Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 3:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾನು ಸಸಿಯನ್ನು ನೆಟ್ಟೆನು. ಅಪೊಲ್ಲೋಸನು ನೀರನ್ನು ಹೊಯ್ಯಿದನು. ಆದರೆ ಅದನ್ನು ಬೆಳೆಸಿದವನು ದೇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಾನು ಸಸಿಯನ್ನು ನೆಟ್ಟೆನು; ಅಪೊಲೋಸನು ನೀರೆರೆದನು; ಆದರೆ ಅದನ್ನು ಬೆಳೆಸಿದವರು ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಾನು ಸಸಿಯನ್ನು ನೆಟ್ಟೆನು, ಅಪೊಲ್ಲೋಸನು ನೀರು ಹೊಯಿದನು, ಆದರೆ ಬೆಳೆಸುತ್ತಾ ಬಂದವನು ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾನು ಬೀಜವನ್ನು ಬಿತ್ತಿದೆನು; ಅಪೊಲ್ಲೋಸನು ನೀರನ್ನು ಹಾಕಿದನು. ಆದರೆ ಬೀಜವನ್ನು ಬೆಳೆಯಿಸಿದವನು ದೇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಾನು ಬೀಜವನ್ನು ಬಿತ್ತಿದೆನು, ಅಪೊಲ್ಲೋಸನು ನೀರು ಹಾಕಿದನು, ಆದರೆ ಬೆಳೆಸಿದವರು ದೇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಮಿಯಾ ಭಿಂಯ್ ಪೆರ್‍ಲೊ ಅಪೊಲ್ಲೊನ್ ಪಾನಿ ವೊತ್ಲ್ಯಾನ್, ಖರೆ ತೆ ವಾಡಿ ಸರ್ಕೆ ಕರಲ್ಲೆ ದೆವಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 3:6
29 ತಿಳಿವುಗಳ ಹೋಲಿಕೆ  

ಉದಾರಿಯು ಪುಷ್ಟನಾಗುವನು, ನೀರು ಹಾಯಿಸುವವನಿಗೆ ನೀರು ಸಿಕ್ಕುವುದು.


ದೇವರು ಈ ರೀತಿ ಮಾಡಿದ್ದರಿಂದಲೇ ಈಗ ನೀವು ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ದೇವರ ಕಡೆಯಿಂದ ನಮಗೆ ಜ್ಞಾನವೂ, ನೀತಿಯೂ, ಶುದ್ಧಿಯೂ, ಮತ್ತು ವಿಮೋಚನೆಯು ಆಗಿದ್ದಾನೆ.


ನಾನು ಸ್ವತಂತ್ರನಲ್ಲವೋ? ನಾನು ಅಪೊಸ್ತಲನಲ್ಲವೋ? ನಮ್ಮ ಕರ್ತನಾದ ಯೇಸುವನ್ನು ನಾನು ಕಂಡವನಲ್ಲವೇ? ನಾನು ಕರ್ತನಲ್ಲಿ ಮಾಡಿದ ಸೇವೆಯ ಪ್ರತಿಫಲವು ನೀವೇ ಅಲ್ಲವೇ?


ಭೂಮಿಯು ತನ್ನೊಳಗಿಂದ ಮೊಳಕೆಯನ್ನು ಹೊರಡಿಸುವಂತೆ, ತೋಟವು ತನ್ನಲ್ಲಿ ಬಿತ್ತಿದ್ದನ್ನು ಮೊಳೆಯಿಸುವ ಹಾಗೆ, ಕರ್ತನಾದ ಯೆಹೋವನು ಎಲ್ಲಾ ಜನಾಂಗಗಳ ಎದುರಿನಲ್ಲಿ ಧರ್ಮವನ್ನೂ ಮತ್ತು ಸ್ತೋತ್ರವನ್ನೂ ಮೊಳೆತು ಅಭಿವೃದ್ಧಿ ಹೊಂದುವಂತೆ ಮಾಡುವನು.


ಅಪೊಲ್ಲೋಸನು ಕೊರಿಂಥದಲ್ಲಿದ್ದಾಗ ಪೌಲನು ಮಲೆನಾಡಿನಲ್ಲಿ ಸಂಚಾರಮಾಡಿ ಎಫೆಸಕ್ಕೆ ಬಂದು ಕೆಲವು ಮಂದಿ ಶಿಷ್ಯರನ್ನು ಕಂಡು;


ಈ ಮಾತುಗಳನ್ನು ಅವರು ಕೇಳಿ ಆಕ್ಷೇಪಣೆ ಮಾಡುವುದನ್ನು ಬಿಟ್ಟು; “ಹಾಗಾದರೆ ದೇವರು ಅನ್ಯಜನರಿಗೂ ಜೀವಕೊಡಬೇಕೆಂದು ಅವರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿದ್ದಾನೆ” ಎಂದು ದೇವರನ್ನು ಕೊಂಡಾಡಿದರು.


ಯಾಕೆಂದರೆ ನಾವು ನಿಮ್ಮಲ್ಲಿ ಸಾರಿದ ಸುವಾರ್ತೆಯು ಬರೀ ಮಾತಾಗಿ ಬಾರದೆ ಶಕ್ತಿಯೊಡನೆಯೂ ಪವಿತ್ರಾತ್ಮದೊಡನೆಯೂ ಮತ್ತು ಬಹು ನಿಶ್ಚಯದೊಡನೆಯೂ ಬಂತೆಂಬುದನ್ನು ನೀವೂ ಬಲ್ಲಿರಿ. ಯಾಕೆಂದರೆ ನಾವು ನಿಮ್ಮಲ್ಲಿದ್ದುಕೊಂಡು ನಿಮಗೋಸ್ಕರ ಹೇಗೆ ವರ್ತಿಸಿದ್ದೇವೆಂಬುದನ್ನು ನೀವು ಗಮನಿಸಿದ್ದೀರಿ.


ಕ್ರಿಸ್ತನು ಅನ್ಯಜನಗಳನ್ನು ತನಗೆ ಅಧೀನಮಾಡಿಕೊಳ್ಳುವುದಕ್ಕಾಗಿ ನನ್ನ ಮಾತಿನಲ್ಲಿಯೂ ಕ್ರಿಯೆಯಲ್ಲಿಯೂ, ಸೂಚಕಕಾರ್ಯಗಳ, ಅದ್ಭುತಕಾರ್ಯಗಳ ಬಲದಿಂದಲೂ, ಪವಿತ್ರಾತ್ಮನ ಬಲದಿಂದಲೂ ಮಾಡಿಸಿದ ಕಾರ್ಯಗಳನ್ನೇ ಹೊರತು ಬೇರೆ ಯಾವ ಕಾರ್ಯಗಳನ್ನೂ ಹೇಳುವುದಕ್ಕೆ ನನಗೆ ಧೈರ್ಯ ಸಾಲದು.


ಪೌಲನು ಅವರನ್ನು ವಂದಿಸಿ ತನ್ನ ಸೇವೆಯ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ ಕಾರ್ಯಗಳನ್ನು ಒಂದೊಂದಾಗಿ ವಿವರಿಸಿದನು.


ಅಷ್ಟರೊಳಗೆ ಅಲೆಕ್ಸಾಂದ್ರಿಯದಲ್ಲಿ ಹುಟ್ಟಿದ ಅಪೊಲ್ಲೋಸನೆಂಬ ಒಬ್ಬ ಯೆಹೂದ್ಯನು ಎಫೆಸಕ್ಕೆ ಬಂದನು. ಅವನು ವಾಕ್ಚಾತುರ್ಯವುಳ್ಳವನೂ ಧರ್ಮಶಾಸ್ತ್ರಗಳಲ್ಲಿ ಪ್ರವೀಣನೂ ಆಗಿದ್ದನು.


ನಮ್ಮ ಮಾತುಗಳನ್ನು ಕೇಳಿದವರಲ್ಲಿ ಲುದ್ಯಳೆಂಬ ಒಬ್ಬ ಸ್ತ್ರೀಯು ಇದ್ದಳು. ಆಕೆ ಧೂಮ್ರ (ನೇರಳೆ) ಬಣ್ಣದ ವಸ್ತ್ರಗಳನ್ನು ಮಾರುವವಳೂ, ಥುವತೈರ ಎಂಬ ಊರಿನವಳೂ, ದೈವಭಕ್ತಳೂ ಆಗಿದ್ದಳು. ಪೌಲನು ಹೇಳುವ ಮಾತುಗಳಿಗೆ ಗಮನಕೊಡುವುದಕ್ಕಾಗಿ ಕರ್ತನು ಆಕೆಯ ಹೃದಯವನ್ನು ತೆರೆದನು.


ಯೆಹೋವನು ಮನೆಯನ್ನು ಕಟ್ಟದಿದ್ದರೆ, ಅದನ್ನು ಕಟ್ಟುವವರು ಕಷ್ಟಪಡುವುದು ವ್ಯರ್ಥ; ಯೆಹೋವನು ಪಟ್ಟಣವನ್ನು ಕಾಯದಿದ್ದರೆ, ಕಾವಲುಗಾರರು ಅದನ್ನು ಕಾಯುವುದು ವ್ಯರ್ಥ.


ಸರ್ವಾಧಿಕಾರವು ದೇವರದೇ ಎಂದು ದೇವರು ಒಮ್ಮೆ ಅಲ್ಲ, ಎರಡಾವರ್ತಿ ಹೇಳಿದ್ದನ್ನು ಕೇಳಿದ್ದೇನೆ.


ನರರು ಬರೀ ಉಸಿರೇ; ನರಾಧಿಪತಿಗಳು ಬರೀ ಮಾಯವೇ. ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿ ನೋಡಿದರೆ ಉಸಿರಿಗಿಂತಲೂ ಹಗುರ.


ಅಲ್ಲಿ ಸಭೆಯನ್ನು ಕೂಡಿಸಿ, ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳೆಲ್ಲವನ್ನೂ, ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲು ತೆರೆದದ್ದನ್ನೂ ವಿವರವಾಗಿ ಅವರಿಗೆ ತಿಳಿಸಿದರು.


ಹೀಗಾಗಿ ನಾನಿದನ್ನು ಹೇಳುತ್ತಿದ್ದೇನೆ, ನಿಮ್ಮೊಳಗೆ ಕೆಲವರು, “ನಾನು ಪೌಲನವನು,” ಇಲ್ಲವೆ, “ನಾನು ಅಪೊಲ್ಲೋಸನವನು,” ಅಥವಾ, “ನಾನು ಕೇಫನವನು,” ಇಲ್ಲವೆ, ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ.


ಹೀಗಿರಲಾಗಿ ನೆಡುವವನಾಗಲಿ, ನೀರುಹೊಯ್ಯುವವನಾಗಲಿ ಮುಖ್ಯವಾದವನಲ್ಲ. ಬೆಳೆಸುವ ದೇವರೇ ಪ್ರಾಮುಖ್ಯವಾದಾತನು.


ಪೌಲನಾಗಲಿ, ಅಪೊಲ್ಲೋಸನಾಗಲಿ, ಕೇಫನಾಗಲಿ ಲೋಕವಾಗಲಿ, ಜೀವವಾಗಲಿ ಮರಣವಾಗಲಿ ಈಗಿನ ಸಂಗತಿಗಳಾಗಲಿ ಮುಂದಣ ಸಂಗತಿಗಳಾಗಲಿ ಸಮಸ್ತವೂ ನಿಮ್ಮದೇ.


ಕ್ರಿಸ್ತನು ನಿಮ್ಮ ನಂಬಿಕೆಯ ಮೂಲಕ ನಿಮ್ಮ ಹೃದಯಗಳಲ್ಲಿ ವಾಸಮಾಡುವಂತೆಯೂ, ಆತನು ತನ್ನ ಮಹಿಮಾತಿಶಯದ ಪ್ರಕಾರ ಅನುಗ್ರಹಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು