Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 2:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಮಗಾದರೋ ದೇವರು ತನ್ನ ಆತ್ಮನ ಮೂಲಕ ಅದನ್ನು ಪ್ರಕಟಪಡಿಸಿದನು. ಆ ಆತ್ಮನು ಎಲ್ಲಾ ವಿಷಯಗಳನ್ನು, ದೇವರ ಅಗಾಧವಾದ ವಿಷಯಗಳನ್ನು ಕೂಡ ಪರಿಶೋಧಿಸುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನಮಗಾದರೋ ದೇವರು ಪವಿತ್ರಾತ್ಮ ಅವರ ಮುಖಾಂತರ ಇವುಗಳನ್ನು ಪ್ರಕಟಿಸಿದ್ದಾರೆ. ಸಕಲವನ್ನು ಹಾಗೂ ದೇವರ ಅಂತರಾಳವನ್ನು ಅವಲೋಕಿಸುವವರು ಈ ಪವಿತ್ರಾತ್ಮರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಮಗಾದರೋ ದೇವರು ತನ್ನ ಆತ್ಮನ ಮೂಲಕ ಅದನ್ನು ಪ್ರಕಟಿಸಿದನು. ಆ ಆತ್ಮನು ಎಲ್ಲಾ ವಿಷಯಗಳನ್ನು, ದೇವರ ಅಗಾಧವಾದ ವಿಷಯಗಳನ್ನು ಕೂಡ ಪರಿಶೋಧಿಸುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದರೆ ದೇವರು ತನ್ನ ಪವಿತ್ರಾತ್ಮನ ಮೂಲಕ ನಮಗೆ ಈ ಸಂಗತಿಗಳನ್ನು ಪ್ರಕಟಿಸಿದನು. ಪವಿತ್ರಾತ್ಮನು ಸಕಲವನ್ನೂ ದೇವರ ಅಗಾಧವಾದ ರಹಸ್ಯಗಳನ್ನೂ ತಿಳಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಮಗಾದರೋ ದೇವರು ತಮ್ಮ ಪವಿತ್ರಾತ್ಮರ ಮೂಲಕ ಇವುಗಳನ್ನು ಪ್ರಕಟಿಸಿದ್ದಾರೆ. ಪವಿತ್ರಾತ್ಮರು ಎಲ್ಲಾ ವಿಷಯಗಳನ್ನು ಹಾಗೂ ದೇವರ ಆಳವಾದ ರಹಸ್ಯಗಳನ್ನು ಪರಿಶೋಧಿಸುವವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಖರೆ ದೆವಾನ್ ತೆಚ್ಯಾ ಪವಿತ್ರ್ ಆತ್ಮ್ಯಾಚ್ಯಾ ವೈನಾ ಹಿ ಸಗ್ಳಿ ಸಂಗ್ತಿಯಾ ಅಮ್ಕಾ ಕಳ್ವುಲ್ಯಾನಾಯ್. ಪವಿತ್ರ್ ಆತ್ಮೊ ಸಗ್ಳಿ ವಿಶಯಾ, ದೆವಾಚಿ ಖೊಲಾತ್ ಹೊತ್ತಿ ಉದ್ದೆಸಾ ಸೈತ್ ಹುಡಕ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 2:10
27 ತಿಳಿವುಗಳ ಹೋಲಿಕೆ  

ಆದರೆ ಆ ಸಹಾಯಕನು, ಅಂದರೆ ನನ್ನ ಹೆಸರಿನಲ್ಲಿ ತಂದೆಯು ಕಳುಹಿಸಿಕೊಡುವ ಪವಿತ್ರಾತ್ಮನೇ ನಿಮಗೆ ಎಲ್ಲವನ್ನು ಉಪದೇಶಿಸಿ ನಾನು ನಿಮಗೆ ಹೇಳಿದ್ದನೆಲ್ಲಾ ನಿಮ್ಮ ನೆನಪಿಗೆ ತಂದುಕೊಡುವನು.


ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಪವಿತ್ರಾತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿದ್ದ ಜನರಿಗೆ ತಿಳಿಸಲ್ಪಡಲಿಲ್ಲ.


ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನನಿಂದ ಉಲ್ಲಾಸಗೊಂಡು ಹೇಳಿದ್ದೇನಂದರೆ, “ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಮತ್ತು ವಿವೇಕಿಗಳಿಗೂ ಈ ವಿಷಯಗಳನ್ನು ಮರೆಮಾಡಿ, ಮಕ್ಕಳಿಗೆ ಪ್ರಕಟಮಾಡಿರುವುದರಿಂದ ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.


ಆತನು ಮರ್ಮವನ್ನು ಪ್ರಕಟಣೆಯಿಂದ ನನಗೆ ತಿಳಿಯಪಡಿಸಿದನೆಂದು ಅದನ್ನು ಕುರಿತು ನಾನು ಮೊದಲೇ ನಿಮಗೆ ಸಂಕ್ಷಿಪ್ತವಾಗಿ ಬರೆದಿದ್ದೇನೆ.


ನಾನು ಅದನ್ನು ಮನುಷ್ಯನಿಂದ ಹೊಂದಲಿಲ್ಲ, ನನಗೆ ಯಾರೂ ಉಪದೇಶಿಸಲಿಲ್ಲ, ಬದಲಾಗಿ ಯೇಸು ಕ್ರಿಸ್ತನೇ ಅದನ್ನು ನನಗೆ ಪ್ರಕಟಪಡಿಸಿದನು.


ಅದಕ್ಕೆ ಯೇಸು, “ಯೋನನ ಮಗನಾದ ಸೀಮೋನನೇ, ನೀನು ಧನ್ಯನು. ಏಕೆಂದರೆ ಇದು ಮನುಷ್ಯನಿಂದ ನಿನಗೆ ಪ್ರಕಟವಾಗಿಲ್ಲ, ಪರಲೋಕದಲ್ಲಿರುವ ನನ್ನ ತಂದೆಯೇ ಇದನ್ನೂ ನಿನಗೆ ಪ್ರಕಟಪಡಿಸಿರುವನು” ಎಂದು ಹೇಳಿದನು.


ಅದಕ್ಕಾತನು ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, “ಪರಲೋಕ ರಾಜ್ಯದ ಮರ್ಮಗಳನ್ನು ತಿಳಿಯುವ ಭಾಗ್ಯವು ನಿಮಗೆ ಕೊಟ್ಟಿದೆ ಅವರಿಗೆ ಕೊಟ್ಟಿಲ್ಲ.


ಆದರೆ ಸತ್ಯದ ಆತ್ಮನು ಬರುವಾಗ ಆತನು ನಿಮ್ಮನ್ನು ಪೂರ್ಣ ಸತ್ಯದ ಕಡೆಗೆ ನಡೆಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ಕೇಳಿದ ಮಾತುಗಳನ್ನೇ ಆಡುವನು ಮತ್ತು ಮುಂದೆ ನಡೆಯುವ ಸಂಗತಿಗಳನ್ನು ನಿಮಗೆ ತಿಳಿಸುವನು.


ಆದರೆ ಈ ಸಂಗತಿಗಳನ್ನು ಮುಂತಿಳಿಸುವುದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದಾರೆಂಬುದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಲ್ಪಡುತ್ತಿವೆ ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂದು ಬಯಸುತ್ತಿದ್ದಾರೆ.


ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದ ಯಾರೂ ನಿಮಗೆ ಬೋಧನೆ ಮಾಡುವುದು ಅಗತ್ಯವಿಲ್ಲ. ಆತನು ನಿಮಗೆ ಮಾಡಿರುವ ಅಭಿಷೇಕವೇ ನಿಮ್ಮನ್ನು ಎಲ್ಲಾ ವಿಷಯಗಳಲ್ಲಿ ಬೋಧನೆ ಮಾಡುವಂಥದ್ದಾಗಿದೆ ಅದು ಸುಳ್ಳಲ್ಲ ಸತ್ಯವಾಗಿದೆ. ಅದು ನಿಮಗೆ ಬೋಧನೆ ಮಾಡಿದ ಪ್ರಕಾರವೇ ಆತನಲ್ಲಿ ನೆಲೆಗೊಂಡಿರುವಿರಿ.


ಮನುಷ್ಯನೊಳಗಿನ ಆಲೋಚನೆಗಳು ಅವನಲ್ಲಿರುವ ಮನುಷ್ಯತ್ಮನಿಗಲ್ಲದೆ ಮತ್ತಾರಿಗೆ ತಿಳಿಯುವುದು? ಹಾಗೆಯೇ ದೇವರಾಲೋಚನೆಗಳನ್ನು ದೇವರ ಆತ್ಮನೇ ಹೊರತು ಬೇರೆ ಯಾರಿಂದಲೂ ಗ್ರಹಿಸಲು ಸಾಧ್ಯವಿಲ್ಲ.


ನಿಶ್ಚಯವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಯೋಜನೆಯನ್ನು ತಿಳಿಸದೆ ಯೆಹೋವನಾದ ದೇವರು ಏನನ್ನೂ ಮಾಡುವುದಿಲ್ಲ.


ಅಗಾಧ ವಿಷಯಗಳನ್ನು ಕತ್ತಲೊಳಗಿಂದ ಬಯಲಿಗೆ ತಂದು ಗಾಢಾಂಧಕಾರವನ್ನು ಪ್ರಕಾಶಗೊಳಿಸುವನು.


ಆದರೆ ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದವರಾಗಿದ್ದೀರಿ ಎಂಬ ಸತ್ಯವನ್ನೂ ತಿಳಿದವರಾಗಿದ್ದೀರಿ.


ಕುಳಿತಿರುವ ಮತ್ತೊಬ್ಬನಿಗೆ ಪ್ರಕಟನೆ ಉಂಟಾದರೆ ಮೊದಲಿನವನು ಸುಮ್ಮನಾಗಲಿ


ಇದಲ್ಲದೆ, ಕರ್ತನು ಕಳುಹಿಸಬೇಕಾದ ಕ್ರಿಸ್ತನನ್ನು ಕಾಣುವುದಕ್ಕಿಂತ ಮುಂಚೆ ನೀನು ಸಾಯುವುದಿಲ್ಲವೆಂದು ಪವಿತ್ರಾತ್ಮನ ಮೂಲಕ ಅವನಿಗೆ ದೈವೋಕ್ತಿ ಉಂಟಾಗಿತ್ತು.


ಆತನು ಅಗಾಧ ವಿಷಯಗಳನ್ನೂ ಗೂಢಾರ್ಥಗಳನ್ನೂ ಬಯಲಿಗೆ ತರುತ್ತಾನೆ; ಕಗ್ಗತ್ತಲೆಯಲ್ಲಿ ಅಡಗಿರುವುದೂ ಆತನಿಗೆ ಗೋಚರವಾಗುವುದು; ತೇಜಸ್ಸು ಆತನಲ್ಲೇ ನೆಲೆಗೊಂಡಿದೆ.


ನನ್ನ ಬಳಿಗೆ ಬಂದು ಇದನ್ನು ಕೇಳಿರಿ, ಆದಿಯಿಂದಲೂ ನಾನು ಗುಟ್ಟಾಗಿ ಮಾತನಾಡಲಿಲ್ಲ, ಭೂಮಿಯು ಉಂಟಾದಂದಿನಿಂದ ನಾನು ಅಲ್ಲಿ ಇದ್ದೇನೆ. ಈಗ ಯೆಹೋವನೆಂಬ ದೇವರು ತನ್ನ ಆತ್ಮದೊಡನೆ ನನ್ನನ್ನು ಕಳುಹಿಸಿದ್ದಾನೆ.


ಯೇಸು ಕ್ರಿಸ್ತನ ಪ್ರಕಟನೆಯು, ಆತನು ಬೇಗನೆ ಸಂಭವಿಸಬೇಕಾಗಿರುವ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವುದಕ್ಕಾಗಿ ದೇವರಿಂದ ಈ ಪ್ರಕಟಣೆಯನ್ನು ಹೊಂದಿದನು. ಇದಲ್ಲದೆ ಆತನು ತನ್ನ ದೂತನನ್ನು ಕಳುಹಿಸಿ ಅವನ ಮೂಲಕ ಆ ಸಂಗತಿಗಳನ್ನು ತನ್ನ ದಾಸನಾದ ಯೋಹಾನನಿಗೆ ತಿಳಿಸಿದನು.


ನಾನಂತೂ ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು, ನೋಡಿರಿ; “ನಿಮ್ಮಲ್ಲಿ ಪ್ರವೇಶಿಸಿರುವ ನನ್ನ ಆತ್ಮವೂ, ನಿಮ್ಮ ಬಾಯಿಗೆ ನಾನು ಕೊಟ್ಟಿರುವ ಮಾತುಗಳೂ, ನಿಮ್ಮ ಬಾಯಿಂದಾಗಲಿ, ನಿಮ್ಮ ಸಂತತಿಯ ಬಾಯಿಂದಾಗಲಿ ಅಥವಾ ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ ಇಂದಿನಿಂದ ಎಂದಿಗೂ ತೊಲಗುವುದಿಲ್ಲ” ಎಂದು ಯೆಹೋವನು ಹೇಳುತ್ತಾನೆ.


ಆದರೂ ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳ ನುಡಿಗಳಿಗೂ, ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗುವರೆಂದು ದೇವರಾತ್ಮನು ಸ್ಪಷ್ಟವಾಗಿ ಹೇಳುತ್ತಿದ್ದಾನೆ.


“ಆದರೆ ಥುವತೈರದಲ್ಲಿರುವ ಉಳಿದವರಿಗೆ, ಅಂದರೆ ಸೈತಾನನಿಂದ ಪ್ರೇರಿತವಾದ ದುರ್ಬೋಧನೆಯ ಆಳವನ್ನು ಯಾರಾರು ತಿಳಿಯದೆಯೂ ಅದನ್ನು ಅವಲಂಬಿಸದೆಯೂ ಇರುತ್ತಾರೋ ಅವರಿಗೆ ಹೇಳುವುದೇನಂದರೆ, ನಾನು ಮತ್ತೊಂದು ಭಾರವನ್ನು ನಿಮ್ಮ ಮೇಲೆ ಹಾಕುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು