Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 6:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಸುಳ್ಳನ್ನು ನಂಬಬೇಡಿರಿ. ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಪುರುಷಗಾಮಿಗಳು, ಕಳ್ಳರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅಧರ್ಮಿಗಳು ದೇವರ ಸಾಮ್ರಾಜ್ಯಕ್ಕೆ ಬಾಧ್ಯರಲ್ಲವೆಂದು ನೀವು ಬಲ್ಲಿರಿ. ನಿಮ್ಮನ್ನು ನೀವೇ ವಂಚಿಸಿಕೊಳ್ಳಬೇಡಿ. ದುರಾಚಾರಿಗಳು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಸಲಿಂಗಕಾಮಿಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅನ್ಯಾಯಗಾರರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ, ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾವಿುಗಳು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9-10 ಅಧರ್ಮಿಗಳು ದೇವರ ರಾಜ್ಯವನ್ನು ಪಡೆಯುವುದಿಲ್ಲವೆಂದು ನಿಮಗೆ ಖಂಡಿತವಾಗಿ ತಿಳಿದಿದೆ. ನಿಮ್ಮನ್ನು ನೀವೇ ಮೋಸಪಡಿಸಿಕೊಳ್ಳಬೇಡಿ. ದೇವರ ರಾಜ್ಯಕ್ಕೆ ಸೇರದ ಜನರು ಯಾರ್ಯಾರೆಂದರೆ: ಲೈಂಗಿಕ ಪಾಪ ಮಾಡುವವರು, ವಿಗ್ರಹಗಳನ್ನು ಪೂಜಿಸುವವರು, ವ್ಯಭಿಚಾರ ಮಾಡುವವರು, ಸಲಿಂಗಕಾಮಿಗಳು, ಕದಿಯುವವರು, ಸ್ವಾರ್ಥಿಗಳು, ಕುಡುಕರು, ಬೈಯುವವರು ಮತ್ತು ಮೋಸಗಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅನ್ಯಾಯಗಾರರು ದೇವರ ರಾಜ್ಯಕ್ಕೆ ಬಾಧ್ಯಸ್ಥರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ: ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಸಲಿಂಗಕಾಮಿಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಅನ್ನ್ಯಾಯ್ ಕರ್‍ತಲೆ ಕೊನ್‍ಬಿ ದೆವಾಚೆ ರಾಜ್ ಜೊಡುಕ್ ಪಾವಿನಾತ್ ಮನುನ್ ತುಮ್ಕಾ ಗೊತ್ತ್ ನಾ ಕಾಯ್? ಮೊಸಾತ್ ಪಡುನಕಾಸಿ ಅನೈತಿಕ್ ಸಮಂದ್ ಕರ್‍ತಲೆ, ಮುರ್ತಿ ತುಜ್ಯಾ ಕರ್‍ತಲೆ, ವೆಭಿಚಾರ್ ಕರ್‍ತಲೆ, ಸಲಿಂಗ್‍ಗಾಮಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 6:9
51 ತಿಳಿವುಗಳ ಹೋಲಿಕೆ  

ಯಾವನಾದರೂ ಸ್ತ್ರೀಯನ್ನು ಸಂಗಮಿಸುವಂತೆ ಪುರುಷನನ್ನು ಸಂಗಮಿಸಿದರೆ ಅವರಿಬ್ಬರೂ ಅಸಹ್ಯವಾದ ಕೆಲಸವನ್ನು ಮಾಡಿದ್ದರಿಂದ ಅವರಿಗೆ ಮರಣಶಿಕ್ಷೆಯಾಗಬೇಕು; ಆ ಶಿಕ್ಷೆಗೆ ಅವರೇ ಕಾರಣರು.


“‘ಸ್ತ್ರೀಯನ್ನು ಸಂಗಮಿಸುವಂತೆ ಪುರುಷನನ್ನು ಸಂಗಮಿಸಬಾರದು; ಅದು ಅಸಹ್ಯವಾದ ಕೆಲಸ.


ಲೋಭಿಗಳು, ಕುಡುಕರು, ಜಗಳಮಾಡುವವರು, ಸುಲುಕೊಳ್ಳುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ.


ಆದರೆ ನಾಯಿಗಳಂತಿರುವವರೂ, ಮಾಟಗಾರರೂ, ಜಾರರೂ, ಕೊಲೆಗಾರರೂ, ವಿಗ್ರಹಾರಾಧಕರೂ, ಸುಳ್ಳನ್ನು ಪ್ರೀತಿಸಿ ಅದನ್ನು ಅಭ್ಯಾಸಮಾಡುವವರೆಲ್ಲರೂ ಹೊರಗಿರುವರು” ಎಂದು ಹೇಳಿದನು.


ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು.


ನೀವು ನಿಮ್ಮ ಸ್ವಂತ ಸೊತ್ತಲ್ಲವೆಂದು ಮತ್ತು ದೇವರಿಂದ ದಾನವಾಗಿ ಲಭಿಸಿದ ಪವಿತ್ರಾತ್ಮನು ನಿಮ್ಮೊಳಗೆ ನೆಲೆಗೊಂಡಿರುವುದರಿಂದ ನಿಮ್ಮ ದೇಹವು ದೇವರ ಪವಿತ್ರಾಲಯವಾಗಿದೆಂಬುದು ನಿಮಗೆ ತಿಳಿಯದೋ?


ಅದು ಈ ಲೋಕದಲ್ಲಿರುವ ಜಾರರು, ಆಸೆಬುರುಕರು, ಸುಲುಕೊಳ್ಳುವವರು, ವಿಗ್ರಹಾರಾಧಕರು, ಮೊದಲಾದವರ ಸಹವಾಸವನ್ನು ಬಿಟ್ಟುಬಿಡಬೇಕೆಂಬ ಅರ್ಥದಲ್ಲಿ ಅಲ್ಲ; ಹಾಗೆ ಬಿಡಬೇಕಾದರೆ ನೀವು ಈ ಲೋಕವನ್ನೇ ಬಿಟ್ಟುಹೋಗಬೇಕಾದೀತು.


ಎಲ್ಲರೂ ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ ಜಾರರಿಗೂ ಮತ್ತು ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳಿದುಕೊಳ್ಳಿರಿ.


ಸ್ತ್ರೀಯು ಪುರುಷವೇಷವನ್ನಾಗಲಿ ಅಥವಾ ಪುರುಷನು ಸ್ತ್ರೀವೇಷವನ್ನಾಗಲಿ ಹಾಕಿಕೊಳ್ಳಬಾರದು; ಹಾಗೆ ಮಾಡುವವರು ನಿಮ್ಮ ದೇವರಾದ ಯೆಹೋವನಿಗೆ ಅಸಹ್ಯರು.


ಅನೀತಿಯಿಂದ ಸತ್ಯವನ್ನು ಅಡ್ಡಿಮಾಡುವವರಾದ ದುಷ್ಟಮನುಷ್ಯರ ಎಲ್ಲಾ ವಿಧವಾದ ಭಕ್ತಿಹೀನತೆಯ ಮೇಲೆಯೂ, ದುಷ್ಟತನದ ಮೇಲೆಯೂ ದೇವರ ಕೋಪವು ಪರಲೋಕದಿಂದ ಇಳಿದುಬರುತ್ತದೆ,


ಎಲ್ಲರೊಂದಿಗೆ ಸಮಾಧಾನದಿಂದ ಜೀವಿಸಲು ಮತ್ತು ಪರಿಶುದ್ಧರಾಗಿರಲು ಪ್ರಯತ್ನಮಾಡಿರಿ. ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವುದಿಲ್ಲ.


ಸಹೋದರರೇ, ನಾನು ಹೇಳುವುದೇನಂದರೆ, ರಕ್ತ ಮಾಂಸಗಳು ದೇವರ ರಾಜ್ಯವನ್ನು ವಶಪಡಿಸಿಕೊಳ್ಳಲಾರದು; ಅಂತೆಯೇ, ಅಳಿದುಹೋಗುವಂಥದ್ದು ಅಮರತ್ವಕ್ಕೆ ಬಾಧ್ಯವಾಗಲು ಸಾಧ್ಯವಿಲ್ಲ.


ಮೋಸಹೋಗಬೇಡಿರಿ; “ಕೆಟ್ಟ ಸಹವಾಸವು ಸದಾಚಾರವನ್ನು ಕೆಡಿಸುತ್ತವೆ.”


ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ?


ಯಾವ ಜಾರನಾಗಲಿ, ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆ ಜಾಗ್ರತೆ ವಹಿಸಿಕೊಳ್ಳಿರಿ. ಆ ಏಸಾವನು ಒಂದೇ ಒಂದು ಊಟಕ್ಕೋಸ್ಕರ ತನ್ನ ಚೊಚ್ಚಲುತನದ ಹಕ್ಕನ್ನು ಮಾರಿಬಿಟ್ಟನು.


ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವತ್ತಾಗಿ ಪಡೆದುಕೊಳ್ಳಿರಿ.


ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ; ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು; ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾಕೃಪೆಯಿಂದ ಕ್ಷಮಿಸುವನು.


ನಿಮ್ಮಲ್ಲಿ ಜಾರತ್ವವುಂಟೆಂಬ ಸುದ್ದಿಯನ್ನು ನಾನು ಕೇಳಿದ್ದೇನೆ. ಒಬ್ಬನು ತನ್ನ ತಂದೆಯ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ. ಅಂಥ ಜಾರತ್ವವು ಅನ್ಯಜನರಲ್ಲಿಯೂ ಸಹ ಇಲ್ಲ.


ಅವರು ಭೋಜನದಿಂದ ತೃಪ್ತಿಪಡುವಷ್ಟರಲ್ಲಿ ಆ ಊರಲ್ಲಿದ್ದ ದುಷ್ಟ ಜನರು ಬಂದು ಆ ಮನೆಯನ್ನು ಸುತ್ತಿಕೊಂಡು, ಬಾಗಿಲನ್ನು ಬಡಿದು, ಮನೆಯ ಯಜಮಾನನಾದ ಮುದುಕನಿಗೆ, “ನಿನ್ನ ಮನೆಗೆ ಬಂದಿರುವಂಥ ಮನುಷ್ಯನನ್ನು ಹೊರಗೆ ಕರೆದುಕೊಂಡು ಬಾ; ಅವನೊಡನೆ ನಾವು ಸಂಗಮಿಸಬೇಕು” ಎಂದು ಕೂಗಿದರು.


ಇಸ್ರಾಯೇಲರಲ್ಲಿ ಯಾವ ಸ್ತ್ರೀಯೂ ದೇವದಾಸಿಯಾಗಬಾರದು; ಯಾವ ಪುರುಷನೂ ಅಂತಹ ವೇಶ್ಯೆತನಕ್ಕೆ ಇಳಿಯಬಾರದು.


ಲೋಟನಿಗೆ, “ಈ ರಾತ್ರಿ ನಿನ್ನ ಬಳಿಗೆ ಬಂದ ಮನುಷ್ಯರು ಎಲ್ಲಿ? ಅವರನ್ನು ಹೊರಕ್ಕೆ ಕರೆದುಕೊಂಡು ಬಾ; ಅವರೊಡನೆ ನಮಗೆ ಸಂಗಮವಾಗಬೇಕೆಂದು” ಕೂಗಿ ಹೇಳಿದರು.


ಕೆಟ್ಟತನವನ್ನು ಬಿತ್ತುವವನು ಕೇಡನ್ನೇ ಕೊಯ್ಯುವನು, ಹೆಮ್ಮೆಯಿಂದ ಹಿಡಿದ ದಂಡವು ಅವನ ಕೈಯಿಂದ ಬಿದ್ದುಹೋಗುವುದು.


ನನ್ನ ಪ್ರಿಯ ಸಹೋದರರೇ, ಮೋಸಹೋಗಬೇಡಿರಿ.


ಕ್ರೀಡಾಂಗಣದಲ್ಲಿ ಅನೇಕರು ಓಟದ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ, ಆದರೂ ಒಬ್ಬನು ಮಾತ್ರ ಜಯಮಾಲೆಯನ್ನು ಪಡೆಯುತ್ತಾನೆ ಎಂಬುದು ನಿಮಗೆ ತಿಳಿಯದೋ? ಅವರಂತೆ ನೀವೂ ಸಹ ಬಹುಮಾನವನ್ನು ಗೆಲ್ಲಬೇಕೆಂದು ಓಡಿರಿ.


ಮತ್ತು ನನ್ನ ಹೆಸರಿನ ನಿಮಿತ್ತ ಮನೆಗಳನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಂದೆಯನ್ನಾಗಲಿ, ತಾಯಿಯನ್ನಾಗಲಿ, ಮಕ್ಕಳನ್ನಾಗಲಿ, ಭೂಮಿಯನ್ನಾಗಲಿ, ತೊರೆದುಬಿಟ್ಟಿರುವ ಪ್ರತಿಯೊಬ್ಬನೂ ಎಲ್ಲವನ್ನೂ ನೂರರಷ್ಟು ಹೊಂದುವನು. ಅಲ್ಲದೆ ನಿತ್ಯಜೀವಕ್ಕೆ ಬಾಧ್ಯನಾಗುವನು.


ಆಗ ದೂತನು ನನಗೆ, “ದೇಶದ ಮೇಲೆಲ್ಲಾ ಹೊರಟು ಬಂದಿರುವ ಶಾಪವು ಇದೇ. ಕಳ್ಳತನ ಮಾಡುವ ಪ್ರತಿಯೊಬ್ಬರೂ ದೇಶದಿಂದ ಹೊರಗೆ ತೆಗೆದುಹಾಕಲ್ಪಡುವರು. ಇದಕ್ಕೆ ತಕ್ಕ ಹಾಗೆ ಪ್ರತಿಯೊಬ್ಬ ಸುಳ್ಳು ಸಾಕ್ಷಿಯೂ ದೇಶದಿಂದ ಹೊರಗೆ ತೆಗೆದುಹಾಕಲ್ಪಡುವನು.


ಮೋಸದ ತಕ್ಕಡಿ ಯೆಹೋವನಿಗೆ ಅಸಹ್ಯ, ನ್ಯಾಯದ ತೂಕ ಆತನಿಗೆ ಸಂತೋಷ.


“‘ವ್ಯಾಜ್ಯವನ್ನು ವಿಚಾರಿಸುವಾಗ ಅನ್ಯಾಯವಾದ ತೀರ್ಪನ್ನು ಮಾಡಬಾರದು. ಬಡವನ ಬಡತನವನ್ನಾಗಲಿ ಅಥವಾ ದೊಡ್ಡ ಮನುಷ್ಯನ ಘನತೆಯನ್ನಾಗಲಿ ಲಕ್ಷ್ಯಮಾಡದೆ, ಪಕ್ಷಪಾತವಿಲ್ಲದೆ ತೀರ್ಪನ್ನು ಕೊಡಬೇಕು.


ಸುಳ್ಳು ಸುದ್ದಿಯನ್ನು ಹಬ್ಬಿಸಬಾರದು. ದುಷ್ಟರೊಂದಿಗೆ ಸೇರಿ ಸುಳ್ಳು ಸಾಕ್ಷಿಯನ್ನು ಹೇಳಬಾರದು.


ಪೌಲನು ನೀತಿ, ಶಮೆದಮೆ, ಹಾಗೂ ಮುಂದಣ ನ್ಯಾಯವಿಚಾರಣೆ ಇವುಗಳ ವಿಷಯವಾಗಿ ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ಭಯಗ್ರಸ್ತನಾಗಿ ಅವನಿಗೆ; “ಸದ್ಯಕ್ಕೆ ಹೋಗು; ಸಮಯ ದೊರಕಿದಾಗ ನಿನ್ನನ್ನು ಕರೆಯಿಸುವೆನು” ಎಂದು ಹೇಳಿದನು.


ಪರಸ್ತ್ರೀ ಸಂಗಮದಿಂದ ಅಶುದ್ಧರಾಗಬಾರದು.


ಯಾವನಾದರೂ ಇನ್ನೊಬ್ಬನ ಹೆಂಡತಿಯೊಡನೆ ವ್ಯಭಿಚಾರಮಾಡಿದ್ದು ತಿಳಿದುಬಂದರೆ ಆ ಸ್ತ್ರೀ ಮತ್ತು ಪುರುಷರಿಬ್ಬರಿಗೂ ಮರಣಶಿಕ್ಷೆಯಾಗಬೇಕು. ಹೀಗೆ ನೀವು ಆ ದುಷ್ಟತ್ವವನ್ನು ಇಸ್ರಾಯೇಲರ ಮಧ್ಯದಿಂದ ತೆಗೆದುಹಾಕಬೇಕು.


ಅವಳ ಮನೆಯು ಪಾತಾಳದ ದಾರಿ, ಅದು ಮೃತ್ಯುವಿನ ಅಂತಃಪುರಕ್ಕೆ ಇಳಿದುಹೋಗುತ್ತದೆ.


ಒಳ್ಳೆಕಾರ್ಯಗಳಲ್ಲಿ ಯಾವುದನ್ನೂ ನಡೆಸದೆ ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿಂದು ನೆರೆಯವನ ಹೆಂಡತಿಯನ್ನು ಕೆಡಿಸಿ,


ಯೇಸು ಹೇಳಿದ್ದೇನಂದರೆ, “ನೀವು ಮೋಸಹೋಗದಂತೆ ಎಚ್ಚರವಾಗಿರಿ. ಏಕೆಂದರೆ ಅನೇಕರು ಬಂದು ನನ್ನ ಹೆಸರನ್ನು ಹೇಳಿಕೊಂಡು ‘ನಾನೇ ಕ್ರಿಸ್ತನು, ನಾನೇ ಕ್ರಿಸ್ತನು’ ಎಂತಲೂ ‘ಆ ಕಾಲ ಹತ್ತಿರವಾಯಿತು’ ಎಂತಲೂ ಹೇಳುವರು. ಅವರ ಹಿಂದೆ ಹೋಗಬೇಡಿರಿ.


ನಾನೀಗ ನಿಮ್ಮನ್ನು ದೇವರಿಗೂ, ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತೇನೆ. ಆತನು ನಿಮ್ಮಲ್ಲಿ ಭಕ್ತಿವೃದ್ಧಿಯನ್ನುಂಟುಮಾಡುವುದಕ್ಕೂ, ಪರಿಶುದ್ಧರೊಂದಿಗೆ ನಿಮಗೆ ಹಕ್ಕನ್ನು ಅನುಗ್ರಹಿಸುವುದಕ್ಕೆ ಶಕ್ತನಾಗಿದ್ದಾನೆ.


ಆದರೆ ಕ್ರೈಸ್ತ ಸಹೋದರನೆನಿಸಿಕೊಂಡವನು ಜಾರನು, ಲೋಭಿಯು, ವಿಗ್ರಹಾರಾಧಕನು, ಜಗಳಗಂಟನೂ, ಕುಡುಕನು, ಸುಲುಕೊಳ್ಳುವವನೂ ಆಗಿದ್ದ ಪಕ್ಷದಲ್ಲಿ ಅವನ ಸಹವಾಸ ಮಾಡಬಾರದು. ಅಂಥವನ ಸಂಗಡ ಊಟ ಸಹ ಮಾಡಬಾರದು ಎಂದು ಬರೆದಿದ್ದೇನೆ.


ಜಾರತ್ವವನ್ನು ಬಿಟ್ಟು ದೂರ ಓಡಿಹೋಗಿರಿ. “ಮನುಷ್ಯರು ಮಾಡುವ ಇತರ ಪಾಪಕೃತ್ಯಗಳು ದೇಹದ ಹೊರಗಿವೆ”, ಆದರೆ ಜಾರತ್ವ ಮಾಡುವವನು ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ.


ನಾನು ತಿರುಗಿ ಬಂದಾಗ ನನ್ನ ದೇವರು ನಿಮ್ಮ ವಿಷಯದಲ್ಲಿ ನನ್ನನ್ನು ತಗ್ಗಿಸಿಕೊಳ್ಳಲು ಗುರಿಮಾಡುವನೆಂತಲೂ, ಮೊದಲಿನಂತೆ ಪಾಪಮಾಡಿ, ಬಂಡುತನ ಹಾದರತನ, ಕೆಟ್ಟತನಗಳನ್ನು ನಡಿಸಿ ಪಶ್ಚಾತ್ತಾಪಡದಿರುವ ಅನೇಕರ ವಿಷಯವಾಗಿ ನಾನು ದುಃಖಪಡಬೇಕಾದೀತೆಂತಲೂ ನನಗೆ ಭಯವುಂಟು.


ಮೋಸಹೋಗಬೇಡಿರಿ. ದೇವರನ್ನು ಅಪಹಾಸ್ಯ ಮಾಡಲಾಗುವುದಿಲ್ಲ. ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು.


ಆದುದರಿಂದ ನಿಮ್ಮಲ್ಲಿರುವ ಲೌಕಿಕ ಆಸೆಗಳು ಅಂದರೆ, ಜಾರತ್ವ, ಅಶುದ್ಧತ್ವ, ಕಾಮಾಭಿಲಾಷೆ, ಕೆಟ್ಟ ಅಭಿಲಾಷೆ ಮತ್ತು ವಿಗ್ರಹಾರಾಧನೆಗೆ ಸಮವಾಗಿರುವ ದುರಾಶೆ ಇಂಥವುಗಳನ್ನು ಸಾಯಿಸಿರಿ.


ಪ್ರಿಯರಾದ ಮಕ್ಕಳೇ, ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಕ್ರಿಸ್ತನು ಹೇಗೆ ನೀತಿವಂತನಾಗಿದ್ದನೋ ಹಾಗೆಯೇ ನೀತಿಯನ್ನನುಸರಿಸುವವನು ನೀತಿವಂತನಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು