Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 10:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇದಲ್ಲದೆ ಅವರಲ್ಲಿ ಕೆಲವರು ಗೊಣಗುಟ್ಟಿ ಸಂಹಾರಕ ದೂತನ ಕೈಯಿಂದ ನಾಶವಾದರು. ನೀವು ಗುಣಗುಟ್ಟಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಮತ್ತೆ ಕೆಲವರು ಗೊಣಗುಟ್ಟಿದರು; ಸಂಹಾರಕ ದೂತನಿಂದ ಸಂಹರಿಸಲ್ಪಟ್ಟರು. ನೀವೂ ಅವರಂತೆ ಗೊಣಗುಟ್ಟುವವರಾಗಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇದಲ್ಲದೆ ಅವರಲ್ಲಿ ಕೆಲವರು ಗುಣುಗುಟ್ಟಿ ಸಂಹಾರಕನ ಕೈಯಿಂದ ನಾಶವಾದರು; ನೀವು ಗುಣುಗುಟ್ಟಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅವರಲ್ಲಿ ಕೆಲವರು ಮಾಡಿದಂತೆ ಗುಣುಗುಟ್ಟಬೇಡಿ. ಆ ಜನರು ಸಂಹಾರಕ ದೂತನಿಂದ ಕೊಲ್ಲಲ್ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವರಲ್ಲಿ ಕೆಲವರು ಗೊಣಗುಟ್ಟಿ ಸಂಹಾರಕನ ಕೈಯಿಂದ ಸಂಹಾರವಾದಂತೆ ನೀವೂ ಗೊಣಗುಟ್ಟಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಅಮಿ ಪುರ್ಪುರುಚೆ ನ್ಹಯ್; ತೆಂಚ್ಯಾತ್ಲ್ಯಾ ಉಲ್ಲ್ಯಾಸ್ಯಾನಿ ಪುರ್ ಪುರ್‌ಲ್ಯಾನಿ ಅನಿ ನಾಸ್ ಕರ್‍ತಲ್ಯಾ ದೆವಾಚ್ಯಾ ದುತಾನ್ ತೆಂಕಾ ಜಿವಾನಿ ಮಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 10:10
23 ತಿಳಿವುಗಳ ಹೋಲಿಕೆ  

ಮರುದಿನ ಇಸ್ರಾಯೇಲರ ಸರ್ವಸಮೂಹದವರು ಮೋಶೆ ಮತ್ತು ಆರೋನರ ಮೇಲೆ ಗುಣುಗುಟ್ಟಿ, “ನೀವೇ ಯೆಹೋವನ ಜನರನ್ನು ಸಾಯಿಸಿದಿರಿ” ಎಂದು ಹೇಳುವವರಾದರು.


ಇಸ್ರಾಯೇಲರೆಲ್ಲರೂ ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ಗುಣುಗುಟ್ಟಿ, “ನಾವು ಈ ಮರುಭೂಮಿಯಲ್ಲಿ ಸಾಯುವುದಕ್ಕಿಂತ ಐಗುಪ್ತ ದೇಶದಲ್ಲಿಯೇ ಸತ್ತಿದ್ದರೆ ಎಷ್ಟೋ ಒಳ್ಳೆಯದಾಗಿತ್ತು


ಅಶುಭ ಸಮಾಚಾರವನ್ನು ತಂದ ಆ ಮನುಷ್ಯರು ಯೆಹೋವನ ಸನ್ನಿಧಿಯಲ್ಲಿ ವ್ಯಾಧಿಯಿಂದ ಸತ್ತರು.


ದೇವರು ಯೆರೂಸಲೇಮನ್ನು ನಾಶಪಡಿಸುವುದಕ್ಕೆ ದೂತರನ್ನು ಕಳುಹಿಸಿದನು. ಆದರೆ ಆ ದೂತನು ನಾಶಪಡಿಸುವುದಕ್ಕಿದ್ದಾಗ ಯೆಹೋವನು ಅದನ್ನು ಕಂಡು ಆ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಟ್ಟು ಸಂಹಾರ ದೂತನಿಗೆ, “ಸಾಕು ನಿನ್ನ ಕೈಯನ್ನು ಹಿಂದೆಗೆ” ಎಂದು ಆಜ್ಞಾಪಿಸಿದನು. ಆಗ ಯೆಹೋವನ ದೂತನು ಯೆಬೂಸಿಯನಾದ ಒರ್ನಾನನ ಕಣದಲ್ಲಿ ನಿಂತನು.


ಗೊಣಗುಟ್ಟದೆಯೂ, ವಿವಾದಗಳಿಲ್ಲದೆಯೂ ಎಲ್ಲವನ್ನು ಮಾಡಿರಿ.


ದೇವದೂತನು ಯೆರೂಸಲೇಮನ್ನೂ ಸಂಹರಿಸುವುದಕ್ಕೆ ಕೈಚಾಚಿದಾಗ ಯೆಹೋವನು ಆ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಟ್ಟು ಸಂಹಾರಕ ದೂತನಿಗೆ, “ಈಗ ಸಾಕು ನಿನ್ನ ಕೈಯನ್ನು ಹಿಂದೆಗೆ” ಎಂದು ಆಜ್ಞಾಪಿಸಿದನು. ಆಗ ಆ ದೂತನು ಯೆಬೂಸಿಯನಾದ ಅರೌನನ ಕಣದಲ್ಲಿದ್ದನು.


ತಮ್ಮ ತಮ್ಮ ಗುಡಾರಗಳಲ್ಲಿ ಗುಣುಗುಟ್ಟಿ, ಯೆಹೋವನ ಮಾತಿಗೆ ಕಿವಿಗೊಡಲಿಲ್ಲ.


ಯೆಹೋವನು ಐಗುಪ್ತ್ಯರನ್ನು ಹತಮಾಡುವುದಕ್ಕೆ ದೇಶದ ನಡುವೆ ಹಾದುಹೋಗುವನು. ಆಗ ನಿಮ್ಮ ನಿಮ್ಮ ಮನೆಬಾಗಿಲಿನ ಮೇಲಣ ಪಟ್ಟಿಯಲ್ಲಿಯೂ, ಎರಡು ನಿಲುವು ಪಟ್ಟಿಗಳಲ್ಲಿಯೂ ಆ ರಕ್ತವನ್ನು ಕಂಡು ಮುಂದಕ್ಕೆ ದಾಟಿ ಹೋಗುವನು. ನಿಮ್ಮ ಪ್ರಾಣ ತೆಗೆಯುವುದಕ್ಕೆ ಸಂಹಾರಕನು ನಿಮ್ಮ ಮನೆಗಳಲ್ಲಿ ಬರುವುದೇ ಇಲ್ಲ.


ಇವರು ಗೊಣಗುಟ್ಟುವವರೂ, ದೂರು ಹೇಳುವವರೂ, ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ, ಬಂಡಾಯಿಕೊಚ್ಚಿಕೊಳ್ಳುವವರು, ಸ್ವಪ್ರಯೋಜನಕ್ಕಾಗಿ ಹೊಗಳಿಕೆಯ ಮಾತುಗಳನ್ನಾಡುವವರು ಆಗಿದ್ದಾರೆ.


ಜನರು ಮೋಶೆಗೆ, “ನಾವೇನು ಕುಡಿಯಬೇಕು?” ಎಂದು ಅವನಿಗೆ ವಿರುದ್ಧವಾಗಿ ಗುಣಗುಟ್ಟಿದರು.


ಆ ಘನತೆಯನ್ನು ಅವನು ದೇವರಿಗೆ ಸಲ್ಲಿಸದೆ, ಹೋದುದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಬಡಿದನು; ಅವನು ಹುಳಬಿದ್ದು ಸತ್ತನು.


ಯೆಹೋವನು ದೂತನನ್ನು ಕಳುಹಿಸಿ ಅಶ್ಶೂರದ ಅರಸನ ದಂಡಿನಲ್ಲಿದ್ದ ಎಲ್ಲಾ ಶೂರರನ್ನೂ, ನಾಯಕರನ್ನೂ, ಅಧಿಪತಿಗಳನ್ನೂ ಸಂಹರಿಸಿದನು; ಅಶ್ಶೂರದ ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಿಹೋಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದು ಹಾಕಿದರು.


ಆಗ ಆಲಯದೊಳಗಿಂದ ಬಂದ ಮಹಾಧ್ವನಿಯನ್ನು ನಾನು ಕೇಳಿದೆನು. ಅದು ಆ ಏಳು ಮಂದಿ ದೇವದೂತರಿಗೆ, “ನೀವು ಹೋಗಿ ಆ ಏಳು ಬಟ್ಟಲುಗಳಲ್ಲಿರುವ ದೇವರ ಕೋಪವನ್ನು ಭೂಮಿಯ ಮೇಲೆ ಸುರಿಯಿರಿ” ಎಂದು ಹೇಳಿತು.


ಚೊಚ್ಚಲ ಮಕ್ಕಳನ್ನು ಸಂಹರಿಸುವವನು, ಇಸ್ರಾಯೇಲ್ಯರ ಚೊಚ್ಚಲ ಮಕ್ಕಳನ್ನು ಮುಟ್ಟದಂತೆ, ನಂಬಿಕೆಯಿಂದಲೇ ಅವನು ಪಸ್ಕವನ್ನೂ ರಕ್ತಪೋಕ್ಷಣಾಚಾರವನ್ನೂ ಆಚರಿಸಿದನು.


ನೀನು ಮತ್ತು ನಿನ್ನ ಸಮೂಹದವರೆಲ್ಲರು ಯೆಹೋವನಿಗೆ ವಿರುದ್ಧವಾಗಿ ಕೂಡಿಕೊಂಡಿರಿ, ನನಗೆ ವಿಧೇಯನಾಗಿ ನಡೆಯುವ ಆರೋನನ ವಿರುದ್ಧವಾಗಿ ನೀವು ಗುಣಗುಟ್ಟುವುದೇಕೆ?” ಎಂದು ಕೇಳಿದನು.


ನಾನು ಯಾರನ್ನು ಆಯ್ದುಕೊಳ್ಳುತ್ತೇನೋ ಅವನ ಕೋಲು ಚಿಗುರುವುದು. ಇಸ್ರಾಯೇಲರು ನಿಮ್ಮಿಬ್ಬರ ವಿರುದ್ಧವಾಗಿ ಗುಣುಗುಟ್ಟುವುದನ್ನು ನಾನು ನಿಲ್ಲಿಸಿ ಬಿಡುವೆನು’” ಎಂದನು.


ತರುವಾಯ ಯೆಹೋವನು ಮೋಶೆಗೆ, “ಆರೋನನ ಕೋಲನ್ನು ತಿರುಗಿ ಆಜ್ಞಾಶಾಸನಗಳ ಮುಂದೆ ಇಡಬೇಕು. ಅದು ತಿರುಗಿಬೀಳುವವರಿಗೆ ದೃಷ್ಟಾಂತವಾಗಿ ಅಲ್ಲೇ ಇರಬೇಕು. ಇವರು ಇನ್ನು ಮುಂದೆ ನನಗೆ ವಿರುದ್ಧವಾಗಿ ಗುಣುಗುಟ್ಟಿ ನಾಶವಾಗದಂತೆ ನೀನು ಹೀಗೆ ಮಾಡು” ಎಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು