Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 14:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಸಹೋದರರೇ, ಬಾಲಕರಂತೆ ಆಲೋಚಿಸಬೇಡಿರಿ; ಕೆಟ್ಟತನದ ವಿಷಯದಲ್ಲಿ ಶಿಶುಗಳಂತಿರಿ; ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಸಹೋದರರೇ, ಬುದ್ಧಿಯ ವಿಷಯದಲ್ಲಿ ಬಾಲಕರಾಗಿರಬೇಡಿ. ದುಷ್ಟ ವಿಷಯಗಳಲ್ಲಿ ಶಿಶುಗಳಂತೆ ಮುಗ್ಧರಾಗಿರಿ; ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಂತೆ ಪ್ರೌಢರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಸಹೋದರರೇ, ಬುದ್ಧಿಯ ವಿಷಯದಲ್ಲಿ ಬಾಲಕರಾಗಿರಬೇಡಿರಿ; ಕೆಟ್ಟತನದ ವಿಷಯದಲ್ಲಿ ಶಿಶುಗಳಾಗಿಯೇ ಇದ್ದು ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಸಹೋದರ ಸಹೋದರಿಯರೇ, ಮಕ್ಕಳಂತೆ ಆಲೋಚಿಸಬೇಡಿ. ಕೆಟ್ಟ ವಿಷಯಗಳಲ್ಲಿ ಎಳೆಗೂಸುಗಳಂತಿರಿ. ಆದರೆ ನಿಮ್ಮ ಆಲೋಚನೆಗಳಲ್ಲಿ ಪ್ರಾಯಸ್ಥರಂತಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಸಹೋದರರೇ, ಮಕ್ಕಳಂತೆ ಯೋಚಿಸುವುದನ್ನು ಬಿಟ್ಟುಬಿಡಿರಿ. ಕೇಡಿನ ವಿಷಯದಲ್ಲಿ ಶಿಶುಗಳಂತೆ ಇದ್ದರೂ, ನಿಮ್ಮ ಯೋಚನೆಯಲ್ಲಿ ಪ್ರಾಯಸ್ಥರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಭಾವಾನು ಅನಿ ಭೆನಿಯಾನು, ಪೊರಾಂಚ್ಯಾ ಬುದ್ದಿಚೆ ಹೊವ್ನಕಾಸಿ,ಬುರ್ಶಾಪಾನಾಚ್ಯಾ ವಿಶಯಾತ್ ವಾಡಲ್ಲ್ಯಾ ಪೊರಾಂಚ್ಯಾ ಸಾರ್ಕೆ ಚಿಂತ್ತಲೆ ಹೊವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 14:20
25 ತಿಳಿವುಗಳ ಹೋಲಿಕೆ  

ಹೊಸದಾಗಿ ಹುಟ್ಟಿದ ಶಿಶುಗಳಂತೆ ನೀವು ದೇವರ ವಾಕ್ಯವೆಂಬ ಶುದ್ಧವಾದ ಆತ್ಮೀಕ ಹಾಲನ್ನು ಬಯಸಿರಿ. ಆದರಿಂದ ರಕ್ಷಣೆಯಲ್ಲಿ ಬೆಳೆಯುವಿರಿ.


ನಿಮ್ಮ ವಿಧೇಯತ್ವವು ಎಲ್ಲರಿಗೂ ಪ್ರಸಿದ್ಧವಾದದ್ದರಿಂದ ನಿಮ್ಮ ವಿಷಯದಲ್ಲಿ ಆನಂದಪಡುತ್ತೇನೆ. ನೀವು ಒಳ್ಳೆಯದನ್ನು ಮಾಡುವುದರಲ್ಲಿ ಜಾಣರೂ ಮತ್ತು ಕೆಟ್ಟತನದ ವಿಷಯದಲ್ಲಿ ಮೂರ್ಖರೂ ಆಗಿರಬೇಕೆಂದು ಅಪೇಕ್ಷಿಸುತ್ತೇನೆ.


ನಾನು ಬಾಲಕನಾಗಿದ್ದಾಗ ಬಾಲಕನ ರೀತಿಯಲ್ಲಿ ಮಾತನಾಡಿದೆನು. ಬಾಲಕನ ಹಾಗೆ ಯೋಚಿಸಿದೆನು. ಬಾಲಕನಂತೆ ವಿವೇಚಿಸಿದೆನು. ಪ್ರಾಯಸ್ಥನಾದ ಮೇಲೆ ಬಾಲ್ಯದವುಗಳನ್ನು ಬಿಟ್ಟುಬಿಟ್ಟೆನು.


ಅವರಿಗೆ, “ನಿಮ್ಮ ಮನಸ್ಸು ಪರಿವರ್ತನೆಕೊಂಡು ಚಿಕ್ಕ ಮಕ್ಕಳಂತೆ ಆಗದೇ ಹೋದರೆ ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಆದರೆ ಪರಿಪಕ್ವತೆಯುಳ್ಳವರ ಮಧ್ಯದಲ್ಲಿ ಜ್ಞಾನವನ್ನೇ ಹೇಳುತ್ತೇವೆ. ಅದು ಇಹಲೋಕದ ಜ್ಞಾನವಲ್ಲ, ಗತಿಸಿ ಹೋಗುವ ಇಹಲೋಕಾಧಿಕಾರಿಗಳ ಜ್ಞಾನವೂ ಅಲ್ಲ.


ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ಕುರಿತಾದ ಕೃಪೆಯಲ್ಲಿಯೂ ಜ್ಞಾನದಲ್ಲಿಯೂ ನೀವು ಅಭಿವೃದ್ಧಿ ಹೊಂದಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆಯುಂಟಾಗಲಿ. ಆಮೆನ್.


ಮತ್ತು ನಿಮ್ಮ ಪ್ರೀತಿಯು ಇನ್ನೂ ಅಧಿಕವಾಗಿ ಹೆಚ್ಚುತ್ತಾ ಪೂರ್ಣ ಜ್ಞಾನ ವಿವೇಕಗಳಿಂದ ಕೂಡಿರಬೇಕೆಂದು ನಾನು ನಿಮಗೋಸ್ಕರ ಪ್ರಾರ್ಥಿಸುತ್ತೇನೆ.


ನಿಮಗೆ ಸತ್ಯವಾಗಿ ಹೇಳುತ್ತೇನೆ ಯಾರು ಶಿಶುಭಾವದಿಂದ ದೇವರ ರಾಜ್ಯವನ್ನು ಅಂಗೀಕರಿಸುವುದಿಲ್ಲವೋ ಅವನು ಅದರಲ್ಲಿ ಸೇರುವುದೇ ಇಲ್ಲ” ಎಂದು ಹೇಳಿದನು.


ನಮ್ಮಲ್ಲಿ ಪ್ರವೀಣರಾದವರೆಲ್ಲರೂ ಈ ವಿಷಯದಲ್ಲಿ ಇದೇ ಅಭಿಪ್ರಾಯವುಳ್ಳವರಾಗಿರಿ. ಮತ್ತು ಯಾವುದಾದರೂ ಒಂದು ವಿಷಯದಲ್ಲಿ ನೀವು ಬೇರೆ ಅಭಿಪ್ರಾಯವುಳ್ಳವರಾಗಿದ್ದರೆ ಅದನ್ನು ದೇವರು ನಿಮಗೆ ತೋರಿಸಿಕೊಡುವನು.


ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, “ತಂದೆಯೇ! ಪರಲೋಕದ ಭೂಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ.


ಆತನು ಯೆಹೋವನ ಭಯದಲ್ಲಿ ಆನಂದಿಸುವನು. ಆತನು ಕಣ್ಣಿಗೆ ಕಂಡಂತೆ ತೀರ್ಪು ಮಾಡುವುದಿಲ್ಲ. ಕಿವಿಗೆ ಬಿದ್ದಂತೆ ನಿರ್ಣಯಿಸುವುದಿಲ್ಲ.


ನಿನ್ನ ಕಟ್ಟಳೆಗಳು ನನ್ನ ಧ್ಯಾನವಾಗಿರುವುದರಿಂದ, ನನ್ನ ಉಪಾಧ್ಯಾಯರಿಗಿಂತ ಜ್ಞಾನಿಯಾಗಿದ್ದೇನೆ.


ಆತನು ಪ್ರತ್ಯುತ್ತರವಾಗಿ, “ಮನುಷ್ಯರನ್ನು ಉಂಟುಮಾಡಿದವನು ಆದಿಯಿಂದಲೇ ಅವರನ್ನು ಗಂಡು ಮತ್ತು ಹೆಣ್ಣಾಗಿ ಉಂಟುಮಾಡಿದನು,


ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು; ಮೂಢಸಂತತಿಯವರು, ಅವಿವೇಕಿಗಳು; ದುಷ್ಕಾರ್ಯದಲ್ಲಿ ನಿಪುಣರು, ಸತ್ಕಾರ್ಯವನ್ನು ಮಾಡಲು ಅರಿಯರು.


ಆದರೆ ಯೇಸು, “ಮಕ್ಕಳನ್ನು ಬಿಡಿರಿ. ನನ್ನ ಹತ್ತಿರ ಬರುವುದಕ್ಕೆ ಅವರಿಗೆ ಅಡ್ಡಿಮಾಡಬೇಡಿರಿ. ಏಕೆಂದರೆ ಪರಲೋಕ ರಾಜ್ಯವು ಇಂಥವರದೇ” ಎಂದು ಹೇಳಿದನು.


ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರು ಶಿಶುಭಾವದಿಂದ ದೇವರ ರಾಜ್ಯವನ್ನು ಅಂಗೀಕರಿಸುವುದಿಲ್ಲವೋ ಅವನು ಅದರಲ್ಲಿ ಸೇರುವುದೇ ಇಲ್ಲ” ಅಂದನು.


ಪ್ರಿಯರೇ, ನನ್ನ ಕೆಲಸವು ಇತರ ಅನ್ಯಜನಗಳಲ್ಲಿ ಸಫಲವಾದಂತೆ ನಿಮ್ಮಲ್ಲಿಯೂ ಸಫಲವಾದೀತೆಂದು ನಿಮ್ಮ ಬಳಿಗೆ ಬರುವುದಕ್ಕೆ ಅನೇಕಾವರ್ತಿ ಮನಸ್ಸು ಮಾಡಿಕೊಂಡಿದ್ದಾಗ್ಯೂ ಇಂದಿನವರೆಗೂ ಅಡ್ಡಿಯಾಯಿತೆಂಬುದು ನೀವು ತಿಳಿದಿರಬೇಕೆಂಬುದು ನನ್ನ ಅಪೇಕ್ಷೆ.


ಆದರೂ ಸಭೆಯಲ್ಲಿ ಅನ್ಯಭಾಷೆಯಿಂದ ಹತ್ತು ಸಾವಿರ ಮಾತುಗಳನ್ನಾಡುವುದಕ್ಕಿಂತ, ನನ್ನ ಬುದ್ಧಿಯಿಂದ ಐದೇ ಮಾತುಗಳನ್ನಾಡಿ ಇತರರಿಗೆ ಉಪದೇಶಮಾಡುವುದು ನನಗೆ ಉತ್ತಮವೆನಿಸುತ್ತದೆ.


ದೇವಜನರನ್ನು ದೇವರ ಸೇವೆಗೆ ಸಿದ್ಧಗೊಳಿಸುವುದಕ್ಕೂ, ಕ್ರಿಸ್ತನ ದೇಹವೆಂಬ ಸಭೆಯು ಅಭಿವೃದ್ಧಿಯಾಗುವುದಕ್ಕೋಸ್ಕರವೂ ಆತನು ಇವರನ್ನು ನೇಮಿಸಿದನು.


ಆಗ ನಾನು ಜನರಿಗೆ ಕತ್ತಿ, ಬಿಲ್ಲು, ಬರ್ಜಿಗಳನ್ನು ಹಿಡಿದುಕೊಂಡು ಗೋಡೆಯ ಹಿಂದಣ ತಗ್ಗಾದ ಬಯಲುಗಳಲ್ಲಿ ಗೋತ್ರಗೋತ್ರಗಳಾಗಿ ನಿಲ್ಲಬೇಕೆಂದು ಆಜ್ಞಾಪಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು