Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 11:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 “ಇದು ನಿಮಗೋಸ್ಕರವಾಗಿರುವ ನನ್ನ ದೇಹ, ನನ್ನನ್ನು ನೆನಪಿಸಿಕೊಳ್ಳುವುದಕ್ಕೋಸ್ಕರ ಹೀಗೆ ಮಾಡಿರಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸಿ ಅದನ್ನು ಮುರಿದು, “ಇದು ನಿಮಗಾಗಿ ಒಪ್ಪಿಸಲಾಗುವ ನನ್ನ ಶರೀರ, ಇದನ್ನು ನನ್ನ ಸ್ಮರಣೆಗಾಗಿ ಮಾಡಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಇದು ನಿಮಗೋಸ್ಕರವಾಗಿರುವ ನನ್ನ ದೇಹ; ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಹೀಗೆ ಮಾಡಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಅದಕ್ಕಾಗಿ ಸ್ತೋತ್ರ ಸಲ್ಲಿಸಿ, ಅದನ್ನು ಮುರಿದು, “ಇದು ನನ್ನ ದೇಹ; ಇದನ್ನು ನಿಮಗೋಸ್ಕರ ಕೊಡಲಾಗಿದೆ. ನನ್ನನ್ನು ನೆನಸಿಕೊಳ್ಳುವುದಕ್ಕಾಗಿ ಹೀಗೆ ಮಾಡಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಸ್ತೋತ್ರಮಾಡಿ ಮುರಿದು, “ಇದು ನಿಮಗೋಸ್ಕರವಾಗಿರುವ ನನ್ನ ದೇಹ, ನನ್ನ ನೆನಪಿಗಾಗಿ ನೀವು ಇದನ್ನು ಮಾಡಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ದೆವಾಕ್ ಧನ್ಯವಾದ್ ದಿವ್ನ್ ತಿ ಮೊಡ್ಲ್ಯಾನ್ ಅನಿ ಮಟ್ಲ್ಯಾನ್, “ಹೆ ಮಾಜೆ ಆಂಗ್ ತುಮ್ಚ್ಯಾ ಸಾಟ್ನಿ ದಿತಲೆ ಹೆ ಮಾಜ್ಯಾ ಯಾದಿಸಾಟ್ನಿ ಕರಾ”

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 11:24
20 ತಿಳಿವುಗಳ ಹೋಲಿಕೆ  

ಹೌದು, ಯೆಹೋವನೇ, ನಿನ್ನ ನ್ಯಾಯತೀರ್ಪಿನ ಮಾರ್ಗದಲ್ಲಿ ನಡೆಯುತ್ತಾ ನಿನಗಾಗಿ ಕಾದುಕೊಂಡಿದ್ದೇವೆ; ನಿನ್ನ ನಾಮಸ್ಮರಣೆಯು ನಮ್ಮ ಆತ್ಮಕ್ಕೆ ಇಷ್ಟವಾಗಿದೆ, ಹಿತವಾಗಿದೆ.


ಪ್ರಿಯಳೇ, ವಧುವೇ, ಇಗೋ ನಾ ಬಂದಿರುವೆ ನನ್ನ ತೋಟದೊಳಗೆ, ನನ್ನ ರಕ್ತಬೋಳ ಸುಗಂಧದ್ರವ್ಯಗಳನ್ನು ಕೂಡಿಸಿರುವೆ, ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ, ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿರುವೆ. ಮಿತ್ರರೇ, ತಿನ್ನಿರಿ. ಪ್ರಿಯರೇ ಕುಡಿಯಿರಿ, ಬೇಕಾದಷ್ಟು ಪಾನಮಾಡಿರಿ.


ಬನ್ನಿರಿ, ನಾನು ಬಡಿಸುವ ಆಹಾರವನ್ನು ಉಣ್ಣಿರಿ, ನಾನು ಬೆರೆಸಿರುವ ದ್ರಾಕ್ಷಾರಸವನ್ನು ಕುಡಿಯಿರಿ.


ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವುದು. ಯೆಹೋವನ ಘನಕ್ಕಾಗಿ ಆ ಹಬ್ಬವನ್ನು ತಲತಲಾಂತರಕ್ಕೂ ಆಚರಿಸಬೇಕು. ಅದನ್ನು ಶಾಶ್ವತನಿಯಮವೆಂದು ಎಂದೆಂದಿಗೂ ಆಚರಿಸಬೇಕು.


ಇದಲ್ಲದೆ, ಸೇನಾಧೀಶ್ವರನಾದ ಯೆಹೋವನು ಈ ಪರ್ವತದಲ್ಲಿ ಸಕಲ ಜನಾಂಗಗಳಿಗೆ ಸಾರವತ್ತಾದ ಕೊಬ್ಬಿದ ಮೃಷ್ಟಾನ್ನದಿಂದಲೂ, ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾರಸದಿಂದಲೂ ಕೂಡಿದ ಔತಣವನ್ನು ಸಿದ್ಧಮಾಡುವನು.


ನನ್ನನ್ನು ನಿನ್ನಡೆಗೆ ಸೆಳೆದುಕೋ; ನಿನ್ನ ಹಿಂದೆ ಓಡಿ ಬರುವೆನು; ರಾಜನು ನನ್ನನ್ನು ಅಂತಃಪುರಕ್ಕೆ ಬರಮಾಡಿದ್ದಾನೆ; ನಿನ್ನಲ್ಲಿ ಹರ್ಷಿಸಿ ಉಲ್ಲಾಸಿಸುವೆವು, ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತಲೂ ಉತ್ತಮವಾದುದು; ಸ್ತ್ರೀಯರು ನಿನ್ನನ್ನು ಯಥಾರ್ಥವಾಗಿ ಪ್ರೀತಿಸುವರು.


ಆತನು ತನ್ನ ಅದ್ಭುತಕೃತ್ಯಗಳ ಜ್ಞಾಪಕವನ್ನು ಉಳಿಯಮಾಡಿದ್ದಾನೆ. ಯೆಹೋವನು ಕೃಪೆಯೂ, ಕನಿಕರವೂ ಉಳ್ಳವನು.


ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲೆಲ್ಲಿ ಸಾರಲಾಗುವುದೋ ಅಲ್ಲೆಲ್ಲಾ ಈ ಸ್ತ್ರೀ ಮಾಡಿದ್ದನ್ನು ಸಹ ಈಕೆಯ ನೆನಪಿಗಾಗಿ” ಹೇಳುವರು.


ಭೂಲೋಕದಲ್ಲಿರುವ ಪುಷ್ಟರೆಲ್ಲರೂ ಆರಾಧಿಸುವರು; ತಮ್ಮ ಜೀವವನ್ನು ಉಳಿಸಿಕೊಳ್ಳಲಾರದೆ ಮಣ್ಣು ಪಾಲಾಗುವವರೆಲ್ಲರೂ ಆತನಿಗೆ ಅಡ್ಡಬೀಳುವರು.


ದೀನರು ಉಂಡು ತೃಪ್ತರಾಗುವರು; ಯೆಹೋವನ ಭಕ್ತರೆಲ್ಲರೂ ಆತನನ್ನು ಕೊಂಡಾಡುವರು. ಅವರ ಅಂತರಾತ್ಮವು ಯಾವಾಗಲು ಚೈತನ್ಯವುಳ್ಳದ್ದಾಗಿರಲಿ.


ನೀವು ಅವರಿಗೆ ಯೆಹೋವನ ಒಡಂಬಡಿಕೆಯ ಮಂಜೂಷವು ಯೊರ್ದನ್ ನದಿ ದಾಟುವಾಗ ಅದರ ಮುಂದೆ ಯೊರ್ದನಿನ ನೀರು ನಿಂತುಹೋಯಿತೆಂದು ಹೇಳಿರಿ. ಯೊರ್ದನಿನ ನೀರು ನಿಂತು ಹೋಯಿತೆಂಬುದಕ್ಕೆ ಈ ಕಲ್ಲುಗಳು ಇಸ್ರಾಯೇಲ್ಯರಿಗೆ ಸದಾಕಾಲಕ್ಕೂ ಸಾಕ್ಷಿಗಳಾಗಿರುವವು” ಅಂದನು.


ಆ ಎರಡು ರತ್ನಗಳನ್ನು ಹೆಗಲಿನ ಮೇಲಿರುವ ಏಫೋದಿನ ಪಟ್ಟಿಗಳಲ್ಲಿ ಹಾಕಿಸಬೇಕು. ಅವು ಇಸ್ರಾಯೇಲರ ಜ್ಞಾಪಕಾರ್ಥವಾದ ರತ್ನಗಳಾಗಿರುವವು. ಆರೋನನು ಯೆಹೋವನ ಸನ್ನಿಧಿಯಲ್ಲಿ ಹೋಗುವಾಗೆಲ್ಲಾ ಇಸ್ರಾಯೇಲರ ಕುಲಗಳ ಹೆಸರುಗಳನ್ನು ಆತನ ನೆನಪಿಗೆ ತರುವುದಕ್ಕಾಗಿ ತನ್ನ ಎರಡೂ ಭುಜಗಳ ಮೇಲೆ ಅವುಗಳನ್ನು ಧರಿಸಿಕೊಂಡು ಹೋಗುವನು.


ನಾನು ನಿಮಗೆ ತಿಳಿಸಿಕೊಟ್ಟ ಉಪದೇಶವನ್ನು ಕರ್ತನಿಂದ ಹೊಂದಿದೆನು. ಅದೇನೆಂದರೆ, ಕರ್ತನಾದ ಯೇಸು ತಾನು ಹಿಡಿದು ಕೊಡಲ್ಪಟ್ಟ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಅದನ್ನು ಮುರಿದು,


ಊಟವಾದ ಮೇಲೆ ಆತನು ಅದೇ ರೀತಿಯಲ್ಲಿ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾನಪಾತ್ರೆಯು ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ. ನೀವು ಇದರಲ್ಲಿ ಪಾನಮಾಡುವಾಗೆಲೆಲ್ಲಾ ನನ್ನನ್ನು ನೆನಪುಮಾಡಿಕೊಳ್ಳುವುದಕ್ಕೋಸ್ಕರ ಇದನ್ನು ಪಾನಮಾಡಿರಿ” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು