Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 9:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಪ್ರತಿಯೊಬ್ಬ ಕ್ರೀಡಾಪಟುವು ತನ್ನ ತರಬೇತಿಯ ಎಲ್ಲಾ ವಿಷಯಗಳಲ್ಲಿ ಶಮೆದಮೆಯುಳ್ಳವನಾಗಿರುತ್ತಾನೆ. ಅವರು ಬಾಡಿ ಹೋಗುವ ಜಯಮಾಲೆಯನ್ನು ಹೊಂದುವುದಕ್ಕೆ ಸಾಧನೆ ಮಾಡುತ್ತಾರೆ; ನಾವಾದರೋ ಬಾಡಿಹೋಗದ ಜಯಮಾಲೆಯನ್ನು ಹೊಂದುವುದಕ್ಕೆ ಸಾಧನೆ ಮಾಡುವವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಕ್ರೀಡಾಪಟುಗಳೆಲ್ಲರೂ ತಮ್ಮನ್ನು ಹತೋಟಿಯಲ್ಲಿಟ್ಟುಕೊಳ್ಳುತ್ತಾರೆ. ಅಳಿದುಹೋಗುವ ಪದಕದ ಗಳಿಕೆಗಾಗಿ ಪ್ರಯತ್ನಮಾಡುತ್ತಾರೆ. ನಾವಾದರೋ ಅಮರ ಪದಕದ ಗಳಿಕೆಗಾಗಿ ಶ್ರಮಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅದರಲ್ಲಿ ಹೋರಾಡುವವರೆಲ್ಲರು ಎಲ್ಲಾ ವಿಷಯಗಳಲ್ಲಿ ವಿುತವಾಗಿರುತ್ತಾರೆ. ಅವರು ಬಾಡಿಹೋಗುವ ಜಯಮಾಲಿಕೆಯನ್ನು ಹೊಂದುವದಕ್ಕೆ ಸಾಧನೆಮಾಡುತ್ತಾರೆ; ನಾವಾದರೋ ಬಾಡಿಹೋಗದ ಜಯಮಾಲಿಕೆಯನ್ನು ಹೊಂದುವದಕ್ಕೆ ಸಾಧನೆ ಮಾಡುವವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಪಂದ್ಯಗಳಲ್ಲಿ ಸ್ಪರ್ಧಿಸುವ ಕ್ರೀಡಾಪಟುಗಳು ಪದಕಗಳಿಸಲು ಕಟ್ಟುನಿಟ್ಟಾದ ತರಬೇತಿಯಲ್ಲಿರುತ್ತಾರೆ. ಆದರೆ ಈ ಲೋಕದ ಆ ಪದಕವು ಸ್ವಲ್ಪಕಾಲ ಮಾತ್ರ ಇರುತ್ತದೆ. ಆದರೆ ನಮ್ಮ ಪದಕವು ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಟಗಳಲ್ಲಿ ಪಂದ್ಯಕ್ಕೆ ಭಾಗವಹಿಸುವವರೆಲ್ಲರೂ, ಕಠಿಣವಾದ ತರಬೇತಿಯನ್ನು ಹೊಂದುತ್ತಾರೆ. ಅವರು ಬಹುದಿನ ಉಳಿಯದೇ ಇರುವ ಕಿರೀಟವನ್ನು ಪಡೆಯುವುದಕ್ಕೆ ಇದನ್ನು ಮಾಡುತ್ತಾರೆ. ಆದರೆ ನಾವು ಎಂದೆಂದಿಗೂ ಉಳಿಯುವ ಕಿರೀಟ ಹೊಂದಲು ಹೋರಾಡುವವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಖೆಳಾತ್ ಭಾಗ್ ಘೆತಲೊ ಹರ್ ಎಕ್ಲೊ ಖೆಳ್ಗಾಡಿ ಸಗ್ಳ್ಯಾ ವಿಶಯಾತ್ ಮಿತ್ ಸಂಬಾಳ್ತಾ. ಸರುನ್ ಜಾತಲೆ ಎಕ್ ಭೊಮಾನ್ ಕಮ್ವುಸಾಟಿ ತೊ ಎವ್ಡೊ ತರಾಸ್ ಘೆತಾ; ಖರೆ ಅಮಿ ಕನ್ನಾಚ್ ಸರಿ ನಸಲ್ಲೆ ಭೊಮಾನ್ ಘೆವ್ಕ್ ಸಾಟ್ನಿ ಅಶೆ ಕರ್ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 9:25
18 ತಿಳಿವುಗಳ ಹೋಲಿಕೆ  

ಇದಲ್ಲದೆ ಯಾವನಾದರೂ ಸ್ಪರ್ಧೆಯಲ್ಲಿ ಎದುರಾಳಿಯೊಡನೆ ಹೋರಾಡುವಾಗ ನಿಯಮದ ಪ್ರಕಾರ ಹೋರಾಡದಿದ್ದರೆ ಅವನಿಗೆ ಜಯಮಾಲೆಯು ದೊರಕುವುದಿಲ್ಲ.


ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ ಮತ್ತು ಹತ್ತು ದಿನಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವ ತನಕ ನಂಬಿಗಸ್ತನಾಗಿರು, ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.


ಕ್ರಿಸ್ತ ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ. ಅದಕ್ಕಾಗಿ ನೀನು ದೇವರಿಂದ ಕರೆಯಲ್ಪಟ್ಟಿದಿ ಮತ್ತು ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೆಯ ಪ್ರತಿಜ್ಞೆಯನ್ನು ಮಾಡಿದಿಯಲ್ಲಾ.


ನಾನು ಬೇಗನೇ ಬರುತ್ತೇನೆ, ನಿನ್ನ ಕಿರೀಟವನ್ನು ಯಾರೂ ಕಸಿದುಕೊಳ್ಳದಂತೆ ನೀನು ಅವಲಂಬಿಸಿರುವುದನ್ನೇ ಆಶ್ರಯಿಸಿಕೊಂಡಿರು.


ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದಂತೆ ಜೀವದ ಕಿರೀಟವನ್ನು ಹೊಂದುವನು.


ಜ್ಞಾನಕ್ಕೆ ದಮೆಯನ್ನೂ, ದಮೆಗೆ ತಾಳ್ಮೆಯನ್ನೂ,


ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯ ಕಿರೀಟವನ್ನು ಹೊಂದುವಿರಿ.


ನಮ್ಮನ್ನು ಲಯ, ಕಳಂಕ, ನಾಶಗಳಿಲ್ಲದ ಬಾಧ್ಯತೆಯನ್ನು ಎದುರು ನೋಡುವವರನ್ನಾಗಿ ಮಾಡಿದನು. ಆ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಡಲ್ಪಟ್ಟಿದೆ.


ಸಾಧುತ್ವ, ಶಮೆದಮೆ ಇಂಥವುಗಳೇ. ಇವುಗಳಿಗೆ ವಿರುದ್ಧವಾಗಿ ಯಾವ ಧರ್ಮಶಾಸ್ತ್ರವೂ ಇಲ್ಲ.


ಆದ್ದರಿಂದ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆದುಕೊಳ್ಳುವವರಾದ ನಾವು ಕೃತಜ್ಞತೆಯುಳ್ಳವರಾಗಿ, ಆತನಿಗೆ ಸಮರ್ಪಕವಾದ ಆರಾಧನೆಯನ್ನು ಭಕ್ತಿಯಿಂದಲೂ ಮತ್ತು ಭಯದಿಂದಲೂ ಮಾಡೋಣ.


ನೀವು ಪಾಪಕ್ಕೆ ವಿರೋಧವಾಗಿ ಹೋರಾಡುವುದರಲ್ಲಿ ರಕ್ತವನ್ನು ಸುರಿಸುವಷ್ಟು ಹೋರಾಡಲಿಲ್ಲವಲ್ಲ.


ನಶಿಸಿಹೋಗುವ ಈ ದೇಹವು ನಿರ್ಲಯತ್ವವನ್ನು ಧರಿಸಿಕೊಂಡಾಗ ಮರಣಾಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಂಡಾಗ ಬರೆದಿರುವ ಮಾತು ನೆರವೇರುವುದು.


ಆ ಇಪ್ಪತ್ನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕುಳಿತಾತನ ಪಾದಕ್ಕೆ ಅಡ್ಡಬಿದ್ದು, ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ, “ಕರ್ತನೇ ನಮ್ಮ ದೇವರೇ ನೀನು ಮಹಿಮೆಯನ್ನು, ಗೌರವವನ್ನು, ಬಲವನ್ನು ಹೊಂದುವುದಕ್ಕೆ ಯೋಗ್ಯನಾಗಿದ್ದೀ, ಏಕೆಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಎಲ್ಲವೂ ನಿನ್ನ ಚಿತ್ತದಿಂದಲೇ ಇದ್ದವು ಮತ್ತು ನಿನ್ನ ಚಿತ್ತದಿಂದಲೇ ನಿರ್ಮಿತವಾದವು” ಎಂದು ಹೇಳುತ್ತಾ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಿದ್ದರು.


ಇದಲ್ಲದೆ ಸಿಂಹಾಸನದ ಸುತ್ತಲೂ ಇಪ್ಪತ್ನಾಲ್ಕು ಸಿಂಹಾಸನಗಳಿದ್ದವು. ಆ ಸಿಂಹಾಸನಗಳ ಮೇಲೆ ಶುಭ್ರವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ನಾಲ್ಕು ಮಂದಿ ಹಿರಿಯರು ಕುಳಿತಿದ್ದರು. ಅವರ ತಲೆಗಳ ಮೇಲೆ ಚಿನ್ನದ ಕಿರೀಟಗಳಿದ್ದವು.


ಅತಿಥಿಸತ್ಕಾರಮಾಡುವವನೂ, ಒಳ್ಳೆಯದನ್ನು ಪ್ರೀತಿಸುವವನೂ, ವಿವೇಕಿಯು, ನೀತಿವಂತನೂ, ದೈವಭಕ್ತನು, ಜಿತೇಂದ್ರಿಯನೂ ಆಗಿದ್ದು,


ವೃದ್ಧರು ಮದ್ಯಾಸಕ್ತಿಯಿಲ್ಲದವರೂ, ಗೌರವವುಳ್ಳವರೂ, ಜಿತೇಂದ್ರಿಯರೂ, ನಂಬಿಕೆ, ಪ್ರೀತಿ, ತಾಳ್ಮೆಯಲ್ಲಿ ಸ್ವಸ್ಥರು ಆಗಿರಬೇಕೆಂದು ಬೋಧಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು