Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 6:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾವು ದೇವದೂತರಿಗೂ ತೀರ್ಪುಮಾಡುವೆವೆಂಬುದು ನಿಮಗೆ ತಿಳಿಯದೋ? ಹಾಗಾದರೆ ಇಹಲೋಕ ಜೀವನದ ವಿಷಯಗಳ ಕುರಿತು ನಾವು ಎಷ್ಟೋ ಹೆಚ್ಚಾಗಿ ತೀರ್ಪುಮಾಡಬಹುದಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ದೇವದೂತರಿಗೂ ನಾವು ನ್ಯಾಯತೀರ್ಪು ಮಾಡುವೆವೆಂದು ನಿಮಗೆ ತಿಳಿಯದೋ? ಹೀಗಿರುವಲ್ಲಿ, ಈ ಜೀವನದ ಸಮಸ್ಯೆಗಳನ್ನು ಕುರಿತು ನ್ಯಾಯತೀರ್ಪು ಮಾಡುವುದು ಎಷ್ಟೋ ಸುಲಭವಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಾವು ದೇವದೂತರಿಗೂ ತೀರ್ಪುಮಾಡುವೆವೆಂಬದು ನಿಮಗೆ ತಿಳಿಯದೋ? ಐಹಿಕ ಜೀವದ ಕಾರ್ಯಗಳನ್ನು ಕುರಿತು ನಾವು ತೀರ್ಪುಮಾಡುವದು ದೊಡ್ಡದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಮುಂದಿನ ಕಾಲದಲ್ಲಿ ನಾವು ದೇವದೂತರಿಗೂ ನ್ಯಾಯತೀರಿಸುತ್ತೇವೆ ಎಂಬುದು ನಿಮಗೆ ಗೊತ್ತಿದೆ. ಆದ್ದರಿಂದ ಈ ಜೀವಿತದ ಸಂಗತಿಗಳನ್ನು ಕುರಿತು ನಾವು ತೀರ್ಪುಮಾಡಬಲ್ಲೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಾವು ದೇವದೂತರಿಗೂ ತೀರ್ಪುಮಾಡುವೆವೆಂಬುದು ನಿಮಗೆ ತಿಳಿಯದೋ? ಈ ಜೀವನದ ವ್ಯಾಜ್ಯಗಳನ್ನು ಕುರಿತು ತೀರ್ಪು ಮಾಡುವುದು ಎಷ್ಟು ಸುಲಭವಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ದೆವಾಚ್ಯಾ ದುತಾತ್ನಿ ಸೈತ್ ಅಮಿ ಝಡ್ತಿ ಕರ್ತಾವ್ ಮನುನ್ ತುಮ್ಕಾ ಗೊತ್ತ್ ನಾ ಕಾಯ್? ತರ್ ಹ್ಯಾ ಜಿವನಾಚ್ಯಾ ಚಿಲ್ಲರ್ ಸಂಗ್ತಿಯಾಂಚ್ಯಾ ವಿಶಯಾತ್ ತುಮಿ ನಿರ್ನಯ್ ದಿತಲ್ಲೆ ಮೊಟೆ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 6:3
14 ತಿಳಿವುಗಳ ಹೋಲಿಕೆ  

ತಮ್ಮ ಅಧಿಕಾರದ ಸ್ಥಾನವನ್ನು ಕಾಪಾಡಿಕೊಳ್ಳದೆ, ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ದೇವರು ನಿತ್ಯವಾದ ಬೇಡಿಗಳನ್ನು ಹಾಕಿ, ಮಹಾದಿನದಲ್ಲಿ ಆಗುವ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಕಾದಿರಿಸಿದ್ದಾನೆ.


ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.


ಇಹಲೋಕ ಜೀವನಕ್ಕೆ ಸಂಬಂಧಪಟ್ಟ ವಿಷಯಗಳ ನ್ಯಾಯ ನಿರ್ಣಯಿಸುವುದಕ್ಕೆ ನಿಮ್ಮಲ್ಲಿದ್ದರೆ, ಇಂಥ ವಿಷಯಗಳನ್ನು ತೀರ್ಪು ಮಾಡುವುದಕ್ಕೆ ಸಭೆಯಲ್ಲಿ ಗಣನೆಗೆ ಬಾರದವರನ್ನು ಏಕೆ ನೇಮಿಸಿಕೊಳ್ಳುತ್ತೀರಿ?


ಇನ್ನು ಕೆಲವರು ವಾಕ್ಯವನ್ನು ಕೇಳಿದ ಮೇಲೆ ಬರಬರುತ್ತಾ ಈ ಜೀವನದಲ್ಲಿ ಆಗುವ ಚಿಂತೆ, ಐಶ್ವರ್ಯ ಭೋಗಗಳಿಂದ ಅಡಗಿಸಲ್ಪಟ್ಟು ಫಲವನ್ನು ಕೊಡಲಾರದವರು, ಮುಳ್ಳುಗಿಡಗಳಲ್ಲಿ ಬಿದ್ದ ಬೀಜವಾಗಿರುವವರು.


“ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ. ಅತಿ ಭೋಜನದ ಮದದಿಂದಲೂ, ಅಮಲಿನಿಂದಲೂ, ಪ್ರಾಪಂಚಿಕವಾದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿನವು ನಿಮ್ಮ ಮೇಲೆ ಉರುಲಿನಂತೆ ಫಕ್ಕನೆ ಬಂದೀತು.


ಯಾಕೆಂದರೆ ದೇಮನು ಇಹಲೋಕವನ್ನು ಪ್ರೀತಿಸಿ, ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು.


ಯುದ್ಧಕ್ಕೆ ಹೋಗುವ ಸೈನಿಕನು ಲೋಕವ್ಯವಹಾರದಲ್ಲಿ ಸಿಕ್ಕಿಕೊಳ್ಳದೆ, ತನ್ನನ್ನು ಸೈನ್ಯದಲ್ಲಿ ಸೇರಿಸಿಕೊಂಡವನನ್ನು ಮೆಚ್ಚಿಸುವುದಕ್ಕಾಗಿ ಪ್ರಯಾಸ ಪಡುತ್ತಿರುವನಲ್ಲವೇ.


ಹೇಗೆಂದರೆ ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವುದಕ್ಕಾಗಿ ಸಂಕೋಲೆಗಳಿಂದ ಬಂಧಿಸಿ ಕತ್ತಲೆಯ ಕೂಪಕ್ಕೆ ಒಪ್ಪಿಸಿದನು.


ಯೆಹೋವನೇ, ಇಹಲೋಕವೇ ತಮ್ಮ ಪಾಲೆಂದು ನಂಬಿದ ನರರಿಗೆ ಸಿಕ್ಕದಂತೆ ನಿನ್ನ ಕೈಯಿಂದ ನನ್ನನ್ನು ತಪ್ಪಿಸು; ನಿನ್ನ ಐಶ್ವರ್ಯದಿಂದ ಅವರ ಹೊಟ್ಟೆಯನ್ನು ತುಂಬಿಸಿದ್ದೀಯಲ್ಲಾ. ಅವರು ಸಂತಾನವೃದ್ಧಿಹೊಂದಿ ಉಳಿದ ಆಸ್ತಿಯನ್ನು ತಮ್ಮ ಮಕ್ಕಳಿಗೆ ಬಿಡುತ್ತಾರೆ.


ದೇವಭಕ್ತರೊಂದಿಗೆ ಯುದ್ಧಮಾಡಿ, ಮಹಾವೃದ್ಧನು ಬಂದು ಪರಾತ್ಪರನಾದ ದೇವರ ಭಕ್ತರಿಗಾಗಿ ನ್ಯಾಯತೀರಿಸಿ ಅವರಿಗೆ ರಾಜ್ಯವನ್ನು ದೊರಕಿಸುವ ತನಕ ಅವರನ್ನು ಗೆಲ್ಲುತ್ತಾ ಬಂದಿತ್ತು.”


ನೀವು ಯಾವನಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ನೀವು ಒಪ್ಪಿಸಿ ಕೊಡುತ್ತೀರೋ ಆ ಯಜಮಾನನಿಗೆ ದಾಸರಾಗಿಯೇ ಇರುವಿರೆಂಬುದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ ಫಲ; ನಂಬಿಕೆಯೆಂಬ ವಿಧೇಯತ್ವಕ್ಕೆ ದಾಸರಾದರೆ ನೀತಿಯೇ ಫಲ


ನಿಮ್ಮ ದೇಹಗಳು ಕ್ರಿಸ್ತನ ಅಂಗಗಳಾಗಿವೆ ಎಂಬುದು ನಿಮಗೆ ತಿಳಿಯದೋ? ಹೀಗಿರಲಾಗಿ ಕ್ರಿಸ್ತನ ಅಂಗಗಳಾಗಿರುವಂಥವುಗಳನ್ನು ತೆಗೆದು ವೇಶ್ಯೆಯ ಅಂಗಗಳೊಡನೆ ಸೇರಿಸುವುದು ಸರಿಯೋ? ಎಂದಿಗೂ ಹಾಗೆ ಮಾಡಬಾರದು


ವೇಶ್ಯೆಯೊಂದಿಗೆ ಸೇರಿಕೊಂಡವನು ಅವಳೊಂದಿಗೆ ಒಂದೇ ದೇಹವಾಗಿದ್ದಾನೆಂಬುದು ನಿಮಗೆ ತಿಳಿಯದೋ? “ಇಬ್ಬರು ಒಂದೇ ಶರೀರವಾಗಿರುವರೆಂದು” ದೇವರವಾಕ್ಯ ಹೇಳುತ್ತದಲ್ಲಾ.


ನೀವು ನಿಮ್ಮ ಸ್ವಂತ ಸೊತ್ತಲ್ಲವೆಂದು ಮತ್ತು ದೇವರಿಂದ ದಾನವಾಗಿ ಲಭಿಸಿದ ಪವಿತ್ರಾತ್ಮನು ನಿಮ್ಮೊಳಗೆ ನೆಲೆಗೊಂಡಿರುವುದರಿಂದ ನಿಮ್ಮ ದೇಹವು ದೇವರ ಪವಿತ್ರಾಲಯವಾಗಿದೆಂಬುದು ನಿಮಗೆ ತಿಳಿಯದೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು