Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 4:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆದರೆ ಕರ್ತನ ಚಿತ್ತವಾದರೆ ನಾನು ಬೇಗನೆ ನಿಮ್ಮ ಬಳಿಗೆ ಬಂದು ಉಬ್ಬಿಕೊಂಡಿರುವವರ ಮಾತನ್ನು ಮಾತ್ರವಲ್ಲ ಅವರ ಬಲವನ್ನು ಕಂಡುಹಿಡಿಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಪ್ರಭುವಿನ ಚಿತ್ತವಾದರೆ ನಾನು ಬೇಗನೆ ಬರುತ್ತೇನೆ. ಬಂದು, ಆ ಅಹಂಕಾರಿಗಳು ಕೇವಲ ಮಾತಿನ ಮಲ್ಲರೋ ಅಥವಾ ಶಕ್ತಿವಂತರೋ ಎಂದು ಕಂಡುಹಿಡಿಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆದರೆ ಕರ್ತನ ಚಿತ್ತವಿದ್ದರೆ ನಾನು ಬೇಗ ನಿಮ್ಮ ಬಳಿಗೆ ಬಂದು ಉಬ್ಬಿಕೊಂಡಿರುವವರ ಮಾತನ್ನಲ್ಲ ಅವರ ಶಕ್ತಿಯನ್ನೇ ಗೊತ್ತುಮಾಡಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆದರೆ ನಾನು ಬಹುಬೇಗನೆ ನಿಮ್ಮ ಬಳಿಗೆ ಬರುತ್ತೇನೆ. ಪ್ರಭುವಿನ ಚಿತ್ತವಾದರೆ, ನಾನು ಬಂದು ಜಂಬಕೊಚ್ಚಿಕೊಳ್ಳುವವರು ಹೇಳುವ ಮಾತನ್ನಲ್ಲ, ಅವರು ಏನು ಮಾಡಬಲ್ಲರೆಂಬುದನ್ನು ಗೊತ್ತುಮಾಡಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದರೆ ಕರ್ತದೇವರ ಚಿತ್ತವಿದ್ದರೆ, ನಾನು ಬೇಗ ನಿಮ್ಮ ಬಳಿಗೆ ಬಂದು, ಅಹಂಕಾರಿಗಳ ಮಾತನ್ನಲ್ಲ, ಅವರಿಗೆ ಎಷ್ಟು ಶಕ್ತಿ ಇದೆ ಎಂಬುವುದನ್ನು ಕಂಡುಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಖರೆ ಮಿಯಾ ತುಮ್ಚ್ಯಾಕ್ಡೆ ಯೆತಾ ಅನಿ ದೆವಾಚಿ ಖುಶಿ ರ್‍ಹಾಲ್ಯಾರ್ ಲಗ್ಗುನಾಚ್ ಯೆತಾ; ತನ್ನಾ ತೊಂಡಾನ್ ಮೊಟೆ ಬೊಲ್ತಲ್ಯಾಂಚ್ಯಾ ಹಾತಾನ್ ಕಾಯ್ ಕಾಯ್ ಕರುಕ್ ಹೊತಾ ಮನುನ್ ಬಗ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 4:19
18 ತಿಳಿವುಗಳ ಹೋಲಿಕೆ  

“ದೇವರ ಚಿತ್ತವಾದರೆ ಪುನಃ ನಿಮ್ಮ ಬಳಿಗೆ ಬರುತ್ತೇನೆಂದು” ಹೇಳಿ ಅವರ ಅಪ್ಪಣೆ ತೆಗೆದುಕೊಂಡು ಹೊರಟುಹೋದನು. ಅನಂತರ ಎಫೆಸದಿಂದ ಸಮುದ್ರಪ್ರಯಾಣ ಮಾಡಿ ಕೈಸರೈಯದಲ್ಲಿ ಇಳಿದು,


ಈ ಸಂಗತಿಗಳು ಆದ ಮೇಲೆ ಪೌಲನು ತಾನು ಮಕೆದೋನ್ಯದಲ್ಲಿಯೂ, ಅಖಾಯದಲ್ಲಿಯೂ ಸಂಚಾರಮಾಡಿ ಯೆರೂಸಲೇಮಿಗೆ ಹೋಗಬೇಕೆಂದು ಮನಸ್ಸಿನಲ್ಲಿ ಯೋಚಿಸಿ; “ಅಲ್ಲಿಗೆ ಹೋದ ಮೇಲೆ ರೋಮಾಪುರವನ್ನು ಸಹ ನೋಡಬೇಕೆಂದು” ಹೇಳಿದನು.


ದೇವರು ಅನುಮತಿಸುವುದಾದರೆ ನಾವು ಇವುಗಳನ್ನು ಮಾಡುವೆವು.


ನಿಮಗೆ ತೊಂದರೆ ಆಗಬಾರದೆಂದೇ ನಾನು ಇದುವರೆಗೆ ಕೊರಿಂಥಕ್ಕೆ ಬರಲಿಲ್ಲ. ಇದನ್ನು ಹೃದಯ ಪೂರ್ವಕವಾಗಿ ಹೇಳುತ್ತಿದ್ದೇನೆ. ಇದಕ್ಕೆ ದೇವರೇ ಸಾಕ್ಷಿ.


ಒಬ್ಬನು ಹಸಿದರೆ ಅವನು ಮನೆಯಲ್ಲೇ ಊಟಮಾಡಲಿ ನೀವು ಸೇರಿಬಂದದ್ದು ನ್ಯಾಯ ತೀರ್ಪಿಗೊಳಗಾಗುವುದಕ್ಕೆ ಕಾರಣವಾಗಬಾರದು. ಇನ್ನುಳಿದಿರುವ ಸಂಗತಿಗಳನ್ನು ನಾನು ಬಂದ ನಂತರ ಆದೇಶಿಸುತ್ತೇನೆ.


ನಿಮ್ಮಲ್ಲಿ ಕೆಲವರು ಪೌಲನು ನಮ್ಮ ಬಳಿಗೆ ಬರುವುದಿಲ್ಲವೆಂದು ತಿಳಿದು ಉಬ್ಬಿಕೊಂಡಿದ್ದಾರೆ.


ಆದರೆ ಪರಿಪಕ್ವತೆಯುಳ್ಳವರ ಮಧ್ಯದಲ್ಲಿ ಜ್ಞಾನವನ್ನೇ ಹೇಳುತ್ತೇವೆ. ಅದು ಇಹಲೋಕದ ಜ್ಞಾನವಲ್ಲ, ಗತಿಸಿ ಹೋಗುವ ಇಹಲೋಕಾಧಿಕಾರಿಗಳ ಜ್ಞಾನವೂ ಅಲ್ಲ.


ಹೀಗೆ ನಾನು ದೇವರ ಚಿತ್ತಾನುಸಾರ ಆನಂದವುಳ್ಳವನಾಗಿ ನಿಮ್ಮಲ್ಲಿಗೆ ಬಂದು ನಿಮ್ಮ ಸಂಗಡ ವಿಶ್ರಾಂತಿಹೊಂದಲಾಗುವುದು.


ಆದುದರಿಂದ ನೀವು ಅಂಥ ಮಾತನ್ನು ಬಿಟ್ಟು “ಕರ್ತನ ಚಿತ್ತವಾದರೆ ನಾವು ಬದುಕಿ ಈ ಕೆಲಸವನ್ನಾಗಲಿ ಆ ಕೆಲಸವನ್ನಾಗಲಿ ಮಾಡುವೆವು” ಎಂದು ಹೇಳಬೇಕು.


ನಾನು ಹಾದುಹೋಗಬೇಕೆಂದಿರುವ ಮಕೆದೋನ್ಯ ಸೀಮೆಯನ್ನು ದಾಟುವಾಗ ನಿಮ್ಮ ಬಳಿಗೆ ಬಂದು ಬಹುಶಃ ನಿಮ್ಮ ಬಳಿಯಲ್ಲೇ ಉಳಿದುಕೊಳ್ಳುವೆನು.


ನೀವೆಲ್ಲರೂ ಅನ್ಯಭಾಷೆಗಳನ್ನಾಡಬೇಕೆಂದು ನಾನು ಅಪೇಕ್ಷಿಸಿದರೂ, ಅದಕ್ಕಿಂತಲೂ ನೀವು ಪ್ರವಾದಿಸಬೇಕೆಂಬುದೆ ನನ್ನಿಷ್ಟವಾಗಿದೆ. ಅನ್ಯಭಾಷೆಗಳನ್ನಾಡುವವನು ಸಭೆಯು ಅಭಿವೃದ್ಧಿಯಾಗುವುದಕ್ಕಾಗಿ ಆ ಅನ್ಯಭಾಷೆಯ ಅರ್ಥವನ್ನು ವಿವೇಚಿಸಿ ಹೇಳದೆ ಹೋದರೆ ಅವನಿಗಿಂತ ಪ್ರವಾದಿಸುವವನು ಶ್ರೇಷ್ಠನು.


ಆ ಸೀಮೆಯಲ್ಲಿ ಸಂಚಾರಮಾಡಿ ಅಲ್ಲಿಯವರನ್ನು ಅನೇಕ ಸಂದೇಶಗಳಿಂದ ಧೈರ್ಯಪಡಿಸಿ ಗ್ರೀಸ್ ದೇಶಕ್ಕೆ ಬಂದನು.


ಪ್ರಿಯರೇ, ನಾನು ನಿಮಗೋಸ್ಕರವಾಗಿ ನನ್ನಗೂ ಅಪೊಲ್ಲೋಸನಿಗೂ ಈ ನಿಯಮಗಳನ್ನೆಲ್ಲಾ ಅನ್ವಯಿಸಿಕೊಂಡು ಹೇಳಿದ್ದೇನೆ. ಆದ್ದರಿಂದ ನೀವು “ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನು ಮೀರಿಹೋಗಬಾರದು,” ಎಂಬ ಈ ವಾಕ್ಯದ ಅರ್ಥವನ್ನು ನಮ್ಮಿಂದ ಕಲಿತುಕೊಂಡು, ನಿಮ್ಮಲ್ಲಿ ಯಾವನಾದರೂ ಒಬ್ಬನನ್ನು ವಿರೋಧಿಸಿ ಮತ್ತೊಬ್ಬನ ಪಕ್ಷವನ್ನು ಹಿಡಿದು ಉಬ್ಬಿಕೊಳ್ಳಬಾರದು ಎಂಬುದಕ್ಕಾಗಿದೆ.


ನಾನು ಹಾದುಹೋಗುವ ಈ ಸ್ವಲ್ಪ ಸಮಯದಲ್ಲಿ ನಿಮ್ಮನ್ನು ನೋಡಲು ಬಯಸುವುದಿಲ್ಲ. ಕರ್ತನ ಅಪ್ಪಣೆಯಾದರೆ ನಿಮ್ಮ ಬಳಿಯಲ್ಲಿ ಕೆಲವು ಕಾಲ ತಂಗಲು ಬಯಸುತ್ತೇನೆ.


ನಾನು ಪತ್ರಿಕೆಗಳಿಂದ ನಿಮ್ಮನ್ನು ಹೆದರಿಸುತ್ತಿದ್ದೆನೆಂದು ತಿಳಿದುಕೊಳ್ಳಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು