Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 9:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಈ ಅಧಿಕಾರ ಇತರರಿಗೆ ನಿಮ್ಮ ಮೇಲೆ ಇದ್ದರೆ ನಮಗೆ ಎಷ್ಟೋ ಹೆಚ್ಚಾಗಿ ಇರಬೇಕಲ್ಲಾ? ಆದರೂ ನಾವು ಆ ಅಧಿಕಾರವನ್ನು ಚಲಾಯಿಸಲಿಲ್ಲ, ಕ್ರಿಸ್ತನ ಸುವಾರ್ತೆಗೆ ಅಡ್ಡಿಮಾಡಬಾರದೆಂದು ಎಲ್ಲವನ್ನು ಸಹಿಸಿಕೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇತರರಿಗೆ ನಿಮ್ಮ ಮೇಲೆ ಇಂಥ ಹಕ್ಕಿದ್ದರೆ ಅದಕ್ಕಿಂತಲೂ ಹೆಚ್ಚು ಹಕ್ಕು ನಮಗಿರಬೇಕಲ್ಲವೇ? ಆದರೂ ನಾವು ಈ ಹಕ್ಕನ್ನು ಚಲಾಯಿಸಲೇ ಇಲ್ಲ. ಬದಲಿಗೆ, ಕ್ರಿಸ್ತಯೇಸುವಿನ ಶುಭಸಂದೇಶಕ್ಕೆ ಯಾವ ಅಡ್ಡಿಯೂ ಬಾರದಿರಲೆಂದು ಎಲ್ಲವನ್ನು ಸಹಿಸಿಕೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಈ ಹಕ್ಕು ಇತರರಿಗೆ ನಿಮ್ಮ ಮೇಲೆ ಇದ್ದರೆ ನಮಗೆ ಎಷ್ಟೋ ಹೆಚ್ಚಾಗಿ ಇರಬೇಕಲ್ಲಾ. ಆದರೂ ನಾವು ಈ ಹಕ್ಕನ್ನು ನಡಿಸದೆ ಕ್ರಿಸ್ತನ ಸುವಾರ್ತೆಗೆ ಅಡ್ಡಿಮಾಡಬಾರದೆಂದು ಎಲ್ಲವನ್ನೂ ಸಹಿಸಿಕೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ತಮಗೆ ಅಗತ್ಯವಾದುವುಗಳನ್ನು ನಿಮ್ಮಿಂದ ಪಡೆದುಕೊಳ್ಳಲು ಇತರರಿಗೆ ಹಕ್ಕಿದೆ. ಆದ್ದರಿಂದ ಖಂಡಿತವಾಗಿ ನಮಗೂ ಈ ಹಕ್ಕಿದೆ. ಆದರೆ ನಾವು ಈ ಹಕ್ಕನ್ನು ಉಪಯೋಗಿಸುವುದಿಲ್ಲ. ಕ್ರಿಸ್ತನ ಸುವಾರ್ತೆಗೆ ವಿಧೇಯರಾಗಲು ಯಾರಿಗೂ ತೊಂದರೆ ಆಗಕೂಡದೆಂದು ನಾವು ಪ್ರತಿಯೊಂದನ್ನು ಸಹಿಸಿಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಇತರರಿಗೆ ನಿಮ್ಮ ಸಹಾಯದಲ್ಲಿ ಪಾಲು ಇದ್ದರೆ, ಅದರಲ್ಲಿ ನಮಗೂ ಹೆಚ್ಚು ಪಾಲು ಇರಬೇಕಲ್ಲಾ? ಆದರೆ ನಾವು ಈ ಅಧಿಕಾರವನ್ನು ಚಲಾಯಿಸಿಲ್ಲ. ಕ್ರಿಸ್ತ ಯೇಸುವಿಗೆ ಸೇರಿದ ಸುವಾರ್ತೆಗೆ ಅಡ್ಡಿಯಾಗಬಾರದೆಂದು ಎಲ್ಲವನ್ನೂ ಸಹಿಸಿಕೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ದುಸ್ರ್ಯಾಕ್ನಿ ತುಮ್ಚ್ಯಾ ವೈರ್ ಹೊ ಹಕ್ಕ್ ಹಾಯ್ ಹೊಲ್ಯಾರ್, ಅಮ್ಕಾ ಉಲ್ಲೊಸೊ ಜಾಸ್ತಿಚೊ ಹಕ್ಕ್ ಹಾಯ್ ನ್ಹಯ್? ಖರೆ ಅಮಿ ಹ್ಯೊ ಹಕ್ಕ್ ವಾಪ್ರುಕ್ ನಾವ್, ಹೆಚ್ಯಾ ಬದ್ಲಾಕ್, ಕ್ರಿಸ್ತಾಚ್ಯಾ ಬರ್‍ಯಾ ಖಬ್ರೆಕ್ ಕಸ್ಲಿಬಿ ಅಡ್ಕಳ್ ಯೆವ್ಚೆ ನ್ಹಯ್ ಮನುನ್ ಸಗ್ಳ್ಯಾ ಸಂಗ್ತಿಯಾ ಅಮಿ ಸೊಸುನ್ ಘೆವ್ನ್ ಜಾತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 9:12
23 ತಿಳಿವುಗಳ ಹೋಲಿಕೆ  

ಕೆಲವರು ತಾವು ಮಾಡುತ್ತಿರುವ ಕಾರ್ಯ, ನಾವು ಅಪೊಸ್ತಲರಾಗಿ ಮಾಡುತ್ತಿರುವ ಕಾರ್ಯಕ್ಕೆ ಸರಿಸಮವೆಂದು ವಾದಿಸಲು ಅವಕಾಶವನ್ನು ಹುಡುಕುತ್ತಿದ್ದಾರೆ. ಹುಡುಕುವವರಿಗೆ ಯಾವ ಆಸ್ಪದವೂ ಸಿಕ್ಕದಂತೆ ನಾನೀಗ ಮಾಡುತ್ತಿರುವುದನ್ನೇ ಮುಂದುವರಿಸಿಕೊಂಡು ಹೋಗುತ್ತೇನೆ.


ಹಾಗಾದರೆ ನನಗೆ ಸಿಗುವ ಬಹುಮಾನವೇನು? ನಾನು ಸುವಾರ್ತೆಯನ್ನು ಸಾರುವಾಗ ಅದರಿಂದ ದೊರೆಯುವ ಪ್ರತಿಫಲವನ್ನು ಪಡೆಯದೇ ಅದನ್ನು ಉಚಿತವಾಗಿ ಸಾರುವುದೇ ನನಗೆ ದೊರೆಯುವ ಪ್ರತಿಫಲವಾಗಿದೆ.


ನಾನಂತೂ ಇವುಗಳಲ್ಲಿ ಒಂದನ್ನೂ ಪಾಲಿಸಲಿಲ್ಲ. ನನಗೆ ಏನಾದರೂ ಸಿಕ್ಕಬೇಕೆಂಬ ಉದ್ದೇಶದಿಂದ ನಾನು ಇದನ್ನು ಬರೆಯುತ್ತಿಲ್ಲ. ಯಾರಾದರೂ ಈ ಹೊಗಳಿಕೆಯನ್ನು ವ್ಯರ್ಥಮಾಡುವುದಕ್ಕಿಂತ ಸಾಯುವುದೇ ನನಗೆ ಲೇಸು.


ಇತರರಿಗೆ ನಾನು ಅಪೊಸ್ತಲನಲ್ಲದಿದ್ದರೂ ನಿಮಗಾದರೋ ಅಪೊಸ್ತಲನಾಗಿದ್ದೇನೆ. ನಾನು ಕರ್ತನ ಅಪೊಸ್ತಲನಾಗಿದ್ದೇನೆಂಬುದಕ್ಕೆ ನೀವೇ ನನ್ನ ಮುದ್ರೆಯಾಗಿದ್ದಿರಿ.


ಒಬ್ಬನು ನಿಮ್ಮನ್ನು ತನಗೆ ವಶಮಾಡಿಕೊಂಡರೂ, ಒಬ್ಬನು ನಿಮ್ಮನ್ನು ನುಂಗಿಬಿಟ್ಟರೂ, ಒಬ್ಬನು ನಿಮ್ಮನ್ನು ಮರಳುಗೊಳಿಸಿ ಹಿಡಿದರೂ, ಒಬ್ಬನು ತನ್ನನ್ನು ಹೆಚ್ಚಿಸಿಕೊಂಡರೂ, ಒಬ್ಬನು ನಿಮ್ಮ ಮುಖದ ಮೇಲೆ ಹೊಡೆದರೂ ಸಹಿಸಿಕೊಳ್ಳುತ್ತೀರಲ್ಲಾ.


ನಮ್ಮ ಸೇವೆಯು ಯಾರ ಮುಂದೆಯೂ ಅವಹೇಳನಕ್ಕೆ ಗುರಿಯಾಗದಂತೆ, ನಾವು ಯಾರಿಗೂ ಅಡ್ಡಿಯನ್ನು ಒಡ್ಡಲಿಲ್ಲ.


ನಿಮ್ಮಲ್ಲಿ ವಿವಾದಗಳಿರುವುದಾದರೆ ನೀವು ಸೋತವರೆಂಬುದಕ್ಕೆ ಇದೇ ಗುರುತಾಗಿದೆ, ಅದಕ್ಕಿಂತ ಅನ್ಯಾಯವನ್ನು ಸಹಿಸುವುದೇ ಮೇಲು; ಮೋಸವನ್ನು ಅದರಿಂದಾದ ನಷ್ಟವನ್ನು ಯಾಕೆ ತಾಳಬಾರದು?


ಈ ಕಾರಣದಿಂದ ನಿಮ್ಮ ಬಳಿಗೆ ಬರುವುದಕ್ಕೆ ನನಗೆ ಅನೇಕಾವರ್ತಿ ಅಡೆತಡೆಗಳಾದವು.


ಪೌಲನು ಅವರ ಮನೆಗೆ ಹೋಗಿ ತಾನೂ, ಅವರೂ ಒಂದೇ ಕಸುಬಿನವರಾಗಿದ್ದುದರಿಂದ ಅವರ ಸಂಗಡವಿದ್ದು ಅವರೊಂದಿಗೆ ಕೆಲಸಮಾಡುತ್ತಿದ್ದನು; ಗುಡಾರಮಾಡುವುದು ಅವರ ಕಸುಬಾಗಿತ್ತು.


ಅಯ್ಯೋ ಧರ್ಮೋಪದೇಶಕರೇ, ದೈವಿಕ ಜ್ಞಾನದ ಬೀಗದ ಕೈಯನ್ನು ನಿಮ್ಮಲ್ಲೇ ಇಟ್ಟುಕೊಂಡಿದ್ದೀರಿ. ನೀವೂ ಒಳಕ್ಕೆ ಪ್ರವೇಶಿಸಲಿಲ್ಲ, ಒಳಕ್ಕೆ ಹೋಗ ಬಯಸುವವರಿಗೂ ಅಡ್ಡಿಮಾಡಿದೀರಿ” ಅಂದನು.


ನಾವು ಒಟ್ಟಾಗಿ ಯೆರೂಸಲೇಮಿನವರಿಗೆ ವಿರುದ್ಧವಾಗಿ ಯುದ್ಧಕ್ಕೆ ಹೋಗಿ ಅವರನ್ನು ಗಲಿಬಿಲಿಗೊಳಿಸೋಣ ಎಂದು ಒಳಸಂಚು ಮಾಡಿಕೊಂಡರು.


ಅವನು ಅವರಿಗೆ, “ಯೆಹೋವನು ನನ್ನ ಪ್ರಯಾಣವನ್ನು ಸಫಲಮಾಡಿದ್ದಾನೆ; ಆದುದರಿಂದ ನನ್ನನ್ನು ತಡೆಯಬೇಡಿರಿ, ನನ್ನ ದಣಿಯ ಬಳಿಗೆ ಹೋಗುವುದಕ್ಕೆ ನನಗೆ ಅಪ್ಪಣೆಯಾಗಬೇಕು” ಎಂದು ಹೇಳಲು.


ಅದೇ ರೀತಿಯಾಗಿ ಕರ್ತನು ಸಹ ಸುವಾರ್ತೆಯನ್ನು ಸಾರುವವರು ಸುವಾರ್ತೆಯಿಂದಲೇ ತಮ್ಮ ಜೀವನಮಾಡಬೇಕೆಂದು ಆಜ್ಞಾಪಿಸಿದ್ದಾನೆ.


ನಾನು ಸುವಾರ್ತೆಯನ್ನು ಸಾರಿದರೂ ಹೊಗಳಿಕೊಳ್ಳುವುದಕ್ಕೆ ನನಗೇನೂ ಆಸ್ಪದವಿಲ್ಲ; ಸಾರಲೇ ಬೇಕೆಂಬ ನಿರ್ಬಂಧ ನನ್ನ ಮೇಲಿದೆ, ನಾನು ಸುವಾರ್ತೆಯನ್ನು ಸಾರದಿದ್ದರೆ ನನ್ನ ಗತಿಯನ್ನು ಏನೆಂದು ಹೇಳಲಿ!


ಎಲ್ಲವನ್ನು ತಾಳಿಕೊಳ್ಳುತ್ತದೆ. ಎಲ್ಲವನ್ನು ನಂಬುತ್ತದೆ. ಎಲ್ಲವನ್ನು ನಿರೀಕ್ಷಿಸುತ್ತದೆ. ಎಲ್ಲವನ್ನು ಸಹಿಸಿಕೊಳ್ಳುತ್ತದೆ.


ದೇವರು ನನಗಾಗಿ ಬಾಗಿಲನ್ನು ತೆರೆದಿದ್ದಾನೆಂದು ಯೋಚಿಸಿ ಕ್ರಿಸ್ತನ ಸುವಾರ್ತೆಯನ್ನು ಸಾರುವುದಕ್ಕಾಗಿ ನಾನು ತ್ರೋವ ಪಟ್ಟಣಕ್ಕೆ ಬಂದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು