6-7 “ಆದರೆ ನೀನಾಗಲಿ ನಿನ್ನ ಮಕ್ಕಳಾಗಲಿ ನನ್ನನ್ನು ಅನುಸರಿಸುವುದನ್ನು ನಿಲ್ಲಿಸಿದರೆ, ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ನೀನು ಅನುಸರಿಸದಿದ್ದರೆ, ಅನ್ಯದೇವರುಗಳ ಸೇವೆಯನ್ನಾಗಲಿ ಪೂಜೆಯನ್ನಾಗಲಿ ನೀನು ಮಾಡಿದರೆ, ನಾನು ದಯಪಾಲಿಸಿರುವ ದೇಶವನ್ನು ಬಿಟ್ಟುಹೋಗುವಂತೆ ನಾನು ಇಸ್ರೇಲರನ್ನು ಬಲಾತ್ಕರಿಸುತ್ತೇನೆ. ಅನ್ಯಜನರಿಗೆ ಇಸ್ರೇಲರು ಉದಾಹರಣೆಯಾಗುತ್ತಾರೆ. ಅನ್ಯಜನರು ಇಸ್ರೇಲರನ್ನು ಅಪಹಾಸ್ಯ ಮಾಡುತ್ತಾರೆ. ನಾನು ಈ ಆಲಯವನ್ನು ಪವಿತ್ರವನ್ನಾಗಿಸಿದೆ. ಜನರು ನನ್ನನ್ನು ಗೌರವಿಸುವ ಸ್ಥಳ ಅದಾಗಿದೆ. ಆದರೆ ನೀನು ನನ್ನನ್ನು ಅನುಸರಿಸದೆ ಇದ್ದರೆ, ಆಗ ನಾನದನ್ನು ಧೂಳೀಪಟ ಮಾಡುತ್ತೇನೆ.
6 “ಆದರೆ ನೀವಾಗಲಿ, ನಿಮ್ಮ ಮಕ್ಕಳಾಗಲಿ ನಾನು ನಿಮಗೆ ಕೊಟ್ಟಿರುವ ಆಜ್ಞೆಗಳನ್ನೂ, ಕಟ್ಟಳೆಗಳನ್ನೂ ಕೈಗೊಂಡು ನಡೆಯದೆ ನನ್ನಿಂದ ದೂರಹೋಗಿ, ಅನ್ಯದೇವರುಗಳನ್ನು ಸೇವಿಸಿ, ಅವುಗಳಿಗೆ ಅಡ್ಡಬಿದ್ದರೆ,
ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ, ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು. ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ, ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವುದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಕಡೆಗಣಿಸಿದರೆ ಆತನು ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.
ಅವನು ಆಸನನ್ನು ಎದುರುಗೊಳ್ಳುವುದಕ್ಕೆ ಹೋಗಿ ಅವನಿಗೆ, “ಆಸನೇ, ಎಲ್ಲಾ ಯೆಹೂದ ಬೆನ್ಯಾಮೀನ ಕುಲಗಳವರೇ, ಕಿವಿಗೊಡಿರಿ, ನೀವು ಯೆಹೋವನನ್ನು ಹೊಂದಿಕೊಂಡಿರುವ ತನಕ ಆತನೂ ನಿಮ್ಮೊಂದಿಗಿರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು; ಆತನನ್ನು ಬಿಟ್ಟರೆ ಆತನೂ ನಿಮ್ಮನ್ನು ಬಿಟ್ಟುಬಿಡುವನು.
ಇಸ್ರಾಯೇಲಿನ ದೇವರಾದ ಯೆಹೋವನು ಹೇಳುವುದೇನೆಂದರೆ, ‘ನಿನ್ನ ಗೋತ್ರದವರೂ, ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬೇಕೆಂದು ವಾಗ್ದಾನಮಾಡಿದ್ದೆನು. ಆದರೆ ಈಗ ನಾನು ತಿಳಿಸುವುದೇನಂದರೆ, ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.
ಏಕೆಂದರೆ ಅವರು ತಮ್ಮ ದೇವರಾದ ಯೆಹೋವನ ಮಾತನ್ನು ಕೇಳದೆ ಆತನ ಒಡಂಬಡಿಕೆಯನ್ನು ಮೀರಿ, ಆತನ ಸೇವಕನಾದ ಮೋಶೆಯ ಆಜ್ಞೆಗಳಿಗೆ ವಿಧೇಯರಾಗಿ ನಡೆಯಲಿಲ್ಲ. ದೇವರ ಆಜ್ಞೆಗಳಿಗೆ ಕಿವಿಗೊಡದೇ ಅವುಗಳಂತೆ ನಡೆಯದೇ ಇದ್ದುದರಿಂದಲೇ ಹೀಗಾಯಿತು.
ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಹಾಕಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ಕೋಪಗೊಳ್ಳುವಂತೆ ಮಾಡಿರುವುದರಿಂದ ನನ್ನ ಕೋಪಾಗ್ನಿಯು ಈ ದೇಶದ ಮೇಲೆ ಉರಿಯಹತ್ತಿದೆ, ಅದು ಆರಿಹೋಗುವುದೇ ಇಲ್ಲ’ ಎನ್ನುತ್ತಾನೆ.