Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 10:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರೆಲ್ಲರೂ ದೈವಿಕವಾದ ಒಂದೇ ನೀರನ್ನು ಕುಡಿದರು. ಹೇಗೆಂದರೆ ಅವರನ್ನು ಹಿಂಬಾಲಿಸುತ್ತಿದ್ದ ದೈವಿಕವಾದ ಬಂಡೆಯೊಳಗಿಂದ ಬಂದ ನೀರನ್ನು ಕುಡಿಯುತ್ತಿದ್ದರು. ಆ ಬಂಡೆ ಕ್ರಿಸ್ತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅದೂ ತಮ್ಮೊಡನೆ ಬರುತ್ತಿದ್ದ ದೈವಿಕ ಬಂಡೆಯಿಂದ ಕುಡಿದರು. ಕ್ರಿಸ್ತಯೇಸುವೇ ಆ ಬಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವರೆಲ್ಲರೂ ದೈವಿಕವಾದ ಒಂದೇ ನೀರನ್ನು ಕುಡಿದರು; ಹೇಗಂದರೆ ಅವರ ಹಿಂದೆ ಹೋಗುತ್ತಿದ್ದ ದೈವಿಕವಾದ ಬಂಡೆಯೊಳಗಿಂದ ಬಂದ ನೀರನ್ನು ಕುಡಿಯುತ್ತಿದ್ದರು; ಆ ಬಂಡೆ ಕ್ರಿಸ್ತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ತಮ್ಮೊಂದಿಗಿದ್ದ ಆತ್ಮಿಕ ಬಂಡೆಯ ನೀರನ್ನು ಕುಡಿದರು. ಆ ಬಂಡೆಯೇ ಕ್ರಿಸ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರೆಲ್ಲರೂ ಒಂದೇ ಆತ್ಮಿಕವಾದ ಪಾನವನ್ನು ಕುಡಿದರು. ಅವರು ತಮ್ಮೊಂದಿಗೆ ಬಂದ ದೈವಿಕವಾದ ಬಂಡೆಯೊಳಗಿಂದ ಬಂದ ನೀರನ್ನು ಕುಡಿದರು. ಕ್ರಿಸ್ತ ಯೇಸುವೇ ಆ ಬಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಅನಿ ಸಗ್ಳ್ಯಾನಿ ಎಕುಚ್ ಆತ್ಮಿಕ್ ಫಿವನ್ ಫಿಲ್ಯಾನಿ. ಅಪ್ನಾಚ್ಯಾ ವಾಂಗ್ಡಾ ವಾಟೆಕ್ ಜಾತಲ್ಯಾ ಮೊಟ್ಯಾ ಗುಂಡ್ಯಾತ್ಲೆ ಪಾನಿ ತೆನಿ ಫಿಲ್ಯಾನಿ. ತೊ ಗುಂಡೊ ಮಟ್ಲ್ಯಾರ್ ಕ್ರಿಸ್ತುಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 10:4
23 ತಿಳಿವುಗಳ ಹೋಲಿಕೆ  

ಅಲ್ಲಿ ಹೋರೇಬಿನಲ್ಲಿರುವ ಬಂಡೆಯ ಮೇಲೆ ನಾನೇ ನಿನಗೆದುರಾಗಿ ನಿಂತುಕೊಳ್ಳುವೆನು. ನೀನು ಆ ಬಂಡೆಯನ್ನು ಹೊಡೆದಾಗ, ಜನರು ಕುಡಿಯುವಂತೆ ನೀರು ಹೊರಗೆ ಬರುವುದು” ಎಂದನು. ಮೋಶೆ ಇಸ್ರಾಯೇಲರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು.


ಜಾತ್ರೆಯ ಮಹಾದಿನವಾದ ಕಡೆಯ ದಿನದಲ್ಲಿ ಯೇಸು ನಿಂತುಕೊಂಡು “ಯಾವನಿಗಾದರೂ ನೀರಡಿಕೆಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.


ಆತನು ಅವರನ್ನು ಮರುಭೂಮಿಯಲ್ಲಿ ನಡೆಸಿದಾಗ ಅವರು ದಾಹಗೊಳ್ಳಲಿಲ್ಲ; ಅವರಿಗಾಗಿ ನೀರನ್ನು ಕಲ್ಲಿನೊಳಗಿಂದ ಹರಿಸಿದನು; ಆತನು ಬಂಡೆಯನ್ನು ಸೀಳಲು ಜಲಪಾತವಾಯಿತು.


ಆದರೆ, ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವುದಿಲ್ಲ. ನಾನು ಅವನಿಗೆ ಕೊಡುವ ನೀರು ಅವನಲ್ಲಿ ಉಕ್ಕುವ ನೀರಿನ ಬುಗ್ಗೆಗಳಾಗಿದ್ದು ನಿತ್ಯ ಜೀವವನ್ನು ಉಂಟುಮಾಡುವುದು” ಎಂದು ಹೇಳಿದನು.


ಆತನು ಬಂಡೆಯನ್ನು ಸೀಳಲು ನೀರು ಚಿಮ್ಮಿ ಬಂದು, ಅರಣ್ಯದಲ್ಲಿ ನದಿಯಾಗಿ ಹರಿಯಿತು.


ಬಂಡೆಯನ್ನು ಹೊಡೆದು, ನೀರು ಚಿಮ್ಮಿ ಹೊರಗೆ ಬರುವಂತೆಯೂ, ಪ್ರವಾಹವು ದಡಮೀರಿ ಹರಿಯುವಂತೆಯೂ ಮಾಡಿದನಲ್ಲವೋ? ಆತನು ರೊಟ್ಟಿಯನ್ನು ಕೊಡಲು ಶಕ್ತನೋ? ತನ್ನ ಜನರಿಗೆ ಮಾಂಸವನ್ನೂ ಒದಗಿಸುವನೋ” ಎಂಬುದೇ.


ಆತನು ಅರಣ್ಯದಲ್ಲಿ ಬಂಡೆಗಳನ್ನು ಸೀಳಿ, ಅವರಿಗೆ ಸಾಗರದಿಂದಲೋ ಎಂಬಂತೆ ಧಾರಾಳವಾಗಿ ನೀರು ಕುಡಿಸಿದನು.


ಆಗ ಮೋಶೆ ತನ್ನ ಕೈಯನ್ನು ಮೇಲಕ್ಕೆ ಎತ್ತಿ ಕೋಲಿನಿಂದ ಬಂಡೆಯನ್ನು ಎರಡು ಸಾರಿ ಹೊಡೆದನು. ಆಗ ನೀರು ಪ್ರವಾಹವಾಗಿ ಹೊರಟಿತು. ಸಮೂಹದವರೂ ಮತ್ತು ಅವರ ಪಶುಗಳೂ ನೀರು ಕುಡಿದರು.


ಅದಕ್ಕೆ ಯೇಸು “ದೇವರ ವರವೇನೆಂಬುದೂ ಮತ್ತು ನನಗೆ ಕುಡಿಯುವುದಕ್ಕೆ ನೀರು ಕೊಡು ಎಂದು ಕೇಳುವಾತನು ಯಾರೆಂಬುದೂ ನಿನಗೆ ತಿಳಿದಿದ್ದರೆ ನೀನೇ ಅವನನ್ನು ಕೇಳುತ್ತಿದ್ದೆ. ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು” ಅಂದನು.


ಬಯಲಿನ ಮೃಗಗಳು, ನರಿಗಳು, ಗೂಬೆಗಳು ನನ್ನನ್ನು ಸನ್ಮಾನಿಸುತ್ತವೆ. ಅರಣ್ಯದಲ್ಲಿ ನೀರನ್ನು, ಮರುಭೂಮಿಯಲ್ಲಿ ನದಿಗಳನ್ನು ನಾನು ಆರಿಸಿಕೊಂಡ ನನ್ನ ಪ್ರಜೆಗಳಿಗೆ ಕುಡಿಯುವುದಕ್ಕೆ ಕೊಟ್ಟೆನು. ನಾನು ಸೃಷ್ಟಿಸಿಕೊಂಡ ಆಪ್ತಜನರ ಜಲಪಾನಕ್ಕಾಗಿ,


ಇವುಗಳು ಮುಂದೆ ಬರಬೇಕಾಗಿದ್ದ ಕಾರ್ಯಗಳ ಛಾಯೆಯಾಗಿವೆ, ಇವುಗಳ ನಿಜಸ್ವರೂಪವು ಕ್ರಿಸ್ತನೇ.


ಆತ್ಮನು ಮತ್ತು ಮದಲಗಿತ್ತಿಯು, “ಬಾ” ಎನ್ನುತ್ತಾರೆ. ಕೇಳುವವನು, “ಬಾ” ಎನ್ನಲಿ. ಬಾಯಾರಿದವನು ಬರಲಿ, ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ಉಚಿತವಾಗಿ ತೆಗೆದುಕೊಳ್ಳಲಿ.


ಧರ್ಮಶಾಸ್ತ್ರವು ಮುಂದೆ ಬರಬೇಕಾಗಿದ್ದ ಉತ್ತಮ ಸಂಗತಿಗಳ ಛಾಯೆಯೇ ಹೊರತು ಅವುಗಳ ನಿಜ ಸ್ವರೂಪವಲ್ಲ. ಆದ್ದರಿಂದ ಆ ಧರ್ಮಶಾಸ್ತ್ರವು ಪ್ರತಿ ವರ್ಷವೂ ಯಾವಾಗಲೂ ಅರ್ಪಿತವಾಗುವ ಒಂದೇ ವಿಧವಾದ ಯಜ್ಞಗಳನ್ನು ಅರ್ಪಿಸಿ, ದೇವರ ಸಮೀಪಕ್ಕೆ ಬರುವವರನ್ನು ಎಂದಿಗೂ ಪರಿಪೂರ್ಣತೆಗೆ ತರಲಾರದು.


ಮತ್ತು ನೀವು ಯಾವುದರ ಮೂಲಕ ಪಾಪವನ್ನು ಮಾಡಿದ್ದಿರೋ ಆ ಬಸವನನ್ನು ನಾನು ತೆಗೆದುಕೊಂಡು ಬೆಂಕಿಯಿಂದ ಸುಟ್ಟು, ಒಡೆದು, ಅರೆದು ಧೂಳುಮಾಡಿ, ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ಬೀಸಾಡಿಬಿಟ್ಟೆ.


ಹಾಗರಳು ಅಂದರೆ ಅರಬಸ್ಥಾನದಲ್ಲಿರುವ ಸೀನಾಯಿ ಪರ್ವತವನ್ನು ಸೂಚಿಸುವಂತಹದ್ದು ಈಗಿನ ಯೆರೂಸಲೇಮಿಗೆ ಎಂಬುವಳಿಗೆ ಹೋಲಿಕೆಯಾಗಿದ್ದಾಳೆ, ಏಕೆಂದರೆ ಆಕೆಯು ತನ್ನ ಮಕ್ಕಳೊಂದಿಗೆ ಈಗ ದಾಸತ್ವದಲ್ಲಿದ್ದಾಳೆ.


ನರಜಾತಿಯವರು ವಾಸಿಸುವ ಸಕಲ ಪ್ರಾಂತ್ಯಗಳಲ್ಲಿ ಆಕಾಶಪಕ್ಷಿಗಳನ್ನೂ, ಭೂಜಂತುಗಳನ್ನೂ ನಿನ್ನ ಕೈಗೆ ಒಪ್ಪಿಸಿ ನೀನು ಅವುಗಳನ್ನೆಲ್ಲಾ ಆಳುವಂತೆ ಮಾಡಿದ್ದಾನೆ; ನೀನೇ ಆ ಬಂಗಾರದ ತಲೆ.


ಆ ಏಳು ಒಳ್ಳೆ ಆಕಳುಗಳು ಏಳು ವರ್ಷಗಳು ಆ ಏಳು ಒಳ್ಳೆ ತೆನೆಗಳು ಏಳು ವರ್ಷಗಳು. ಎರಡು ಕನಸುಗಳ ಅರ್ಥ ಒಂದೇ.


ಅದಕ್ಕೆ ಯೋಸೇಫನು, “ಆ ಕನಸಿನ ಅರ್ಥವೇನೆಂದರೆ, ಆ ಮೂರು ದ್ರಾಕ್ಷಾಲತೆಯ ಕೊಂಬೆಗಳೇ ಮೂರು ದಿನಗಳು.


‘ಆ ನಾಲ್ಕು ದೊಡ್ಡ ಮೃಗಗಳು ಲೋಕಸಾಗರದೊಳಗಿಂದ ಏರತಕ್ಕ ನಾಲ್ಕು ರಾಜ್ಯಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು