Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 4:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಜನರು ನಮ್ಮನ್ನು ಕ್ರಿಸ್ತನ ಸೇವಕರೆಂತಲೂ ದೇವರ ಗುಪ್ತವಾಗಿದ್ದ ಸತ್ಯಾರ್ಥಗಳ ವಿಷಯದಲ್ಲಿ ದೇವರ ಮನೆವಾರ್ತೆಯವರೆಂತಲೂ ಪರಿಗಣಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನಾವು ಕ್ರಿಸ್ತಯೇಸುವಿನ ದಾಸರೆಂದೂ ದೇವರ ಸತ್ಯಾರ್ಥಗಳ ನಂಬಿಗಸ್ಥ ನಿರ್ವಾಹಕರೆಂದೂ ಜನರು ನಮ್ಮನ್ನು ಪರಿಗಣಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಜನರು ನಮ್ಮನ್ನು ಕ್ರಿಸ್ತನ ಕೈಕೆಳಗಿನವರೆಂತಲೂ ದೇವರು ತಿಳಿಸಿರುವ ಸತ್ಯಾರ್ಥಗಳ ವಿಷಯದಲ್ಲಿ ಮನೆವಾರ್ತೆಯವರೆಂತಲೂ ಎಣಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಜನರು ನಮ್ಮನ್ನು ಕ್ರಿಸ್ತನ ಸೇವಕರೆಂತಲೂ ದೇವರು ತನ್ನ ರಹಸ್ಯವಾದ ಸತ್ಯಗಳನ್ನು ನಮಗೆ ವಹಿಸಿಕೊಟ್ಟಿದ್ದಾನೆಂತಲೂ ಎಣಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆದ್ದರಿಂದ ನೀವು ಈ ರೀತಿಯಾಗಿ ನಮ್ಮನ್ನು ಪರಿಗಣಿಸಬೇಕು: ನಾವು ಕ್ರಿಸ್ತ ಯೇಸುವಿನ ದಾಸರೆಂತಲೂ ದೇವರ ರಹಸ್ಯಗಳ ನಂಬಿಗಸ್ತ ನಿರ್ವಾಹಕರೆಂದೂ ಪರಿಗಣಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಕ್ರಿಸ್ತಾಚಿ ಸೆವಕಾ ಅನಿ ದೆವಾಚ್ಯಾ ಘುಟಾಚೆ ಖರೆ ದಾಕ್ವುನ್ ದಿತಲಿ ಸೆವಕಾ ಮನುನ್ ತುಮಿ ಅಮ್ಕಾ ಮನುಕ್ ಪಾಜೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 4:1
29 ತಿಳಿವುಗಳ ಹೋಲಿಕೆ  

ನೀವೆಲ್ಲರು ದೇವರ ವಿವಿಧ ವರಗಳ ವಿಷಯದಲ್ಲಿ ಒಳ್ಳೆಯ ನಿರ್ವಾಹಕರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ಕೃಪಾವರವನ್ನು ಎಲ್ಲರ ಸೇವೆಗಾಗಿ ಉಪಯೋಗಿಸಕೊಳ್ಳಲಿ.


ಏಕೆಂದರೆ, ಸಭಾಧ್ಯಕ್ಷನು ದೇವರ ಮೇಲ್ವಿಚಾರಕನಾಗಿರುವುದರಿಂದ ದೋಷರಹಿತನಾಗಿರಬೇಕು; ಅವನು ಸ್ವೇಚ್ಛೆಯಾಗಿ ನಡೆಯುವವನೂ, ಮುಂಗೋಪಿಯೂ, ಕುಡುಕನೂ, ಜಗಳಗಂಟನೂ, ಅತಿಲಾಭವನ್ನು ಅಪೇಕ್ಷಿಸುವವನೂ ಆಗಿರದೆ,


ನಂಬಿಕೆಯಿಂದ ಪ್ರಕಟವಾಗಿರುವ ಸತ್ಯಾರ್ಥವನ್ನು ಶುದ್ಧ ಮನಸ್ಸಾಕ್ಷಿಯಿಂದ ಕೈಕೊಳ್ಳುವವರಾಗಿರಬೇಕು.


ನಮ್ಮನ್ನೇ ನಾವು ಪ್ರಚಾರಮಾಡಿಕೊಳ್ಳದೆ ನಮ್ಮನ್ನು ಯೇಸುವಿನ ನಿಮಿತ್ತ ನಿಮ್ಮ ದಾಸರೆಂತಲೂ ಕ್ರಿಸ್ತೇಸುವನ್ನೇ ಕರ್ತನೆಂತಲೂ ಘೋಷಿಸುತ್ತೇವೆ.


ನಾನು ಮಾತನಾಡಲು ಬಾಯಿ ತೆರೆಯುವಾಗ ಪೂರ್ವಕಾಲದಲ್ಲಿ ಗುಪ್ತವಾಗಿದ್ದ ಸುವಾರ್ತಾಸತ್ಯಗಳನ್ನು ಭಯವಿಲ್ಲದೆ ತಿಳಿಸುವುದಕ್ಕೆ ಬೇಕಾದ ಮಾತುಗಳನ್ನು ದೇವರು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.


ಅವರ ಹೃದಯಗಳು ಉತ್ತೇಜನಗೊಂಡು, ಪ್ರೀತಿಯಿಂದ ಒಂದಾಗಿದ್ದು, ದೇವರ ಮರ್ಮವನ್ನು ಅಂದರೆ ಕ್ರಿಸ್ತನನ್ನು ತಿಳಿದುಕೊಳ್ಳುವ ಮೂಲಕ ಬರುವ ನಿಶ್ಚಯವಾದ ಭಾಗ್ಯವನ್ನು ಪಡೆಯಬೇಕೆಂಬುದೇ ನನ್ನ ಅಪೇಕ್ಷೆ. ಅದಕ್ಕಾಗಿಯೇ ನಾನು ಎಷ್ಟು ಪ್ರಯಾಸಪಡುತ್ತಿದ್ದೇನೆಂಬುದು ನಿಮಗೆ ತಿಳಿದಿರಬೇಕೆಂದು ಬಯಸುತ್ತೇನೆ.


ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಶಾಸ್ತ್ರಗಳ ಮೂಲಕ ಅನ್ಯಜನರೆಲ್ಲರಿಗೂ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವುದಕ್ಕೋಸ್ಕರ ತಿಳಿಸಲ್ಪಟ್ಟಿದೆ. ಪೂರ್ವಕಾಲಗಳಲ್ಲಿ ಮರೆಯಾಗಿದ್ದು ಈಗ ಬೆಳಕಿಗೆ ಬಂದಿರುವಂತಹದ್ದೂ, ಈ ಮರ್ಮಕ್ಕೆ ಅನುಸಾರ ಎಂದರೆ ಯೇಸು ಕ್ರಿಸ್ತನ ವಿಷಯವಾದಂಥ ಹಾಗೂ ನಾನು ಸಾರುವಂಥ ಸುವಾರ್ತೆಗನುಸಾರವಾಗಿ ನಿಮ್ಮನ್ನು ಸ್ಥಿರಪಡಿಸುವುದಕ್ಕೆ ಶಕ್ತನಾಗಿರುವ,


ಕ್ರಿಸ್ತನ ಮರ್ಮವನ್ನು ಅಂದರೆ ಸುರ್ವಾತೆಯನ್ನು ನಾವು ಸಾರುವುದಕ್ಕೆ ದೇವರು ನಮಗೆ ಬಾಗಿಲನ್ನು ತೆರೆದು ಕೊಡುವುದಕ್ಕಾಗಿ ನಮಗೋಸ್ಕರವಾಗಿ ಪ್ರಾರ್ಥಿಸಿರಿ. ಈ ಸುರ್ವಾತೆಯ ನಿಮಿತ್ತವೇ ನಾನು ಸೆರೆಯಲ್ಲಿದ್ದೇನಲ್ಲಾ.


ದೇವರು ಆತನಲ್ಲಿ ಮೊದಲೇ ನಿರ್ಣಯಿಸಿಕೊಂಡಿದ್ದ ಕೃಪೆಯುಳ್ಳ ಸಂಕಲ್ಪದ ಪ್ರಕಾರ ತನ್ನ ಚಿತ್ತದ ರಹಸ್ಯವನ್ನು ನಮಗೆ ತಿಳಿಯಪಡಿಸಿದ್ದಾನೆ.


ಹೊಗಳಿಕೊಳ್ಳುವುದಕ್ಕೆ ನನಗೆ ಒಂದು ವೇಳೆ ಮನಸ್ಸಿದ್ದರೂ ಹಾಗೆ ಹೊಗಳಿಕೊಳ್ಳುವುದರಲ್ಲಿ ನಾನು ಬುದ್ಧಿಹೀನನಾಗುವುದಿಲ್ಲ, ಯಾಕೆಂದರೆ ನಾನು ಸತ್ಯವನ್ನೇ ಹೇಳುತ್ತಿರುವೆನು. ಆದರೂ ಯಾರೂ ನನ್ನಲ್ಲಿ ಕಾಣುವುದಕ್ಕಿಂತಲೂ ಅಥವಾ ನನ್ನಿಂದ ಕೇಳುವುದಕ್ಕಿಂತಲೂ ಹೆಚ್ಚಾಗಿ ನನ್ನನ್ನು ಪರಿಗಣಿಸಬಾರದು.


ಅವರು ಕ್ರಿಸ್ತನ ಸೇವಕರೋ? ಅವರಿಗಿಂತ ನಾನು ಹೆಚ್ಚಾಗಿ ಸೇವೆಮಾಡುವವನಾಗಿದ್ದೇನೆ. ನಾನು ಬುದ್ಧಿ ಕೆಟ್ಟವನಂತೆಯೇ ಮಾತನಾಡುತ್ತಿದ್ದೇನೆ ಕ್ರಿಸ್ತನ ಸೇವೆಯಲ್ಲಿ ಅವರಿಗಿಂತ ಹೆಚ್ಚಾಗಿ ಪ್ರಯಾಸಪಟ್ಟೆನು, ಹೆಚ್ಚಾಗಿ ಸೆರೆಮನೆಯ ವಾಸವನ್ನು ಅನುಭವಿಸಿದ್ದೇನೆ, ಮಿತಿಮೀರಿ ಏಟುಪೆಟ್ಟುಗಳನ್ನು ತಿಂದಿದ್ದೇನೆ. ಅನೇಕ ಸಾರಿ ಮರಣದ ಬಾಯೊಳಗೆ ಸಿಕ್ಕಿಕೊಂಡಿದ್ದೇನೆ.


ಕರ್ತನು ಹೇಳಿದ್ದೇನಂದರೆ, “ಹೊತ್ತು ಹೊತ್ತಿಗೆ ಅವಶ್ಯಕತೆಗೆ ಬೇಕಾದದ್ದನ್ನು ಅಳೆದು ಕೊಡುವುದಕ್ಕಾಗಿ ಯಜಮಾನನು ತನ್ನ ಆಳುಗಳ ಮೇಲೆ ನೇಮಿಸಿದ ನಂಬಿಗಸ್ತನೂ ವಿವೇಕಿಯೂ ಆದ ಮೇಲ್ವಿಚಾರಕ ಯಾರು?


ಹಾಗಾದರೆ ಯಜಮಾನನು ತನ್ನ ಮನೆಯವರಿಗೆ ಹೊತ್ತು ಹೊತ್ತಿಗೆ ಆಹಾರ ಕೊಡುವುದಕ್ಕಾಗಿ ಅವರ ಮೇಲಿರಿಸಿದ ನಂಬಿಗಸ್ತನೂ, ವಿವೇಕಿಯೂ ಆದಂಥ ಆಳು ಯಾರು?


ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.


ಅವನು ಹೊಸದಾಗಿ ಸಭೆಯಲ್ಲಿ ಸೇರಿದವನಾಗಿರಬಾರದು, ಅಂಥವನಾದರೆ ಉಬ್ಬಿಕೊಂಡು ಸೈತಾನನಿಗೆ ಪ್ರಾಪ್ತವಾದ ಶಿಕ್ಷಾವಿಧಿಗೆ ಒಳಗಾದಾನು.


ಬದಲಾಗಿ, ಎಲ್ಲಾ ವಿಷಯಗಳಲ್ಲಿ ದೇವರ ಸೇವಕರೆಂದು ನಮ್ಮ ಸೇವೆಯನ್ನು ಸಮ್ಮತ ಮಾಡಿಕೊಂಡು, ನಾವು ಸಂಕಟದಲ್ಲಿಯೂ, ಕೊರತೆಗಳಲ್ಲಿಯೂ, ಇಕ್ಕಟ್ಟುಗಳಲ್ಲಿಯೂ, ಪೆಟ್ಟುಗಳಲ್ಲಿಯೂ,


ಅಪವಾದ ಹೊರಿಸುವವರನ್ನು ಕನಿಕರದಿಂದ ಮಾತನಾಡಿಸುತ್ತೇವೆ. ನಾವು ಈಗಿನವರೆಗೂ ಲೋಕದ ಕಸವೋ ಎಲ್ಲಾದಕ್ಕಿಂತಲೂ ಹೀನವೋ ಎಂಬಂತೆ ಆಗಿದ್ದೇವೆ.


ಹಾಗಾದರೆ ಅಪೊಲ್ಲೋಸನು ಯಾರು? ಪೌಲನು ಯಾರು? ಅವರ ಸೇವೆಯ ಮುಖಾಂತರ ನೀವು ಕ್ರಿಸ್ತನನ್ನು ನಂಬುವವರಾದಿರಿ ಕರ್ತನು ಪ್ರತಿಯೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆಮಾಡುವವರಾಗಿದ್ದಾರೆ.


ಇದುವರೆಗೆ ಗುಪ್ತವಾಗಿದ್ದ ಸತ್ಯಾರ್ಥವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ. ಅದು ಯಾವುದೆಂದರೆ ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇಮಿಸಿ ಮರೆಮಾಡಿದ್ದ ದೇವರ ಜ್ಞಾನದ ಮರ್ಮವೇ ಆಗಿದೆ.


ಆತನು ಅವರಿಗೆ, “ದೇವರ ರಾಜ್ಯದ ರಹಸ್ಯ ನಿಮಗೆ ದೊರೆತಿದೆ; ಆದರೆ ಹೊರಗಿನವರಿಗೆ ಎಲ್ಲವನ್ನು ಸಾಮ್ಯಗಳ ರೂಪದಲ್ಲಿ ಹೇಳಿದ್ದೇನೆ.”


ಅದಕ್ಕಾತನು ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, “ಪರಲೋಕ ರಾಜ್ಯದ ಮರ್ಮಗಳನ್ನು ತಿಳಿಯುವ ಭಾಗ್ಯವು ನಿಮಗೆ ಕೊಟ್ಟಿದೆ ಅವರಿಗೆ ಕೊಟ್ಟಿಲ್ಲ.


ಆತನು, “ದೇವರ ರಾಜ್ಯದ ಗುಟ್ಟುಗಳನ್ನು ತಿಳಿಯುವ ವರವು ನಿಮಗೆ ಕೊಡಲಾಗಿದೆ, ಉಳಿದವರಿಗೆ ‘ಕಣ್ಣಿದ್ದರೂ ನೋಡದಂತೆಯೂ, ಕೇಳಿಸಿಕೊಂಡರೂ ಗ್ರಹಿಸದಂತೆಯೂ’ ಸಾಮ್ಯರೂಪವಾಗಿ ಹೇಳಲಾಗುತ್ತದೆ.


ಪ್ರಾರಂಭದಿಂದಲೂ ಕಣ್ಣಾರೆ ಕಂಡು ಸುವಾರ್ತಾವಾಕ್ಯವನ್ನು ಸಾರುತ್ತಿದ್ದವರು ನಮಗೆ ತಿಳಿಸಿದ ಪ್ರಕಾರ ಆ ಘಟನೆಗಳನ್ನು,


ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತರೆಂಬುದಾಗಿ ಎಣಿಸಿಕೊಳ್ಳದೆ ಇರಲು ಇದುವರೆಗೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿಸಬೇಕೆಂದು ಅಪೇಕ್ಷಿಸುತ್ತೇನೆ ಅದೇನೆಂದರೆ ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಮೊಂಡತನವು ಯಾವಾಗಲೂ ಇರದೆ ಅನ್ಯಜನಗಳ ಸಮುದಾಯವು ದೇವರ ರಾಜ್ಯದಲ್ಲಿ ಸೇರುವ ತನಕ ಮಾತ್ರ ಇರುವುದು.


ಹೀಗಿರಲು ನಿರ್ವಾಹಕರು ನಂಬಿಗಸ್ತರಾಗಿ ಕಂಡುಬರುವದು ಅಗತ್ಯವಲ್ಲವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು