Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 1:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡನು; ದೇವರು ಬಲಿಷ್ಠರನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಅಶಕ್ತರನ್ನು, ಬಲಹೀನರನ್ನು ಆರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಜ್ಞಾನಿಗಳನ್ನು ನಾಚಿಕೆಗೀಡುಮಾಡಲು ದೇವರು ಲೋಕದ ದೃಷ್ಟಿಯಲ್ಲಿ ಮೂರ್ಖರನ್ನು ಆರಿಸಿಕೊಂಡರು; ಅಂತೆಯೇ ಬಲಿಷ್ಠರನ್ನು ಲಜ್ಜೆಗೀಡುಮಾಡಲು ಲೋಕದ ದೃಷ್ಟಿಯಲ್ಲಿ ಬಲಹೀನರನ್ನು ಆರಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾನೆ; ದೇವರು ಬಲಿಷ್ಠರನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆದರೆ ದೇವರು ಈ ಲೋಕದ ಜ್ಞಾನಿಗಳನ್ನು ನಾಚಿಕೆಪಡಿಸುವುದಕ್ಕಾಗಿ ಮೂಢರನ್ನು ಆರಿಸಿಕೊಂಡಿದ್ದಾನೆ; ಬಲಿಷ್ಠರನ್ನು ನಾಚಿಕೆಪಡಿಸುವುದಕ್ಕಾಗಿ ಬಲಹೀನರನ್ನು ಆರಿಸಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವಂತೆ, ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾರೆ. ದೇವರು ಬಲಿಷ್ಠರನ್ನು ನಾಚಿಕೆಪಡಿಸುವಂತೆ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಖರೆ ಶಾನ್ಯಾಕ್ನಿ ಲಜ್ಜಾ ಕರಿಸರ್ಕೆ ಕರುಸಾಟ್ನಿ ದೆವಾನ್ ಮುದ್ದಮ್ ಹ್ಯಾ ಜಗಾಕ್ ಪಿಶೆಪಾನ್ ಸರ್ಕೆ ದಿಸ್ತಲೆ ಎಚುನ್ ಘೆಟ್ಲ್ಯಾನ್ ಅನಿ ಘಟ್ಮುಟ್ ಮನುನ್ ಅಸಲ್ಲ್ಯಾಕ್ನಿ ಲಜ್ಜಾ ಕರಿಸರ್ಕೆ ಕರುಕ್ ಹ್ಯಾ ಜಗಾತ್ ಬಳ್ ನಸಲ್ಲೆ ತೆನಿ ಎಚುಕ್ ಕಾಡ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 1:27
27 ತಿಳಿವುಗಳ ಹೋಲಿಕೆ  

ನನ್ನ ಪ್ರಿಯ ಸಹೋದರರೇ, ಕೇಳಿರಿ ದೇವರು ಈ ಲೋಕದಲ್ಲಿನ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ, ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?


ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, “ತಂದೆಯೇ! ಪರಲೋಕದ ಭೂಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ.


ಜ್ಞಾನಿಯು ಎಲ್ಲಿ? ವಿದ್ವಾಂಸನು ಎಲ್ಲಿ? ಇಹಲೋಕದ ತರ್ಕವಾದಿ ಎಲ್ಲಿ? ದೇವರು ಇಹಲೋಕದ ಜ್ಞಾನವನ್ನು ಮೂರ್ಖತನವಾಗಿ ಮಾಡಿದ್ದಾನಲ್ಲವೇ?


ನಿನಗೆ ವಿರುದ್ಧವಾಗಿ ನಿಂತು ಮುಯ್ಯಿತೀರಿಸುವ ವೈರಿಗಳ ಬಾಯನ್ನು ಕಟ್ಟುವುದಕ್ಕೋಸ್ಕರ, ನೀನು ಬಾಲಕರ ಮತ್ತು ಮೊಲೆಕೂಸುಗಳ ಬಾಯಿಂದ ಬಲವಾದ ಸಾಕ್ಷಿ ಉಂಟಾಗುವಂತೆ ಮಾಡಿದ್ದೀ.


ಹೀಗಿರುವುದರಿಂದ ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ, ಅದ್ಭುತವೂ ಆದ ಕಾರ್ಯವನ್ನು ಇನ್ನು ಮಾಡುವೆನು; ಇವರ ಜ್ಞಾನಿಗಳ ಜ್ಞಾನವು ಅಳಿಯುವುದು, ವಿವೇಕಿಗಳ ವಿವೇಕವು ಅಡಗುವುದು” ಎಂದು ಹೇಳಿದನು.


ಏಕೆಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರು ನಿಲ್ಲುವುದಕ್ಕೂ ಎದುರು ಮಾತನಾಡುವುದಕ್ಕೂ ಆಗದಂಥ ಬಾಯನ್ನೂ, ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ.


ಮಣ್ಣಿನ ಮಡಿಕೆಯಂತಿರುವ ನಮ್ಮಲ್ಲಿ ಈ ನಿಕ್ಷೇಪವನ್ನು ಇಡಲ್ಪಟ್ಟಿರುವುದರಿಂದ ಇಂತಹ ಮಹಾಶಕ್ತಿಯು ದೇವರದೇ ಹೊರತು ನಮ್ಮೊಳಗಿಂದ ಬಂದದ್ದಲ್ಲವೆಂಬುದು ಸ್ಪಷ್ಟವಾಗಿದೆ.


ಆತನಿಗೆ, “ಇವರು ಹೇಳುವುದನ್ನು ಕೇಳುತ್ತಿರುವೆಯಾ” ಎಂದು ಹೇಳಲು ಯೇಸು, “ಹೌದು, ಕೇಳುತ್ತಿದ್ದೇನೆ, ಆದರೆ ‘ಸಣ್ಣ ಮಕ್ಕಳ ಬಾಯಿಂದಲೂ ಮೊಲೆಕೂಸುಗಳ ಬಾಯಿಂದಲೂ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿರುವಿ’ ಎಂಬುದನ್ನು ನೀವು ಎಂದಾದರೂ ಓದಲಿಲ್ಲವೋ?” ಎಂದು ಕೇಳಿದನು.


ದೀನದರಿದ್ರ ಜನರನ್ನು ನಿನ್ನಲ್ಲಿ ಉಳಿಸುವೆನು; ಅವರು ಯೆಹೋವನ ನಾಮವನ್ನು ಆಶ್ರಯಿಸಿಕೊಳ್ಳುವರು,


“ಅವನಿಂದ ಬಂದ ಪತ್ರಿಕೆಗಳು ಕಠೋರವಾದವುಗಳೂ, ಪ್ರಬಲವಾದವುಗಳೂ ಆಗಿವೆ. ಆದರೆ ದೈಹಿಕವಾಗಿ ಅವನು ದುರ್ಬಲನು ಅವನ ಮಾತುಗಳು ನಿಂದಾತ್ಮಕವಾದವುಗಳೆಂದು ಕೆಲವರು ಹೇಳುತ್ತಾರಲ್ಲಾ.”


ದೀನರು ಯೆಹೋವನಲ್ಲಿ ಹೆಚ್ಚಾಗಿ ಆನಂದಿಸುವರು, ಬಡವರು ಇಸ್ರಾಯೇಲರ ಸದಮಲಸ್ವಾಮಿಯಲ್ಲಿ ಉಲ್ಲಾಸಿಸುವರು.


ಯೇಸು ಅಲ್ಲಿಂದ ಹಾದು ಹೋಗುತ್ತಿರುವಾಗ, ಸುಂಕ ಸಂಗ್ರಹಣೆ ಕಟ್ಟೆಯಲ್ಲಿ ಕುಳಿತಿದ್ದ ಮತ್ತಾಯನೆಂಬ ಒಬ್ಬ ಮನುಷ್ಯನನ್ನು ನೋಡಿ, “ನನ್ನನ್ನು ಹಿಂಬಾಲಿಸು” ಎಂದು ಅವನನ್ನು ಕರೆಯಲು ಅವನು ಎದ್ದು ಆತನನ್ನು ಹಿಂಬಾಲಿಸಿದನು.


ಇದಲ್ಲದೆ ಎಪಿಕೂರಿಯನ್ನರು, ಸ್ತೋಯಿಕರು ಎಂಬ ತತ್ವವಿಚಾರಕರಲ್ಲಿ ಕೆಲವರು ಅವನ ಸಂಗಡ ಚರ್ಚೆಮಾಡಿದರು. ಅವರಲ್ಲಿ ಕೆಲವರು; “ಈ ವಾಚಾಳಿ ಏನು ಹೇಳ ಬೇಕೆಂದಿದ್ದಾನೆ?” ಅಂದರು. ಅವನು ಯೇಸುವಿನ ವಿಷಯವಾಗಿ ಮತ್ತು ಸತ್ತವರು ಎದ್ದು ಬರುವರೆಂಬುದರ ಕುರಿತು ಸಾರುತ್ತಿದ್ದುದರಿಂದ; “ಇವನು ಅನ್ಯದೇಶದ ದೇವರುಗಳನ್ನು ಪ್ರಚಾರಮಾಡುವವನಾಗಿ ಕಂಡುಬರುತ್ತಾನೆಂದು” ಬೇರೆ ಕೆಲವರು ಹೇಳಿದರು.


ಈ ಮಾತುಗಳನ್ನು ಕೇಳಿ ಅವರು ರೌದ್ರಮನಸ್ಸುಳ್ಳವರಾಗಿ ಅವನ ಮೇಲೆ ಹಲ್ಲು ಕಡಿದರು.


“ಅವರು ಯಾವ ಮೋಶೆಯನ್ನು ಬೇಡವೆಂದು ನಿರಾಕರಿಸಿ ‘ನಿನ್ನನ್ನು ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು?’ ಎಂದು ಕೇಳಿದರೋ, ಅವನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿಯೂ, ಬಿಡುಗಡೆಮಾಡುವವನನ್ನಾಗಿಯೂ ನೇಮಿಸಿದನು.


ನಾನು ಕೊಚ್ಚಿಕೊಳ್ಳುವವರ ಶಕುನಗಳನ್ನು ನಿರರ್ಥಕಪಡಿಸಿ, ಕಣಿಹೇಳುವವರನ್ನು ಮರುಳುಗೊಳಿಸಿ, ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳಿವಳಿಕೆಯನ್ನು ಹುಚ್ಚುತನವಾಗ ಮಾಡುವೆನು.


ಜ್ಞಾನಿಗಳು ಆಶಾಭಂಗಪಟ್ಟು ಬೆಚ್ಚಿಬಿದ್ದು ಸಿಕ್ಕಿಕೊಂಡಿದ್ದಾರೆ. ಇಗೋ, ಯೆಹೋವನ ಮಾತನ್ನು ನಿರಾಕರಿಸಿದರು.


ಲೋಕವು ತನ್ನ ಜ್ಞಾನದಿಂದ ದೇವರನ್ನು ತಿಳಿದುಕೊಳ್ಳದೆ ಹೋದದ್ದರಿಂದ; ಮೂರ್ಖತನವೆನಿಸಿಕೊಂಡಿರುವ ನಮ್ಮ ಬೋಧನೆಯ ಮೂಲಕ ನಂಬುವವರನ್ನು ರಕ್ಷಿಸುವುದು ದೇವರಿಗೆ ಹಿತವೆಂದು ತೋರಿತು.


ನಾವು ಇಹಲೋಕದ ಆತ್ಮವನ್ನು ಹೊಂದದೆ ದೇವರು ನಮಗೆ ಉಚಿತವಾಗಿ ದಯಪಾಲಿಸಿರುವ ವರಗಳನ್ನು ತಿಳಿದುಕೊಳ್ಳುವುದಕ್ಕಾಗಿ ದೇವರಿಂದ ಬಂದ ಆತ್ಮವನ್ನೇ ಹೊಂದಿದವರಾಗಿದ್ದೇವೆ.


ಅದಕ್ಕೆ ಆ ಕತ್ತೆಯು ಬಿಳಾಮನಿಗೆ, “ನಿನ್ನ ಜೀವಮಾನವೆಲ್ಲಾ ಇಂದಿನವರೆಗೂ ನೀನು ಹತ್ತುತ್ತಾ ಇರುವ ನಿನ್ನ ಕತ್ತೆಯು ನಾನಲ್ಲವೇ? ನಾನು ಯಾವಾಗಲಾದರೂ ಈ ರೀತಿಯಾಗಿ ಮಾಡಿದ್ದುಂಟೋ?” ಎಂದಾಗ ಬಿಳಾಮನು “ಇಲ್ಲ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು