Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 1:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 “ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು, ವಿವೇಕಿಗಳ ವಿವೇಕವನ್ನು ವಿಫಲಗೊಳಿಸುವೆನು.” ಎಂದು ಬರೆಯಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 “ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು ಜಾಣರ ಜಾಣತನಕ್ಕೆ ಭಂಗತರುವೆನು” ಎಂದು ಪವಿತ್ರಗ್ರಂಥದಲ್ಲಿ ಇದೆಯಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು, ವಿವೇಕಿಗಳ ವಿವೇಕವನ್ನು ನಿರಾಕರಿಸುವೆನು ಎಂಬದಾಗಿ ಶಾಸ್ತ್ರೋಕ್ತಿಯುಂಟಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಪವಿತ್ರ ಗ್ರಂಥದಲ್ಲಿ ಹೀಗೆ ಬರೆಯಲ್ಪಟ್ಟಿದೆ: “ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು. ಬುದ್ಧಿವಂತರ ಬುದ್ಧಿಯನ್ನು ಬೆಲೆಬಾಳದಂತೆ ಮಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಏಕೆಂದರೆ, ಪವಿತ್ರ ವೇದದಲ್ಲಿ ಹೀಗೆ ಬರೆದಿದೆ: “ಜ್ಞಾನಿಗಳ ಜ್ಞಾನವನ್ನು ನಾನು ನಾಶಮಾಡುವೆನು; ವಿವೇಕಿಗಳ ವಿವೇಕವನ್ನು ನಾನು ನಿರರ್ಥಕ ಮಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಪವಿತ್ರ್ ಪುಸ್ತಕಾತ್ ಅಶೆ ಲಿವಲ್ಲೆ ಹಾಯ್, ಸಗ್ಳೆ" ಗೊತ್ತ್ ಅಸಲ್ಲ್ಯಾಚೆ ಶಾನ್‍ಪಾನ್ ಮಿಯಾ ನಾಸ್ ಕರ್‍ತಾ ಅನಿ ಶಾನ್ಯಾಂಚೆ ಶಾನ್‍ಪಾನ್ ಮಿಯಾ ಕಾಯ್ಬಿ ನ್ಹಯ್ ಸರ್ಕೆ ಕರುನ್ ಟಾಕ್ತಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 1:19
9 ತಿಳಿವುಗಳ ಹೋಲಿಕೆ  

ಹೀಗಿರುವುದರಿಂದ ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ, ಅದ್ಭುತವೂ ಆದ ಕಾರ್ಯವನ್ನು ಇನ್ನು ಮಾಡುವೆನು; ಇವರ ಜ್ಞಾನಿಗಳ ಜ್ಞಾನವು ಅಳಿಯುವುದು, ವಿವೇಕಿಗಳ ವಿವೇಕವು ಅಡಗುವುದು” ಎಂದು ಹೇಳಿದನು.


ಜ್ಞಾನಿಗಳು ಆಶಾಭಂಗಪಟ್ಟು ಬೆಚ್ಚಿಬಿದ್ದು ಸಿಕ್ಕಿಕೊಂಡಿದ್ದಾರೆ. ಇಗೋ, ಯೆಹೋವನ ಮಾತನ್ನು ನಿರಾಕರಿಸಿದರು.


ಯಾಕೆಂದರೆ ಇಹಲೋಕದ ಜ್ಞಾನವು ದೇವರ ಮುಂದೆ ಮೂರ್ಖತನವಾಗಿದೆ. “ಆತನು ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೆ ಹಿಡಿದುಕೊಳ್ಳುತ್ತಾನೆಂತಲೂ,”


ಚೋಯನಿನ ಪ್ರಭುಗಳು ಕೇವಲ ಬುದ್ಧಿಹೀನರು. ಫರೋಹನ ಮಂತ್ರಿಗಳಲ್ಲಿ ಜ್ಞಾನವುಳ್ಳ ಸಲಹೆಗಾರರ ಆಲೋಚನೆಯೂ ಜ್ಞಾನರಹಿತವಾಗಿರುತ್ತದೆ. ನೀನು ಫರೋಹನಿಗೆ, “ನಾನು ಜ್ಞಾನಿಗಳ ಸಂತಾನದವನು, ಪುರಾತನ ರಾಜನ ವಂಶದವನು? ಎಂದು ಹೇಗೆ ತಾನೆ ಹೇಳಿಕೊಳ್ಳುವಿರಿ.


ಐಗುಪ್ತದ ಅಂತರಾತ್ಮವು ಬರಿದಾಗುವುದು. ಅದರ ಆಲೋಚನೆಯನ್ನು ಕೆಡಿಸಿಬಿಡುವೆನು. ಅಲ್ಲಿಯವರು ವಿಗ್ರಹಗಳನ್ನೂ, ಮಂತ್ರಗಾರರನ್ನೂ, ಪ್ರೇತವಿಚಾರಕರನ್ನೂ, ಬೇತಾಳಿಕರನ್ನು ಆಶ್ರಯಿಸುವರು.


ಜನಾಂಗಗಳ ಅರಸನೇ, ಯಾರು ನಿನಗೆ ಹೆದರದೆ ಇದ್ದಾರು? ಇದು ನಿನಗೆ ತಕ್ಕದ್ದು; ಜನಾಂಗಗಳ ಜ್ಞಾನಿಗಳಲ್ಲಿಯೂ, ರಾಜಪರಂಪರೆಯಲ್ಲಿಯೂ ನಿನಗೆ ಸಮಾನನು ಯಾರೂ ಇಲ್ಲವಷ್ಟೆ.


ಪ್ರಿಯರೇ, ನಾನು ನಿಮಗೋಸ್ಕರವಾಗಿ ನನ್ನಗೂ ಅಪೊಲ್ಲೋಸನಿಗೂ ಈ ನಿಯಮಗಳನ್ನೆಲ್ಲಾ ಅನ್ವಯಿಸಿಕೊಂಡು ಹೇಳಿದ್ದೇನೆ. ಆದ್ದರಿಂದ ನೀವು “ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನು ಮೀರಿಹೋಗಬಾರದು,” ಎಂಬ ಈ ವಾಕ್ಯದ ಅರ್ಥವನ್ನು ನಮ್ಮಿಂದ ಕಲಿತುಕೊಂಡು, ನಿಮ್ಮಲ್ಲಿ ಯಾವನಾದರೂ ಒಬ್ಬನನ್ನು ವಿರೋಧಿಸಿ ಮತ್ತೊಬ್ಬನ ಪಕ್ಷವನ್ನು ಹಿಡಿದು ಉಬ್ಬಿಕೊಳ್ಳಬಾರದು ಎಂಬುದಕ್ಕಾಗಿದೆ.


ನಾವಂತೂ ಕ್ರಿಸ್ತನ ನಿಮಿತ್ತ ಮೂರ್ಖರಾಗಿದ್ದೇವೆ. ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ. ನಾವು ಬಲಹೀನರು, ನೀವು ಬಲಿಷ್ಠರು, ನೀವು ಗೌರವವುಳ್ಳವರು, ನಾವು ನಿಂದಿಸಲ್ಪಟ್ಟವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು