1 ಕೊರಿಂಥದವರಿಗೆ 14:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅನ್ಯಭಾಷೆಗಳನ್ನಾಡುವವನು ದೇವರ ಸಂಗಡ ಮಾತನಾಡುತ್ತಾನೆಯೇ ಹೊರತು ಮನುಷ್ಯರ ಸಂಗಡ ಅಲ್ಲ. ಅವನು ಆತ್ಮ ಪ್ರೇರಿತನಾಗಿ ಗುಪ್ತ ವಿಷಯಗಳನ್ನಾಡುತ್ತಾನೆ. ಅವನು ಮಾತನಾಡುವ ಮಾತುಗಳನ್ನು ಯಾರೂ ಅರ್ಥಮಾಡಿಕೊಳ್ಳುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಪರವಶಾಭಾಷೆಯನ್ನು ಆಡುವವನು ಮಾನವನೊಡನಲ್ಲ, ದೇವರೊಡನೆ ಮಾತನಾಡುತ್ತಾನೆ. ಪವಿತ್ರಾತ್ಮರ ಪ್ರೇರಣೆಯಿಂದ ನಿಗೂಢ ವಿಷಯಗಳ ಬಗ್ಗೆ ಮಾತನಾಡುವುದರಿಂದ ಯಾರೂ ಆತನ ಮಾತನ್ನು ಅರ್ಥಮಾಡಿಕೊಳ್ಳಲಾರರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ವಾಣಿಯನ್ನಾಡುವವನು ದೇವರ ಸಂಗಡ ಮಾತಾಡುತ್ತಾನೆ ಹೊರತು ಮನುಷ್ಯರ ಸಂಗಡ ಆಡುವದಿಲ್ಲ. ಅವನು ಆತ್ಮಪ್ರೇರಿತನಾಗಿ ರಹಸ್ಯಾರ್ಥಗಳನ್ನು ನುಡಿಯುತ್ತಿದ್ದರೂ ಯಾರೂ ತಿಳುಕೊಳ್ಳುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಅದಕ್ಕೆ ಕಾರಣವೇನೆಂದರೆ: ಪರಭಾಷೆಯಲ್ಲಿ ಮಾತಾಡುವ ವರವನ್ನು ಹೊಂದಿರುವವನು ಜನರೊಂದಿಗೆ ಮಾತಾಡುವುದಿಲ್ಲ. ಅವನು ದೇವರೊಂದಿಗೆ ಮಾತಾಡುತ್ತಾನೆ. ಯಾರೂ ಅವನನ್ನು ಅರ್ಥಮಾಡಿಕೊಳ್ಳುವುದಿಲ್ಲ. ಏಕೆಂದರೆ ಅವನು ಪವಿತ್ರಾತ್ಮನ ಮೂಲಕವಾಗಿ ರಹಸ್ಯ ಸಂಗತಿಗಳನ್ನು ಮಾತಾಡುತ್ತಿರುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅನ್ಯಭಾಷೆಗಳನ್ನು ಆಡುವವನು ಮನುಷ್ಯರ ಸಂಗಡವಲ್ಲ, ದೇವರೊಂದಿಗೆ ಮಾತನಾಡುತ್ತಾನೆ. ಅವನು ಮಾತನಾಡುವುದನ್ನು ಯಾರೂ ಅರ್ಥಮಾಡಿಕೊಳ್ಳುವುದಿಲ್ಲ. ಏಕೆಂದರೆ ಅವನು ಆತ್ಮದಲ್ಲಿ ರಹಸ್ಯಗಳನ್ನು ಮಾತನಾಡುವವನಾಗಿದ್ದಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಕಶ್ಯಾಕ್ ಮಟ್ಲ್ಯಾರ್ ದುಸ್ರ್ಯಾ, ದುಸ್ರ್ಯಾ ಬಾಶಾನಿ ಬೊಲ್ತಾ ತೊ ದೆವಾಕ್ಡೆ ಬೊಲ್ತಾ ಸಿವಾಯ್ ಮಾನ್ಸಾಕ್ಡೆ ಬೊಲಿನಾ; ಆತ್ಮ್ಯಾಚ್ಯಾ ವೈನಾ ಪ್ರೆರಿತ್ ಹೊವ್ನ್ ಘುಟಾನ್ ಹೊತ್ತಿ ಸಂಗ್ತಿಯಾ ತೊ ಬೊಲ್ತಾ, ಜಾಲ್ಯಾರ್ಬಿ ತೊ ಬೊಲ್ತಾ ತೆ ಕೊನಾಕ್ಬಿ ಕಳಿನಾ. ಅಧ್ಯಾಯವನ್ನು ನೋಡಿ |
ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.
ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಶಾಸ್ತ್ರಗಳ ಮೂಲಕ ಅನ್ಯಜನರೆಲ್ಲರಿಗೂ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವುದಕ್ಕೋಸ್ಕರ ತಿಳಿಸಲ್ಪಟ್ಟಿದೆ. ಪೂರ್ವಕಾಲಗಳಲ್ಲಿ ಮರೆಯಾಗಿದ್ದು ಈಗ ಬೆಳಕಿಗೆ ಬಂದಿರುವಂತಹದ್ದೂ, ಈ ಮರ್ಮಕ್ಕೆ ಅನುಸಾರ ಎಂದರೆ ಯೇಸು ಕ್ರಿಸ್ತನ ವಿಷಯವಾದಂಥ ಹಾಗೂ ನಾನು ಸಾರುವಂಥ ಸುವಾರ್ತೆಗನುಸಾರವಾಗಿ ನಿಮ್ಮನ್ನು ಸ್ಥಿರಪಡಿಸುವುದಕ್ಕೆ ಶಕ್ತನಾಗಿರುವ,
ದೇವರು ತನ್ನ ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ಇಟ್ಟಿದ್ದಾನೆ. ಆ ಮೇಲೆ ಮಹತ್ಕಾರ್ಯ ಮಾಡುವ ಶಕ್ತಿಯನ್ನು, ನಾನಾ ರೋಗಗಳನ್ನು ವಾಸಿಮಾಡುವ ವರವನ್ನೂ, ಪರಸಹಾಯ ಮಾಡುವ ಗುಣವನ್ನೂ, ಕಾರ್ಯಗಳನ್ನು ನಿರ್ವಹಿಸುವ ಜ್ಞಾನವನ್ನು ಮತ್ತು ವಿವಿಧ ಭಾಷೆಗಳನ್ನಾಡುವ ವರವನ್ನೂ ಅವರವರಿಗೆ ಬೇರೆ ಬೇರೆಯಾಗಿ ಕೊಟ್ಟಿದ್ದಾನೆ.