Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 5:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಿಮ್ಮಲ್ಲಿ ಜಾರತ್ವವುಂಟೆಂಬ ಸುದ್ದಿಯನ್ನು ನಾನು ಕೇಳಿದ್ದೇನೆ. ಒಬ್ಬನು ತನ್ನ ತಂದೆಯ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ. ಅಂಥ ಜಾರತ್ವವು ಅನ್ಯಜನರಲ್ಲಿಯೂ ಸಹ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅನ್ಯಜನರಲ್ಲಿ ಕೂಡ ಇಲ್ಲದಂಥ ದುರ್ನಡತೆ ನಿಮ್ಮಲ್ಲಿದೆಯೆಂಬುದಾಗಿ ವರದಿ ಬಂದಿದೆ. ನಿಮ್ಮಲ್ಲಿ ಒಬ್ಬನು ತನ್ನ ತಂದೆಯ ಪತ್ನಿಯನ್ನೇ ಇಟ್ಟುಕೊಂಡಿದ್ದಾನಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಿಮ್ಮಲ್ಲಿ ಜಾರತ್ವವುಂಟೆಂದು ಜನರು ಸಾಧಾರಣವಾಗಿ ಹೇಳುತ್ತಾರೆ. ಒಬ್ಬನು ತನ್ನ ಅಪ್ಪನ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ; ಅಂಥ ಜಾರತ್ವವು ಅನ್ಯಜನರಲ್ಲಿಯೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಿಮ್ಮ ಮಧ್ಯದಲ್ಲಿ ಲೈಂಗಿಕ ಪಾಪವಿದೆಯೆಂದು ಜನರು ನಿಜವಾಗಿಯೂ ಹೇಳುತ್ತಿದ್ದಾರೆ. ದೇವರನ್ನು ತಿಳಿದಿಲ್ಲದ ಜನರ ನಡುವೆಯೂ ಇಲ್ಲದಂಥ ಕೆಟ್ಟ ಬಗೆಯ ಲೈಂಗಿಕ ಪಾಪ ಅದಾಗಿದೆ. ನಿಮ್ಮಲ್ಲಿ ಒಬ್ಬನು ತನ್ನ ತಂದೆಯ ಪತ್ನಿಯನ್ನೇ ಇಟ್ಟುಕೊಂಡಿದ್ದಾನೆಂದು ಜನರು ಹೇಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೂದ್ಯರಲ್ಲದವರಲ್ಲಿ ನಡೆಯದೇ ಇರುವಂಥ ಅನೈತಿಕತೆ ನಿಮ್ಮಲ್ಲಿದೆಯೆಂದು ವಾಸ್ತವವಾಗಿ ವರದಿ ಬಂದಿದೆ: ಒಬ್ಬನು ತನ್ನ ತಂದೆಯ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತುಮ್ಚ್ಯಾ ಮದ್ದಿ ವೆಭಿಚಾರ್ ಚಾಲು ಹೊಲಾ ಮನುನ್ ಮಾಜ್ಯಾ ಕಾನಾತ್ ಪಡ್ಲಾ; ತಸ್ಲೊ ವೆಭಿಚಾರ್ ವಿಶ್ವಾಸಾತ್ ನಸಲ್ಲ್ಯಾ ಲೊಕಾತ್ನಿ ಸೈತ್ ಗಾವಿ ಸರ್ಕೊ ನಾ; ಎಕ್ಲೊ ಅಪ್ನಾಚ್ಯಾ ಬಾಬಾಚ್ಯಾ ದೊನ್ವೆಚ್ಯಾ ಬಾಯ್ಕೊಚ್ಯಾ ವಾಂಗ್ಡಾ ನಿಜ್ತಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 5:1
32 ತಿಳಿವುಗಳ ಹೋಲಿಕೆ  

ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು.


ಜಾರತ್ವವನ್ನು ಬಿಟ್ಟು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು, ಆದರೆ ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಳಿಗೆ ಮನಸ್ಸು ಬರಲಿಲ್ಲ.


ಆದುದರಿಂದ ನಿಮ್ಮಲ್ಲಿರುವ ಲೌಕಿಕ ಆಸೆಗಳು ಅಂದರೆ, ಜಾರತ್ವ, ಅಶುದ್ಧತ್ವ, ಕಾಮಾಭಿಲಾಷೆ, ಕೆಟ್ಟ ಅಭಿಲಾಷೆ ಮತ್ತು ವಿಗ್ರಹಾರಾಧನೆಗೆ ಸಮವಾಗಿರುವ ದುರಾಶೆ ಇಂಥವುಗಳನ್ನು ಸಾಯಿಸಿರಿ.


ಜಾರತ್ವ ಮತ್ತು ಯಾವ ವಿಧವಾದ ಅಶುದ್ಧತ್ವ ಅಥವಾ ದ್ರವ್ಯಾಶೆ ಇವುಗಳ ಸುದ್ದಿಯಾದರೂ ನಿಮ್ಮಲ್ಲಿ ಇರಬಾರದು, ಇವುಗಳಿಗೆ ದೂರವಾಗಿರುವುದೇ ದೇವಜನರಿಗೆ ಯೋಗ್ಯವಾದದ್ದು.


ಮಲತಾಯಿಯ ಜೊತೆ ಸಂಗಮಿಸಬಾರದು; ಆಕೆ ತಂದೆಗೆ ಹೆಂಡತಿಯಾದವಳಲ್ಲವೇ.


ಶರೀರಭಾವದ ಸ್ವಭಾವಗಳು ಪ್ರತ್ಯಕ್ಷವಾಗಿಯೇ ಇವೆ, ಅದು ಯಾವುವೆಂದರೆ, ಜಾರತ್ವ, ಬಂಡುತನ, ನಾಚಿಕೆಗೇಡಿತನ,


ದೇವರು ನಮ್ಮನ್ನು ಅಶುದ್ಧತೆಗೆ ಕರೆಯದೆ ಶುದ್ಧರಾಗಿರುವುದಕ್ಕೆ ಕರೆದನು.


ನಾನು ತಿರುಗಿ ಬಂದಾಗ ನನ್ನ ದೇವರು ನಿಮ್ಮ ವಿಷಯದಲ್ಲಿ ನನ್ನನ್ನು ತಗ್ಗಿಸಿಕೊಳ್ಳಲು ಗುರಿಮಾಡುವನೆಂತಲೂ, ಮೊದಲಿನಂತೆ ಪಾಪಮಾಡಿ, ಬಂಡುತನ ಹಾದರತನ, ಕೆಟ್ಟತನಗಳನ್ನು ನಡಿಸಿ ಪಶ್ಚಾತ್ತಾಪಡದಿರುವ ಅನೇಕರ ವಿಷಯವಾಗಿ ನಾನು ದುಃಖಪಡಬೇಕಾದೀತೆಂತಲೂ ನನಗೆ ಭಯವುಂಟು.


ಜಾರತ್ವವನ್ನು ಬಿಟ್ಟು ದೂರ ಓಡಿಹೋಗಿರಿ. “ಮನುಷ್ಯರು ಮಾಡುವ ಇತರ ಪಾಪಕೃತ್ಯಗಳು ದೇಹದ ಹೊರಗಿವೆ”, ಆದರೆ ಜಾರತ್ವ ಮಾಡುವವನು ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ.


“ಭೋಜನ ಪದಾರ್ಥಗಳು ಹೊಟ್ಟೆಗಾಗಿಯೂ ಮತ್ತು ಹೊಟ್ಟೆಯು ಭೋಜನಪದಾರ್ಥಗಳಿಗಾಗಿಯೂ” ಇವೆ. ದೇವರು ಇವೆರಡನ್ನೂ ನಾಶಮಾಡುವನು. ಆದರೆ ದೇಹವು ಜಾರತ್ವಕೋಸ್ಕರ ಇರುವಂಥದಲ್ಲ. ಕರ್ತನಿಗೋಸ್ಕರ ಇರುವುದಾಗಿದೆ. ಕರ್ತನು ದೇಹಕೋಸ್ಕರ ಒದಗಿಸಿಕೊಡುತ್ತಾನೆ.


ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಸುಳ್ಳನ್ನು ನಂಬಬೇಡಿರಿ. ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಪುರುಷಗಾಮಿಗಳು, ಕಳ್ಳರು,


ಆದರೆ ಕ್ರೈಸ್ತ ಸಹೋದರನೆನಿಸಿಕೊಂಡವನು ಜಾರನು, ಲೋಭಿಯು, ವಿಗ್ರಹಾರಾಧಕನು, ಜಗಳಗಂಟನೂ, ಕುಡುಕನು, ಸುಲುಕೊಳ್ಳುವವನೂ ಆಗಿದ್ದ ಪಕ್ಷದಲ್ಲಿ ಅವನ ಸಹವಾಸ ಮಾಡಬಾರದು. ಅಂಥವನ ಸಂಗಡ ಊಟ ಸಹ ಮಾಡಬಾರದು ಎಂದು ಬರೆದಿದ್ದೇನೆ.


ಇದಕ್ಕಿಂತ ಹೆಚ್ಚಿನ ಹೊರೆಯನ್ನು ನಿಮ್ಮ ಮೇಲೆ ಹೊರಿಸಬಾರದೆಂದು ಪವಿತ್ರಾತ್ಮನಿಗೂ ನಮಗೂ ಹಿತವಾಗಿ ತೋರಿತು; ನೀವು ಎಚ್ಚರವಾಗಿದ್ದು ಇವುಗಳ ಗೊಡವೆಗೆ ಹೋಗದಿದ್ದರೆ ನಿಮಗೆ ಒಳ್ಳೆಯದಾಗುವುದು. ಶುಭವಾಗಲಿ.”


ಆದರೆ ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ಹಾದರವನ್ನೂ, ಕುತ್ತಿಗೆ ಹಿಸುಕಿ ಕೊಂದದ್ದನ್ನೂ, ರಕ್ತವನ್ನೂ ವಿರ್ಜಿಸಬೇಕೆಂದು ನಾವು ಅವರಿಗೆ ಪತ್ರವನ್ನು ಬರೆಯೋಣ ಎಂದು ತೀರ್ಮಾನಿಸಿದರು.


ಕಾಮವನ್ನು ತೀರಿಸಿಕೊಳ್ಳಬೇಕೆಂದು ಎಷ್ಟೋ ಮುಂದುವರೆದಿದ್ದಿ! ಇದರಿಂದ ನಿನ್ನ ದುರಭ್ಯಾಸಗಳಿಗೆ ನಿನ್ನ ನಡತೆಯನ್ನು ಹೊಂದಿಸಿಕೊಂಡಿದ್ದಿ.


ನಾನು ನಿಮಗೆ ಬರೆದದ್ದು ತಪ್ಪುಮಾಡಿದವನಿಗೆ ದಂಡನೆಯಾಗಲಿ ಎಂದಲ್ಲ, ಆ ತಪ್ಪಿನಿಂದ ನೊಂದವನಿಗೆ ನ್ಯಾಯ ದೊರಕಲೆಂದೂ ಅಲ್ಲ; ನಮ್ಮ ಬಗ್ಗೆ ನಿಮಗಿರುವ ಅಕ್ಕರೆ, ಆಸಕ್ತಿಗಳು ದೇವರ ಸನ್ನಿಧಿಯಲ್ಲಿ ನಿಮಗೆ ವ್ಯಕ್ತವಾಗಲೆಂದೇ ಬರೆದೆನು. ಆದ್ದರಿಂದಲೇ ನಮ್ಮ ಮನಸ್ಸಿಗೆ ನೆಮ್ಮದಿ ಉಂಟಾಗಿದೆ.


ಯಾಕೆಂದರೆ ನಿಮ್ಮಲ್ಲಿ ಭಿನ್ನಾಭಿಪ್ರಾಯಗಳು ಜಗಳಗಳುಂಟೆಂದು ನಿಮ್ಮ ಬಗ್ಗೆ ಖ್ಲೋಯೆಯ ಜನರಿಂದ ನನಗೆ ತಿಳಿದು ಬಂದಿತು.


ಬಡವರ ತಲೆಗಳನ್ನು ನೆಲದ ಧೂಳಿನಂತೆ ತುಳಿದು ಬಿಡುತ್ತಾರೆ, ದೀನರ ದಾರಿಗೆ ಅಡ್ಡ ಹಾಕುತ್ತಾರೆ. ಮಗನೂ ಮತ್ತು ತಂದೆಯೂ ಒಬ್ಬಳಲ್ಲಿ ಹೋಗಿ ನನ್ನ ಪವಿತ್ರ ನಾಮವನ್ನು ಅಪಕೀರ್ತಿಗೆ ಗುರಿಮಾಡುತ್ತಾರೆ.


ಆದರೆ ನೀನು ನಡೆದ ದುರ್ಮಾರ್ಗವು ಅವರು ನಡೆದಂಥದಲ್ಲ, ನಿನ್ನ ಅಸಹ್ಯಕಾರ್ಯಗಳು ಅವರು ನಡೆಸಿದಂಥವುಗಳಲ್ಲ, ಅವರ ದುರ್ನಡತೆಯು ಅತ್ಯಲ್ಪವೆಂದು ಸರ್ವದಾ ಅವರಿಗಿಂತ ಬಹುಕೆಟ್ಟವಳಾಗಿ ನಡೆದುಕೊಂಡೆ.”


“ಅವರು, ಮಲತಾಯಿಯನ್ನು ಸಂಗಮಿಸಿ ತಂದೆಗೆ ಅವಮಾನಪಡಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.


ತಂದೆಗೆ ಹೆಂಡತಿಯಾದವಳನ್ನು ಸಂಗಮಿಸಲೇ ಬಾರದು; ಅದು ತಂದೆಗೆ ಅಪಮಾನಪಡಿಸಿದ ಹಾಗಾಗುವುದು.


ನಿನ್ನವರು ತಂದೆಗೆ ಮಾನಭಂಗ ಮಾಡಿದ್ದಾರೆ; ನಿನ್ನಲ್ಲಿ ಮುಟ್ಟಿನಿಂದ ಅಶುದ್ಧಳಾದವಳನ್ನು ಕೂಡಿದ್ದಾರೆ.


ಇಸ್ರಾಯೇಲನ ಚೊಚ್ಚಲ ಮಗನಾದ ರೂಬೇನನ ವಂಶಾವಳಿ. ರೂಬೇನನು ಚೊಚ್ಚಲ ಮಗನಾಗಿದ್ದರೂ ಅವನು ತನ್ನ ತಂದೆಯ ಉಪಪತ್ನಿಯೊಂದಿಗೆ ಸಂಗಮಿಸಿ ಹಾಸಿಗೆಯನ್ನು ಹೊಲೆ ಮಾಡಿದ್ದರಿಂದ ಅವನ ಹಕ್ಕು ಇಸ್ರಾಯೇಲನ ಮಗನಾದ ಯೋಸೇಫನ ಕುಲಕ್ಕೆ ಕೊಡಲ್ಪಟ್ಟಿತು.


ಅರಸನಾದ ದಾವೀದನು ಯೆರೂಸಲೇಮಿಗೆ ಬಂದ ಮೇಲೆ ತಾನು ಅರಮನೆ ಕಾಯುವುದಕ್ಕೋಸ್ಕರ ಇಟ್ಟಿದ್ದ ತನ್ನ ಹತ್ತು ಮಂದಿ ಉಪಪತ್ನಿಯರನ್ನು ಪ್ರತ್ಯೇಕವಾಗಿ ಒಂದು ಮನೆಯಲ್ಲಿಟ್ಟು, ಅವರಿಗೆ ಅನ್ನವಸ್ತ್ರ ಕೊಡುತ್ತಿದ್ದನು. ಆದರೆ ಅವರನ್ನು ತಿರುಗಿ ಸಂಗಮಿಸಲಿಲ್ಲ. ಅವರು ಜೀವದಿಂದಿರುವವರೆಗೂ ವಿಧೆವೆಯರಂತಿದ್ದು ಕಾವಲಲ್ಲಿ ಇರಬೇಕಾಯಿತು.


ಆಗ ಅವರು ಅಬ್ಷಾಲೋಮನಿಗೋಸ್ಕರ ಮಾಳಿಗೆಯ ಮೇಲೆ ಗುಡಾರ ಹಾಕಿದರು. ಅವನು ಎಲ್ಲಾ ಇಸ್ರಾಯೇಲ್ಯರ ಮುಂದೆಯೇ ತನ್ನ ತಂದೆಯ ಉಪಪತ್ನಿಗಳನ್ನು ಸಂಗಮಿಸಿದನು.


ನನ್ನ ಮಕ್ಕಳೇ, ಹೀಗೆ ಮಾಡಬಾರದು, ನೀವು ಯೆಹೋವನ ಜನರನ್ನು ದುರ್ಮಾರ್ಗಕ್ಕೆ ಎಳೆಯುವವರಾಗಿದ್ದೀರೆಂದು ಕೇಳಿದ್ದೇನೆ; ಇದು ಒಳ್ಳೆಯದಲ್ಲ.


ಯಾವನಾದರೂ ಮಲತಾಯಿಯನ್ನು ಸಂಗಮಿಸಿದರೆ ಅವನು ತಂದೆಗೆ ಮಾನಭಂಗಮಾಡಿದ ಹಾಗಾಯಿತು; ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು; ಆ ಶಿಕ್ಷೆಗೆ ಅವರೇ ಕಾರಣರು.


ಆದರೆ ದಡಮೀರಿದ ಪ್ರವಾಹದಂತಿರುವ ನೀನು ಇನ್ನು ಶ್ರೇಷ್ಠನಾಗುವುದಿಲ್ಲ. ಏಕೆಂದರೆ ನೀನು ನಿನ್ನ ತಂದೆಯ ಹಾಸಿಗೆಯನ್ನು ಹತ್ತಿ, ಅದನ್ನು ಹೊಲೆ ಮಾಡಿದಿಯಲ್ಲಾ. ಇವನು ನನ್ನ ಮಂಚವನ್ನು ಹತ್ತಿದನು!


ಇದು ಯಾಕೋಬನ ವಂಶದವರ ಚರಿತ್ರೆ: ಯೋಸೇಫನು ಹದಿನೇಳು ವರ್ಷದವನಾಗಿದ್ದಾಗ ತನ್ನ ಅಣ್ಣಂದಿರ ಜೊತೆಯಲ್ಲಿ ಅಂದರೆ, ತನ್ನ ತಂದೆಯ ಹೆಂಡತಿಯರಾದ ಬಿಲ್ಹಾ ಮತ್ತು ಜಿಲ್ಪಾರ ಮಕ್ಕಳ ಜೊತೆಯಲ್ಲಿ ಆಡು ಕುರಿಗಳನ್ನು ಮೇಯಿಸುತ್ತಿದ್ದನು. ಅವರು ಏನಾದರೂ ಕೆಟ್ಟ ಕೆಲಸ ಮಾಡುವಾಗ ಅವನು ತಂದೆಗೆ ತಿಳಿಸುತ್ತಿದ್ದನು.


ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳನ್ನು ಸಂಗಮಿಸಿದನು. ಈ ಸಂಗತಿಯು ಇಸ್ರಾಯೇಲನಿಗೆ ತಿಳಿಯಿತು. ಯಾಕೋಬನಿಗೆ ಹನ್ನೆರಡು ಮಂದಿ ಗಂಡು ಮಕ್ಕಳಿದ್ದರು.


ಮನಸ್ಸಿಗೆ ನೋವುಂಟುಮಾಡಿದವನು ಒಬ್ಬನು ನಿಮ್ಮಲ್ಲಿ ಇದ್ದರೂ ಅವನು ನನ್ನನ್ನು ಮಾತ್ರ ದುಃಖಪಡಿಸದೆ ನಿಮ್ಮಲ್ಲಿ ಬಹುಜನರನ್ನೂ ನೋಯಿಸಿದ್ದಾನೆ. ಆ ದುಃಖವು ಎಲ್ಲರಲ್ಲಿಯೂ ಉಂಟಾಯಿತೆಂದು ನಾನು ಹೇಳುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು