Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 9:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಉನ್ನತವಾದ ಈ ಮಂದಿರದ ಮಾರ್ಗವಾಗಿ ಹಾದುಹೋಗುವವರು ಅದನ್ನು ನೋಡಿ ವಿಸ್ಮಿತರಾಗಿ, ‘ಅಬ್ಬಬ್ಬಾ ಇದೇನು, ಯೆಹೋವನು ಈ ದೇಶವನ್ನು ಮತ್ತು ಈ ಆಲಯವನ್ನೂ ಹೀಗೇಕೆ ಮಾಡಿದನು?’ ಎಂದು ಕೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಈ ಮಹಾಮಂದಿರದ ಮಾರ್ಗವಾಗಿ ಹಾದುಹೋಗುವವರು ಅದನ್ನು ನೋಡಿ ಚಕಿತರಾಗಿ, ‘ಅಬ್ಬಬ್ಬಾ, ಇದೇನು! ಸರ್ವೇಶ್ವರ ನಾಡಿಗೂ ಈ ಗುಡಿಗೂ ಹೀಗೇಕೆ ಮಾಡಿದರು?’ ಎಂದು ಕೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಉನ್ನತವಾದ ಈ ಮಂದಿರದ ಮಾರ್ಗವಾಗಿ ಹಾದುಹೋಗುವವರು ಅದನ್ನು ನೋಡಿ ವಿಸ್ಮಿತರಾಗಿ - ಅಬ್ಬಬ್ಬಾ, ಇದೇನು! ಯೆಹೋವನು ಈ ದೇಶವನ್ನೂ ಈ ಆಲಯವನ್ನೂ ಹೀಗೇಕೆ ಮಾಡಿದನು ಎಂದು ಕೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಈ ಆಲಯವನ್ನು ನಾಶಗೊಳಿಸುತ್ತೇನೆ. ಇದನ್ನು ನೋಡುವ ಪ್ರತಿಯೊಬ್ಬರೂ ವಿಸ್ಮಿತರಾಗುವರು. ‘ಈ ದೇಶಕ್ಕೂ ಈ ಆಲಯಕ್ಕೂ ಇಂತಹ ಭೀಕರ ಕಾರ್ಯವನ್ನು ಯೆಹೋವನು ಏಕೆ ಮಾಡಿದನು?’ ಎಂದು ಜನರು ಕೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇದಲ್ಲದೆ ಉನ್ನತವಾಗಿರುವ ಈ ಆಲಯದ ಮಾರ್ಗವಾಗಿ ಹೋಗುವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು, ‘ಯೆಹೋವ ದೇವರು ಈ ದೇಶಕ್ಕೂ, ಈ ಆಲಯಕ್ಕೂ ಹೀಗೆ ಏಕೆ ಮಾಡಿದರು?’ ಎಂದು ಕೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 9:8
22 ತಿಳಿವುಗಳ ಹೋಲಿಕೆ  

ಉನ್ನತವಾದ ಮಂದಿರದ ಈ ಮಾರ್ಗವಾಗಿ ಹೋಗುವವರು ಅದನ್ನು ನೋಡಿ ಬೆರಗಾಗಿ, ‘ಯೆಹೋವನು ಈ ದೇಶವನ್ನೂ ಆಲಯವನ್ನೂ ಹೀಗೇಕೆ ಮಾಡಿದನು?’ ಎಂದು ಕೇಳುವರು.


ಕೊನ್ಯನೆಂಬ ಈ ಮನುಷ್ಯನು ಬಿಸಾಡಿದ ಒಡಕು ಕುಡಿಕೆಯೋ? ಯಾರಿಗೂ ಇಷ್ಟವಿಲ್ಲದ ಮಣ್ಣಿನ ಮಡಿಕೆಯೋ? ಎಂಬಂತೆ, ಅವನೂ ಅವನ ಸಂತತಿಯವರೂ ಏಕೆ ಬಿಸಾಡಲ್ಪಟ್ಟಿದ್ದಾರೆ? ನೋಡದ ದೇಶಕ್ಕೆ ಏಕೆ ಎಸೆಯಲ್ಪಟ್ಟಿದ್ದಾರೆ?


ನಾನು ಈ ಪಟ್ಟಣವನ್ನು ಬೆರಗಿನ ಸಿಳ್ಳಿಗೆ ಗುರಿಮಾಡುವೆನು; ಹಾದುಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.


ಆಹಾ, ನಮ್ಮ ದೇವರು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿ ನಮ್ಮನ್ನೂ, ನಮ್ಮನ್ನಾಳುವ ಅಧಿಪತಿಗಳನ್ನೂ ಕುರಿತು ಗದರಿಸಿ ಹೇಳಿದ ಮಾತುಗಳನ್ನು ನೆರವೇರಿಸಿದ್ದಾನೆ; ಯೆರೂಸಲೇಮಿಗೆ ಆದಂತಹ ಕೇಡು ಭೂಮಂಡಲದಲ್ಲಿ ಎಲ್ಲಿಯೂ ಎಂದೂ ಆಗಲಿಲ್ಲವಲ್ಲಾ.


ಯೆಹೋವನ ರೋಷದ ದೆಸೆಯಿಂದ ಅದು ನಿರ್ಜನವಾಗಿ ತೀರಾ ಹಾಳುಬೀಳುವುದು; ಬಾಬೆಲನ್ನು ಹಾದು ಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳನ್ನು ಕಂಡು ಬೆರಗಾಗಿ ಪರಿಹಾಸ್ಯ ಮಾಡುವರು.


ಎದೋಮು ಪರಿಹಾಸ್ಯಕ್ಕೆ ಗುರಿಯಾಗುವುದು; ಹಾದುಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳಿಗೆ ಬೆರಗಾಗಿ ಸಿಳ್ಳುಹಾಕುವರು.


ನಮ್ಮ ಪೂರ್ವಿಕರು ನಿನ್ನನ್ನು ಕೀರ್ತಿಸುತ್ತಿದ್ದ ಸುಂದರ ಪವಿತ್ರಾಲಯವನ್ನು ಬೆಂಕಿಯು ಸುಟ್ಟುಬಿಟ್ಟಿದೆ, ನಮ್ಮ ಅಮೂಲ್ಯ ವಸ್ತುಗಳೆಲ್ಲಾ ನಾಶವಾಗಿವೆ.


ಯೆಹೋವನು ನಿಮ್ಮನ್ನು ನಡೆಸುವ ಜನಾಂಗಗಳಲ್ಲಿ ನೀವು ಭೀಕರತೆಗೂ, ಗಾದೆಗೂ ಮತ್ತು ಪರಿಹಾಸ್ಯಕ್ಕೂ ಗುರಿಯಾಗುವಿರಿ.


ಅವನು ಯೆಹೋವನ ಆಲಯವನ್ನೂ, ಅರಸನ ಅರಮನೆಯನ್ನೂ ಯೆರೂಸಲೇಮಿನ ಎಲ್ಲಾ ದೊಡ್ಡ ಮನೆಗಳನ್ನೂ ಹಾಗೂ ಪಟ್ಟಣದ ಮುಖ್ಯ ಕಟ್ಟಡಗಳನ್ನೂ ಸುಟ್ಟುಬಿಟ್ಟನು.


ಅವನ ಜನರು ಯೆರೂಸಲೇಮಿನ ಪೌಳಿಗೋಡೆಗಳನ್ನು ಕೆಡವಿದರು. ಅದರ ಎಲ್ಲಾ ರಾಜಮಂದಿರಗಳನ್ನೂ, ದೇವಾಲಯವನ್ನೂ ಸುಟ್ಟು ನೆಲಸಮ ಮಾಡಿ; ಅಮೂಲ್ಯವಾದ ವಸ್ತುಗಳನ್ನು ನಾಶಮಾಡಿದರು.


“ನಮ್ಮ ದೇವರಾದ ಯೆಹೋವನು ಇವುಗಳನ್ನೆಲ್ಲಾ ನಮಗೆ ಏಕೆ ಮಾಡಿದ್ದಾನೆ?” ಎಂದು ನಿನ್ನ ಜನರು ಅನ್ನುವಾಗ ನೀನು ಅವರಿಗೆ, “ನೀವು ಯೆಹೋವನನ್ನು ತೊರೆದು, ಸ್ವದೇಶದಲ್ಲಿ ಅನ್ಯದೇವತೆಗಳನ್ನು ಆರಾಧಿಸಿದ ಹಾಗೆ ಪರದೇಶದಲ್ಲಿ ಅನ್ಯರನ್ನು ಆರಾಧಿಸುವಿರಿ” ಎಂದು ಹೇಳು.


ಈ ಮಾತುಗಳನ್ನೆಲ್ಲಾ ಈ ಜನರಿಗೆ ತಿಳಿಸುತ್ತಿರುವ ನಿನಗೆ ಪ್ರತ್ಯುತ್ತರವಾಗಿ ಅವರು, ‘ಈ ಮಹಾವಿಪತ್ತು ನಮಗೆ ಸಂಭವಿಸಬೇಕೆಂದು ಯೆಹೋವನು ಏಕೆ ವಿಧಿಸಿದ್ದಾನೆ? ನಮ್ಮ ಅಪರಾಧವೇನು? ನಮ್ಮ ದೇವರಾದ ಯೆಹೋವನ ವಿರುದ್ಧವಾಗಿ ನಾವು ಮಾಡಿದ ಪಾಪವೇನು?’ ಎಂದು ಕೇಳುವಾಗ,


ಆದಕಾರಣ ಬೆರಗಿನ ಸಿಳ್ಳಿಗೆ ಅವರ ದೇಶವು ನಿತ್ಯ ಗುರಿಯಾಗುವುದು; ಹಾದುಹೋಗುವವರೆಲ್ಲರೂ ಬೆರಗಾಗಿ ತಲೆದೂಗುವರು.


ನಾನು ಉತ್ತರ ದಿಕ್ಕಿನ ಜನಾಂಗಗಳನ್ನೆಲ್ಲಾ ಕರೆಯಿಸಿ, ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡುವೆನು. ಇವರೆಲ್ಲರನ್ನು ಈ ದೇಶದ ಮೇಲೂ, ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ, ಅವುಗಳನ್ನು ತುಂಬಾ ಹಾಳುಗೈದು, ಪರಿಹಾಸ್ಯಕ್ಕೂ, ನಿತ್ಯನಾಶನಕ್ಕೂ ಈಡುಮಾಡುವೆನು.


ಪ್ರವಾಸಿಗಳಾಗಿ ನೀವು ಬಂದಿರುವ ಐಗುಪ್ತ ದೇಶದಲ್ಲಿ ಅನ್ಯದೇವತೆಗಳಿಗೆ ಧೂಪಹಾಕುವ ದುಷ್ಕೃತ್ಯವನ್ನು ನಡೆಸುತ್ತಾ ನನ್ನನ್ನು ಕೆಣಕುವುದರಿಂದ ನೀವು ನಿರ್ಮೂಲರಾಗಿ ಸಕಲ ಭೂರಾಜ್ಯಗಳ ಶಾಪ ಮತ್ತು ದೂಷಣೆಗಳಿಗೆ ಗುರಿಯಾಗುವಿರಿ.


ಅವನು ಯೆಹೋವನ ಆಲಯವನ್ನೂ, ಅರಮನೆಯನ್ನೂ ಮತ್ತು ಯೆರೂಸಲೇಮಿನ ಎಲ್ಲಾ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.


ಎಲ್ಲಾ ಜನಾಂಗಗಳವರೂ ನಿಮ್ಮ ದೇಶವು ಯಾವ ವ್ಯವಸಾಯವೂ ಇಲ್ಲದೆ, ಹುಲ್ಲಾದರೂ ಬೆಳೆಯದೆ, ಹಾಳುಬಿದ್ದಿರುವುದನ್ನು ಕಾಣುವರು. ಯೆಹೋವನು ಕೋಪ ಮತ್ತು ರೋಷದಿಂದ ಕೆಡವಿದ ಸೊದೋಮ್ ಮತ್ತು ಗೊಮೋರ, ಅದ್ಮಾ ಮತ್ತು ಚೆಬೋಯಿಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟು ಹೋಗಿ, ಎಲ್ಲಾ ಕಡೆಗಳಲ್ಲಿಯೂ ಗಂಧಕ ಉಪ್ಪುಗಳಿಂದ ತುಂಬಿರುವುದನ್ನು ಕಂಡು,


ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಹಾಕಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ಕೋಪಗೊಳ್ಳುವಂತೆ ಮಾಡಿರುವುದರಿಂದ ನನ್ನ ಕೋಪಾಗ್ನಿಯು ಈ ದೇಶದ ಮೇಲೆ ಉರಿಯಹತ್ತಿದೆ, ಅದು ಆರಿಹೋಗುವುದೇ ಇಲ್ಲ’ ಎನ್ನುತ್ತಾನೆ.


ಆದುದರಿಂದ ಯೆಹೋವನು ಯೆಹೂದ ದೇಶದ ಮೇಲೆಯೂ ಯೆರೂಸಲೇಮಿನ ಮೇಲೆಯೂ, ಕೋಪವುಳ್ಳವನಾಗಿ ಅವುಗಳನ್ನು ಭಯಭೀತಿಗೂ ನಿಂದೆಗೂ, ಪರಿಹಾಸ್ಯಗಳಿಗೂ ಗುರಿಮಾಡಿದ್ದಾನೆ; ಇದಕ್ಕೆ ನೀವೇ ಸಾಕ್ಷಿಗಳು.


ಹಾದುಹೋಗುವವರೆಲ್ಲರೂ ನಿನ್ನನ್ನು ನೋಡಿ ಚಪ್ಪಾಳೆಹೊಡೆಯುತ್ತಾರೆ, ಯೆರೂಸಲೇಮ್ ನಗರಿಯನ್ನು ಕಂಡು, “ಆಹಾ, ಪರಿಪೂರ್ಣಸುಂದರಿ, ಸಮಸ್ತಲೋಕ ಸಂತೋಷಿಣಿ ಎನ್ನಿಸಿಕೊಳ್ಳುತ್ತಿದ್ದ ಪುರಿಯು ಇದೇ ಏನು? ಛೀ ಛೀ” ಎಂದು ತಲೆಯಾಡಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು