Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 2:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸಹೋದರರೇ, ನಾನು ಗುಪ್ತವಾಗಿದ್ದ ದೇವರ ಸತ್ಯಾರ್ಥಗಳನ್ನು ತಿಳಿಸುವವನಾಗಿ ನಿಮ್ಮ ಬಳಿಗೆ ಬಂದಾಗ ವಾಕ್ಚಾತುರ್ಯದಿಂದಾಗಲಿ, ಜ್ಞಾನದಿಂದಾಗಲಿ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸಹೋದರರೇ, ದೇವರ ಸತ್ಯಾರ್ಥವನ್ನು ಸಾರಲು ನಿಮ್ಮಲ್ಲಿಗೆ ನಾನು ಬಂದಾಗ ವಾಕ್ಚಾತುರ್ಯವನ್ನಾಗಲಿ, ಜ್ಞಾನಾಡಂಬರವನ್ನಾಗಲಿ ಪ್ರದರ್ಶಿಸುತ್ತಾ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸಹೋದರರೇ, ನಾನಂತೂ ದೇವರು ಹೇಳಿಕೊಟ್ಟ ಮಾತನ್ನು ತಿಳಿಸುವವನಾಗಿ ನಿಮ್ಮ ಬಳಿಗೆ ಬಂದಾಗ ವಾಕ್ಚಾತುರ್ಯದಿಂದಾಗಲಿ ಜ್ಞಾನಾಡಂಬರದಿಂದಾಗಲಿ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಪ್ರಿಯ ಸಹೋದರ ಸಹೋದರಿಯರೇ, ನಾನು ನಿಮ್ಮ ಬಳಿಗೆ ಬಂದಿದ್ದಾಗ, ನಾನು ನಿಮಗೆ ದೇವರ ಸತ್ಯವನ್ನು ತಿಳಿಸಿದೆನು. ಆದರೆ ನಾನು ನಾಜೂಕಾದ ಪದಗಳನ್ನಾಗಲಿ ಮಹಾ ಜ್ಞಾನವನ್ನಾಗಲಿ ಉಪಯೋಗಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಪ್ರಿಯರೇ, ನಾನು ನಿಮ್ಮ ಬಳಿಗೆ ಬಂದಾಗ ವಾಕ್ಚಾತುರ್ಯದಿಂದಾಗಲಿ, ಮಾನವೀಯ ಜ್ಞಾನದಿಂದಾಗಲಿ ದೇವರ ವಾಕ್ಯವನ್ನು ಸಾರುವವನಾಗಿ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಮಾಜ್ಯಾ ಭಾವಾನು ಅನಿ ಭೆನಿಯಾನು ದೆವಾಚೊ ಖರೊ ಗುಟ್ಟ್ ಪ್ರಚಾರ್ ಕರುಕ್ ತುಮ್ಚ್ಯಾಕ್ಡೆ ಯೆಲ್ಲ್ಯಾ ತನ್ನಾ ಮಿಯಾ ಮೊಟ್ಯಾ ಮೊಟ್ಯಾ ಗೊಸ್ಟಿಯಾ ಅನಿ ಶಿಕಾಪ್ ವಾಪ್ರುಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 2:1
23 ತಿಳಿವುಗಳ ಹೋಲಿಕೆ  

ಕ್ರಿಸ್ತನು ನನ್ನನ್ನು ಕಳುಹಿಸಿದ್ದು ದೀಕ್ಷಾಸ್ನಾನಮಾಡಿಸುವುದಕ್ಕಲ್ಲ ಆದರೆ ಸುವಾರ್ತೆಯನ್ನು ಸಾರುವುದಕ್ಕಾಗಿಯೇ. ಅದನ್ನು ಮನುಷ್ಯಜ್ಞಾನದ ಮಾತುಗಳಿಂದ ಸಾರಬೇಕೆಂದು ಕಳುಹಿಸಲಿಲ್ಲ; ಹಾಗೆ ಸಾರಿದರೆ ಕ್ರಿಸ್ತನ ಶಿಲುಬೆಯ ಶಕ್ತಿಯು ಮಾತಿನ ಚತುರತೆಯಿಂದ ನಿರರ್ಥಕವಾಗಿ ಹೋಗುತ್ತದೆ.


ಇವುಗಳನ್ನು ಮನುಷ್ಯ ಜ್ಞಾನವು ಕಲಿಸಿದ ಮಾತುಗಳಿಂದ ಹೇಳದೆ ಪವಿತ್ರಾತ್ಮನೇ ಕಲಿಸಿಕೊಟ್ಟ ಮಾತುಗಳಿಂದ ಹೇಳಿ ಆತ್ಮೀಕವಾದವುಗಳನ್ನು ಆತ್ಮೀಕರಾದವರಿಗೆ ಯುಕ್ತವಾದ ರೀತಿಯಲ್ಲಿ ಸ್ಪಷ್ಟಪಡಿಸುತ್ತೇವೆ.


ನಿಮ್ಮ ನಂಬಿಕೆಯು ಮನುಷ್ಯಜ್ಞಾನವನ್ನು ಆಧಾರ ಮಾಡಿಕೊಳ್ಳದೆ ದೇವರ ಶಕ್ತಿಯನ್ನು ಆಧಾರಮಾಡಿಕೊಳ್ಳಬೇಕೆಂದು ನನ್ನ ಬೋಧನೆಯಲ್ಲಿಯೂ, ಪ್ರಸಂಗದಲ್ಲಿಯೂ ಮನವೊಲಿಸುವ ಜ್ಞಾನವಾಕ್ಯಗಳನ್ನು ನಾನು ಪ್ರಯೋಗಿಸದೇ ದೇವರಾತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು.


ಆದ್ದರಿಂದ ನೀನು ನಮ್ಮ ಕರ್ತನನ್ನು ಕುರಿತು ಹೇಳುವ ಸಾಕ್ಷಿಯ ವಿಷಯದಲ್ಲಾಗಲಿ ಆತನ ಸೆರೆಯವನಾದ ನನ್ನ ವಿಷಯದಲ್ಲಾಗಲಿ ನಾಚಿಕೆ ಪಡದೆ, ದೇವರ ಬಲವನ್ನು ಆಶ್ರಯಿಸಿ ನನ್ನೊಂದಿಗೆ ಸುವಾರ್ತೆಗೋಸ್ಕರ ಕಷ್ಟವನ್ನನುಭವಿಸು.


ಅಂಥವರು ನಮ್ಮ ಕರ್ತನಾದ ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿಗಳಿಂದಲೂ ಮತ್ತು ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.


ಆಗ ಮೋಶೆಯು ಯೆಹೋವನಿಗೆ, “ಕರ್ತನೇ, ನಾನು ಮೊದಲಿನಿಂದಲೂ, ನೀನು ನಿನ್ನ ದಾಸನ ಸಂಗಡ ಮಾತನಾಡಿದ ಮೇಲೆಯೂ ನಾನು ವಾಕ್ಚಾತುರ್ಯವಿಲ್ಲದವನು. ನಾನು ತೊದಲುವವನಾಗಿದ್ದು ನನ್ನ ನಾಲಿಗೆಯೂ ಮಂದವಾಗಿವೆ” ಎಂದು ಹೇಳಿದನು.


ನಾನು ವಾಕ್ಚಾತುರ್ಯದಲ್ಲಿ ನಿಪುಣನಲ್ಲದಿದ್ದರೂ ಜ್ಞಾನದಲ್ಲಿ ಅಲ್ಪನಲ್ಲ. ಇದನ್ನು ಎಲ್ಲಾ ಸಮಯಸಂದರ್ಭಗಳಲ್ಲೂ ಸ್ಪಷ್ಟಪಡಿಸಿದ್ದೇನೆ.


ಯೋಹಾನನು ದೇವರ ವಾಕ್ಯದ ಕುರಿತಾಗಿಯೂ ಯೇಸು ಕ್ರಿಸ್ತನು ಹೇಳಿದ ಸಾಕ್ಷಿಯ ವಿಷಯವಾಗಿಯೂ ತಾನು ಕಂಡದ್ದನ್ನೆಲ್ಲಾ ತಿಳಿಸುವವನಾಗಿ ಸಾಕ್ಷಿಕೊಟ್ಟನು.


ತಂದೆಯು ತನ್ನ ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವುದನ್ನು ನಾವು ತಿಳಿದಿದ್ದೇವೆ ಮತ್ತು ಅದರ ವಿಷಯದಲ್ಲಿ ನಾವು ಸಾಕ್ಷಿ ಹೇಳುತ್ತೇವೆ.


ಆ ದಿನದಲ್ಲಿ ಆತನು ಬರುವಾಗ ತನ್ನ ಪರಿಶುದ್ಧ ಜನರಿಂದ ಮಹಿಮೆ ಹೊಂದಿದವನಾಗಿಯೂ ಮತ್ತು ನಾವು ನಿಮಗೆ ಹೇಳಿದ ಸಾಕ್ಷಿಯನ್ನು ನಂಬಿದವರೆಲ್ಲರ ಮೂಲಕ ತನ್ನ ವಿಷಯದಲ್ಲಿ ಆಶ್ಚರ್ಯ ಹುಟ್ಟಿಸುವನು.


ಕ್ರಿಸ್ತನ ಕುರಿತಾದ ಸಾಕ್ಷಿಯು ನಿಮ್ಮಲ್ಲಿ ದೃಢವಾಗಿರುವ ಹಾಗೆಯೇ ಆತನು ನಿಮ್ಮನ್ನು ಸಮೃದ್ಧಿಯುಳ್ಳವರನ್ನಾಗಿ ಮಾಡಿದ್ದಾನೆ.


ಆತನು; ‘ನೀನು ತ್ವರೆಪಟ್ಟು ಬೇಗನೆ ಯೆರೂಸಲೇಮಿನಿಂದ ಹೊರಟುಹೋಗು, ನನ್ನ ವಿಷಯದಲ್ಲಿ, ನೀನು ಹೇಳುವ ಸಾಕ್ಷಿಯನ್ನು ಅವರು ಅಂಗೀಕರಿಸುವುದಿಲ್ಲ’ ಅಂದನು.


ಯೆಹೂದ್ಯರಿಗೂ, ಗ್ರೀಕರಿಗೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ದೃಢವಾಗಿ ಬೋಧಿಸುವವನಾಗಿದ್ದೆನು, ಇದೆಲ್ಲಾ ನಿಮಗೇ ತಿಳಿದಿದೆ.


ದೇವರ ಉಪದೇಶವನ್ನೂ, ದೇವರ ಸಾಕ್ಷಿಯನ್ನೂ ವಿಚಾರಿಸುವ” ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವುದಿಲ್ಲ.


ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮೇಲೆ ಬೀಳಲು ಅವನು, “ಹೀಗೆ ಮಾಡಬೇಡ ನೋಡು, ನಾನು ನಿನಗೂ, ಯೇಸುವಿನ ಬಗ್ಗೆ ಸಾಕ್ಷಿಯನ್ನು ಹೇಳಿರುವ ನಿನ್ನ ಸಹೋದರರಿಗೂ ಸೇವೆಯನ್ನು ಮಾಡುವ ದಾಸನಾಗಿದ್ದೇನೆ, ದೇವರಿಗೆ ಆರಾಧನೆ ಮಾಡು, ಯೇಸುವಿನ ಸಾಕ್ಷಿಯು ಪ್ರವಾದನೆಯ ಆತ್ಮವೇ” ಎಂದು ಹೇಳಿದನು.


ನಿಮ್ಮ ಸಹೋದರನೂ ಯೇಸುವಿನ ನಿಮಿತ್ತ ಹಿಂಸೆಯಲ್ಲಿ, ರಾಜ್ಯದಲ್ಲಿ, ತಾಳ್ಮೆಯಲ್ಲಿ, ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರ ಯೇಸುವಿನ ವಿಷಯವಾಗಿ ಸಾಕ್ಷಿ ನೀಡಲು ಪತ್ಮೊಸ್ ಎಂಬ ದ್ವೀಪದಲ್ಲಿದ್ದೆನು.


ಈ ಬೋಧನೆಯು ಭಾಗ್ಯವಂತನಾದ ದೇವರ ಮಹಿಮೆಯನ್ನು ಪ್ರದರ್ಶಿಸುವ ಸುವಾರ್ತೆಗೆ ಅನುಸಾರವಾಗಿದೆ. ಈ ಸುವಾರ್ತೆಯ ಸೇವೆಯು ನನಗೆ ಕೊಡಲ್ಪಟ್ಟಿತು.


“ಅವನಿಂದ ಬಂದ ಪತ್ರಿಕೆಗಳು ಕಠೋರವಾದವುಗಳೂ, ಪ್ರಬಲವಾದವುಗಳೂ ಆಗಿವೆ. ಆದರೆ ದೈಹಿಕವಾಗಿ ಅವನು ದುರ್ಬಲನು ಅವನ ಮಾತುಗಳು ನಿಂದಾತ್ಮಕವಾದವುಗಳೆಂದು ಕೆಲವರು ಹೇಳುತ್ತಾರಲ್ಲಾ.”


ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಶಾಸ್ತ್ರಗಳ ಮೂಲಕ ಅನ್ಯಜನರೆಲ್ಲರಿಗೂ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವುದಕ್ಕೋಸ್ಕರ ತಿಳಿಸಲ್ಪಟ್ಟಿದೆ. ಪೂರ್ವಕಾಲಗಳಲ್ಲಿ ಮರೆಯಾಗಿದ್ದು ಈಗ ಬೆಳಕಿಗೆ ಬಂದಿರುವಂತಹದ್ದೂ, ಈ ಮರ್ಮಕ್ಕೆ ಅನುಸಾರ ಎಂದರೆ ಯೇಸು ಕ್ರಿಸ್ತನ ವಿಷಯವಾದಂಥ ಹಾಗೂ ನಾನು ಸಾರುವಂಥ ಸುವಾರ್ತೆಗನುಸಾರವಾಗಿ ನಿಮ್ಮನ್ನು ಸ್ಥಿರಪಡಿಸುವುದಕ್ಕೆ ಶಕ್ತನಾಗಿರುವ,


ಇದುವರೆಗೆ ಗುಪ್ತವಾಗಿದ್ದ ಸತ್ಯಾರ್ಥವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ. ಅದು ಯಾವುದೆಂದರೆ ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇಮಿಸಿ ಮರೆಮಾಡಿದ್ದ ದೇವರ ಜ್ಞಾನದ ಮರ್ಮವೇ ಆಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು