Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 16:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ತಿಮೊಥೆಯನು ಬಂದರೆ ಅವನು ನಿಮ್ಮಲ್ಲಿ ನಿರ್ಭಯನಾಗಿರುವಂತೆ ನೋಡಿಕೊಳ್ಳಿರಿ; ಅವನು ಸಹ ನನ್ನ ಹಾಗೆಯೇ ಕರ್ತನ ಸೇವೆಯನ್ನು ಮಾಡುತ್ತಿದ್ದಾನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ತಿಮೊಥೇಯನು ಬಂದರೆ ಆತನಿಗೆ ಯಾವ ಚಿಂತೆಯೂ ಇರದಂತೆ ನೋಡಿಕೊಳ್ಳಿ. ಆತನು ನನ್ನ ಹಾಗೆ ಪ್ರಭುವಿನ ಸೇವೆಯಲ್ಲಿಯೇ ನಿರತನಾಗಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ತಿಮೊಥೆಯನು ಬಂದರೆ ಅವನು ನಿಮ್ಮ ಬಳಿಯಲ್ಲಿ ಭಯವಿಲ್ಲದೆ ಇರುವಂತೆ ನೋಡಿಕೊಳ್ಳಿರಿ; ನನ್ನ ಹಾಗೆಯೇ ಕರ್ತನ ಕೆಲಸವನ್ನು ನಡಿಸುತ್ತಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ತಿಮೊಥೆಯನು ನಿಮ್ಮ ಬಳಿಗೆ ಬರಬಹುದು. ಅವನು ನಿಮ್ಮೊಂದಿಗಿರುವಾಗ ಅವನಿಗೆ ಚಿಂತೆಯಾಗದಂತೆ ನೋಡಿಕೊಳ್ಳಿರಿ. ನಾನು ಪ್ರಭುವಿಗೋಸ್ಕರ ಕೆಲಸ ಮಾಡುತ್ತಿರುವಂತೆ ಅವನು ಸಹ ಮಾಡುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನನ್ನ ಹಾಗೆಯೇ ತಿಮೊಥೆ ಕರ್ತನ ಸೇವೆ ಮಾಡುತ್ತಿದ್ದಾನೆ. ಅವನು ಬಂದರೆ, ಅವನು ನಿಮ್ಮೊಂದಿಗಿರುವಾಗ ಅವನಿಗೆ ಯಾವ ಭಯವೂ ಇಲ್ಲದಂತೆ ನೋಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತಿಮೊತಿ ಯೆಲ್ಯಾರ್‍ಬಿ ತೊ ಕಸ್ಲೆಬಿ ಭಿಂಯೆ ನಸ್ತಾನಾ ತುಮ್ಚ್ಯಾ ವಾಂಗ್ಡಾ ರ್‍ಹಾತಲಿ ಯವಸ್ತಾ ಕರಾ; ಕಶ್ಯಾಕ್ ಮಟ್ಲ್ಯಾರ್ ಮಿಯಾ ಕರ್‍ತಾ ತಸೆಚ್ ತೊಬಿ ಧನಿಯಾಚೆ ಕಾಮ್ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 16:10
11 ತಿಳಿವುಗಳ ಹೋಲಿಕೆ  

ಆದ್ದರಿಂದ, ನನ್ನ ಸಹೋದರರೇ, ಸ್ಥಿರಚಿತ್ತರಾಗಿಯೂ, ನಿಶ್ಚಲರಾಗಿರಿ. ಯಾಕೆಂದರೆ ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವುದಿಲ್ಲ. ಅದನ್ನು ತಿಳಿದು ಕರ್ತನ ಕೆಲಸವನ್ನು ಸದಾ ಅತ್ಯಾಸಕ್ತಿಯಿಂದಲೂ ಮತ್ತು ನಿರಂತರ ಶ್ರದ್ಧೆಯುಳ್ಳವರಾಗಿಯೂ ಮಾಡುವವರಾಗಿರಿ.


ನಿಮ್ಮ ಮೇಲೆ ಬಂದಿರುವ ಸಂಕಟಗಳಲ್ಲಿ ಒಬ್ಬರೂ ಚಂಚಲರಾಗದಂತೆ ನಿಮ್ಮನ್ನು ದೃಢಪಡಿಸುವುದಕ್ಕೂ ನಿಮ್ಮ ನಂಬಿಕೆಯ ವಿಷಯವಾಗಿ ಉತ್ತೇಜನಪಡಿಸುವುದಕ್ಕೂ ನಮ್ಮ ಸಹೋದರನೂ, ಕ್ರಿಸ್ತನ ಸುವಾರ್ತೆಯ ಕಾರ್ಯದಲ್ಲಿ ದೇವರ ಸೇವಕನೂ ಆಗಿರುವ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿದೆವು.


ಈ ಕಾರಣದಿಂದ ಕರ್ತನಲ್ಲಿ ನನ್ನ ಪ್ರಿಯ ಮತ್ತು ನಂಬಿಗಸ್ತ ಮಗನಾದ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೇನೆ. ನಾನು ಪ್ರತಿಯೊಂದು ಸಭೆಗಳಲ್ಲಿಯೂ, ಎಲ್ಲೆಲ್ಲಿಯೂ ಬೋಧಿಸುವ ಹಾಗೆ ಕ್ರಿಸ್ತನಲ್ಲಿರುವ ನನ್ನ ನಡವಳಿಕೆಗಳನ್ನು ಅವನು ನಿಮ್ಮ ನೆನಪಿಗೆ ತರುವನು.


ನನ್ನ ಜೊತೆಕೆಲಸದವನಾದ ತಿಮೊಥೆಯನೂ, ನನ್ನ ಸಂಬಂಧಿಕರಾದ ಲೂಕ್ಯನೂ, ಯಾಸೋನನೂ ಮತ್ತು ಸೋಸಿಪತ್ರನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ


ಹೀಗಿದ್ದರೆ ನೀವು ಹೊರಗಿನವರ ದೃಷ್ಟಿಯಲ್ಲಿ ಸಜ್ಜನರಾಗಿರುವುದೇ ಅಲ್ಲದೆ ನಿಮಗೆ ಯಾವುದಕ್ಕೂ ಕೊರತೆಯಿರುವುದಿಲ್ಲ.


ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದೆನೆಂದರೆ; ದೇವರಿಂದ ಪಡೆದ ಕೃಪೆಯನ್ನು ವ್ಯರ್ಥಮಾಡಬೇಡಿರಿ.


ದೇವರ ಚಿತ್ತಾನುಸಾರ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನೂ ಸಹೋದರನಾದ ತಿಮೊಥೆಯನೂ ಕೊರಿಂಥದಲ್ಲಿರುವ ದೇವರ ಸಭೆಯವರಿಗೂ ಅಖಾಯ ಸೀಮೆಯಲ್ಲಿ ಇರುವ ದೇವಜನರೆಲ್ಲರಿಗೂ ಬರೆಯುವುದೇನಂದರೆ,


ಆದ್ದರಿಂದ ಯಾರೂ ಅವನನ್ನು ತಿರಸ್ಕರಿಸಬಾರದು. ಅವನು ನನ್ನ ಬಳಿಗೆ ಬರುವಂತೆ ಅವನನ್ನು ಸಮಾಧಾನದಿಂದ ಕಳುಹಿಸಿರಿ; ಅವನು ಸಹೋದರರೊಂದಿಗೆ ಬರುವುದನ್ನು ಎದುರುನೋಡುತ್ತಾ ಇದ್ದೇನೆ.


ಆದರೆ ಅವನು ತನಗೆ ಸೇವೆಮಾಡುವವರಲ್ಲಿ ಇಬ್ಬರಾದ ತಿಮೊಥೆಯನನ್ನೂ ಮತ್ತು ಎರಸ್ತನನ್ನೂ ಮಕೆದೋನ್ಯಕ್ಕೆ ಕಳುಹಿಸಿ ತಾನು ಆಸ್ಯಸೀಮೆಯಲ್ಲಿ ಕೆಲವು ಕಾಲ ತಂಗಿದನು.


ಅನಂತರ ಅವನು ದೆರ್ಬೆಗೂ, ಲುಸ್ತ್ರಕ್ಕೂ ಬಂದನು. ಲುಸ್ತ್ರದಲ್ಲಿ ತಿಮೊಥೆಯನೆಂಬ ಒಬ್ಬ ಶಿಷ್ಯನಿದ್ದನು. ಅವನು ಕ್ರಿಸ್ತನನ್ನು ನಂಬಿದ್ದ ಒಬ್ಬ ಯೆಹೂದ್ಯ ಸ್ತ್ರೀಯ ಮಗನು. ಅವನ ತಂದೆ ಗ್ರೀಕನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು