Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 1:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯನ್ನು ನೀವು ಎದುರುನೋಡುತ್ತಾ ಇರುವುದರಿಂದ ಆತ್ಮೀಕ ಕೃಪಾವರದ ಕೊರತೆಯೂ ನಿಮಗೆ ಉಂಟಾಗುವುದಿಲ್ಲ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇದರಿಂದಾಗಿ ನಮ್ಮ ಪ್ರಭು ಯೇಸುಕ್ರಿಸ್ತರು ಪ್ರತ್ಯಕ್ಷವಾಗುವುದನ್ನೇ ಎದುರುನೋಡುತ್ತಿರುವ ನಿಮಗೆ ಯಾವ ಕೃಪಾಶೀರ್ವಾದಗಳ ಕೊರತೆಯು ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಹೀಗೆ ನೀವು ಯಾವ ಕೃಪಾವರದಲ್ಲಿಯೂ ಕೊರತೆಯಿಲ್ಲದವರಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಹೀಗಿರಲು, ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಪುನರಾಗಮನವನ್ನು ಎದುರುನೋಡುತ್ತಿರುವ ನೀವು ದೇವರಿಂದ ಬರುವ ಪ್ರತಿಯೊಂದು ವರವನ್ನು ಹೊಂದಿದವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಹೀಗಿರುವುದರಿಂದ ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನ ಪುನರಾಗಮನವನ್ನು ಆತುರದಿಂದ ಎದುರು ನೋಡುವವರಾದ ನಿಮಗೆ, ಯಾವುದೇ ಆತ್ಮಿಕ ವರಗಳ ಕೊರತೆಯು ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತೆಚೆಸಾಟ್ನಿ ಅಮ್ಚೊ ಧನಿ ಜೆಜು ಕ್ರಿಸ್ತ್ ಅನಿಎಗ್ದಾ ದಿಸ್ತಲ್ಯಾಕ್ ರಾಕುನ್ ಹೊತ್ತ್ಯಾ ತುಮ್ಕಾ ಖಲೊಬಿ ಆತ್ಮಿಕ್ ಆಶಿರ್ವಾದ್ ಗಾವ್ತಲೊ ಚುಕಿ ಸಾರ್ಕೊ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 1:7
25 ತಿಳಿವುಗಳ ಹೋಲಿಕೆ  

ನಾವಾದರೋ ಪರಲೋಕದ ಪ್ರಜೆಗಳು, ಕರ್ತನಾದ ಯೇಸು ಕ್ರಿಸ್ತನು ಅಲ್ಲಿಂದಲೇ ರಕ್ಷಕನಾಗಿ ಬರುವುದನ್ನು ಎದುರುನೋಡುತ್ತಾ ಇದ್ದೇವೆ.


ದೇವರ ದಿನದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಮಂಡಲವು ಬೆಂಕಿಯಿಂದ ನಾಶವಾಗಿ ಹೋಗುವವು. ಅತಿ ಉಷ್ಣದಿಂದ ಮೂಲಧಾತುಗಳು ಉರಿದು ಕರಗಿ ಹೋಗುವವು.


ಹಾಗೆಯೇ ಕ್ರಿಸ್ತನು ಸಹ ಬಹು ಜನರ ಪಾಪಗಳನ್ನು ಹೊತ್ತು ಕೊಳ್ಳುವುದಕ್ಕೊಸ್ಕರ ಒಂದೇ ಸಾರಿ ಸಮರ್ಪಿತನಾದನು. ಆತನು ಎರಡನೆಯ ಸಾರಿ ಪ್ರತ್ಯಕ್ಷನಾಗುವಂಥದ್ದು ಪಾಪವನ್ನು ಪರಿಹರಿಸುವುದಕ್ಕಾಗಿಯಲ್ಲ ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನು ಉಂಟುಮಾಡುವುದಕ್ಕಾಗಿಯೇ.


ನಿತ್ಯ ಜೀವಕ್ಕಾಗಿ ನಮ್ಮ ಕರ್ತನಾದ ಯೇಸುಕ್ರಿಸ್ತನ ಕರುಣೆಯನ್ನು ಎದುರುನೋಡುತ್ತಾ, ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ.


ಪ್ರಿಯರೇ, ನಾವು ಈಗ ದೇವರ ಮಕ್ಕಳಾಗಿದ್ದೇವೆ. ಮುಂದೆ ನಾವು ಎಂಥವರಾಗಿರುತ್ತೆವೋ ಎಂಬುದು ಇನ್ನೂ ತಿಳಿದಿಲ್ಲ. ಆದರೆ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು. ಏಕೆಂದರೆ ಆತನಿರುವ ಪ್ರಕಾರವೇ ಆತನನ್ನು ನೋಡುವೆವು.


ಆದರೆ ನೀವು ಎಷ್ಟರ ಮಟ್ಟಿಗೆ ಕ್ರಿಸ್ತನ ಬಾಧೆಗಳಲ್ಲಿ ಪಾಲುಗಾರರಾಗಿದ್ದೀರೋ ಅಷ್ಟರ ಮಟ್ಟಿಗೆ ಸಂತೋಷಪಡಿರಿ. ಆದ್ದರಿಂದ ಆತನ ಮಹಿಮೆಯ ಪ್ರತ್ಯಕ್ಷತೆಯಲ್ಲಿಯೂ ನೀವು ಸಂತೋಷಪಟ್ಟು ಉಲ್ಲಾಸಗೊಳ್ಳುವಿರಿ


ಅಂದರೆ ಮಹಾ ದೇವರ ಮತ್ತು ನಮ್ಮ ರಕ್ಷಕನಾದ ಯೇಸುಕ್ರಿಸ್ತನ ಮಹಿಮೆಪೂರ್ಣವಾದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇಹಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ, ನೀತಿವಂತರಾಗಿಯೂ, ಭಕ್ತಿಯುಳ್ಳವರಾಗಿಯೂ ಜೀವಿಸಬೇಕೆಂದು ನಮಗೆ ಬೋಧಿಸುತ್ತದೆ.


ದೇವರ ಮಕ್ಕಳ ಮಹಿಮೆಯು ಯಾವಾಗ ಪ್ರತ್ಯಕ್ಷವಾದೀತೆಂದು ಸೃಷ್ಟಿಯು ಬಹು ಕಾತುರದಿಂದ ಎದುರು ನೋಡುತ್ತಿದೆ.


ಮನುಷ್ಯಕುಮಾರನು ಪ್ರತ್ಯಕ್ಷವಾಗುವ ದಿನದಲ್ಲಿ ಅದೇ ರೀತಿಯಾಗಿ ಇರುವುದು.


ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯ ಕಿರೀಟವನ್ನು ಹೊಂದುವಿರಿ.


ಆದ್ದರಿಂದ ನೀವು ನಿಮ್ಮ ಮನಸ್ಸನ್ನು ದೃಢಪಡಿಸಿಕೊಂಡು, ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ.


ನೀತಿವಂತರಿಗೆ ದೊರಕುವ ಜಯಮಾಲೆಯು ಮುಂದೆ ನನಗಾಗಿ ಸಿದ್ಧವಾಗಿದೆ, ಅದನ್ನು ನೀತಿವಂತನಾದ ನ್ಯಾಯಾಧಿಪತಿಯಾಗಿರುವ ಕರ್ತನು ಆ ದಿನದಲ್ಲಿ ನನಗೆ ಕೊಡುವನು, ನನಗೆ ಮಾತ್ರವಲ್ಲದೆ ತನ್ನ ಪ್ರತ್ಯಕ್ಷತೆಯನ್ನು ಪ್ರೀತಿಸುವವರೆಲ್ಲರಿಗೂ ಕೊಡುವನು.


ಯೇಸು ಕರ್ತನು ತನ್ನ ಶಕ್ತಿಯುತ ದೇವದೂತರೊಂದಿಗೆ ಅಗ್ನಿ ಜ್ವಾಲೆಗಳ ಮೂಲಕ ಪರಲೋಕದಿಂದ ಪ್ರತ್ಯಕ್ಷನಾಗುವ ಕಾಲದಲ್ಲಿ ಅದನ್ನು ಕೊಡುವನು.


ಮತ್ತು ಆತನು ಸತ್ತವರೊಳಗಿಂದ ಎಬ್ಬಿಸಿದ, ಆಕಾಶದೊಳಗಿಂದ ಬರಲಿಕ್ಕಿರುವಂಥ ಆತನ ಕುಮಾರನನ್ನು ಕಾದುಕುಳಿತಿರುವಿರೆಂತಲೂ ಆ ಜನರೇ ಹೇಳುತ್ತಾರೆ. ಈ ಯೇಸು ಮುಂದೆ ಬರುವ ದೈವಕೋಪದಿಂದ ನಮ್ಮನ್ನು ತಪ್ಪಿಸುವಾತನು.


ನಿಮಗೆ ಜೀವವಾಗಿರುವ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನೀವು ಸಹ ಆತನೊಂದಿಗೆ ಮಹಿಮೆಯಲ್ಲಿ ಪ್ರತ್ಯಕ್ಷರಾಗುವಿರಿ.


ಆದ್ದರಿಂದ ಕರ್ತನು ಬರುವ ಕಾಲಕ್ಕಿಂತ ಮುಂಚೆ ಯಾವುದನ್ನು ಕುರಿತು ನ್ಯಾಯತೀರ್ಪುಮಾಡಬೇಡಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು. ಹೃದಯದ ಆಲೋಚನೆಗಳನ್ನು ಪ್ರಕಟಪಡಿಸುವನು. ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ದೊರಕುವುದು.


ನೀವಂತೂ ತಮ್ಮ ಯಜಮಾನನು ಯಾವಾಗ ಮದುವೆ ಔತಣ ಮುಗಿಸಿಕೊಂಡು ಹಿಂತಿರುಗುವನೋ ಎಂದು ಕಾಯುವಂಥ ಮತ್ತು ಆತನು ತಟ್ಟಿದ ಕೂಡಲೆ ಬಾಗಿಲನ್ನು ತೆರೆಯಲು ಸಿದ್ಧರಾಗಿರುವಂಥ ಆಳುಗಳಂತೆ ಇರಿ.


“ಪರಲೋಕ ರಾಜ್ಯವು ತಮ್ಮ ದೀಪಾರತಿಗಳನ್ನು ತೆಗೆದುಕೊಂಡು ಮದಲಿಂಗನನ್ನು ಸಂಧಿಸುವುದಕ್ಕೆ ಹೊರಟಂತಹ ಹತ್ತು ಮಂದಿ ಕನ್ನಿಕೆಯರಿಗೆ ಹೋಲಿಕೆಯಾಗಿದೆ.


ಯೆಹೋವನೇ, ನಾನು ನಿನ್ನ ರಕ್ಷಣೆಯ ಮಾರ್ಗವನ್ನು ನಿರೀಕ್ಷಿಸಿಕೊಂಡಿದ್ದೇನೆ.


ನನ್ನನ್ನು ಸಂರಕ್ಷಿಸುವ ಭಾರವನ್ನು ನಾನು ನಿಮ್ಮ ಮೇಲೆ ಹಾಕಲಿಲ್ಲವೆಂಬುವ ಒಂದೇ ವಿಷಯದಲ್ಲಿ ಹೊರತು ಇನ್ಯಾವ ವಿಷಯದಲ್ಲಿಯೂ ನಿಮ್ಮನ್ನು ಮಿಕ್ಕಾದ ಸಭೆಗಳವರಿಗಿಂತ ಕಡಿಮೆಮಾಡಿಲ್ಲವಲ್ಲಾ? ನನ್ನ ಈ ತಪ್ಪನ್ನು ಕ್ಷಮಿಸಿರಿ.


ಪ್ರಥಮ ಫಲವಾಗಿರುವ ಹಾಗೂ ಪವಿತ್ರಾತ್ಮವರವನ್ನು ಹೊಂದಿದ ನಾವೂ ಸಹ ದೇವರ ಮಕ್ಕಳ ಪದವಿಯನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೋಡುತ್ತಾ ನಮ್ಮೊಳಗೆ ನರಳುತ್ತಿದ್ದೇ.


ನಾವಾದರೋ ದೇವರಾತ್ಮನ ಮೂಲಕ ನಂಬಿಕೆಯಿಂದ ನೀತಿವಂತರಾಗುತ್ತೇವೆಂಬುವ ನಿರೀಕ್ಷೆ ಸಫಲವಾಗುವುದೆಂದು ಎದುರುನೋಡುವವರಾಗಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು