂದೆಯಾದ ದಾವೀದನಂತೆ ನನ್ನ ಮಾರ್ಗದಲ್ಲಿ ನಡೆದು, ನನ್ನ ಆಜ್ಞಾವಿಧಿಗಳನ್ನು ಕೈಕೊಳ್ಳುವುದಾದರೆ ನಿನ್ನ ಆಯುಷ್ಯವನ್ನು ಹೆಚ್ಚಿಸುವೆನು” ಎಂದನು.


ಅವನ ತಂದೆಯಾದ ದಾವೀದನು ಪೂರ್ಣಮನಸ್ಸಿನಿಂದ ಯೆಹೋವನನ್ನು ಸೇವಿಸಿದಂತೆ ಅವನು ಸೇವಿಸಲಿಲ್ಲ.


ಅವನು ವೃದ್ಧನಾದಾಗ ಇವರು ಅವನ ಹೃದಯವನ್ನು ಅನ್ಯದೇವತೆಗಳ ಕಡೆಗೆ ತಿರುಗಿಸಿದರು. ಈ ಕಾರಣದಿಂದ ಅವನು ತನ್ನ ದೇವರಾದ ಯೆಹೋವನಲ್ಲಿಟ್ಟಿದ್ದ ಪ್ರಾಮಾಣಿಕವಾದ ಭಕ್ತಿಯನ್ನು ಕಳೆದುಕೊಂಡನು. ತನ್ನ ತಂದೆಯಾದ ದಾವೀದನಂತೆ ನಡೆಯಲಿಲ್ಲ.


ಅಬ್ರಾಮನು ತೊಂಭತೊಂಭತ್ತು ವರ್ಷದವನಾದಾಗ ಯೆಹೋವನು ಅವನಿಗೆ ದರ್ಶನದಲ್ಲಿ, “ನಾನು ಸರ್ವಶಕ್ತನಾದ ದೇವರು; ನನ್ನೆದುರಿನಲ್ಲಿ ದೋಷ ಇಲ್ಲದವನಾಗಿ ನಡೆದುಕೊ.


ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ, ನೇಮನಿಷ್ಠೆಗಳನ್ನೂ ಕೈಕೊಂಡು ತಪ್ಪಿಲ್ಲದೆ ನಡೆದುಕೊಳ್ಳುತ್ತಾ ದೇವರ ದೃಷ್ಟಿಯಲ್ಲಿ ನೀತಿವಂತರಾಗಿದ್ದರು.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನೀನು ನನ್ನ ಮಾರ್ಗಗಳಲ್ಲಿ ನಡೆದು, ನಾನು ನಿನಗೆ ವಹಿಸಿದ ಪಾರುಪತ್ಯವನ್ನು ನೆರವೇರಿಸಿದರೆ ನನ್ನ ಆಲಯದ ಮುಖ್ಯಾಧಿಕಾರಿಯಾಗಿ ನನ್ನ ಪ್ರಾಕಾರಗಳನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ನೀಡುವೆ; ನನ್ನ ಸನ್ನಿಧಾನದೂತರ ನಡುವೆ ಪ್ರವೇಶಿಸುವ ಹಕ್ಕನ್ನು ನಿನಗೆ ಕೊಡುವೆನು.


ಸನ್ಮಾರ್ಗಿಗೆ ಉದ್ಧಾರ, ವಕ್ರಮಾರ್ಗಿಗೆ ತಟ್ಟನೆ ಸೋಲು.


ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಳ್ಳುವವನು; ಯೆಹೋವನೇ, ಅವರಿಂದ ನನ್ನನ್ನು ವಿಮೋಚಿಸಿ ಪ್ರಸನ್ನನಾಗಿರು.


ರಾಜ್ಯವನ್ನು ದಾವೀದನ ಕುಟುಂಬದವರಿಂದ ಕಿತ್ತುಕೊಂಡು ನಿನಗೆ ಕೊಟ್ಟೆನು. ಆದರೂ ನೀನು ನನ್ನ ಆಜ್ಞೆಗಳನ್ನು ಕೈಕೊಂಡು ಪೂರ್ಣ ಮನಸ್ಸಿನಿಂದ ನನ್ನನ್ನು ಹಿಂಬಾಲಿಸಿ ನನ್ನನ್ನು ಮೆಚ್ಚಿಸಿದಂಥ ನನ್ನ ಸೇವಕನಾದ ದಾವೀದನಂತೆ ನಡೆಯಲಿಲ್ಲ.


ನನ್ನ ಸೇವಕನಾದ ದಾವೀದನು ನನ್ನ ಆಜ್ಞಾವಿಧಿಗಳನ್ನು ಕೈಕೊಂಡಂತೆ ನೀನೂ ನನ್ನ ಆಜ್ಞೆಗಳನ್ನು ಕೈಕೊಂಡು ನನ್ನ ಮಾರ್ಗದಲ್ಲಿ ನಡೆದು ನನ್ನನ್ನು ಮೆಚ್ಚಿಸುವುದಾದರೆ ನಾನು ನಿನ್ನ ಸಂಗಡ ಇದ್ದು ದಾವೀದನ ಸಂತಾನದಂತೆ ನಿನ್ನ ಸಂತಾನವನ್ನೂ ಸ್ಥಿರಪಡಿಸುವೆನು. ಇಸ್ರಾಯೇಲ್ ರಾಜ್ಯವು ನಿನ್ನ ಪಾಲಾಗುವುದು.


ಯೆಹೋವನೇ, ನನಗೋಸ್ಕರ ನ್ಯಾಯವನ್ನು ನಿರ್ಣಯಿಸು. ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಂಡಿದ್ದೇನೆ. ನಾನು ಕದಲದೆ ಯೆಹೋವನಲ್ಲೇ ಭರವಸವಿಟ್ಟಿದ್ದೇನೆ.


ಅವನು ಸಜ್ಜನನೂ, ನೀತಿವಂತನೂ, ಮನಃಪೂರ್ವಕವಾಗಿ ಸತ್ಯದ ಮಾತುಗಳನ್ನಾಡುವವನೂ ಆಗಿರಬೇಕು.


ಇಸ್ರಾಯೇಲ್ ದೇವರಾದ ಯೆಹೋವನೇ, ನೀನು ನನ್ನ ತಂದೆಯಾದ ದಾವೀದನಿಗೆ, ‘ನಿನ್ನ ಸಂತಾನದವರು ನಿನ್ನಂತೆ ಜಾಗರೂಕತೆಯಿಂದ ನನ್ನ ಮಾರ್ಗದಲ್ಲೇ ನಡೆದುಕೊಳ್ಳುವುದಾದರೆ, ಅವರು ತಪ್ಪದೆ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು’ ಎಂಬುದಾಗಿ ವಾಗ್ದಾನ ಮಾಡಿದಿಯಲ್ಲಾ ಅದನ್ನು ನೆರವೇರಿಸು.


ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದರೆ, ಆತನು ಭೂಮಿಯ ಮೇಲಿರುವ ಎಲ್ಲಾ ಜನಾಂಗಗಳಿಗಿಂತಲೂ ನಿಮ್ಮನ್ನು ಉನ್ನತಸ್ಥಿತಿಗೆ ತರುವನು.


ಸದ್ಧರ್ಮಿಯು ನಿರ್ದೋಷವಾಗಿ ನಡೆಯುವನು, ಅವನು ಗತಿಸಿದ ಮೇಲೆಯೂ ಅವನ ಮಕ್ಕಳು ಭಾಗ್ಯವಂತರು.


ನಿರ್ದೋಷದ ನಡತೆಯವನು ನಿರ್ಭಯವಾಗಿ ನಡೆಯುವನು, ವಕ್ರಮಾರ್ಗಿಯು ಬೈಲಿಗೆ ಬೀಳುವನು.


ಆ ಮನುಷ್ಯನು ಈಕೆ ತನಗೆ ತಂಗಿಯಾಗಬೇಕೆಂದು ಹೇಳಿದನು. ಈಕೆಯೂ ಅವನು ತನಗೆ ಅಣ್ಣನಾಗಬೇಕೆಂದು ಹೇಳಿದಳು. ನಾನು ಯಥಾರ್ಥ ಮನಸ್ಸಿನಿಂದಲೂ, ಶುದ್ಧ ಹಸ್ತದಿಂದಲೂ ಇದನ್ನು ಮಾಡಿದೆನು” ಎಂದನು.


ಸೊಲೊಮೋನನು ಯೆಹೋವನನ್ನು ಪ್ರೀತಿಸಿ, ತನ್ನ ತಂದೆಯಾದ ದಾವೀದನ ವಿಧಿಗಳನ್ನು ಕೈಕೊಳ್ಳುವವನಾಗಿದ್ದರೂ ಆ ಪೂಜಾಸ್ಥಳಗಳಲ್ಲಿಯೇ ಯಜ್ಞವನ್ನರ್ಪಿಸುತ್ತಿದ್ದನು. ಅಲ್ಲಿಯೇ ಧೂಪಹಾಕುತ್ತಿದ್ದನು.


“ನಿನಗೆ ನಂಬಿಗಸ್ತನಾಗಿಯೂ, ನೀತಿಯಿಂದಲೂ ಯಥಾರ್ಥಚಿತ್ತದಿಂದಲೂ ನಡೆದುಕೊಂಡ ನಿನ್ನ ಸೇವಕನೂ, ನನ್ನ ತಂದೆಯೂ ಆದ ದಾವೀದನಿಗೆ ನೀನು ಮಹಾ ಕೃಪೆಯನ್ನು ತೋರಿಸಿದ್ದೀ. ಅವನ ಮೇಲೆ ಬಹಳವಾಗಿ ಕೃಪೆಯಿಟ್ಟು ಈಹೊತ್ತು ಅವನ ಸಿಂಹಾಸನಕ್ಕೆ ಒಬ್ಬ ಮಗನನ್ನು ಅನುಗ್ರಹಿಸಿದ್ದರಲ್ಲಿ ಅದನ್ನು ಸಂಪೂರ್ಣಗೊಳಿಸಿರುವೆ.


“ನೀನು ಈಗ ಒಂದು ಆಲಯವನ್ನು ಕಟ್ಟಿಸುತ್ತಿರುವಿಯಷ್ಟೆ. ನೀನು ನನ್ನ ನಿಯಮ ವಿಧಿಗಳನ್ನು ಅನುಸರಿಸಿ, ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವುದಾದರೆ, ನಾನು ನಿನ್ನನ್ನು ಕುರಿತು ನಿನ್ನ ತಂದೆಯಾದ ದಾವೀದನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು.


“ಯೆಹೋವನೇ, ದಯವಿಟ್ಟು ನಾನು ನಂಬಿಗಸ್ತನಾಗಿಯೂ ನಿನಗೆ, ಪ್ರಾಮಾಣಿಕನಾಗಿಯೂ ಶ್ರದ್ಧೆಯಿಂದಲೂ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದುದನ್ನು ನೆನಪುಮಾಡಿಕೋ” ಎಂದು ಹೇಳಿ ಹಿಜ್ಕೀಯನು ಬಹಳವಾಗಿ ಕಣ್ಣೀರಿಟ್ಟು ಪ್ರಾರ್ಥಿಸಿದನು.


ಇವನು ಅವರನ್ನು ಯಥಾರ್ಥಹೃದಯದಿಂದ ಸಾಕಿ, ತನ್ನ ಹಸ್ತಕೌಶಲ್ಯದಿಂದ ನಡೆಸಿದನು.


ಸನ್ಮಾರ್ಗವನ್ನು ಲಕ್ಷಿಸಿ ನಡೆಯುವೆನು; ನನಗೆ ಯಾವಾಗ ದರ್ಶನಕೊಡುವಿ? ಮನೆಯೊಳಗೂ ಯಥಾರ್ಥ ಹೃದಯದಿಂದಲೇ ನಡೆದುಕೊಳ್ಳುವೆನು.


ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, ಆತನ ಮಾರ್ಗಗಳಲ್ಲಿ ನಡೆಯುವವನು ಧನ್ಯನು.


ಯೆಹೋವನ ಮಾರ್ಗವನ್ನೇ ಅನುಸರಿಸಿದೆನಲ್ಲಾ ನನ್ನ ದೇವರನ್ನು ಬಿಟ್ಟು ದ್ರೋಹ ಮಾಡಲಿಲ್ಲ.


ಇವನು ಇಸ್ರಾಯೇಲರಂತೆ ನಡೆಯದೆ, ತನ್ನ ತಂದೆಯ ದೇವರ ಭಕ್ತನಾಗಿ ಆತನ ಆಜ್ಞೆಗಳನ್ನು ಅನುಸರಿಸಿದನು.


ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು, ಸತ್ಯಪರನಾಗಿಯೇ ನಡೆದರೆ ಇಂಥವನು ಸದ್ಧರ್ಮಿಯಾಗಿರುವುದರಿಂದ ಖಂಡಿತವಾಗಿ ಜೀವಿಸುವನು” ಇದು ಕರ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು