Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 2:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಪವಿತ್ರಾತ್ಮನಿಂದ ನಡಿಸಿಕೊಳ್ಳುವವನೋ ಎಲ್ಲವನ್ನೂ ವಿವೇಚಿಸಿ ತಿಳಿದುಕೊಳ್ಳುತ್ತಾನೆ; ಆದರೆ ಅವನಿಗೆ ಯಾರೂ ವಿವೇಚಿಸಿ ತಿಳಿಸಿಕೊಡಬೇಕಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ದೇವರ ಆತ್ಮವನ್ನು ಹೊಂದಿದವನು ಎಲ್ಲವನ್ನೂ ವಿಚಾರಣೆಮಾಡಿ ತಿಳಿದುಕೊಳ್ಳುತ್ತಾನೆ. ಅವನನ್ನು ಯಾರೂ ವಿಚಾರಣೆಗೆ ಗುರಿಮಾಡಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ದೇವರಾತ್ಮನಿಂದ ನಡಿಸಿಕೊಳ್ಳುವವನೋ ಎಲ್ಲವನ್ನೂ ವಿಚಾರಿಸಿ ತಿಳುಕೊಳ್ಳುತ್ತಾನೆ; ಆದರೆ ಇವನನ್ನು ಯಾವನಾದರೂ ವಿಚಾರಿಸಿ ತಿಳಿಕೊಳ್ಳುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದರೆ ಆತ್ಮಿಕ ಮನುಷ್ಯನು ಎಲ್ಲಾ ವಿಷಯಗಳ ಬಗ್ಗೆ ತೀರ್ಪು ಮಾಡಬಲ್ಲನು. ಅವನಿಗೆ ಬೇರೆ ಯಾರೂ ತೀರ್ಪು ನೀಡಲಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದರೆ ಆತ್ಮಿಕ ಮನುಷ್ಯನು ಎಲ್ಲವನ್ನೂ ವಿವೇಚಿಸಿಕೊಳ್ಳುತ್ತಾನೆ. ಆದರೆ ಅವನಿಗೆ ಬೇರೆ ಯಾರೂ ತೀರ್ಪುಮಾಡಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಜೆ ಕೊನಾಕ್ಡೆ ಆತ್ಮೊ ಹಾಯ್ ತೊ ಸಗ್ಳ್ಯಾಚಿ ಕಿಮ್ಮತ್ ಕಾಯ್ ಮನುನ್ ನ್ಯಾಯ್ ಕರುಕ್ ಸಕ್ತಾ, ಖರೆ ಕೊನಾಚ್ಯಾನ್ಬಿ ಅಸ್ಲ್ಯಾ ಮಾನ್ಸಾಚೆ ನ್ಯಾಯ್ ಕರುಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 2:15
21 ತಿಳಿವುಗಳ ಹೋಲಿಕೆ  

ಆದರೆ ಎಲ್ಲವನ್ನೂ ಪರೀಕ್ಷಿಸಿ ಒಳ್ಳೆಯದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ.


ಕೆಟ್ಟವರು ನ್ಯಾಯವನ್ನು ಗ್ರಹಿಸರು, ಯೆಹೋವನ ಭಕ್ತರು ಸಮಸ್ತವನ್ನು ಗ್ರಹಿಸುವರು.


ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೋಸ್ಕರ, ಅಂದರೆ ತಪ್ಪು ಮತ್ತು ಸರಿಯಾದ್ದದನ್ನು ಗುರುತಿಸಲು, ಅಭ್ಯಾಸದ ಮೂಲಕ ನೈಪುಣ್ಯತೆಯನ್ನು ಹೊಂದಿದವರಿಗೋಸ್ಕರವಾಗಿದೆ.


ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಬಂದಿರುವುದರಿಂದ ನೀವು ಎಲ್ಲಾ ಆತ್ಮಗಳ ನುಡಿಗಳನ್ನು ನಂಬದೆ ಆಯಾ ಆತ್ಮಗಳ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.


ಯಾವನಾದರೂ ತನ್ನನ್ನು ಪ್ರವಾದಿಯೆಂದಾಗಲಿ ಆತ್ಮೀಕನೆಂದಾಗಲಿ ಭಾವಿಸಿಕೊಂಡರೆ ನಾನು ನಿಮಗೆ ಬರೆದಿರುವುದೆಲ್ಲಾ ಕರ್ತನ ಆಜ್ಞೆ ಎಂದು ಚೆನ್ನಾಗಿ ತಿಳಿದುಕೊಳ್ಳಲಿ.


ಸಹೋದರರೇ, ನಿಮ್ಮಲ್ಲಿ ಯಾರಾದರೂ ಯಾವುದಾದರೂ ಪಾಪದಲ್ಲಿ ಸಿಕ್ಕಿಹಾಕಿಕೊಂಡಿದ್ದರೆ ಅಂಥವರನ್ನು ಆತ್ಮಭರಿತರಾದ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀವಾದರೂ ಶೋಧನೆಗೆ ಒಳಗಾಗದಂತೆ ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ.


ಹೀಗೆ ಉತ್ತಮ ಕಾರ್ಯಗಳು ಯಾವವೆಂಬುದನ್ನು ನೀವು ವಿವೇಚಿಸುವವರಾಗಬೇಕೆಂತಲೂ ಹಾಗೂ ಕ್ರಿಸ್ತನು ಬರುವ ದಿನದಲ್ಲಿ ನೀವು ಸರಳರಾಗಿಯೂ, ನಿರ್ಮಲರಾಗಿಯೂ,


ಆದರೆ ಸಹೋದರರೇ ನಾನಂತೂ ಆತ್ಮೀಕರೊಂದಿಗೆ ಮಾತನಾಡುವಂತೆ ನಿಮ್ಮ ಸಂಗಡ ಮಾತನಾಡದೆ ಪ್ರಾಪಂಚಿಕರೂ ಕ್ರಿಸ್ತನ ವಿಷಯದಲ್ಲಿ ಎಳೆಗೂಸುಗಳೂ ಆಗಿರುವವರ ಹಾಗೆ ನಿಮ್ಮ ಸಂಗಡ ಮಾತನಾಡಬೇಕಾಯಿತು.


ಹೀಗಿರುವುದ್ದರಿಂದ ಈ ನಿಮ್ಮ ಪ್ರೀತಿಯ ಕುರಿತು ನಾವು ಕೇಳಿದ ದಿನದಿಂದ ನಿಮಗೋಸ್ಕರ ಪ್ರಾರ್ಥಿಸುವುದನ್ನು ನಿಲ್ಲಿಸದೆ, ನೀವು ಸಕಲ ಆತ್ಮೀಕ ಗ್ರಹಿಕೆಯಿಂದಲೂ ಜ್ಞಾನದಿಂದಲೂ ದೇವರ ಚಿತ್ತದ ತಿಳಿವಳಿಕೆಯ ಕುರಿತು ಸಂಪೂರ್ಣರಾಗಬೇಕೆಂತಲೂ,


ಆದ್ದರಿಂದ ಕರ್ತನು ಬರುವ ಕಾಲಕ್ಕಿಂತ ಮುಂಚೆ ಯಾವುದನ್ನು ಕುರಿತು ನ್ಯಾಯತೀರ್ಪುಮಾಡಬೇಡಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು. ಹೃದಯದ ಆಲೋಚನೆಗಳನ್ನು ಪ್ರಕಟಪಡಿಸುವನು. ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ದೊರಕುವುದು.


ಅವನು ತನ್ನ ಸಂಗಡ ಬರಬೇಕೆಂದು ಪೌಲನು ಅಪೇಕ್ಷಿಸಿ ಆ ಸ್ಥಳಗಳಲ್ಲಿದ್ದ ಯೆಹೂದ್ಯರ ನಿಮಿತ್ತವಾಗಿ ಅವನಿಗೆ ಸುನ್ನತಿ ಮಾಡಿಸಿದನು, ಏಕೆಂದರೆ ಅವನ ತಂದೆ ಗ್ರೀಕನೆಂಬುದು ಎಲ್ಲರಿಗೂ ತಿಳಿದ ಸಂಗತಿಯಾಗಿತ್ತು.


ಯಾರಿಗಾದರೂ ಆತನ ಚಿತ್ತದಂತೆ ನಡೆಯುವುದಕ್ಕೆ ಮನಸ್ಸಿದೆಯೋ ಅವರಿಗೆ ಈ ಬೋಧನೆಯು ದೇವರಿಂದ ಬಂದ್ದದ್ದೋ ಅಥವಾ ನಾನೇ ಮಾತನಾಡುತ್ತೇನೋ ಎಂಬುದು ಗೊತ್ತಾಗುವುದು.


ಅರಸನ ಆಜ್ಞೆಗಳನ್ನು ಕೈಕೊಳ್ಳುವವನು ಕೇಡನ್ನು ಅನುಭವಿಸುವುದಿಲ್ಲ. ಜ್ಞಾನಿಯ ಹೃದಯವು ಕಾಲ ಮತ್ತು ನ್ಯಾಯ ಎರಡನ್ನು ತಿಳಿದುಕೊಳ್ಳುತ್ತದೆ.


ಯೆಹೋವನು ತನ್ನ ಸದ್ಭಕ್ತರಿಗೆ ಆಪ್ತಮಿತ್ರನಂತಿರುವನು; ಅವರಿಗೆ ತನ್ನ ಒಡಂಬಡಿಕೆಯ ಅನುಭವವನ್ನು ದಯಪಾಲಿಸುವನು.


ನನ್ನ ಒಡೆಯನಾದ ಅರಸನ ಮಾತು ಸಮಾಧಾನಕ್ಕೆ ಕಾರಣವಾಗುವುದೆಂದು ನೆನಸಿ ನಿನ್ನ ದಾಸಿಯಾದ ನಾನು ಬಂದೆನು. ನ್ಯಾಯ ಅನ್ಯಾಯಗಳನ್ನು ಕಂಡುಹಿಡಿಯುವುದರಲ್ಲಿ ನನ್ನ ಒಡೆಯನಾದ ಅರಸನು ದೇವದೂತನಂತಿದ್ದಾನೆ. ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರಲಿ” ಎಂದಳು.


ಆದರೆ ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದವರಾಗಿದ್ದೀರಿ ಎಂಬ ಸತ್ಯವನ್ನೂ ತಿಳಿದವರಾಗಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು