Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 9:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಾನು ಸ್ವಂತ ಇಷ್ಟದಿಂದ ಈ ಕೆಲಸವನ್ನು ಮಾಡಿದರೆ ನನಗೆ ಪ್ರತಿಫಲ ದೊರೆಯುವುದು; ಇಲ್ಲದಿದ್ದರೂ ಈ ಕರ್ತವ್ಯ ನನ್ನ ವಶಕ್ಕೆ ಒಪ್ಪಿಸಿಕೊಡಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಾನು ಸ್ವಂತ ಇಷ್ಟದಿಂದ ಈ ಕಾರ್ಯವನ್ನು ಕೈಗೊಂಡಿದ್ದರೆ ತಕ್ಕ ಸಂಭಾವನೆ ಇರುತ್ತಿತ್ತು. ಆದರೆ ಈ ಕರ್ತವ್ಯವನ್ನು ನನಗೆ ವಹಿಸಲಾಗಿದೆ. ಆದ್ದರಿಂದ ಕರ್ತವ್ಯಬದ್ಧನಾಗಿ ಮಾಡುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಾನು ಸ್ವಂತ ಇಷ್ಟದಿಂದ ಈ ಕೆಲಸವನ್ನು ಮಾಡಿದರೆ ನನಗೆ ಬಹುಮಾನ ದೊರೆಯುವದು; ಮತ್ತೊಬ್ಬನ ಇಷ್ಟದಿಂದ ಮಾಡಿದರೆ ಮನೆವಾರ್ತೆಯು ನನ್ನ ವಶಕ್ಕೆ ಕೊಡಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಾನು ನನ್ನ ಸ್ವಂತ ಇಷ್ಟದಿಂದ ಸುವಾರ್ತೆಯನ್ನು ಬೋಧಿಸುವುದಾಗಿದ್ದರೆ, ಬಹುಮಾನಕ್ಕೆ ಅರ್ಹನಾಗಿದ್ದೇನೆ. ಆದರೆ ಬೇರೊಂದನ್ನು ಆರಿಸಿಕೊಳ್ಳಲು ನನಗೆ ಅವಕಾಶವೇ ಇಲ್ಲ. ನಾನು ಸುವಾರ್ತೆಯನ್ನು ಸಾರಲೇಬೇಕು. ಇದು ನನಗೆ ಕೊಡಲ್ಪಟ್ಟಿರುವ ಕರ್ತವ್ಯವಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಾನು ಇಷ್ಟಪೂರ್ವಕವಾಗಿ ಸುವಾರ್ತೆ ಸಾರಿದರೆ, ನನಗೆ ಬಹುಮಾನವಿರುವುದು. ಇಷ್ಟವಿಲ್ಲದೆ ಮಾಡಿದರೆ, ನನ್ನ ವಶಕ್ಕೆ ಒಪ್ಪಿಸಲಾದ ಕಾರ್ಯಭಾರವನ್ನು ನಾನು ನೆರವೇರಿಸಿದಂತಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಮಾಜ್ಯಾ ಸ್ವಂತ್ ಖುಶಿನ್ ಮಿಯಾ ಹೆ ಕಾಮ್ ಕರ್‍ತಾ ಹೊಲ್ಯಾರ್ ಮಾಕಾ ಕಾಯ್ಬಿ ಗಾವ್ತಾ ಮನುನ್ ಆಶಾ ಕರುಕ್ ಹೊಯ್ ಹೊತ್ತೆ, ಖರೆ ಮಿಯಾ ತೆ ಎಕ್ ಕರ್ತವ್ಯ್ ಮನುನ್ ಕರ್ತಾ, ಮಾಕಾ ದೆವಾನ್ ದಿಲ್ಲೆ ಕಾಮ್ ಹೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 9:17
30 ತಿಳಿವುಗಳ ಹೋಲಿಕೆ  

ಆದರೆ ಸುನ್ನತಿಯಾದವರಿಗೆ ಸುವಾರ್ತೆಯನ್ನು ಸಾರುವ ಕೆಲಸವು ಹೇಗೆ ಪೇತ್ರನಿಗೆ ಕೊಡಲ್ಪಟ್ಟಿತೋ, ಹಾಗೆಯೇ ಅನ್ಯಜನರಿಗೆ ಅದನ್ನು ಸಾರುವ ಕಾರ್ಯವನ್ನು ನನಗೆ ಕೊಡಲ್ಪಟ್ಟಿತು.


ನೆಡುವವನೂ, ನೀರು ಹೊಯ್ಯುವವನೂ ಸರಿಸಮಾನರೇ ಆಗಿದ್ದಾರೆ. ಆದರೆ ಪ್ರತಿಯೊಬ್ಬನಿಗೆ ಅವನವನ ಶಮ್ರಕ್ಕೆ ತಕ್ಕಂತೆ ಕೂಲಿಯು ದೊರೆಯುವುದು.


ದೇವರ ಸಂಕಲ್ಪದ ಮೇರೆಗೆ ನಿಮ್ಮ ಪ್ರಯೋಜನಕ್ಕೋಸ್ಕರವಾಗಿ ನಾನು ಸಭೆಗೆ ಸೇವಕನಾದೆನು. ದೇವರು ತನ್ನ ವಾಕ್ಯವನ್ನು ಸಂಪೂರ್ಣವಾಗಿ ತಿಳಿಸುವ ಕಾರ್ಯವನ್ನು ನನಗೆ ದಯಪಾಲಿಸಿದನು.


ಜನರು ನಮ್ಮನ್ನು ಕ್ರಿಸ್ತನ ಸೇವಕರೆಂತಲೂ ದೇವರ ಗುಪ್ತವಾಗಿದ್ದ ಸತ್ಯಾರ್ಥಗಳ ವಿಷಯದಲ್ಲಿ ದೇವರ ಮನೆವಾರ್ತೆಯವರೆಂತಲೂ ಪರಿಗಣಿಸಲಿ.


ಪ್ರವಾದಿಯನ್ನು ಪ್ರವಾದಿಯೆಂದು ಸ್ವೀಕರಿಸಿಕೊಳ್ಳುವವನು ಪ್ರವಾದಿಗೆ ಬರತಕ್ಕ ಪ್ರತಿಫಲವನ್ನು ಹೊಂದುವನು; ನೀತಿವಂತನನ್ನು ನೀತಿವಂತನೆಂದು ಸ್ವೀಕರಿಸಿಕೊಳ್ಳುವವನು ನೀತಿವಂತನಿಗೆ ಬರತಕ್ಕ ಪ್ರತಿಫಲವನ್ನು ಹೊಂದುವನು.


ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ, ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು. ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ, ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವುದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಕಡೆಗಣಿಸಿದರೆ ಆತನು ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.


ದೇವರು ನಮ್ಮನ್ನು ಯೋಗ್ಯರೆಂದೆಣಿಸಿ, ಸುವಾರ್ತೆಯನ್ನು ನಮ್ಮ ವಶಕ್ಕೆ ಒಪ್ಪಿಸಿದನು. ಆದುದರಿಂದ ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿಯಲ್ಲ ಹೃದಯವನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತಿದ್ದೇವೆ.


ಒಬ್ಬನು ಆ ಅಸ್ತಿವಾರದ ಮೇಲೆ ಕಟ್ಟಿದ್ದು ಉಳಿದರೆ ಅವನಿಗೆ ಪ್ರತಿಫಲ ಸಿಕ್ಕುವುದು.


ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಯಿತು. ನಾನು ಚಿಂತೆಯಿಂದ ಮನಸ್ತಾಪಪಡುತ್ತಾ ಹೋದೆನು. ಆದರೆ ಯೆಹೋವನ ಕೈ ನನ್ನ ಮೇಲೆ ಬಲವಾಗಿತ್ತು.


“ನಾನು ಯೆಹೋವನ ವಿಷಯವನ್ನು ಪ್ರಕಟಿಸುವುದಿಲ್ಲ, ಆತನ ಹೆಸರಿನಲ್ಲಿ ಇನ್ನು ಮಾತನಾಡುವುದಿಲ್ಲ” ಎಂದುಕೊಂಡರೆ, ಉರಿಯುವ ಬೆಂಕಿಯು ನನ್ನ ಎಲುಬುಗಳಲ್ಲಿ ಅಡಕವಾಗಿದೆಯೋ ಎಂಬಂತೆ ನನ್ನ ಹೃದಯದಲ್ಲಿ ಸಂಕಟವಾಗುತ್ತದೆ, ಸಹಿಸಿ ಸಹಿಸಿ ಆಯಾಸಗೊಂಡಿದ್ದೇನೆ, ಇನ್ನು ಸಹಿಸಲಾರೆ.


ಆಗ, “ಯಾರನ್ನು ಕಳುಹಿಸಲಿ? ಯಾರು ನಮಗೋಸ್ಕರ ಹೋಗುವನು?” ಎಂಬ ಕರ್ತನ ನುಡಿಯನ್ನು ಕೇಳಿ, “ಇಗೋ, ನಾನಿದ್ದೇನೆ, ನನ್ನನ್ನು ಕಳುಹಿಸು” ಎಂದೆನು.


ಮತ್ತು ಸ್ವಇಚ್ಛೆಯಿಂದ ಯೆರೂಸಲೇಮಿನಲ್ಲಿ ವಾಸಿಸುವುದಕ್ಕೆ ಮನಸ್ಸು ಮಾಡಿದಂಥವರನ್ನು ಜನರು ಆಶೀರ್ವದಿಸಿದರು.


ಅವರು ಪೂರ್ಣಮನಸ್ಸಿನಿಂದಲೂ, ಸ್ವ ಇಚ್ಛೆಯಿಂದಲೂ ಯೆಹೋವನಿಗೆ ಕಾಣಿಕೆ ನೀಡಿದ್ದನ್ನು ನೋಡಿ ಜನರೆಲ್ಲರೂ ಸಂತೋಷಪಟ್ಟರು. ಅರಸನಾದ ದಾವೀದನಿಗೂ ಬಹಳ ಸಂತೋಷವಾಯಿತು.


ಅಕ್ಕಸಾಲಿಗರು ಮಾಡಬಹುದಾದ ಎಲ್ಲಾ ತರದ ಬೆಳ್ಳಿ ಬಂಗಾರದ ಸಾಮಾನುಗಳನ್ನು ಮಾಡಿಸಬೇಕು. ಈ ಹೊತ್ತು ಉದಾರಹಸ್ತದಿಂದ ಯೆಹೋವನಿಗೋಸ್ಕರ ಕಾಣಿಕೆಯನ್ನರ್ಪಿಸುವುದಕ್ಕೆ ಯಾರಿಗೆ ಮನಸ್ಸಿದೆಯೋ ಅವರು ಮುಂದೆ ಬರಲಿ” ಎಂದು ನೆರೆದ ಸಭೆಗೆ ಹೇಳಿದನು.


ಆದರೆ ನಿನ್ನ ಉಪಕಾರವು ಮನಃಪೂರ್ವಕವಾಗಿಯೇ ಇರಬೇಕೆಂದು ಯೋಚಿಸಿ ನಿನ್ನ ಸಮ್ಮತಿಯಿಲ್ಲದೆ ಏನು ಮಾಡುವುದಕ್ಕೂ ನನಗೆ ಇಷ್ಟವಿಲ್ಲ.


ಒಬ್ಬನು ಕೊಡುವಂತ ಮನಸ್ಸುಳ್ಳವನಾಗಿರುವಲ್ಲಿ ಅವನು ತನ್ನ ಯೋಗ್ಯತೆಗೆ ಅನುಸಾರವಾಗಿ ಕೊಟ್ಟರೆ ಅದು ಸಮರ್ಪಕವಾಗಿರುವುದು; ಅವನಿಗೆ ದೇವರಿಂದ ಮೆಚ್ಚಿಕೆ ದೊರೆಯುವುದು.


ನಾನು ಸುವಾರ್ತೆಯನ್ನು ಸಾರಿದರೂ ಹೊಗಳಿಕೊಳ್ಳುವುದಕ್ಕೆ ನನಗೇನೂ ಆಸ್ಪದವಿಲ್ಲ; ಸಾರಲೇ ಬೇಕೆಂಬ ನಿರ್ಬಂಧ ನನ್ನ ಮೇಲಿದೆ, ನಾನು ಸುವಾರ್ತೆಯನ್ನು ಸಾರದಿದ್ದರೆ ನನ್ನ ಗತಿಯನ್ನು ಏನೆಂದು ಹೇಳಲಿ!


ಕರ್ತನು ಹೇಳಿದ್ದೇನಂದರೆ, “ಹೊತ್ತು ಹೊತ್ತಿಗೆ ಅವಶ್ಯಕತೆಗೆ ಬೇಕಾದದ್ದನ್ನು ಅಳೆದು ಕೊಡುವುದಕ್ಕಾಗಿ ಯಜಮಾನನು ತನ್ನ ಆಳುಗಳ ಮೇಲೆ ನೇಮಿಸಿದ ನಂಬಿಗಸ್ತನೂ ವಿವೇಕಿಯೂ ಆದ ಮೇಲ್ವಿಚಾರಕ ಯಾರು?


ನೋಡಿರಿ, ನಾನು ಮುಂಚಿತವಾಗಿಯೇ ನಿಮಗೆ ಇದನ್ನು ಹೇಳುತ್ತಿದ್ದೇನೆ.


“ನನ್ನ ಯಜ್ಞವೇದಿಯ ಮೇಲೆ ಯಾರೂ ಬೆಂಕಿಯನ್ನು ವ್ಯರ್ಥವಾಗಿ ಉರಿಸದಂತೆ ನಿಮ್ಮಲ್ಲೊಬ್ಬನು ದೇವಾಲಯದ ಬಾಗಿಲುಗಳನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೆಯದು! ನಾನು ನಿಮ್ಮನ್ನು ಮೆಚ್ಚೆನು, ನಿಮ್ಮ ಕೈಯಿಂದ ನೈವೇದ್ಯವನ್ನು ಸ್ವೀಕರಿಸೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಆದರೆ ಯೋನನು ಯೆಹೋವನ ಸನ್ನಿಧಿಯಿಂದ ತಪ್ಪಿಸಿಕೊಳ್ಳಲು ತಾರ್ಷೀಷಿಗೆ ಓಡಿಹೋಗಬೇಕೆಂದು ಯೋಚಿಸಿ ಹೊರಟು ಯೊಪ್ಪ ಎಂಬ ಊರಿಗೆ ಬಂದು ಅಲ್ಲಿ ತಾರ್ಷೀಷಿಗೆ ಹೊರಡುವ ಹಡಗನ್ನು ಕಂಡು ಪ್ರಯಾಣದ ದರವನ್ನು ಕೊಟ್ಟು ತಾರ್ಷೀಷಿಗೆ ಪ್ರಯಾಣಮಾಡುತ್ತಿದ್ದ ಹಡಗಿನವರೊಡನೆ ಅದನ್ನು ಹತ್ತಿದನು.


ನಾವು ಸ್ವ ಇಚ್ಛೆಯಿಂದ ನಿನಗೆ ಕಾಣಿಕೆಗಳನ್ನು ಸಮರ್ಪಿಸಲು ನಾನಾಗಲಿ, ನನ್ನ ಪ್ರಜೆಗಳಾಗಲಿ ಸಮರ್ಥರಲ್ಲ. ಸಮಸ್ತವೂ ನಿನ್ನಿಂದಲೇ ಸಾಧ್ಯವಾಯಿತು, ನೀನು ಕೊಟ್ಟದ್ದನ್ನೇ ನಿನಗೆ ಕೊಟ್ಟೆವು.


ಕೊಯ್ಯುವವನಿಗೆ ಈಗಲೇ ಕೂಲಿ ದೊರೆಯುತ್ತದೆ. ಅವನು ನಿತ್ಯಜೀವಕ್ಕೆ ಫಲವನ್ನು ಕೂಡಿಸಿಡುತ್ತಾನೆ. ಹೀಗೆ ಬಿತ್ತುವವನಿಗೂ ಮತ್ತು ಕೊಯ್ಯುವವನಿಗೂ ಒಟ್ಟಿಗೆ ಸಂತೋಷವಾಗುವುದು.


ಹಾಗಾದರೆ ನನಗೆ ಸಿಗುವ ಬಹುಮಾನವೇನು? ನಾನು ಸುವಾರ್ತೆಯನ್ನು ಸಾರುವಾಗ ಅದರಿಂದ ದೊರೆಯುವ ಪ್ರತಿಫಲವನ್ನು ಪಡೆಯದೇ ಅದನ್ನು ಉಚಿತವಾಗಿ ಸಾರುವುದೇ ನನಗೆ ದೊರೆಯುವ ಪ್ರತಿಫಲವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು