Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 14:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆದರೆ ಪ್ರವಾದಿಸುವವನಾದರೋ, ಅವನ ಮಾತುಗಳಿಂದ ಭಕ್ತಿವೃದ್ಧಿಯನ್ನೂ, ಪ್ರೋತ್ಸಾಹವನ್ನೂ ಸಂತೈಸುವಿಕೆಯನ್ನೂ ಉಂಟುಮಾಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವನ ಮಾತು ಭಕ್ತಿಯನ್ನು ವೃದ್ಧಿಸುತ್ತದೆ. ಉತ್ಸಾಹವನ್ನುಂಟುಮಾಡುತ್ತದೆ, ಉಪಶಮನವನ್ನು ತರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಪ್ರವಾದಿಸುವವರಾದರೋ ಮನುಷ್ಯರ ಸಂಗಡ ಮಾತಾಡುವವನಾಗಿ ಅವರಿಗೆ ಭಕ್ತಿವೃದ್ಧಿಯನ್ನೂ ಪ್ರೋತ್ಸಾಹವನ್ನೂ ಸಂತೈಸುವಿಕೆಯನ್ನೂ ಉಂಟುಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದರೆ ಪ್ರವಾದಿಸುವವನು ಜನರೊಂದಿಗೆ ಮಾತಾಡುತ್ತಾನೆ. ಅವನು ಜನರಿಗೆ ಶಕ್ತಿಯನ್ನು, ಪ್ರೋತ್ಸಾಹವನ್ನು ಮತ್ತು ಆದರಣೆಯನ್ನು ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಪ್ರವಾದಿಸುವವನಾದರೋ, ಜನರ ಭಕ್ತಿವೃದ್ಧಿಗಾಗಿ, ಪ್ರೋತ್ಸಾಹಕ್ಕಾಗಿ, ಸಂತೈಸುವಿಕೆಗಾಗಿ ಮಾತನಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಖರೆ ಪ್ರವಾದ್ ಕರುನ್ ಬೊಲ್ತಾ ತೊ ಮಾನ್ಸಾಂಚ್ಯಾ ಕಡೆ ಬೊಲ್ತಾ; ತೊ ತೆಂಕಾ ಧನಿಯಾತ್ ವಾಡುಸಾಟ್ನಿ ಪ್ರವಾದ್, ಉಮ್ಮೆದ್ ಅನಿ ಸಮಾಧಾನ್ ಸಾಂಗ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 14:3
42 ತಿಳಿವುಗಳ ಹೋಲಿಕೆ  

ಹಾಗೆಯೇ ನೀವು ಆತ್ಮೀಕವಾದ ವರಗಳಿಗಾಗಿ ಅತ್ಯಾಸಕ್ತಿಯುಳ್ಳವರಾಗಿರುವುದರಿಂದ ಸಭೆಗೆ ಹೆಚ್ಚಿನ ಅಭಿವೃದ್ಧಿ ಉಂಟಾಗುವ ಹಾಗೆ ತವಕಪಡಿರಿ.


ನಾನು ಬರುವ ತನಕ ವೇದವಾಕ್ಯವನ್ನು ಓದಿ ಹೇಳುವುದರಲ್ಲಿಯೂ, ಪ್ರಬೋಧಿಸುವುದರಲ್ಲಿಯೂ, ಉಪದೇಶಿಸುವುದರಲ್ಲಿಯೂ ಆಸಕ್ತನಾಗಿರು.


ಪ್ರಿಯರೇ, ನೀವಾದರೋ ನಿಮಗಿರುವ ಅತಿ ಪರಿಶುದ್ಧವಾದ ಕ್ರಿಸ್ತ ನಂಬಿಕೆಯನ್ನು ಆಧಾರವಾಗಿಟ್ಟುಕೊಂಡು ಅಭಿವೃದ್ಧಿಹೊಂದುತ್ತಾ, ಪವಿತ್ರಾತ್ಮಪ್ರೇರಿತರಾಗಿ ಪ್ರಾರ್ಥನೆ ಮಾಡಿರಿ.


ತಾನು ಸ್ವಸ್ಥಬೋಧನೆಯಿಂದ ಜನರನ್ನು ಎಚ್ಚರಿಸುವುದಕ್ಕೂ, ಸುವಾರ್ತಾ ವಿರೋಧಿಗಳ ಬಾಯಿ ಕಟ್ಟುವುದಕ್ಕೂ ಶಕ್ತನಾಗಿರುವಂತೆ, ಕ್ರಿಸ್ತನ ಉಪದೇಶಕ್ಕೆ ಅನುಸಾರವಾಗಿ ನಂಬತಕ್ಕ ವಚನಗಳನ್ನು, ದೃಢವಾಗಿ ಅವಲಂಬಿಸಿದವನಾಗಿರಬೇಕು.


ನೀವು ನಮ್ಮ ಸಂಗತಿಗಳನ್ನು ತಿಳಿದುಕೊಳ್ಳುವಂತೆಯೂ, ಅವನು ನಿಮ್ಮ ಹೃದಯಗಳನ್ನು ಸಂತೈಸುವಂತೆಯೂ ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ.


ದೇವರ ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತನಾಗಿರು. ಪೂರ್ಣ ದೀರ್ಘಶಾಂತಿಯಿಂದ ಉಪದೇಶಿಸುತ್ತಾ ಖಂಡಿಸು, ಗದರಿಸು, ಎಚ್ಚರಿಸು.


ಹಾಗೆಯೇ ಯೌವನಸ್ಥರನ್ನು ಎಲ್ಲಾ ಸಂಗತಿಗಳಲ್ಲಿಯೂ ಸ್ವಸ್ಥ ಚಿತ್ತರಾಗಿರಬೇಕೆಂದು ಎಚ್ಚರಿಸು.


ನೀವೆಲ್ಲರೂ ಒಬ್ಬೊಬ್ಬರಾಗಿ ಪ್ರವಾದಿಸಿದರೆ ಎಲ್ಲರೂ ಕಲಿತುಕೊಳ್ಳುವರು, ಎಲ್ಲರೂ ಪ್ರೋತ್ಸಾಹ ಹೊಂದುವರು.


ಹಾಗಾದರೇನು, ಸಹೋದರರೇ? ನೀವು ಸಭೆಯಲ್ಲಿ ಸೇರಿಬರುವಾಗ ಒಬ್ಬನು ಹಾಡುವುದೂ, ಒಬ್ಬನು ಉಪದೇಶಮಾಡುವುದೂ, ಒಬ್ಬನು ತನಗೆ ಪ್ರಕಟವಾದದ್ದನ್ನು ತಿಳಿಸುವುದೂ, ಇನ್ನೂ ಒಬ್ಬನು ಅನ್ಯಭಾಷೆಯನ್ನಾಡುವುದೂ, ಒಬ್ಬನು ಅದರ ಅರ್ಥವನ್ನು ಹೇಳುವುದುಂಟು. ನೀವು ಏನು ಮಾಡಿದರೂ ಸಭೆಯ ಭಕ್ತಿವೃದ್ಧಿಗಾಗಿಯೇ ಮಾಡಿರಿ.


ಆದ್ದರಿಂದ ನಾವು ಸಮಾಧಾನಕ್ಕೂ, ಪರಸ್ಪರ ಭಕ್ತಿವೃದ್ಧಿಗೂ ಅನುಕೂಲವಾಗಿರುವಂಥವುಗಳನ್ನು ಸಾಧಿಸಿಕೊಳ್ಳೋಣ.


ಧರ್ಮಶಾಸ್ತ್ರ ಮತ್ತು ಪ್ರವಾದಿಗಳ ಗ್ರಂಥ ಇವುಗಳ ಪಾರಾಯಣವಾದ ಮೇಲೆ ಸಭಾಮಂದಿರದ ನಾಯಕರು; “ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ” ಎಂದು ಅವರಿಗೆ ಹೇಳಿ ಕಳುಹಿಸಿದರು.


ಸೇವಕರು ತಮ್ಮ ಯಜಮಾನರಿಗೆ ವಿಧೇಯರಾಗಿದ್ದು ಅವರನ್ನು ಮೆಚ್ಚಿಸುವುದಕ್ಕೆ ಪ್ರಯತ್ನಪಡುತ್ತಾ ಎದುರುತ್ತರಕೊಡದೆ,


ಯಾಕೆಂದರೆ ನಮ್ಮ ಬೋಧನೆಯು ತಪ್ಪಾದದ್ದಲ್ಲ, ಅಶುದ್ಧವಾದದ್ದೂ ಅಲ್ಲ, ಮೋಸವೂ ಅಲ್ಲ.


“ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಅಧಿಕಾರವುಂಟು.” ಆದರೆ ಎಲ್ಲವೂ ಪ್ರಯೋಜನಕರವಾಗಿರುವುದಿಲ್ಲ. “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ಅಧಿಕಾರವುಂಟು” ಆದರೆ ಎಲ್ಲವೂ ಜನರನ್ನು ಭಕ್ತಿಯಲ್ಲಿ ಬೆಳೆಸುವುದಿಲ್ಲ.


ನಿಮ್ಮನ್ನು ಪ್ರೋತ್ಸಾಹಿಸುವುದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವುದಕ್ಕೂ ನಾನು ಸಂಕ್ಷೇಪವಾಗಿ ಬರೆದು, ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನ ಕೈಯಲ್ಲಿ ಇದನ್ನು ಕಳುಹಿಸಿದ್ದೇನೆ. ಈ ನಿಜವಾದ ಕೃಪೆಯಲ್ಲಿ ನಿಲ್ಲಿರಿ.


ಸಹೋದರರೇ, ಈ ಬುದ್ಧಿಯ ಮಾತನ್ನು ಸಹಿಸಿಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನಿಮಗೆ ಸಂಕ್ಷೇಪವಾಗಿ ಬರೆದಿದ್ದೇನೆ.


ಸಭೆಯಾಗಿ ಸೇರುವ ರೂಢಿಯನ್ನು ಕೆಲವರು ಬಿಟ್ಟಂತೆ ನಾವು ಬಿಟ್ಟು ಬಿಡದೆ, ಆ ದಿನವು ಸಮೀಪಿಸುತ್ತಾ ಬರುತ್ತದೆಂದು ನೀವು ತಿಳಿದುಕೊಂಡಿರುವುದರಿಂದ ಒಬ್ಬರನ್ನೊಬ್ಬರು ಮತ್ತಷ್ಟು ಹೆಚ್ಚಾಗಿಯೇ ಪ್ರೋತ್ಸಾಹಿಸುತ್ತಿರೋಣ.


ಈ ಕಾರ್ಯಗಳ ವಿಷಯದಲ್ಲಿ ಬೋಧಿಸುತ್ತಾ, ಎಚ್ಚರಿಸುತ್ತಾ, ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದ ಹಾಗೆ ನೋಡಿಕೋ.


ಯಾರಿಗಾದರೂ ಕ್ರಿಸ್ತನನ್ನು ನಂಬುವವರಾದ ಯಜಮಾನರಿದ್ದರೆ, ಅವರು ಆ ಯಜಮಾನರನ್ನು ಸಹೋದರರೆಂದು ಉದಾಸೀನಮಾಡದೆ, ತಮ್ಮ ಸೇವೆಯ ಫಲವನ್ನು ಹೊಂದುವವರು, ನಂಬಿಗಸ್ತರು, ಪ್ರಿಯರೂ ಆಗಿದ್ದಾರೆಂದು ತಿಳಿದು ಅವರಿಗೆ ಇನ್ನು ಹೆಚ್ಚಾದ ಸಂತೋಷದಿಂದಲೇ ಸೇವೆಮಾಡಬೇಕು. ಈ ಉಪದೇಶವನ್ನು ಮಾಡಿ ಅವರನ್ನು ಎಚ್ಚರಿಸು.


ಕಲ್ಪಿತಕಥೆಗಳಿಗೂ, ಕೊನೆಮೊದಲಿಲ್ಲದ ವಂಶಾವಳಿಗಳಿಗೂ ಲಕ್ಷ್ಯ ಕೊಡಬಾರದೆಂತಲೂ, ಆಜ್ಞಾಪಿಸಬೇಕೆಂಬುದಾಗಿ ನಿನಗೆ ಖಂಡಿತವಾಗಿ ಹೇಳಿದ ಪ್ರಕಾರ ಈಗಲೂ ಹೇಳುತ್ತಿದೇನೆ. ಅಂತಹ ಕಥೆಗಳೂ, ವಂಶಾವಳಿಗಳೂ ವಿವಾದಕ್ಕೆ ಎಡೆಮಾಡಿಕೊಡುತ್ತದೆಯೇ ಹೊರತು ದೇವರ ಯೋಜನೆಗಳಿಗೆ ಅನುಕೂಲವಾಗಿರುವುದಿಲ್ಲ. ನಂಬಿಕೆಯಿಂದ ಮಾತ್ರ ಅದು ಸಾಧ್ಯವಾಗುತ್ತದೆ.


ಇಂಥವರು ತಮ್ಮ ಕೆಲಸಕಾರ್ಯಗಳನ್ನು ನೋಡುತ್ತಾ ತಾವೇ ಸಂಪಾದಿಸಿದ್ದನ್ನು ಊಟಮಾಡಬೇಕೆಂದು ಕರ್ತನಾದ ಯೇಸು ಕ್ರಿಸ್ತನಲ್ಲಿ ನಾವು ಆಜ್ಞಾಪಿಸಿ ಬುದ್ಧಿ ಹೇಳುತ್ತೇವೆ.


ಆದಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿಕೊಳ್ಳಿರಿ.


ಕಡೆಯದಾಗಿ, ಸಹೋದರರೇ, ನಾವು ಕರ್ತನಾದ ಯೇಸುವಿನ ಮುಖಾಂತರ ನಿಮಗೆ ಕೊಟ್ಟಿರುವ ಆಜ್ಞೆಗಳನ್ನು ತಿಳಿದಿದ್ದೀರಷ್ಟೆ.


ನಿಮ್ಮ ಮೇಲೆ ಬಂದಿರುವ ಸಂಕಟಗಳಲ್ಲಿ ಒಬ್ಬರೂ ಚಂಚಲರಾಗದಂತೆ ನಿಮ್ಮನ್ನು ದೃಢಪಡಿಸುವುದಕ್ಕೂ ನಿಮ್ಮ ನಂಬಿಕೆಯ ವಿಷಯವಾಗಿ ಉತ್ತೇಜನಪಡಿಸುವುದಕ್ಕೂ ನಮ್ಮ ಸಹೋದರನೂ, ಕ್ರಿಸ್ತನ ಸುವಾರ್ತೆಯ ಕಾರ್ಯದಲ್ಲಿ ದೇವರ ಸೇವಕನೂ ಆಗಿರುವ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿದೆವು.


ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬರಿಗೂ ಬುದ್ಧಿ ಹೇಳುತ್ತಾ,


ನೀವು ನಮ್ಮ ಕುರಿತು ತಿಳಿದುಕೊಳ್ಳುವಂತೆ, ಅವನು ನಿಮ್ಮ ಹೃದಯಗಳನ್ನು ಉರಿದುಂಬಿಸುವಂತೆ,


ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತು ಹೊರಡಬಾರದು. ಭಕ್ತಿಯನ್ನು ವೃದ್ಧಿ ಮಾಡುವಂತಹ ಸಮಯೋಚಿತವಾದ ಮಾತನ್ನು ಆಡಿದರೆ ಕೇಳುವವರಿಗೆ ಹಿತವಾಗಿ ತೋರುವುದು.


ಇನ್ನೂ ಅವನನ್ನು ಶಿಕ್ಷಿಸದೇ ಮನ್ನಿಸಿರಿ, ಸಂತೈಸಿರಿ. ಇಲ್ಲವಾದರೆ ಅವನು ಅಧಿಕವಾದ ದುಃಖದಲ್ಲಿ ಮುಳುಗಿ ಹೋಗುವನು.


ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲ್ಲಿ ನಮ್ಮನ್ನು ಸಂತೈಸುವವನಾಗಿದ್ದಾನೆ. ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಬಿದ್ದಿರುವವರನ್ನು ಸಂತೈಸುವುದಕ್ಕೆ ಶಕ್ತರಾಗುತ್ತೇವೆ.


ನೀನು ಎಷ್ಟು ಚೆನ್ನಾಗಿ ಕೃತಜ್ಞತಾಸ್ತುತಿ ಮಾಡಿದರೂ, ಆದರಿಂದ ಬೇರೊಬ್ಬನು ಭಕ್ತಿವೃದ್ಧಿಹೊಂದುವುದಿಲ್ಲ.


ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥಗಳ ವಿಷಯವನ್ನು ಕುರಿತಾದರೋ. “ನಮ್ಮೆಲ್ಲರಿಗೆ ಜ್ಞಾನವುಂಟೆಂದು” ನಾವು ಬಲ್ಲೆವು. ತಿಳಿವಳಿಕೆಯು ಉಬ್ಬಿಸುತ್ತದೆ, ಆದರೆ ಪ್ರೀತಿಯು ಭಕ್ತಿಯನ್ನು ಬೆಳೆಸುತ್ತದೆ.


ನಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಹಿತವನ್ನೂ, ಭಕ್ತಿವೃದ್ಧಿಯನ್ನೂ ಅಪೇಕ್ಷಿಸುವವನಾಗಿ ಅವನನ್ನು ಮೆಚ್ಚಿಸಬೇಕು.


ಬೋಧಿಸುವವನು ಬೋಧಿಸುವುದರಲ್ಲಿಯೂ, ಬುದ್ಧಿಹೇಳುವವನು ಬುದ್ಧಿ ಹೇಳುವುದರಲ್ಲಿಯೂ ನಿರತನಾಗಿರಲಿ. ದಾನಕೊಡುವವನು ಯಥಾರ್ಥಮನಸ್ಸಿನಿಂದ ಕೊಡಲಿ. ದಾರಿ ತೋರಿಸುವವನು ಆಸಕ್ತಿಯಿಂದ ಅದನ್ನು ಮಾಡಲಿ. ಕಷ್ಟದಲ್ಲಿರುವವರಿಗೆ ಉಪಕಾರಮಾಡುವವನು ಸಂತೋಷವಾಗಿ ಮಾಡಲಿ.


ಯೂದನೂ, ಸೀಲನೂ ತಾವೇ ಪ್ರವಾದಿಗಳಾಗಿದ್ದುದರಿಂದ ಸಹೋದರರನ್ನು ಅನೇಕ ಮಾತುಗಳಿಂದ ಉತ್ತೇಜಿಸಿ ದೃಢಪಡಿಸಿದರು.


ಅಲ್ಲಿ ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿ ಕ್ರಿಸ್ತ ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲಿರಿ ಎಂದು ಪ್ರೋತ್ಸಾಹಿಸಿದರು. ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕಾಗಿದೆ ಎಂದು ಬೋಧಿಸಿದರು.


ಹೀಗಿರಲಾಗಿ ಯೂದಾಯ, ಗಲಿಲಾಯ, ಸಮಾರ್ಯ ಸೀಮೆಗಳಲ್ಲಿದ್ದ ಸಭೆಯು ಸಮಾಧಾನ ಹೊಂದಿತು; ಮತ್ತು ಭಕ್ತಿಯಲ್ಲಿ ಬೆಳೆದು ಕರ್ತನ ಭಯದಲ್ಲಿ ನಡೆದು, ಪವಿತ್ರಾತ್ಮನಿಂದ ಪ್ರೋತ್ಸಾಹವನ್ನು ಹೊಂದಿ ಬೆಳೆಯುತ್ತಾ ಬಂದಿತು.


ಇನ್ನು ಬೇರೆ ಅನೇಕ ಮಾತುಗಳಿಂದ ಆತನು ಇಸ್ರಾಯೇಲ್ ಜನರಿಗೆ ಬುದ್ಧಿಹೇಳಿ ಶುಭವಾರ್ತೆಯನ್ನು ಸಾರುತ್ತಿದ್ದನು.


ನಿಮ್ಮಲ್ಲಿ ಒಬ್ಬರಾದರೂ ಪಾಪದಲ್ಲಿ ಸಿಕ್ಕಿ ಮೋಸಹೋಗಿ ಕಠಿಣರಾಗದಂತೆ, ‘ಇಂದು’ ಎಂದು ಕರೆಯಲ್ಪಡುವ ಅವಕಾಶ ಇನ್ನೂ ಇರುವಾಗಲೇ, ಪ್ರತಿದಿನವೂ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ.


ಈ ಪ್ರಕಾರ ಮಾಡಿದವರೊಳಗೆ ಕುಪ್ರದ್ವೀಪದಲ್ಲಿ ಹುಟ್ಟಿದ ಲೇವಿಯನಾಗಿದ್ದ ಯೋಸೇಫನೆಂಬವನು ಒಬ್ಬನು. ಅವನಿಗೆ ಅಪೊಸ್ತಲರು ಬಾರ್ನಬ ಎಂದು ಹೆಸರಿಟ್ಟಿದ್ದರು, ಅಂದರೆ ಧೈರ್ಯದಾಯಕ ಎಂದರ್ಥ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು