Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 “ಸತ್ತವರನ್ನು ಮರಳಿ ಜೀವಂತರಾಗಿಸುವುದು ಹೇಗೆ ಸಾಧ್ಯ? ಎಂಥ ದೇಹದಿಂದ ಎದ್ದುಬರುತ್ತಾರೆ?” ಎಂದು ಯಾರಾದರೂ ಪ್ರಶ್ನಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಸತ್ತವರನ್ನು ಮರಳಿ ಜೀವಂತರಾಗಿಸುವುದು ಹೇಗೆ ಸಾಧ್ಯ? ಅವರ ದೇಹಾಕೃತಿ ಹೇಗಿರುತ್ತದೆ? ಎಂದು ಯಾರಾದರೂ ಕೇಳಿಯಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಸತ್ತವರು ಹೇಗೆ ಎಬ್ಬಿಸಲ್ಪಡುತ್ತಾರೆ, ಎಂಥ ದೇಹದಿಂದ ಬರುತ್ತಾರೆ ಎಂದು ಒಬ್ಬನು ಕೇಳಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 “ಸತ್ತವರು ಹೇಗೆ ಎದ್ದುಬರುವರು? ಅವರಿಗೆ ಯಾವ ಬಗೆಯ ದೇಹವಿರುತ್ತದೆ?” ಎಂದು ಕೆಲವರು ಕೇಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 “ಸತ್ತವರು ಎದ್ದೇಳುವುದು ಹೇಗೆ? ಎಂಥ ದೇಹದಿಂದ ಎದ್ದು ಬರುತ್ತಾರೆ?” ಎಂದು ಯಾರಾದರೂ ಕೇಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಅತ್ತಾ ಕೊನ್ಬಿ ಎಕ್ಲೊ ಮರಲ್ಲ್ಯಾಕ್ನಿ ಝಿತ್ತೆ ಕರುನ್ ಉಟ್ವುತಲೆ ಮಟ್ಲ್ಯಾರ್ ಕಶೆ ತೆ? ಕಸ್ಲೆ ಆಂಗ್ ಘೆವ್ನ್ ತೆನಿ ಝಿತ್ತೆ ಹೊವ್ನ್ ಯೆತ್ಯಾತ್? ಇಚಾರುಕ್ಬಿ ಫಿರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:35
13 ತಿಳಿವುಗಳ ಹೋಲಿಕೆ  

ಆತನು ನನಗೆ “ನರಪುತ್ರನೆ, ಈ ಎಲುಬುಗಳಿಗೆ ಜೀವವು ಬರಬಹುದೋ?” ಎಂದು ಕೇಳಲು ನಾನು, “ಕರ್ತನಾದ ಯೆಹೋವನೇ, ನೀನೇ ಬಲ್ಲೆ” ಎಂದು ಉತ್ತರಕೊಟ್ಟೆನು.


“ದೇವರ ಚಿತ್ತವನ್ನು ಎದುರಿಸುವವರು ಇಲ್ಲದಿರುವಾಗ ಆತನು ತಪ್ಪು ಹುಡುಕುವುದು ಹೇಗೆ” ಎಂದು ನೀನು ನನ್ನನ್ನು ಕೇಳುವಿ.


ಆತನು ಎಲ್ಲವನ್ನೂ ತನಗೆ ಅಧೀನಮಾಡಿಕೊಳ್ಳಲಾಗುವ ಪರಾಕ್ರಮವನ್ನು ಹೊಂದಿದವನಾಗಿ ದೀನಾವಸ್ಥೆಯುಳ್ಳ ನಮ್ಮ ದೇಹವನ್ನು ಪ್ರಭಾವವುಳ್ಳ ತನ್ನ ದೇಹದಂತೆ ರೂಪಾಂತರಪಡಿಸುವನು.


ಆಗ ಅವರು “ಹಾಗಾದರೆ ನಿನ್ನ ಕಣ್ಣು ಹೇಗೆ ತೆರೆದವು?” ಎಂದು ಅವನನ್ನು ಕೇಳಿದ್ದಕ್ಕೆ,


ಅದಕ್ಕೆ ನಿಕೊದೇಮನು “ಇದೆಲ್ಲಾ ಹೇಗೆ ಸಾಧ್ಯ?” ಎಂದಾಗ,


ನಿಕೊದೇಮನು ಆತನನ್ನು, “ಮನುಷ್ಯನು ಮುದುಕನಾದ ಮೇಲೆ ತಿರುಗಿ ಹುಟ್ಟುವುದು ಹೇಗೆ? ಅವನು ತನ್ನ ತಾಯಿಯ ಗರ್ಭದಲ್ಲಿ ಎರಡನೆಯ ಸಾರಿ ಪ್ರವೇಶಿಸಿ ಹುಟ್ಟುವುದಕ್ಕಾದೀತೇ?” ಎಂದು ಕೇಳಿದನು.


ಆಮೇಲೆ ಆತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಈ ಎಲುಬುಗಳು ಇಸ್ರಾಯೇಲಿನ ಮನೆತನಗಳೇ; ಇಗೋ, ಆ ಮನೆತನದವರು, ‘ಅಯ್ಯೋ, ನಮ್ಮ ಎಲುಬುಗಳು ಒಣಗಿಹೋದವು, ನಮ್ಮ ನಿರೀಕ್ಷೆಯು ಹಾಳಾಯಿತು; ನಾವು ಸಂಪೂರ್ಣವಾಗಿ ನಾಶವಾದೆವು’” ಅಂದುಕೊಳ್ಳುತ್ತಿದ್ದಾರೆ.


ಗಾಳಿಯ ಮಾರ್ಗವನ್ನೂ, ಗರ್ಭಿಣಿಯ ಗರ್ಭದಲ್ಲಿ ಎಲುಬುಗಳು ಬೆಳೆಯುವ ರೀತಿಯನ್ನೂ, ನೀನು ಹೇಗೆ ತಿಳಿಯುವುದಿಲ್ಲವೋ ಹಾಗೆಯೇ, ಸರ್ವಶಕ್ತನಾದ ದೇವರ ಕಾರ್ಯವನ್ನು ಅರಿಯುವುದಿಲ್ಲ.


ಅವರು “ದೇವರು ವಿಚಾರಿಸುವುದೆಲ್ಲಿ? ಪರಾತ್ಪರನಾದ ದೇವರು ಚಿಂತಿಸುವದುಂಟೋ” ಅಂದುಕೊಳ್ಳುತ್ತಾರೆ.


ನೀನಾದರೋ, ‘ದೇವರಿಗೆ ಏನು ಗೊತ್ತು? ಕಾರ್ಗತ್ತಲಿನ ಆಚೆಯಿಂದ ನ್ಯಾಯತೀರಿಸಬಲ್ಲನೋ?


ಕಾಡುಕತ್ತೆಯ ಮರಿಗೆ ನರಜನ್ಮವಾದರೆ ಅವಿವೇಕಿಯಾದ ಮನುಷ್ಯನು ವಿವೇಕವನ್ನು ಪಡೆಯುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು