Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 1:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಪ್ರಿಯರೇ, ನೀವೆಲ್ಲರೂ ಹೊಂದಾಣಿಕೆಯುಳ್ಳವರಾಗಿರಬೇಕೆಂದು, ನಿಮ್ಮಲ್ಲಿ ಭಿನ್ನತೆಗಳಿರಬಾರದೆಂದು, ನೀವು ಒಂದೇ ಮನಸ್ಸೂ ಮತ್ತು ಒಂದೇ ಉದ್ದೇಶವುಳ್ಳವರಾಗಿದ್ದು ಐಕ್ಯತೆಯಿಂದಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾನು ನಿಮ್ಮನ್ನು ಬುದ್ಧಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲಿ ನಾನು ಕೇಳಿಕೊಳ್ಳುವುದೇನೆಂದರೆ: ವಾದವಿವಾದವಿಲ್ಲದೆ, ಭಿನ್ನಭೇದಗಳಿಲ್ಲದೆ ಒಂದೇ ಮನಸ್ಸಿನಿಂದಲೂ ಒಂದೇ ಉದ್ದೇಶದಿಂದಲೂ ನೀವು ಐಕಮತ್ಯದಿಂದ ಬಾಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಸಹೋದರರೇ, ನಿಮ್ಮೆಲ್ಲರ ಮಾತು ಒಂದೇ ಆಗಿರಬೇಕು; ನಿಮ್ಮಲ್ಲಿ ಭೇದಗಳಿರಬಾರದು, ನೀವು ಒಂದೇ ಮನಸ್ಸೂ ಒಂದೇ ಅಭಿಪ್ರಾಯವೂ ಉಳ್ಳವರಾಗಿದ್ದು ಹೊಂದಿಕೆಯಿಂದಿರಬೇಕು ಎಂಬದಾಗಿ ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಸಹೋದರ ಸಹೋದರಿಯರೇ, ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾನು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ವಾದವಿವಾದವಿಲ್ಲದೆ ಭಿನ್ನಭೇದಗಳಿಲ್ಲದೆ ಒಂದೇ ಮನಸ್ಸಿನಿಂದಲೂ ಒಂದೇ ಉದ್ದೇಶದಿಂದಲೂ ನೀವು ಐಕ್ಯಮತ್ಯದಿಂದ ಬಾಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಪ್ರಿಯರೇ, ನೀವೆಲ್ಲರೂ ಒಂದೇ ಅಭಿಪ್ರಾಯವುಳ್ಳವರಾಗಿದ್ದು, ನಿಮ್ಮೊಳಗೆ ಗುಂಪುಗಾರಿಕೆ, ಪಕ್ಷಬೇಧಗಳಿರದೆ, ಒಂದೇ ಮನಸ್ಸು ಮತ್ತು ಒಂದೇ ಆಲೋಚನೆಗಳಲ್ಲಿ ಪರಿಪೂರ್ಣವಾದ ಅನ್ಯೋನ್ಯತೆಯಲ್ಲಿರಬೇಕೆಂದು ನಾನು ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಭಾವಾನು ಅನಿ ಭೆನಿಯಾನು ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ನಾವಾನ್ ಮಿಯಾ ತುಮ್ಚ್ಯಾಕ್ಡೆ ಮಾಗ್ತಾ; ತುಮಿ ಎಕುಚ್ ಮನಾಚೆ ಹೊವ್ನ್ ರ್‍ಹಾವ್ಚೆ ತುಮ್ಚ್ಯಾ ಮದ್ದಿ ಭಾಗ್ ರ್‍ಹಾವ್ಚೆ ನ್ಹಯ್, ತುಮಿ ಸಗ್ಳೆ ಜಾನಾ ಎಕುಚ್ ಮನಾಚೆ ಅನಿ ಎಕುಚ್ ಚಿಂತಾಪಾಚೆ ಹೊವ್ನ್ ರ್‍ಹಾವ್ಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 1:10
44 ತಿಳಿವುಗಳ ಹೋಲಿಕೆ  

ನಿಮ್ಮ ನಿಮ್ಮೊಳಗೆ ಏಕಮನಸ್ಸುಳ್ಳವರಾಗಿರಿ ದೊಡ್ಡಸ್ತಿಕೆಯ ಮೇಲೆ ಮನಸ್ಸಿಡದೆ ದೀನರನ್ನು ಸ್ವೀಕರಿಸಿರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ.


ಕಡೆಯದಾಗಿ ಸಹೋದರರೇ, ಸಂತೋಷಪಡಿರಿ! ಕ್ರಮಪಡಿಸಿಕೊಳ್ಳಿರಿ. ಧೈರ್ಯವುಳ್ಳವರಾಗಿರಿ, ಏಕ ಮನಸ್ಸುಳ್ಳವರಾಗಿರಿ, ಸಮಾಧಾನದಿಂದ ಇರಿ; ಆಗ ಪ್ರೀತಿಸ್ವರೂಪನೂ, ಶಾಂತಿದಾಯಕನೂ ಆದ ದೇವರು ನಿಮ್ಮ ಸಂಗಡ ಇರುವನು.


ಆಹಾ, ಸಹೋದರರು ಒಂದಾಗಿರುವುದು, ಎಷ್ಟೋ ಒಳ್ಳೆಯದು, ಎಷ್ಟೋ ರಮ್ಯವಾದದ್ದು!


ಹೇಗೆಂದರೆ ಮೊದಲನೆಯದಾಗಿ ನೀವು ಸಭೆಯಾಗಿ ಸೇರಿಬರುವಾಗ ನಿಮ್ಮಲ್ಲಿ ಭಿನ್ನತೆ, ಭೇದಗಳು ಉಂಟಾಗುತ್ತವೆಂದು ಕೇಳಿದ್ದೇನೆ. ಮತ್ತು ಇದು ನಿಜವೆಂದು ಸ್ವಲ್ಪ ಮಟ್ಟಿಗೆ ನಂಬುತ್ತೇನೆ.


ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಾದರೂ ಹೆದರದೆ ಏಕಮನಸ್ಸಿನಿಂದ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೋಸ್ಕರ ಐಕಮತ್ಯದಿಂದ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.


ಪ್ರಿಯರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ, ವಿಘ್ನಗಳನ್ನೂ ನಿಮ್ಮಲ್ಲಿ ಉಂಟುಮಾಡುವವರನ್ನು ಗುರುತಿಸಿ ಅವರನ್ನು ಬಿಟ್ಟು ದೂರ ಹೋಗಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಆದ್ದರಿಂದ ನಾವು ಕ್ರಿಸ್ತನ ರಾಯಭಾರಿಗಳು. ದೇವರೇ ನಮ್ಮ ಮುಖಾಂತರ ಕರೆನೀಡುತ್ತಿದ್ದಾನೆ. ದೇವರೊಡನೆ ನೀವು ಸಂಧಾನಮಾಡಿಕೊಳ್ಳಿರೆಂದು ಕ್ರಿಸ್ತನ ಹೆಸರಿನಲ್ಲಿ ನಾವು ನಿಮ್ಮನ್ನು ವಿನಂತಿಸುತೇವೆ.


ಆದ್ದರಿಂದ ನನ್ನನ್ನು ಅನುಸರಿಸುವವರಾಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಕ್ರಿಸ್ತನನ್ನು ನಂಬಿದವರ ಹೃದಯವೂ, ಪ್ರಾಣವೂ ಒಂದೇ ಆಗಿತ್ತು. ಯಾರೂ ತಮ್ಮ ಸ್ವತ್ತನ್ನು ತನ್ನದು ಎಂದು ಭಾವಿಸದೆ ಎಲ್ಲರೂ ಅದನ್ನು ಹುದುವಾಗಿ ಹಂಚಿಕೊಳ್ಳುತ್ತಿದ್ದರು.


ನಾನು ಅವರ ಹಿತವನ್ನೂ, ಅವರ ತರುವಾಯ ಅವರ ಮಕ್ಕಳ ಹಿತವನ್ನೂ ಬಯಸುತ್ತಾ ಅವರು ಸದಾ ನನ್ನಲ್ಲಿ ಭಯಭಕ್ತಿಯುಳ್ಳವರಾಗಿರುವಂತೆ ಎಲ್ಲರಿಗೂ ಒಂದೇ ಮನಸ್ಸನ್ನೂ, ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು.


ನಾನು ಇವರಲ್ಲಿಯೂ ನೀನು ನನ್ನಲ್ಲಿಯೂ ಇರುವಂತೆ ಇವರೂ ಐಕ್ಯತೆಯಲ್ಲಿ ಪರಿಪೂರ್ಣರಾಗಿರಲಿ. ಹೀಗೆ ನೀನು ನನ್ನನ್ನು ಕಳುಹಿಸಿದ್ದೀ, ಎಂದೂ ಮತ್ತು ನೀನು ನನ್ನನ್ನು ಪ್ರೀತಿಸಿದಂತೆ, ಇವರನ್ನೂ ನೀನು ಪ್ರೀತಿಸುತ್ತೀ ಎಂದು ಲೋಕವು ತಿಳಿದುಕೊಳ್ಳುವುದು.


ಅವರನ್ನು ಲಕ್ಷಿಸಿ ಅವರ ಕೆಲಸದ ನಿಮಿತ್ತ ಅವರನ್ನು ಪ್ರೀತಿಯಿಂದ ಬಹಳವಾಗಿ ಗೌರವಿಸಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ. ನಿಮ್ಮ ನಿಮ್ಮೊಳಗೆ ಸಮಾಧಾನವಾಗಿರಿ.


ಆದ್ದರಿಂದ ಸಹೋದರರೇ, ದೇವರ ಕನಿಕರವನ್ನು ನೆನಪಿಸುತ್ತಾ, ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು.


ಈ ಮಾತುಗಳ ದೆಸೆಯಿಂದ ಯೆಹೂದ್ಯರ ಮಧ್ಯದಲ್ಲಿ ಪುನಃ ಬೇಧ ಉಂಟಾಯಿತು.


ಪ್ರಿಯರೇ, ಪ್ರವಾಸಿಗಳು ಮತ್ತು ಪರದೇಶಸ್ಥರು ಆಗಿರುವ ನೀವು ನಿಮ್ಮ ಆತ್ಮದ ವಿರುದ್ಧವಾಗಿ ಯುದ್ಧ ಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ನಾನು ದೇವರ ಸಮಕ್ಷಮದಲ್ಲಿ ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವುದಕ್ಕೆ ಬರುವ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯನ್ನೂ, ಆತನ ರಾಜ್ಯವನ್ನೂ ಮುಂದಿಟ್ಟು ನಿನಗೆ ಖಂಡಿತವಾಗಿ ಹೇಳುವುದೇನಂದರೆ,


ಅಂತೂ, ನಾವು ಯಾವ ಸೂತ್ರವನ್ನನುಸರಿಸಿ ಇಲ್ಲಿಯ ವರೆಗೆ ಬಂದೆವೋ ಅದನ್ನೇ ಅನುಸರಿಸಿ ನಡೆಯೋಣ.


ಪೌಲನು ನಮ್ಮೆದುರಿನಲ್ಲಿರುವಾಗ ದೀನನಾಗಿ ನಡೆದುಕೊಳ್ಳುವನೂ ದೂರದಲ್ಲಿರುವಾಗ ನಮ್ಮನ್ನು ಕುರಿತು ದಿಟ್ಟತನ ತೋರಿಸುವವನೂ ಆಗಿದ್ದಾನೆ ಎಂದು ಹೇಳಲ್ಪಡುವ ಆ ಪೌಲನೆಂಬ ನಾನು ಕ್ರಿಸ್ತನ ಶಾಂತ ಮನಸ್ಸನ್ನೂ ಸಾತ್ವಿಕತ್ವವನ್ನೂ ನೆನಪಿಗೆ ತಂದುಕೊಂಡು ನಿಮಗೆ ಖಂಡಿತವಾಗಿ ಹೇಳುವುದೇನಂದರೆ,


ಹೀಗೆ ಆತನ ನಿಮಿತ್ತವಾಗಿ ಜನರಲ್ಲಿ ಭೇದ ಉಂಟಾಯಿತು.


“ಯಾರೂ ಹೊಸ ಬಟ್ಟೆಯ ತುಂಡನ್ನು ಹಳೆಯ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ. ಹಚ್ಚಿದರೆ ಆ ಹೊಸ ತ್ಯಾಪೆಯು ಹಳೆಯ ವಸ್ತ್ರವನ್ನು ಹಿಂಜುವುದರಿಂದ ಹರಕು ಹೆಚ್ಚಾಗುತ್ತದೆ.


ಆ ತ್ಯಾಪೆಯು ಹಳೇ ವಸ್ತ್ರವನ್ನು ಹಿಂಜುವುದರಿಂದ ಹರಕು ಹೆಚ್ಚಾಗುವುದು.


ನೀನು ವಿಚಾರಿಸುವುದಕ್ಕೆ ಮೊದಲೇ ತಪ್ಪುಹೊರಿಸದೆಯೂ, ಪಕ್ಷಪಾತದಿಂದ ಏನೂ ಮಾಡದೆಯೂ, ನಾನು ಹೇಳಿರುವ ಮಾತುಗಳ ಪ್ರಕಾರವೇ ನಡೆಯಬೇಕೆಂದು ದೇವರ ಮುಂದೆಯೂ, ಕ್ರಿಸ್ತ ಯೇಸುವಿನ ಮುಂದೆಯೂ, ಆರಿಸಲ್ಪಟ್ಟಿರುವ ದೇವದೂತರ ಮುಂದೆಯೂ ಖಂಡಿತವಾಗಿ ಹೇಳುತ್ತೇನೆ.


ಸಹೋದರರೇ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಆಗಮನದ ವಿಷಯವಾಗಿಯೂ ಮತ್ತು ನಾವು ಆತನ ಎದುರಿನಲ್ಲಿ ಕೂಡಿಕೊಳ್ಳುವುದರ ವಿಷಯವಾಗಿಯೂ ನಿಮ್ಮನ್ನು ವಿನಂತಿಸುವುದೇನಂದರೆ,


ಸಹೋದರರೇ, ನಾನು ನಿಮ್ಮಂತೆ ಆದಹಾಗೆ ನೀವು ನನ್ನಂತೆ ಹಾಗೆ ಆಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ನನಗೇನೂ ಅನ್ಯಾಯ ಮಾಡಲಿಲ್ಲ.


ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದೆನೆಂದರೆ; ದೇವರಿಂದ ಪಡೆದ ಕೃಪೆಯನ್ನು ವ್ಯರ್ಥಮಾಡಬೇಡಿರಿ.


ಸಹೋದರರೇ, ನೀವು ನನಗೋಸ್ಕರ ದೇವರ ಮುಂದೆ ಮಾಡುವ ಪ್ರಾರ್ಥನೆಗಳಲ್ಲಿ ನನ್ನೊಂದಿಗೆ ಬಲವಾಗಿ ವಿಜ್ಞಾಪಿಸಿಕೊಳ್ಳಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ನಿಮಿತ್ತವಾಗಿಯೂ ಪವಿತ್ರಾತ್ಮನಿಂದಾಗುವ ಪ್ರೀತಿಯ ನಿಮಿತ್ತವಾಗಿಯೂ ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಫರಿಸಾಯರಲ್ಲಿ ಕೆಲವರು, “ಈ ಮನುಷ್ಯನು ದೇವರಿಂದ ಬಂದವನಲ್ಲ, ಏಕೆಂದರೆ ಆತನು ಸಬ್ಬತ್ ದಿನವನ್ನು ಆಚರಿಸುವುದಿಲ್ಲ” ಎಂದರು. ಇನ್ನು ಕೆಲವರು, “ಇಂಥಾ ಮಹತ್ಕಾರ್ಯಗಳನ್ನು ಮಾಡುವುದು ಪಾಪಿಯಾದ ಮನುಷ್ಯನಿಂದ ಹೇಗಾದೀತು?” ಎಂದರು. ಹೀಗೆ ಅವರಲ್ಲಿ ಭೇದವುಂಟಾಯಿತು.


ಪ್ರಿಯರೇ, ನನ್ನ ಕೆಲಸವು ಇತರ ಅನ್ಯಜನಗಳಲ್ಲಿ ಸಫಲವಾದಂತೆ ನಿಮ್ಮಲ್ಲಿಯೂ ಸಫಲವಾದೀತೆಂದು ನಿಮ್ಮ ಬಳಿಗೆ ಬರುವುದಕ್ಕೆ ಅನೇಕಾವರ್ತಿ ಮನಸ್ಸು ಮಾಡಿಕೊಂಡಿದ್ದಾಗ್ಯೂ ಇಂದಿನವರೆಗೂ ಅಡ್ಡಿಯಾಯಿತೆಂಬುದು ನೀವು ತಿಳಿದಿರಬೇಕೆಂಬುದು ನನ್ನ ಅಪೇಕ್ಷೆ.


ಯಾಕೆಂದರೆ ನಿಮ್ಮಲ್ಲಿ ಭಿನ್ನಾಭಿಪ್ರಾಯಗಳು ಜಗಳಗಳುಂಟೆಂದು ನಿಮ್ಮ ಬಗ್ಗೆ ಖ್ಲೋಯೆಯ ಜನರಿಂದ ನನಗೆ ತಿಳಿದು ಬಂದಿತು.


ಯಾಕೆಂದರೆ ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ನಿಮ್ಮಲ್ಲಿ ಹೊಟ್ಟೆಕಿಚ್ಚು ಜಗಳಗಳು ಇರುವಲ್ಲಿ, ನೀವು ಪ್ರಾಪಂಚಿಕರಾಗಿದ್ದು ಕೇವಲ ಬೇರೆ ಮನುಷ್ಯರಂತೆ ನಡೆಯುತ್ತೀರಲ್ಲವೆ?


ನಾವು ಬಲಹೀನರಾಗಿದ್ದರೂ ನೀವು ಬಲಿಷ್ಠರಾಗಿದ್ದ ಪಕ್ಷಕ್ಕೆ ಸಂತೋಷಪಡುತ್ತೇವೆ; ಇದಲ್ಲದೆ ನೀವು ಪೂರ್ಣ ಕ್ರಮಕ್ಕೆ ಬರಬೇಕೆಂದು ಪ್ರಾರ್ಥಿಸುತ್ತೇವೆ.


ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು.


ಇವರು ಗಿಲ್ಯಾದನಲ್ಲಿದ್ದ ರೂಬೇನ್ಯರ, ಗಾದ್ಯರ ಹಾಗೂ ಮನಸ್ಸೆ ಕುಲದ ಅರ್ಧಜನರ ಬಳಿಗೆ ಬಂದು,


ಯಾವುದೇ ಒಂದು ರಾಜ್ಯವು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ರಾಜ್ಯವು ಉಳಿಯದು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು