Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಗಂಭೀರವಾಗಿ ಯೋಚಿಸಿರಿ! ನೀತಿವಂತರಾಗಿ ಎಚ್ಚರದಿಂದಿರಿ. ಪಾಪಮಾಡಬೇಡಿರಿ. ಕೆಲವರಿಗೆ ದೇವರ ಕುರಿತಾಗಿ ಜ್ಞಾನವೇ ಇಲ್ಲ; ನಿಮಗೆ ನಾಚಿಕೆ ಆಗಲೆಂದೇ ಇದನ್ನು ಹೇಳುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಜಾಗೃತರಾಗಿರಿ, ದುರ್ಮಾರ್ಗವನ್ನು ಬಿಟ್ಟುಬಿಡಿ, ಸನ್ಮತಿಯುಳ್ಳವರಾಗಿರಿ. ದೇವರನ್ನು ಅರಿಯದ ಮೂಢರು ನಿಮ್ಮಲ್ಲಿ ಕೆಲವರು ಇದ್ದಾರೆ. ನಿಮಗೆ ನಾಚಿಕೆ ಆಗಲೆಂದೇ ಇದನ್ನು ಹೇಳುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಇಂಥ ಅಮಲಿನಿಂದೆಚ್ಚತ್ತು ನೀತಿವಂತರಾಗಿರಿ, ಪಾಪವನ್ನು ಬಿಟ್ಟುಬಿಡಿರಿ. ಕೆಲವರಿಗೆ ದೇವರ ವಿಷಯದಲ್ಲಿ ಜ್ಞಾನವೇ ಇಲ್ಲ; ನಿಮಗೆ ನಾಚಿಕೆ ಹುಟ್ಟಬೇಕೆಂದು ಇದನ್ನು ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಸ್ವಸ್ಥಚಿತ್ತರಾಗಿರಿ ಮತ್ತು ಪಾಪಮಾಡುವುದನ್ನು ನಿಲ್ಲಿಸಿರಿ. ನಿಮ್ಮಲ್ಲಿ ಕೆಲವರು ದೇವರನ್ನು ಅರಿತುಕೊಂಡಿಲ್ಲ. ನಿಮಗೆ ನಾಚಿಕೆ ಆಗಲೆಂದು ಇದನ್ನು ಹೇಳುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಸ್ವಸ್ಥಚಿತ್ತರಾಗಿರಿ, ಪಾಪಮಾಡುವುದನ್ನು ನಿಲ್ಲಿಸಿರಿ. ಕೆಲವರಂತೂ ದೇವರನ್ನೇ ಅಲಕ್ಷ್ಯಮಾಡುವವರಾಗಿದ್ದಾರೆ. ನಿಮಗೆ ನಾಚಿಕೆಯಾಗಬೇಕೆಂದು ನಾನು ಇದನ್ನು ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಘುಂಗೆತ್ನಾ ಉಟಾ ಅನಿ ಪಾಪ್ ಕರ್‍ತಲೆ ಸೊಡಾ. ತುಮ್ಚ್ಯಾತ್ಲ್ಯಾ ಉಲ್ಲ್ಯಾ ಲೊಕಾಕ್ನಿ ದೆವಾಚಿ ವಳಕುಚ್ ನಾ. ತುಮ್ಕಾ ಲಜ್ಜಾ ಕರುಕ್ ಪಾಜೆ ಮನುನ್ ಮಿಯಾ ಹೆ ಸಾಂಗ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:34
17 ತಿಳಿವುಗಳ ಹೋಲಿಕೆ  

ನಿಮ್ಮನ್ನು ನಾಚಿಕೆಪಡಿಸುವುದಕ್ಕೆ ಇದನ್ನು ಹೇಳುತ್ತಿದ್ದೇನೆ. ತನ್ನ ಸಹೋದರರ ಮಧ್ಯದಲ್ಲಿ ನ್ಯಾಯವನ್ನು ಬಗೆಹರಿಸಬಲ್ಲವನಾದ ಬುದ್ಧಿವಂತನು ನಿಮ್ಮಲ್ಲಿ ಒಬ್ಬನಾದರೂ ಇಲ್ಲವೋ?


ಈಗಿನ ಕಾಲವು ನಿದ್ದೆಯಿಂದ ಎಚ್ಚರವಾಗಿರತಕ್ಕ ಕಾಲವೆಂದು ಅರಿತು ಇದನ್ನೆಲ್ಲಾ ಮಾಡಿರಿ. ನಾವು ಕ್ರಿಸ್ತನನ್ನು ಮೊದಲು ನಂಬಿದ ಕಾಲದಲ್ಲಿ ಇದ್ದುದಕ್ಕಿಂತ ಈಗ ನಮ್ಮ ವಿಮೋಚನೆಯ ಕಾಲವು ಹತ್ತಿರವಾಗಿದೆ.


ಅಮಲೇರಿದವರೇ, ಎಚ್ಚರಗೊಳ್ಳಿರಿ ಮತ್ತು ಅಳಿರಿ! ದ್ರಾಕ್ಷಾರಸ ಕುಡಿಯುವವರೇ, ಗೋಳಾಡಿರಿ, ಏಕೆಂದರೆ ದ್ರಾಕ್ಷಾರಸದ ಸಿಹಿಯು ನಿಮ್ಮ ಬಾಯಿಗೆ ಸಿಕ್ಕುವುದಿಲ್ಲ.


ಆದ್ದರಿಂದ, “ನಿದ್ರೆ ಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಏಳು! ಆಗ ಕ್ರಿಸ್ತನು ನಿನ್ನಲ್ಲಿ ಪ್ರಕಾಶಿಸುವನು” ಎಂದು ಹೇಳಿಯದೆಯಲ್ಲಾ.


ಆದಾಗ್ಯೂ, ಈ ತಿಳಿವಳಿಕೆಯು ಎಲ್ಲರಲ್ಲಿಯೂ ಇಲ್ಲ. ಪ್ರತಿಯಾಗಿ, ಕೆಲವರು ಈ ವರೆಗೂ ವಿಗ್ರಹಗಳ ಬಳಿಗೆ ಹೋಗುವ ರೂಢಿಯಲ್ಲಿದರಿಂದ ತಾವು ತಿನ್ನುವ ಈ ಆಹಾರವು ವಿಗ್ರಹಕ್ಕೆ ಅರ್ಪಿಸಿದ್ದೆಂದು ತಿನ್ನುತ್ತಾರೆ; ಅವರ ಮನಸ್ಸಾಕ್ಷಿಯು ಬಲಹೀನವಾದ್ದದರಿಂದ ಕಲುಷಿತವಾಗಿ ಹೋಗಿದೆ.


ಇದಲ್ಲದೆ ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ಮಾಡಬಾರದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟನು.


ಅದಕ್ಕೆ ಆಕೆಯು “ಕರ್ತನೇ, ಯಾರೂ ಶಿಕ್ಷೆ ವಿಧಿಸಲಿಲ್ಲ” ಎಂದಳು. ಯೇಸು ಆಕೆಗೆ “ನಾನೂ ಸಹ ನಿನ್ನನ್ನು ಶಿಕ್ಷೆ ವಿಧಿಸುವುದಿಲ್ಲ, ಹೋಗು, ಇನ್ನು ಮುಂದೆ ಪಾಪಮಾಡಬೇಡ” ಎಂದು ಹೇಳಿದನು.


ಇದಾದ ಮೇಲೆ ಯೇಸು ಅವನನ್ನು ದೇವಾಲಯದಲ್ಲಿ ಕಂಡು, “ನಿನಗೆ ಸ್ವಸ್ಥವಾಯಿತಲ್ಲಾ; ಇನ್ನು ಮೇಲೆ ಪಾಪ ಮಾಡಬೇಡ, ನಿನಗೆ ಹೆಚ್ಚಿನ ಕೇಡು ಬಂದೀತು” ಎಂದನು.


ಹೀಗಿರಲು ಹಡಗಿನ ನೌಕಾಧಿಕಾರಿ ಅವನ ಬಳಿಗೆ ಬಂದು, “ಇದೇನು, ನೀನು ನಿದ್ದೆಮಾಡುತ್ತಿರುವುದು? ಎದ್ದೇಳು, ನಿನ್ನ ದೇವರಿಗೆ ಮೊರೆಯಿಡು; ಒಂದು ವೇಳೆ ನಿನ್ನ ದೇವರು ನಮ್ಮನ್ನು ರಕ್ಷಿಸಾನು, ನಾವೆಲ್ಲರು ನಾಶವಾಗದೆ ಉಳಿದೇವು” ಎಂದು ಹೇಳಿದನು.


ನಿನಗೆ ವಿರುದ್ಧವಾಗಿ ಪಾಪಮಾಡದಂತೆ, ನಿನ್ನ ನುಡಿಗಳನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡಿದ್ದೇನೆ.


ಭಯಪಡಿರಿ, ಪಾಪಮಾಡಬೇಡಿರಿ; ಹಾಸಿಗೆಯ ಮೇಲೆ ಇರುವಾಗ ಹೃದಯದಲ್ಲೇ ಆಲೋಚಿಸಿಕೊಳ್ಳಿರಿ ಮತ್ತು ಮೌನವಾಗಿರಿ. ಸೆಲಾ


ಸುಳ್ಳಾಡುವುದಕ್ಕೆ ತಮ್ಮ ನಾಲಿಗೆಯನ್ನು ಬಿಲ್ಲಿನಂತೆ ಬಗ್ಗಿಸುತ್ತಾರೆ; ಸತ್ಯಕ್ಕೆ ಪ್ರತಿಕೂಲವಾಗಿ ದೇಶದಲ್ಲಿ ಪ್ರಬಲಿಸಿದ್ದಾರೆ. ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನು ಅರಿಯರು ಎಂದು ಯೆಹೋವನು ನುಡಿಯುತ್ತಾನೆ.


ಅದಕ್ಕೆ ಯೇಸು ಉತ್ತರವಾಗಿ ಅವರಿಗೆ, “ನೀವು ದೇವರ ವಾಕ್ಯವನ್ನಾದರೂ ದೇವರ ಶಕ್ತಿಯನ್ನಾದರೂ ಸರಿಯಾಗಿ ತಿಳಿದುಕೊಳ್ಳದೆ ತಪ್ಪು ಅಭಿಪ್ರಾಯದಲ್ಲಿದ್ದೀರಿ;


ದೇವರು ಸತ್ತವರನ್ನು ಎಬ್ಬಿಸಿದ್ದು ನಂಬಲು ಅಸಾಧ್ಯವೆಂದು ನೀವು ಏಕೆ ತೀರ್ಮಾನಿಸುತ್ತೀರಿ?


ನಿಮ್ಮನ್ನು ನಾಚಿಕೆಪಡಿಸುವುದಕ್ಕಾಗಿ ಬರೆಯದೆ ನನ್ನ ಪ್ರಿಯ ಮಕ್ಕಳೆಂದು ಭಾವಿಸಿ ನಿಮಗೆ ಬುದ್ಧಿ ಹೇಳುವುದಕ್ಕಾಗಿಯೇ ಈ ಮಾತುಗಳನ್ನು ಬರೆದಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು