Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 2:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇದನ್ನು ಇಹಲೋಕಾಧಿಕಾರಿಗಳಲ್ಲಿ ಯಾರೂ ಅರಿತಿರಲಿಲ್ಲ; ಅರಿತಿದ್ದರೆ ಅವರು ಮಹಿಮೆಯುಳ್ಳ ಕರ್ತನನ್ನು ಶಿಲುಬೆಗೆ ಹಾಕಿಸುತ್ತಿರಲಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಲೋಕಾಧಿಪತಿಗಳಾರಿಗೂ ಇದರ ಅರಿವಿರಲಿಲ್ಲ. ಹಾಗೆ ಅರಿತಿದ್ದರೆ ಆ ಮಹಿಮಾನ್ವಿತ ಪ್ರಭುವನ್ನು ಅವರು ಶಿಲುಬೆಗೇರಿಸುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇದನ್ನು ಇಹಲೋಕಾಧಿಕಾರಿಗಳಲ್ಲಿ ಯಾರೂ ಅರಿಯಲಿಲ್ಲ; ಅರಿತಿದ್ದರೆ ಅವರು ಮಹಿಮೆಯುಳ್ಳ ಕರ್ತನನ್ನು ಶಿಲುಬೆಗೆ ಹಾಕಿಸುತ್ತಿರಲಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಈ ಲೋಕದ ಯಾವ ಅಧಿಪತಿಗಳೂ ಈ ಜ್ಞಾನವನ್ನು ಅರ್ಥಮಾಡಿಕೊಳ್ಳಲಿಲ್ಲ. ಅವರು ಅರ್ಥಮಾಡಿಕೊಂಡಿದ್ದರೆ, ಮಹಿಮೆಯುಳ್ಳ ಪ್ರಭುವನ್ನು ಶಿಲುಬೆಗೇರಿಸುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇದನ್ನು ಇಹಲೋಕದ ಅಧಿಕಾರಿಗಳಲ್ಲಿ ಒಬ್ಬರಾದರೂ ಅರಿಯಲಿಲ್ಲ. ಅರಿತಿದ್ದರೆ, ಅವರು ಮಹಿಮೆಯುಳ್ಳ ಕರ್ತದೇವರನ್ನು ಶಿಲುಬೆಗೇರಿಸುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಹ್ಯಾ ಕಾಲಾಚ್ಯಾ ಖಲ್ಯಾಬಿ ಅದಿಕಾರ್‍ಯಾಕ್ನಿ ಹೆಚ್ಯಾ ವಿಶಯಾತ್ ಕಳುಕ್ ನಾ, ಕಶ್ಯಾಕ್ ಮಟ್ಲ್ಯಾರ್ ತೆಂಕಾ ಹೆ ಕಳಲ್ಲೆ ರ್‍ಹಾಲ್ಯಾರ್ ತೆನಿ ಮಹಿಮೆಚ್ಯಾ ಧನಿಯಾಕ್ ಕುರ್ಸಾರ್ ಮಾರಿನಸಿ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 2:8
22 ತಿಳಿವುಗಳ ಹೋಲಿಕೆ  

ನನ್ನ ಸಹೋದರರೇ, ಮಹಿಮೆಯುಳ್ಳ ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಪಕ್ಷಪಾತಿಗಳಾಗಿರಬಾರದು.


ಯೆರೂಸಲೇಮಿನಲ್ಲಿ ವಾಸವಾಗಿರುವವರೂ, ಅವರ ಅಧಿಕಾರಿಗಳೂ, ಆತನನ್ನಾಗಲಿ, ಪ್ರತಿ ಸಬ್ಬತ್ ದಿನದಲ್ಲಿ ಪಾರಾಯಣವಾಗುವ ಪ್ರವಾದಿಗಳ ಮಾತುಗಳನ್ನಾಗಲಿ ಗ್ರಹಿಸದೆ, ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ಮಾತುಗಳನ್ನೇ ನೆರವೇರಿಸಿದರು.


ನಮ್ಮ ಮೂಲಪುರುಷನಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಅವನಿಗೆ ಕಾಣಿಸಿಕೊಂಡು;


ಆದರೆ ಪರಿಪಕ್ವತೆಯುಳ್ಳವರ ಮಧ್ಯದಲ್ಲಿ ಜ್ಞಾನವನ್ನೇ ಹೇಳುತ್ತೇವೆ. ಅದು ಇಹಲೋಕದ ಜ್ಞಾನವಲ್ಲ, ಗತಿಸಿ ಹೋಗುವ ಇಹಲೋಕಾಧಿಕಾರಿಗಳ ಜ್ಞಾನವೂ ಅಲ್ಲ.


ಆದರೆ ಆ ಜನರ ಬುದ್ಧಿಗೆ ಮಂಕು ಕವಿದಿತ್ತು. ಈ ದಿನದವರೆಗೂ ಹಳೇ ಒಡಂಬಡಿಕೆಯು ಓದುವಾಗೆಲ್ಲಾ ಅದೇ ಮಂಕಿನ ಮುಸುಕು ಕವಿದಿದೆ. ಅದನ್ನು ಕ್ರಿಸ್ತ ಯೇಸುವಿನ ಮುಖಾಂತರವೇ ತೆರೆಯಲು ಸಾಧ್ಯ.


ಅವರು ತಂದೆಯನ್ನಾದರೂ ನನ್ನನ್ನಾದರೂ ತಿಳಿಯದವರಾಗಿರುವುದರಿಂದ ಇವೆಲ್ಲವುಗಳನ್ನು ನಿಮಗೆ ಮಾಡುವರು.


ಅವರು, “ನಿನ್ನ ತಂದೆ ಎಲ್ಲಿದ್ದಾನೆ?” ಎಂದರು. ಅದಕ್ಕೆ ಯೇಸು, “ನೀವು ನನ್ನನ್ನೂ ತಿಳಿದಿಲ್ಲ ಹಾಗೂ ನನ್ನ ತಂದೆಯನ್ನೂ ತಿಳಿದಿಲ್ಲ. ನೀವು ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನೂ ಸಹ ತಿಳಿದಿರುವಿರಿ” ಎಂದು ಉತ್ತರ ಕೊಟ್ಟನು.


ಹಿರೀಸಭೆಯವರಲ್ಲಾಗಲಿ ಫರಿಸಾಯರಲ್ಲಾಗಲಿ ಯಾರಾದರೂ ಅವನನ್ನು ನಂಬಿದ್ದಾರೋ?


ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, “ತಂದೆಯೇ! ಪರಲೋಕದ ಭೂಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ.


ಆಗ ಯೇಸು, “ತಂದೆಯೇ, ಅವರನ್ನು ಕ್ಷಮಿಸು ತಾವು ಏನು ಮಾಡುತ್ತೇವೆಂಬುದನ್ನು ಅವರು ಅರಿಯರು” ಅಂದನು. ಆ ಮೇಲೆ ಚೀಟು ಹಾಕಿ ಯೇಸುವಿನ ಬಟ್ಟೆಗಳನ್ನು ಪಾಲು ಮಾಡಿದರು.


ಮುಳ್ಳುಗಿಡಗಳ ನೆಲದಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಯೂ, ಐಶ್ವರ್ಯದ ಮೋಸತನವೂ ಆ ವಾಕ್ಯವನ್ನು ಅಡಗಿಸಿಬಿಡುವುದರಿಂದ ಫಲವನ್ನು ಕೊಡದೇ ಇರುತ್ತಾನೆ.


ಜ್ಞಾನಿಯು ಎಲ್ಲಿ? ವಿದ್ವಾಂಸನು ಎಲ್ಲಿ? ಇಹಲೋಕದ ತರ್ಕವಾದಿ ಎಲ್ಲಿ? ದೇವರು ಇಹಲೋಕದ ಜ್ಞಾನವನ್ನು ಮೂರ್ಖತನವಾಗಿ ಮಾಡಿದ್ದಾನಲ್ಲವೇ?


ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಮಹಿಮಾಸ್ವರೂಪನಾದ ತಂದೆಯೂ ಆಗಿರುವಾತನು ತನ್ನ ವಿಷಯವಾಗಿ ಪೂರ್ಣವಾದ ತಿಳಿವಳಿಕೆಯನ್ನು ಕೊಟ್ಟು, ಜ್ಞಾನ ಮತ್ತು ಪ್ರಕಟಣೆಗಳ ಆತ್ಮವನ್ನು ನಿಮಗೆ ದಯಪಾಲಿಸಬೇಕೆಂದು ಪ್ರಾರ್ಥಿಸುತ್ತೇನೆ.


ಅವರ ಮನಸ್ಸಿಗೆ ಕತ್ತಲು ಕವಿದಿದೆ, ಅವರು ತಮ್ಮ ಕಠಿಣವಾದ ಹೃದಯದ ನಿಮಿತ್ತದಿಂದಲೂ ಮತ್ತು ತಮ್ಮಲ್ಲಿರುವ ಅಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ಜೀವಕ್ಕೆ ದೂರವಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು