Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 7:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದರೆ ಕರ್ತನು ಪ್ರತಿಯೊಬ್ಬನಿಗೆ ನೇಮಿಸಿರುವ ಜವಾಬ್ದಾರಿಗೂ ಹಾಗೂ ದೇವರು ಅವರನ್ನು ಯಾವುದಕ್ಕೆ ಕರೆದನೋ ಅದಕ್ಕೂ ಸರಿಯಾಗಿ ಜೀವಿಸಲಿ. ಹೀಗೆ ಎಲ್ಲಾ ಸಭೆಗಳಲ್ಲಿಯೂ ಅನುಸರಿಸಿಬೇಕೆಂದು ನಾನು ಅಜ್ಞಾಪಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ದೇವರ ಕರೆಗೆ ಮತ್ತು ಪ್ರಭು ನೀಡಿರುವ ವರದಾನಗಳಿಗೆ ಅನುಗುಣವಾಗಿ ಪ್ರತಿಯೊಬ್ಬನೂ ಬಾಳುವೆ ನಡೆಸಲಿ. ಎಲ್ಲ ಸಭೆಗಳಿಗೂ ನಾನಿದನ್ನೇ ವಿಧಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆದರೂ ಕರ್ತನು ಪ್ರತಿಯೊಬ್ಬನಿಗೆ ಯಾವ ಯಾವ ಸ್ಥಿತಿಯನ್ನು ನೇವಿುಸಿದ್ದಾನೋ, ಅಂದರೆ ದೇವರು ಕರೆಯುವಾಗ ಪ್ರತಿಯೊಬ್ಬನು ಯಾವ ಯಾವ ಸ್ಥಿತಿಯಲ್ಲಿ ಇದ್ದಾನೋ ಆಯಾ ಸ್ಥಿತಿಗೆ ಸರಿಯಾಗಿ ನಡೆದುಕೊಳ್ಳಲಿ. ಹೀಗೆ ಎಲ್ಲಾ ಸಭೆಗಳಲ್ಲಿಯೂ ಆಜ್ಞಾಪಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದರೂ ದೇವರು ಪ್ರತಿಯೊಬ್ಬನಿಗೆ ಜೀವನದಲ್ಲಿ ಯಾವ ಸ್ಥಿತಿಯನ್ನು ನೇಮಿಸಿದ್ದಾನೋ ಅಂದರೆ ದೇವರು ನಿಮ್ಮನ್ನು ಕರೆದಾಗ ನೀವು ಯಾವ ಸ್ಥಿತಿಯಲ್ಲಿದ್ದಿರೋ ಅದೇ ಸ್ಥಿತಿಯಲ್ಲಿ ಮುಂದುವರಿಯಬೇಕು. ನಾನು ಎಲ್ಲಾ ಸಭೆಗಳಿಗೂ ಇದನ್ನೇ ಆಜ್ಞಾಪಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದರೂ ಕರ್ತದೇವರು ಪ್ರತಿಯೊಬ್ಬನಿಗೆ ನೇಮಿಸಿದಂತೆಯೂ ದೇವರು ಪ್ರತಿಯೊಬ್ಬನನ್ನು ಕರೆದಂತೆಯೂ ನಡೆದುಕೊಳ್ಳಲಿ. ಎಲ್ಲಾ ಸಭೆಗಳಲ್ಲಿಯೂ ಇರಬೇಕೆಂದು ನಾನು ಕೊಡುವ ನಿಯಮವು ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಹರಿ ಎಕ್ಲೊ ದೆವಾನ್ ತುಮ್ಕಾ ದಿಲ್ಲ್ಯಾ ದೆನ್ಗಿತ್ ಮಟ್ಲ್ಯಾರ್ ದೆವಾನ್ ತೆಕಾ ಬಲ್ವಲ್ಲ್ಯಾ ತನ್ನಾ ಕಸೊ ಹಾಯ್ ತ್ಯಾಚ್ ಸ್ಥಿತಿತ್ ಜಿವನ್ ಕರುಕ್ ಬಗುಂದಿತ್, ಹಿಚ್ ಚಾಲ್ ಮಿಯಾ ಸಗ್ಳ್ಯಾ ದೆವಾಚ್ಯಾ ತಾಂಡ್ಯಾಕ್ನಿ ಶಿಕ್ವುತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 7:17
18 ತಿಳಿವುಗಳ ಹೋಲಿಕೆ  

ಈ ಕಾರಣದಿಂದ ಕರ್ತನಲ್ಲಿ ನನ್ನ ಪ್ರಿಯ ಮತ್ತು ನಂಬಿಗಸ್ತ ಮಗನಾದ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೇನೆ. ನಾನು ಪ್ರತಿಯೊಂದು ಸಭೆಗಳಲ್ಲಿಯೂ, ಎಲ್ಲೆಲ್ಲಿಯೂ ಬೋಧಿಸುವ ಹಾಗೆ ಕ್ರಿಸ್ತನಲ್ಲಿರುವ ನನ್ನ ನಡವಳಿಕೆಗಳನ್ನು ಅವನು ನಿಮ್ಮ ನೆನಪಿಗೆ ತರುವನು.


ಸಹೋದರರೇ, ಪ್ರತಿಯೊಬ್ಬನು ಕರೆಯಲ್ಪಟ್ಟಾಗ ಯಾವ ಸ್ಥಿತಿಯಲ್ಲಿದ್ದನೋ ಅದೇ ಸ್ಥಿತಿಯಲ್ಲಿ ದೇವರ ಮುಂದೆ ನೆಲೆಗೊಂಡಿರಲಿ.


ಅವನ ಜೊತೆಯಲ್ಲಿ ಮತ್ತೊಬ್ಬ ಸಹೋದರನನ್ನು ಕಳುಹಿಸಿದ್ದೇವೆ. ಈ ಸಹೋದರನು ಸುವಾರ್ತಾ ಸೇವೆಯಲ್ಲಿ ಎಲ್ಲಾ ಸಭೆಗಳೊಳಗೆ ಕೀರ್ತಿ ಪಡೆದುಕೊಂಡವನಾಗಿದ್ದಾನೆ.


ಇಂಥ ಇನ್ನಿತರ ಬೇರೆ ಸಂಗತಿಗಳಲ್ಲದೆ, ಎಲ್ಲಾ ಸಭೆಗಳ ಕುರಿತಾದ ಚಿಂತೆಯು ದಿನದಿನ ನನ್ನನ್ನು ಕಾಡಿಸುತ್ತಿತ್ತು.


ದೇವರು ಕರೆದ ಕಾಲದಲ್ಲಿ ಯಾವನಾದರೂ ಸುನ್ನತಿಯುಳ್ಳವನಾಗಿದ್ದನೋ ಅವನು ಸುನ್ನತಿಯಿಲ್ಲದವನಂತಾಗಬಾರದು. ದೇವರು ಕರೆದಾಗ ಯಾವನಾದರೂ ಸುನ್ನತಿಯಿಲ್ಲದವನಾಗಿದ್ದಾನೋ ಅವನು ಸುನ್ನತಿಮಾಡಿಸಿಕೊಳ್ಳಬಾರದು.


ನಾನಿರುವಂತೆಯೇ ಎಲ್ಲಾ ಮನುಷ್ಯರು ಇರಬೇಕೆಂಬುದು ನನ್ನ ಇಷ್ಟ ಆದರೆ ಒಬ್ಬನು ಒಂದು ವಿಧವಾಗಿ ಮತ್ತೊಬ್ಬನು ಇನ್ನೊಂದು ವಿಧವಾಗಿ ದೇವರಿಂದ ವರವನ್ನು ಹೊಂದಿಕೊಂಡಿದ್ದಾರೆ.


ದೇವರು ಸಮಾಧಾನಕ್ಕೆ ಕಾರಣನೇ ಹೊರತು ಗಲಿಬಿಲಿಗೆ ಕಾರಣನಲ್ಲ.


ತಾಯಿಯ ಗರ್ಭದಿಂದ ನಪುಂಸಕರಾಗಿ ಹುಟ್ಟಿದವರು ಕೆಲವರು ಇದ್ದಾರೆ ಮತ್ತು ಮನುಷ್ಯರಿಂದ ನಪುಂಸಕರಾಗಿ ಮಾಡಲ್ಪಟ್ಟವರು ಕೆಲವರು ಇದ್ದಾರೆ ಮತ್ತು ಪರಲೋಕ ರಾಜ್ಯದ ನಿಮಿತ್ತವಾಗಿ ತಮ್ಮನ್ನು ತಾವೇ ನಪುಂಸಕರಾಗಿ ಮಾಡಿಕೊಂಡವರು ಕೆಲವರು ಇದ್ದಾರೆ. ಈ ಬೋಧನೆಯನ್ನು ಅಂಗೀಕರಿಸಬಲ್ಲವರು ಅಂಗೀಕರಿಸಲಿ” ಎಂದು ಹೇಳಿದನು.


ಈಗ ದೇವಜನರಿಗೋಸ್ಕರ ಹಣ ಸಂಗ್ರಹಣೆ ವಿಚಾರದ ಕುರಿತು, ನಾನು ಗಲಾತ್ಯ ಪ್ರಾಂತ್ಯದ ಸಭೆಗಳಿಗೆ ಹೇಳಿಕೊಟ್ಟಿರುವ ಕ್ರಮದಂತೆ ನೀವೂ ಮಾಡಿರಿ.


ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ವಿಘ್ನವಾಗಬೇಡಿರಿ.


ಯಾವನಾದರೂ ಇದರ ಕುರಿತು ವಾಗ್ವಾದ ಮಾಡುವುದಾದರೆ ಇಂಥ ಪದ್ಧತಿ ನಮ್ಮಲ್ಲಿ ಇಲ್ಲ ಮತ್ತು ದೇವರ ಸಭೆಗಳಲ್ಲಿಯೂ ಇಲ್ಲ ಎಂದು ತಿಳಿದುಕೊಳ್ಳಿರಿ.


ಒಬ್ಬನು ಹಸಿದರೆ ಅವನು ಮನೆಯಲ್ಲೇ ಊಟಮಾಡಲಿ ನೀವು ಸೇರಿಬಂದದ್ದು ನ್ಯಾಯ ತೀರ್ಪಿಗೊಳಗಾಗುವುದಕ್ಕೆ ಕಾರಣವಾಗಬಾರದು. ಇನ್ನುಳಿದಿರುವ ಸಂಗತಿಗಳನ್ನು ನಾನು ಬಂದ ನಂತರ ಆದೇಶಿಸುತ್ತೇನೆ.


ಆದರೆ ಕ್ರಿಸ್ತನಲ್ಲಿರುವ ಯೂದಾಯದ ಸಭೆಗಳಿಗೆ ನನ್ನ ಪರಿಚಯವಿರಲಿಲ್ಲ.


ಹೌದು, ಸಹೋದರರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾಗಿದ್ದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನು ನೀವೂ ನಿಮ್ಮ ಸ್ವದೇಶದವರಿಂದ ಅನುಭವಿಸಿದಿರಿ.


ಹೀಗಿರುವುದರಿಂದ ನಿಮಗೆ ಬಂದಿರುವ ಎಲ್ಲಾ ಹಿಂಸೆಗಳಲ್ಲಿಯೂ ನೀವು ಅನುಭವಿಸುತ್ತಿರುವ ಎಲ್ಲಾ ಸಂಕಟಗಳಲ್ಲಿಯೂ ತೋರಿಬಂದ ನಿಮ್ಮ ತಾಳ್ಮೆ ನಂಬಿಕೆಗಳ ನಿಮಿತ್ತ ದೇವ ಜನರ ಸಭೆಗಳಲ್ಲಿ ನಾವೇ ಹೆಮ್ಮೆಯಿಂದ ಮಾತನಾಡುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು