Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 5:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಹೊರಗಿರುವವರನ್ನು ತೀರ್ಪುಮಾಡುವವನು ದೇವರು. “ನಿಮ್ಮ ಮಧ್ಯದಲ್ಲಿರುವ ಆ ದುಷ್ಟ ವ್ಯಕ್ತಿಯನ್ನು ತೆಗೆದುಹಾಕಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಹೊರಗಿನವರನ್ನು ಕುರಿತು ತೀರ್ಪುಮಾಡುವವನು ದೇವರು. ಆ ದುಷ್ಟನನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದರೆ ಹೊರಗಿನವರನ್ನು ತೀರ್ಪುಮಾಡುವವರು ದೇವರೇ. “ಆ ದುಷ್ಟನನ್ನು ನಿಮ್ಮಿಂದ ತೆಗೆದು ಹೊರಗೆ ಹಾಕಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತ್ಯಾ ಭಾಯ್ರ್ ಹೊತ್ತ್ಯಾಂಚಿ ದೆವುಚ್ ಝಡ್ತಿ ಕರ್‍ತಾ “ದುಸ್ಟ್ ಮಾನ್ಸಾಕ್ ತುಮ್ಚ್ಯಾ ಮದ್ನಾ ಭಾಯ್ರ್ ಘಾಲಾ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 5:13
18 ತಿಳಿವುಗಳ ಹೋಲಿಕೆ  

ಅಪರಾಧಿಯನ್ನು ಕೊಲ್ಲುವುದಕ್ಕೆ ಸಾಕ್ಷಿಗಳೇ ಮೊದಲು ಕಲ್ಲನ್ನು ಹಾಕಬೇಕು; ತರುವಾಯ ಜನರೆಲ್ಲರೂ ಹಾಕಲಿ. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


ಆ ಪ್ರವಾದಿಗೆ ಅಥವಾ ಆ ಕನಸುಗಾರನಿಗೆ ಮರಣ ಶಿಕ್ಷೆಯಾಗಬೇಕು. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ, ಐಗುಪ್ತದೇಶದೊಳಗಿಂದ ಕರೆದುಕೊಂಡು ಬಂದ ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧವಾಗಿ ಅವನು ದ್ರೋಹದ ಮಾತುಗಳನ್ನಾಡಿ, ನಿಮ್ಮ ದೇವರಾದ ಯೆಹೋವನು ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕೆಂದಿದ್ದನಲ್ಲಾ. ಅವನನ್ನು ಕೊಲ್ಲಿಸಿ, ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


ಆಗ ಊರಿನವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕಿಬಿಡಬೇಕು. ಇಸ್ರಾಯೇಲರೆಲ್ಲರೂ ಇದನ್ನು ಕೇಳಿ ಭಯಪಡುವರು.


ಅವನು ಅವರ ಮಾತನ್ನು ಕೇಳದೆ ಹೋದರೆ ಅದನ್ನು ಸಭೆಗೆ ಹೇಳು. ಅವನು ಸಭೆಯ ಮಾತನ್ನು ಕೇಳದೆ ಹೋದರೆ ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ.


ನೀವು ಅವರಿಬ್ಬರನ್ನೂ ಊರುಬಾಗಿಲಿನ ಹೊರಕ್ಕೆ ಕರೆತಂದು ಕಲ್ಲೆಸೆದು ಕೊಲ್ಲಬೇಕು. ಒಬ್ಬನಿಗೆ ನಿಶ್ಚಿತಳಾದ ಸ್ತ್ರೀಯನ್ನು ಕೆಡಿಸಿದ್ದರಿಂದ ಆ ಪುರುಷನಿಗೂ, ಊರಲ್ಲಿದ್ದು ರಕ್ಷಣೆಗಾಗಿ ಕೂಗಿಕೊಳ್ಳದೆ ಹೋದುದರಿಂದ ಆ ಸ್ತ್ರೀಗೂ ಮರಣಶಿಕ್ಷೆಯಾಗಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸೇವೆ ಮಾಡುವ ಯಾಜಕರ ಅಥವಾ ನ್ಯಾಯಾಧಿಪತಿಯ ಮಾತನ್ನು ಯಾರು ಅಹಂಕಾರದಿಂದ ನಿರಾಕರಿಸುತ್ತಾರೋ ಅವರಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ಇಸ್ರಾಯೇಲರ ಮಧ್ಯದಿಂದ ತೆಗೆದುಹಾಕಬೇಕು.


ಅವನನ್ನು ಸೈತಾನನಿಗೆ ಒಪ್ಪಿಸಿರಿ ಯಾಕೆಂದರೆ ಕರ್ತನಾದ ಯೇಸುವಿನ ಪ್ರತ್ಯಕ್ಷತೆಯ ದಿನದಲ್ಲಿ ಅಂಥವನ ಆತ್ಮವು ರಕ್ಷಣೆ ಹೊಂದುವುದಕ್ಕಾಗಿ ಅವನ ಶರೀರಭಾವವು ನಾಶವಾಗುವಂತೆ ಕರ್ತನಾದ ಯೇಸುವಿನ ಶಕ್ತಿಯಿಂದ ತೀರ್ಪು ಮಾಡಿದ್ದೇನೆ.


ಕರ್ತನು ಭಕ್ತರನ್ನು ಕಷ್ಟಗಳಿಂದ ರಕ್ಷಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವನಾಗಿದ್ದಾನೆ.


ನೀವು ಹುಳಿಯಿಲ್ಲದವರೆನಿಸಿಕೊಂಡದ್ದರಿಂದ ಹಳೇ ಹುಳಿಯನ್ನು ತೆಗೆದುಹಾಕಿ ಹೊಸ ಕಣಕದಂತಾಗಿರಿ. ಯಾಕೆಂದರೆ ಈಗಾಗಲೇ ನಮ್ಮ ಪಸ್ಕ ಯಜ್ಞದ ಕುರಿಮರಿಯು ಬಲಿಯಾಗಿದೆ; ಆ ಕುರಿಮರಿ ಯಾವುದೆಂದರೆ ಕ್ರಿಸ್ತನೇ.


ನಿಮ್ಮಲ್ಲಿ ಜಾರತ್ವವುಂಟೆಂಬ ಸುದ್ದಿಯನ್ನು ನಾನು ಕೇಳಿದ್ದೇನೆ. ಒಬ್ಬನು ತನ್ನ ತಂದೆಯ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ. ಅಂಥ ಜಾರತ್ವವು ಅನ್ಯಜನರಲ್ಲಿಯೂ ಸಹ ಇಲ್ಲ.


ನಾನು ಸಾರುವ ಸುವಾರ್ತೆಯಲ್ಲಿ ಬೋಧಿಸಿರುವ ಪ್ರಕಾರ ದೇವರು ಯೇಸು ಕ್ರಿಸ್ತನ ಮೂಲಕವಾಗಿ ಮನುಷ್ಯರ ಗುಟ್ಟುಗಳನ್ನು ಹಿಡಿದು ವಿಚಾರಿಸುವ ದಿನದಂದು ಸೂಚಿಸುತ್ತದೆ. ಆ ದಿನದಲ್ಲಿ ಇದೆಲ್ಲಾ ತಿಳಿದು ಬರುವುದು.


ಎಲ್ಲರೂ ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ ಜಾರರಿಗೂ ಮತ್ತು ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳಿದುಕೊಳ್ಳಿರಿ.


ಏಕೆಂದರೆ, ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವುದಕ್ಕೆ ಒಂದು ದಿನವನ್ನು ಗೊತ್ತು ಮಾಡಿದ್ದಾನೆ. ಅವನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ಇದನ್ನು ನಂಬುವುದಕ್ಕೆ ಎಲ್ಲರಿಗೂ ದೃಷ್ಟಾಂತವನ್ನು ಕೊಟ್ಟಿದ್ದಾನೆ” ಅಂದನು.


ಯುದ್ಧದ ಆಯುಧಗಳಿಗಿಂತಲೂ ಜ್ಞಾನವೇ ಉತ್ತಮ. ಆದರೆ ಒಬ್ಬ ಪಾಪಿಯು ಬಹಳ ಶುಭವನ್ನು ಹಾಳುಮಾಡುತ್ತಾನೆ.


ದೇವರು ತಾನೇ ನ್ಯಾಯಾಧಿಪತಿ; ಆತನು ನೀತಿಸ್ವರೂಪನೆಂದು ಆಕಾಶಮಂಡಲವು ಘೋಷಿಸುತ್ತದೆ. ಸೆಲಾ


ಈಗ ಗಿಬೆಯ ಊರಲ್ಲಿರುವ ಆ ದುಷ್ಟರನ್ನು ನಮಗೆ ಒಪ್ಪಿಸಿರಿ; ನಾವು ಅವರನ್ನು ಕೊಂದು ಇಸ್ರಾಯೇಲರ ಮಧ್ಯದಿಂದ ಇಂಥ ದುಷ್ಟತನವನ್ನು ತೆಗೆದುಹಾಕುತ್ತೇವೆ” ಎಂದು ಹೇಳಿದರು.


ಹೀಗಿದ್ದರೂ ನೀವು ದುಃಖಿಸದೆ, ಈ ಕಾರ್ಯಮಾಡಿದವನನ್ನು ನಿಮ್ಮೊಳಗಿಂದ ಬಹಿಷ್ಕರಿಸದೆ, ಉಬ್ಬಿಕೊಂಡಿದ್ದೀರಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು