Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 13:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಪ್ರೀತಿಯು ಬಹು ತಾಳ್ಮೆಯುಳ್ಳದ್ದು, ದಯೆಯುಳ್ಳದ್ದು. ಪ್ರೀತಿಯು ಹೊಟ್ಟೆಕಿಚ್ಚುಪಡುವುದಿಲ್ಲ, ಹೊಗಳಿಕೊಳ್ಳುವುದಿಲ್ಲ. ಅದು ಗರ್ವಪಡುವುದಿಲ್ಲ, ಅಸಭ್ಯವಾಗಿ ನಡೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4-6 ಸಹನೆ ಸೈರಣೆ, ದಯೆದಾಕ್ಷಿಣ್ಯ ಪ್ರೀತಿಯಲ್ಲಿವೆ. ಎಡೆಯಿಲ್ಲ ಅದರಲಿ ಗರ್ವಕೆ, ಮರ್ಮಕೆ, ಮೆರೆತಕೆ, ಮತ್ಸರಕೆ, ಸಿಡುಕಿಗೆ, ಸೊಕ್ಕಿಗೆ, ಸ್ವಾರ್ಥಕೆ, ಸೇಡುಗಳೆಣಿಕೆಗೆ. ನಲಿಯದು ಪ್ರೀತಿ ಅನೀತಿಯಲಿ ನಲಿಯದಿರದದು ಸತ್ಯದ ಜಯದಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಪ್ರೀತಿ ಬಹು ತಾಳ್ಮೆಯುಳ್ಳದ್ದು, ಪ್ರೀತಿ ದಯೆ ತೋರಿಸುವದು. ಪ್ರೀತಿಯು ಹೊಟ್ಟೆಕಿಚ್ಚುಪಡುವದಿಲ್ಲ, ಹೊಗಳಿಕೊಳ್ಳುವದಿಲ್ಲ, ಉಬ್ಬಿಕೊಳ್ಳುವದಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಪ್ರೀತಿಯು ತಾಳ್ಮೆಯುಳ್ಳದ್ದು, ದಯೆಯುಳ್ಳದ್ದು. ಪ್ರೀತಿಯು ಅಸೂಯೆಪಡುವುದಿಲ್ಲ; ಹೊಗಳಿಕೊಳ್ಳುವುದಿಲ್ಲ; ಗರ್ವಪಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಪ್ರೀತಿ ತಾಳ್ಮೆಯುಳ್ಳದ್ದು, ಪ್ರೀತಿ ದಯೆಯುಳ್ಳದ್ದು, ಪ್ರೀತಿ ಅಸೂಯೆಪಡುವುದಿಲ್ಲ, ಪ್ರೀತಿ ಹೊಗಳಿಕೊಳ್ಳುವುದಿಲ್ಲ, ಗರ್ವಪಡುವುದಿಲ್ಲ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಪ್ರೆಮ್ ಸೊಸುನ್‍ ಘೆವ್ನ್ ಜಾತಾ, ಪ್ರೆಮ್ ದಯಾಳ್, ಅನಿಎಕ್ಲ್ಯಾಕ್ ಬಗುನ್ ಜಳಿ ನಾ, ಅಪ್ನಾಚಿಚ್ ಬಡಾಯ್ ಬೊಲಿನಾ, ಗರುಕಿನ್ ಭರಿನಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 13:4
53 ತಿಳಿವುಗಳ ಹೋಲಿಕೆ  

ಮೊಟ್ಟಮೊದಲು ನಿಮ್ಮ ನಿಮ್ಮೊಳಗೆ ಪ್ರಾಮಾಣಿಕವಾದ ಪ್ರೀತಿಯಿರಲಿ. ಪ್ರೀತಿಯು ಬಹು ಪಾಪಗಳನ್ನು ಮುಚ್ಚುತ್ತದೆ.


ಒಬ್ಬರಿಗೊಬ್ಬರು ದಯೆಯುಳ್ಳವರಾಗಿಯೂ, ಕರುಣೆಯುಳ್ಳವರಾಗಿಯೂ ಇರಿ. ದೇವರು ನಿಮ್ಮನ್ನು ಕ್ರಿಸ್ತನಲ್ಲಿ ಕ್ಷಮಿಸಿದಂತೆ ನೀವು ಒಬ್ಬರನ್ನೊಬ್ಬರು ಕ್ಷಮಿಸಿರಿ.


ಹೀಗಿರಲಾಗಿ ದೇವರಿಂದ ಆರಿಸಿಕೊಂಡವರಾಗಿ, ಪರಿಶುದ್ಧರೂ ಹಾಗೂ ಪ್ರಿಯರೂ ಆಗಿರುವುದರಿಂದ ಕನಿಕರ, ದಯೆ, ದೀನತೆ, ಸಾತ್ವಿಕತ್ವ ಮತ್ತು ಸಹನೆ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.


ದ್ವೇಷವು ಜಗಳಗಳನ್ನೆಬ್ಬಿಸುತ್ತದೆ, ಪ್ರೀತಿಯು ಪಾಪಗಳನ್ನೆಲ್ಲಾ ಮುಚ್ಚುತ್ತದೆ.


ಪ್ರಿಯರೇ, ದೇವರು ನಮ್ಮನ್ನು ಹೀಗೆ ಪ್ರೀತಿಸಿದ ಮೇಲೆ ನಾವೂ ಸಹ ಒಬ್ಬರನ್ನೊಬ್ಬರು ಪ್ರೀತಿಸುವ ಹಂಗಿನಲ್ಲಿದ್ದೇವೆ.


ದೋಷವನ್ನು ಮುಚ್ಚಿಡುವವನು ಪ್ರೇಮವನ್ನು ಸೆಳೆಯುವನು, ಎತ್ತಿ ಆಡುತ್ತಿರುವವನು ಸ್ನೇಹವನ್ನು ಕಳೆದುಕೊಳ್ಳುವನು.


ಕಡೆಗೆ ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ, ಪರಸ್ಪರ ಅನುಕಂಪವುಳ್ಳವರಾಗಿರಿ, ಅಣ್ಣತಮ್ಮಂದಿರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ, ಕರುಣೆಯೂ, ದೀನಭಾವವೂ ಉಳ್ಳವರಾಗಿರಿ.


ಸಹೋದರರೇ, ಮೈಗಳ್ಳರಿಗೆ ಬುದ್ಧಿಹೇಳಿರಿ, ಮನಗುಂದಿದವರನ್ನು ಧೈರ್ಯಪಡಿಸಿರಿ, ಬಲಹೀನರಿಗೆ ಆಧಾರವಾಗಿರಿ, ಎಲ್ಲರೊಂದಿಗೆ ದೀರ್ಘಶಾಂತಿಯಿಂದಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.


ತಾಳ್ಮೆಗೆ ಭಕ್ತಿಯನ್ನೂ, ಭಕ್ತಿಗೆ ಸಹೋದರ ಸ್ನೇಹವನ್ನೂ, ಸಹೋದರ ಸ್ನೇಹಕ್ಕೆ ಪ್ರೀತಿಯನ್ನೂ ಕೂಡಿಸಿರಿ.


ನೀವು ಪೂರ್ಣ ವಿನಯ, ಸಾತ್ವಿಕತ್ವಗಳಿಂದಲೂ ದೀರ್ಘಶಾಂತಿಯಿಂದಲೂ ಕೂಡಿದವರಾಗಿ, ಪ್ರೀತಿಯಿಂದ ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ.


ಶುದ್ಧಮನಸ್ಸು, ಜ್ಞಾನ, ದೀರ್ಘಶಾಂತಿ, ದಯೆ, ಪವಿತ್ರಾತ್ಮ, ನಿಷ್ಕಪಟವಾದ ಪ್ರೀತಿ,


ಮನುಷ್ಯನು ತನ್ನ ಹೃದಯದಲ್ಲಿ ಬಯಸುವಂಥದ್ದು ನಿಷ್ಠೆಯಾಗಿದೆ, ಬಡವನಾಗಿರುವುದು ಉತ್ತಮ.


ಆತನ ಮಹಿಮಾ ಶಕ್ತಿಯ ಪ್ರಕಾರ ಎಲ್ಲಾ ಸಾಮರ್ಥ್ಯದಲ್ಲಿ ಬಲಹೊಂದಿ, ಎಲ್ಲವನ್ನೂ ತಾಳ್ಮೆಯಿಂದಲೂ, ದೀರ್ಘಶಾಂತಿಯಿಂದಲೂ ಸಹಿಸಿಕೊಳ್ಳುವವರಾಗಿರಬೇಕೆಂತಲೂ,


ಅಹಂಕಾರಿಗಳೂ, ಒಬ್ಬರನ್ನೊಬ್ಬರು ಕೆಣಕುವವರೂ, ಒಬ್ಬರ ಮೇಲೊಬ್ಬರು ಮತ್ಸರವುಳ್ಳವರೂ ಆಗದೆ ಇರೋಣ.


ಪ್ರಿಯರೇ, ನಾನು ನಿಮಗೋಸ್ಕರವಾಗಿ ನನ್ನಗೂ ಅಪೊಲ್ಲೋಸನಿಗೂ ಈ ನಿಯಮಗಳನ್ನೆಲ್ಲಾ ಅನ್ವಯಿಸಿಕೊಂಡು ಹೇಳಿದ್ದೇನೆ. ಆದ್ದರಿಂದ ನೀವು “ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನು ಮೀರಿಹೋಗಬಾರದು,” ಎಂಬ ಈ ವಾಕ್ಯದ ಅರ್ಥವನ್ನು ನಮ್ಮಿಂದ ಕಲಿತುಕೊಂಡು, ನಿಮ್ಮಲ್ಲಿ ಯಾವನಾದರೂ ಒಬ್ಬನನ್ನು ವಿರೋಧಿಸಿ ಮತ್ತೊಬ್ಬನ ಪಕ್ಷವನ್ನು ಹಿಡಿದು ಉಬ್ಬಿಕೊಳ್ಳಬಾರದು ಎಂಬುದಕ್ಕಾಗಿದೆ.


ದೇವರ ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತನಾಗಿರು. ಪೂರ್ಣ ದೀರ್ಘಶಾಂತಿಯಿಂದ ಉಪದೇಶಿಸುತ್ತಾ ಖಂಡಿಸು, ಗದರಿಸು, ಎಚ್ಚರಿಸು.


ನೀನಾದರೋ ನನ್ನನ್ನು ಅನುಸರಿಸುವವನಾಗಿದ್ದು, ನನ್ನ ಬೋಧನೆ, ನಡತೆ, ಉದ್ದೇಶ, ನಂಬಿಕೆ, ದೀರ್ಘಶಾಂತಿ, ಪ್ರೀತಿ, ಸೈರಣೆ ಇವುಗಳನ್ನೂ,


ಬಾಯಿದೆರೆದು ಜ್ಞಾನವನ್ನು ತೋರ್ಪಡಿಸುವಳು. ಆಕೆಯ ನಾಲಿಗೆಯು ಬುದ್ಧಿಯನ್ನು ಪ್ರೀತಿಪೂರ್ವಕವಾಗಿ ಹೇಳುವುದು.


ಬಡವರಿಗಾಗಿ ಕೈ ಬಿಚ್ಚಿ, ದಿಕ್ಕಿಲ್ಲದವರಿಗೆ ಕೈ ನೀಡುವಳು.


ವ್ಯಾಜ್ಯದ ಆರಂಭವು ಏರಿಗೆ ಬಿಲಬಿದ್ದಂತೆ, ಸಿಟ್ಟೇರುವುದಕ್ಕೆ ಮುಂಚೆ ಜಗಳವನ್ನು ಬಿಟ್ಟುಬಿಡು.


ನೀನು ಅವರ ಮಧ್ಯದಲ್ಲಿ ಮಾಡಿದ ಮಹತ್ಕಾರ್ಯಗಳನ್ನು ಅವರು ಬೇಗನೆ ಮರೆತು, ನಿನ್ನ ಮಾತಿಗೆ ಕಿವಿಗೊಡದೆ ಹಠಹಿಡಿದು, ತಮಗೊಬ್ಬ ನಾಯಕನನ್ನು ನೇಮಿಸಿಕೊಂಡು, ಮೊದಲಿನಂತೆ ದಾಸರಾಗಿರುವುದಕ್ಕಾಗಿ ಐಗುಪ್ತಕ್ಕೆ ಹಿಂದಿರುಗಬೇಕೆಂದಿದ್ದರು. ಆದರೆ ನೀನಾದರೋ ಪಾಪಗಳನ್ನು ಕ್ಷಮಿಸುವವನೂ, ಕನಿಕರ ದಯೆಗಳುಳ್ಳವನೂ, ದೀರ್ಘಶಾಂತನೂ, ಕೃಪಾಳುವೂ ಆಗಿರುವ ದೇವರಾಗಿರುವುದರಿಂದ ನೀನು ಅವರ ಕೈಬಿಡಲಿಲ್ಲ.


ಆದಕಾರಣ ಎಲ್ಲಾ ಕೆಟ್ಟತನವನ್ನೂ, ಎಲ್ಲಾ ವಂಚನೆಯನ್ನೂ, ಕಪಟವನ್ನೂ, ಹೊಟ್ಟೆಕಿಚ್ಚನ್ನೂ, ಎಲ್ಲಾ ತರದ ದೂಷಣೆಯನ್ನು ವಿಸರ್ಜಿಸಿರಿ.


ಏಕೆಂದರೆ ನಾವು ಸಹ, ಮೊದಲು ಅವಿವೇಕಿಗಳೂ, ಅವಿಧೇಯರೂ, ಮೋಸಹೋದವರೂ, ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ, ಕೆಟ್ಟತನ, ಹೊಟ್ಟೆಕಿಚ್ಚುಗಳಲ್ಲಿ ಕಾಲಕಳೆಯುವವರೂ, ಅಸಹ್ಯರೂ, ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.


ಯಾಕೆಂದರೆ ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ನಿಮ್ಮಲ್ಲಿ ಹೊಟ್ಟೆಕಿಚ್ಚು ಜಗಳಗಳು ಇರುವಲ್ಲಿ, ನೀವು ಪ್ರಾಪಂಚಿಕರಾಗಿದ್ದು ಕೇವಲ ಬೇರೆ ಮನುಷ್ಯರಂತೆ ನಡೆಯುತ್ತೀರಲ್ಲವೆ?


“ಪೂರ್ವಿಕರು ಹೊಟ್ಟೆಕಿಚ್ಚಿನಿಂದ ಯೋಸೇಫನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಚರು. ಅಲ್ಲಿ ದೇವರು ಅವನ ಸಂಗಡ ಇದ್ದು,


ದೊರೆಯು ನಿನ್ನ ಮೇಲೆ ಸಿಟ್ಟುಗೊಂಡರೆ ಉದ್ಯೋಗವನ್ನು ಬಿಡಬೇಡ. ತಾಳ್ಮೆಯು ದೊಡ್ಡ ಸಿಟ್ಟನ್ನು ಅಡಗಿಸುತ್ತದೆ.


ಹೆಮ್ಮೆಯ ಫಲವು ಕಲಹವೇ, ಬುದ್ಧಿವಾದಕ್ಕೆ ಕಿವಿಗೊಡುವವರಲ್ಲಿ ಜ್ಞಾನ.


ಅವನ ಪ್ರಯತ್ನಗಳು ಯಾವಾಗಲೂ ಕೈಗೂಡುತ್ತವೆ; ಆದರೆ ನಿನ್ನ ನ್ಯಾಯತೀರ್ಪು ಮಹೋನ್ನತವಾಗಿರುವುದರಿಂದ ಅದು ಅವನ ಗ್ರಹಿಕೆಗೆ ಬರುವುದಿಲ್ಲ; ವೈರಿಗಳ ಗುಂಪನ್ನಾದರೋ ತಾತ್ಸಾರಮಾಡುತ್ತಾನೆ.


ಎದುರಿಸುವವರನ್ನು ಸೌಮ್ಯತೆಯಿಂದ ತಿದ್ದುವವನೂ ಆಗಿರಬೇಕು. ಬಹುಶಃ ದೇವರು ಆ ಎದುರಿಸುವವರ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿ ಸತ್ಯದ ಜ್ಞಾನವನ್ನು ಅವರಿಗೆ ಕೊಟ್ಟಾನು.


ಅವನು ಅಹಂಭಾವಿಯೂ ಅಜ್ಞಾನಿಯೂ ಆಗಿದ್ದು, ನಿಂದನೆ ವಾಗ್ವಾದಗಳನ್ನುಂಟು ಮಾಡುವ ಭ್ರಾಂತಿಯಲ್ಲಿದ್ದಾನೆ. ಇವುಗಳಿಂದ ಹೊಟ್ಟೆಕಿಚ್ಚು, ಜಗಳ, ದೂಷಣೆ, ದುಸ್ಸಂಶಯ ಮುಂತಾದವುಗಳು ಉಂಟಾಗುತ್ತವೆ.


ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥಗಳ ವಿಷಯವನ್ನು ಕುರಿತಾದರೋ. “ನಮ್ಮೆಲ್ಲರಿಗೆ ಜ್ಞಾನವುಂಟೆಂದು” ನಾವು ಬಲ್ಲೆವು. ತಿಳಿವಳಿಕೆಯು ಉಬ್ಬಿಸುತ್ತದೆ, ಆದರೆ ಪ್ರೀತಿಯು ಭಕ್ತಿಯನ್ನು ಬೆಳೆಸುತ್ತದೆ.


ಹೇಗೆಂದರೆ ಅವರು ಸಕಲವಿಧವಾದ ಅನ್ಯಾಯ, ದುರ್ಮಾರ್ಗತನ, ಲೋಭ ದುಷ್ಟತ್ವಗಳಿಂದಲೂ ಹೊಟ್ಟೆಕಿಚ್ಚು, ಕೊಲೆ, ಜಗಳ, ಮೋಸ, ಹಗೆತನಗಳಿಂದ ತುಂಬಿದವರಾದರು.


ಹೀಗೆ ಯೋಸೇಫನ ಅಣ್ಣಂದಿರು ಅವನ ಮೇಲೆ ಹೊಟ್ಟೆಕಿಚ್ಚುಪಟ್ಟರು. ಆದರೆ ಅವನ ತಂದೆಯು ಅವನ ಮಾತುಗಳನ್ನು ಮನಸ್ಸಿನಲ್ಲಿ ಇಟ್ಟುಕೊಂಡನು.


ದೇವರು ನಮ್ಮಲ್ಲಿ ಇರಿಸಿರುವ ಪವಿತ್ರಾತ್ಮನು ಅಭಿಮಾನತಾಪದಿಂದ ನಮಗೋಸ್ಕರ ಹಂಬಲಿಸುತ್ತಾನೆಂಬ ವೇದೋಕ್ತಿ ಬರಿ ಮಾತೆಂದು ನೀವು ಭಾವಿಸುತ್ತೀರೋ?


ನಿಮ್ಮಲ್ಲಿ ಕೆಲವರು ಪೌಲನು ನಮ್ಮ ಬಳಿಗೆ ಬರುವುದಿಲ್ಲವೆಂದು ತಿಳಿದು ಉಬ್ಬಿಕೊಂಡಿದ್ದಾರೆ.


ದುಂದೌತಣ ಕುಡಿಕತನಗಳಲ್ಲಾಗಲಿ, ಕಾಮವಿಲಾಸ, ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೆಕಿಚ್ಚುಗಳಲ್ಲಿಯಾಗಲಿ ಕಾಲ ಕಳೆಯದೆ ಹಗಲಿನಲ್ಲಿರ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.


ಮಿಥ್ಯಾ ದೀನತೆಯನ್ನು ಅಪೇಕ್ಷಿಸಿ ದೇವದೂತರ ಆರಾಧನೆಯಲ್ಲಿ ಆಸಕ್ತರಾಗಿದ್ದು, ದರ್ಶನಗಳಾದವೆಂದು ಕೊಚ್ಚಿಕೊಂಡು, ಪ್ರಾಪಂಚಿಕ ಬುದ್ಧಿಯಿಂದಾಗಿ, ಕಾರಣವಿಲ್ಲದೆ ಉಬ್ಬಿಕೊಂಡು ಇರುವಂಥವರಿಗೆ ನಿಮಗೆ ದೊರಕಿರುವ ಬಿರುದನ್ನು ಅಪಹರಿಸುವುದಕ್ಕೆ ಅವಕಾಶಕೊಡಬೇಡಿರಿ.


ಕೆಲವರು ಹೊಟ್ಟೆಕಿಚ್ಚುಪಟ್ಟು ಭೇದ ಹುಟ್ಟಿಸಬೇಕೆಂಬ ಮನಸ್ಸಿನಿಂದ ಮತ್ತು ಬೇರೆ ಕೆಲವರು ಒಳ್ಳೆಯ ಭಾವದಿಂದ ಕ್ರಿಸ್ತನನ್ನು ಪ್ರಚುರಪಡಿಸುತ್ತಾರೆ.


ನಾನು ಬರುವಾಗ ಒಂದು ವೇಳೆ ನೀವು ಇಚ್ಛಿಸಿದ ಪ್ರಕಾರ ನಾನು ಕಾಣಿಸುವುದಿಲ್ಲವೇನೋ ಎಂಬ ಭಯ ನನಗಿದೆ. ಹಾಗೆಯೇ ನಾನು ಇಚ್ಛಿಸಿದ ಪ್ರಕಾರ ನೀವು ಕಾಣಿಸುವುದಿಲ್ಲವೇನೋ ಎಂಬ ಶಂಕೆ ನನಗಿದೆ. ಒಂದು ವೇಳೆ ನಿಮ್ಮಲ್ಲಿ ಜಗಳ, ಹೊಟ್ಟೆಕಿಚ್ಚು, ದ್ವೇಷ, ಸ್ವಾರ್ಥಬುದ್ಧಿ, ಚಾಡಿಹೇಳುವುದು, ಕಿವಿಯೂದುವುದು, ಉಬ್ಬಿಕೊಳ್ಳುವುದು ಕಲಹ ಎಬ್ಬಿಸುವುದು ಇರಬಹುದೆಂದು ನನಗೆ ಸಂಶಯವುಂಟು.


ಹೀಗಿದ್ದರೂ ನೀವು ದುಃಖಿಸದೆ, ಈ ಕಾರ್ಯಮಾಡಿದವನನ್ನು ನಿಮ್ಮೊಳಗಿಂದ ಬಹಿಷ್ಕರಿಸದೆ, ಉಬ್ಬಿಕೊಂಡಿದ್ದೀರಲ್ಲಾ.


ಏಕೆಂದರೆ ಅವರು ಹೊಟ್ಟೆಕಿಚ್ಚಿನಿಂದಲೇ ಈ ರೀತಿಯಾಗಿ ಮಾಡಿದ್ದಾರೆಂದು ಅವನಿಗೆ ತಿಳಿದಿತ್ತು.


ರಾಹೇಲಳು ತಾನು ಯಾಕೋಬನಿಗೆ ಮಕ್ಕಳನ್ನು ಹೆರದೆ ಇರುವುದನ್ನು ನೋಡಿ ತನ್ನ ಅಕ್ಕನ ಮೇಲೆ ಹೊಟ್ಟೆಕಿಚ್ಚುಪಟ್ಟು, ಯಾಕೋಬನಿಗೆ, “ಮಕ್ಕಳನ್ನು ನನಗೆ ಕೊಡು, ಇಲ್ಲದಿದ್ದರೆ ಸಾಯುವೆನು” ಎಂದು ಹೇಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು