Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 13:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಪ್ರೀತಿಯು ಎಂದಿಗೂ ನಿಂತುಹೋಗುವುದಿಲ್ಲ. ಪ್ರವಾದನೆಗಳಾದರೂ ಇಲ್ಲದಂತಾಗುವವು. ಅನ್ಯಭಾಷೆಗಳೋ ನಿಂತುಹೋಗುವವು. ತಿಳಿವಳಿಕೆಯೋ ಇಲ್ಲದಂತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8-9 ಅಳಿದುಹೋಗುವುವು ಭವಿಷ್ಯವಾಣಿ ಗತಿಸಿಹೋಗುವುದು ಬಹುಭಾಷಾ‍ ಶಕ್ತಿ ಹೋಗುವುವು ನಶಿಸಿ ಜ್ಞಾನ, ಬುದ್ಧಿ. ಆದರೆ ಅಮರವಾದುದು ಪರಮ ಪ್ರೀತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಪ್ರೀತಿಯು ಎಂದಿಗೂ ಬಿದ್ದುಹೋಗುವದಿಲ್ಲ; ಪ್ರವಾದನೆಗಳಾದರೋ ಇಲ್ಲದಂತಾಗುವವು; ವಾಣಿಗಳೋ ನಿಂತುಹೋಗುವವು. ವಿದ್ಯೆಯೋ ಇಲ್ಲದಂತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಪ್ರೀತಿಯು ಎಂದಿಗೂ ಕೊನೆಗೊಳ್ಳುವುದಿಲ್ಲ. ಪ್ರವಾದಿಸುವ ವರಗಳಿವೆ, ಆದರೆ ಅವು ಕೊನೆಗೊಳ್ಳುತ್ತವೆ. ವಿವಿಧ ಭಾಷೆಗಳಲ್ಲಿ ಮಾತಾಡುವ ವರಗಳಿವೆ, ಆದರೆ ಆ ವರಗಳು ಕೊನೆಗೊಳ್ಳುತ್ತವೆ. ಜ್ಞಾನವೆಂಬ ವರವೂ ಇದೆ, ಆದರೆ ಅದೂ ಕೊನೆಗೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಪ್ರೀತಿಯು ಎಂದಿಗೂ ಅಳಿದುಹೋಗುವುದಿಲ್ಲ, ಪ್ರವಾದನೆಗಳಾದರೋ ಇಲ್ಲದಂತಾಗುವುವು, ಅನ್ಯ ಭಾಷೆಗಳು ಗತಿಸಿ ಹೋಗುವುವು, ವಿದ್ಯೆಯೋ ಇಲ್ಲದಂತಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಪ್ರೆಮ್ ಕನ್ನಾಬಿ ಸರಿನಾ, ಪ್ರವಾದ್ಯಾಚೆ ಬೊಲ್ನೆ ಸರುನ್, ಜಾಯ್ಲ್ ವಿಚಿತ್ರ್ ಭಾಶಾ ಬೊಲ್ತಲೆ ವರು ಸರುನ್ ಜಾಯ್ಲ್; ಶಾನ್‍ಪಾನಾಚಿ ವರಾ ನಾ ಪತ್ತೊ ಹೊವ್ನ್ ಜಾತಿಲ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 13:8
14 ತಿಳಿವುಗಳ ಹೋಲಿಕೆ  

ಹೀಗಿರುವುದರಿಂದ, ನಂಬಿಕೆ, ನಿರೀಕ್ಷೆ, ಪ್ರೀತಿ ಈ ಮೂರೇ ನಿಲ್ಲುತ್ತದೆ. ಇವುಗಳಲ್ಲಿ ದೊಡ್ಡದು ಪ್ರೀತಿಯೇ.


ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಆಗದಿದ್ದರೂ ಪ್ರಯೋಜನವಿಲ್ಲ, ಆದರೆ ಅವರಲ್ಲಿ ಪ್ರೀತಿಯಿಂದ ಹೊರಹೊಮ್ಮುವ ನಂಬಿಕೆಯೇ ಪ್ರಯೋಜನವಾಗಿದೆ.


ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾದರು, ಅವರಿಗೆ ಆ ಪವಿತ್ರಾತ್ಮನು ನೀಡಿದ ಶಕ್ತಿಯ ಪ್ರಕಾರ ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವುದಕ್ಕೆ ಪ್ರಾರಂಭಿಸಿದರು.


ಆತನು “ಹೊಸತು” ಎಂದು ಹೇಳಿದ್ದರಲ್ಲಿ ಮೊದಲಿದ್ದ ಒಡಂಬಡಿಕೆಯನ್ನು ಹಳೆಯದಾಗಿ ಮಾಡಿದ್ದಾನೆ. ಅದು ಹಳೆಯದಾಗುತ್ತಾ ಅಳಿದುಹೋಗುವುದಕ್ಕೆ ಸಮೀಪವಾಗಿದೆ.


ಆದರೆ ಸಂಪೂರ್ಣವಾದದ್ದು ಬಂದಾಗ ಅಪೂರ್ಣವಾದದ್ದು ಇಲ್ಲದಂತಾಗುವುದು.


ಮತ್ತೊಬ್ಬನಿಗೆ ಮಹತ್ಕಾರ್ಯಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಒಬ್ಬನಿಗೆ ಆತ್ಮವನ್ನು ವಿವೇಚಿಸುವ ವರವು, ಮತ್ತೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಒಬ್ಬನಿಗೆ ಭಾಷೆಗಳ ಅರ್ಥವನ್ನು ಬಿಡಿಸಿ ಹೇಳುವ ವರವು ಕೊಡಲ್ಪಡುತ್ತದೆ.


ಪೌಲನು ಅವರ ಮೇಲೆ ಕೈಗಳನ್ನಿಡಲು ಪವಿತ್ರಾತ್ಮನು ಅವರ ಮೇಲೆ ಇಳಿದುಬಂದನು; ಅವರು ನಾನಾ ಭಾಷೆಗಳನ್ನಾಡಿದರು, ಪ್ರವಾದಿಸಿದರು.


ಆದರೆ ನಿನ್ನ ನಂಬಿಕೆ ಕುಂದಿಹೋಗಬಾರದೆಂದು ನಾನು ನಿನ್ನ ವಿಷಯದಲ್ಲಿ ದೇವರಿಗೆ ವಿಜ್ಞಾಪನೆ ಮಾಡಿಕೊಂಡೆನು. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ದೃಢಪಡಿಸು” ಎಂದು ಹೇಳಿದನು.


ಎದೋಮನ್ನು ಕುರಿತು ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ತೇಮಾನ್ ಸೀಮೆಗೆ ಬುದ್ಧಿಯು ಇನ್ನಿಲ್ಲವೋ? ವಿವೇಕಿಗಳ ಆಲೋಚನಾಶಕ್ತಿಯು ಅಳಿಯಿತೋ? ಅವರ ಜ್ಞಾನವು ಮಾಯವಾಯಿತೋ?


ಆದಕಾರಣ ನನ್ನ ಸಹೋದರರೇ, ಪ್ರವಾದನಾವರವನ್ನು ಆಸಕ್ತಿಯಿಂದ ಅಪೇಕ್ಷಿಸಿರಿ, ಮತ್ತು ಅನ್ಯಭಾಷೆಗಳನ್ನಾಡುವವರಿಗೆ ಅಡ್ಡಿಮಾಡಬೇಡಿರಿ.


ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಪ್ರವಾದಿಗಳೂ, ಬೋಧಕರೂ ಇದ್ದರು; ಅವರು ಯಾರೆಂದರೆ; ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಸಾಮಂತ ಹೆರೋದನ ಜೊತೆಯಲ್ಲಿ ಬೆಳೆದ ಮೆನಹೇನ, ಸೌಲ ಇವರೇ.


ಒಬ್ಬನು ತಾನು ಏನಾದರೂ ತಿಳಿದುಕೊಂಡಿದ್ದೇನೆಂದು ಭಾವಿಸುವುದಾದರೆ ಅವನು ತಿಳಿಯಬೇಕಾದ ರೀತಿಯಿಂದ ಇನ್ನೂ ತಿಳಿದುಕೊಂಡಿರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು